Homeಕರ್ನಾಟಕPSI ಹಗರಣ ನ್ಯಾಯಾಂಗ ತನಿಖೆಗೆ: ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಸರ್ಕಾರ ಸೂಚನೆ

PSI ಹಗರಣ ನ್ಯಾಯಾಂಗ ತನಿಖೆಗೆ: ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಸರ್ಕಾರ ಸೂಚನೆ

- Advertisement -
- Advertisement -

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಬಂದಿದ್ದ 545 PSI ನೇಮಕಾತಿ ಹಗರಣವನ್ನು ಸದ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ನೇಮಿಸಿರುವ ಈ ಏಕ ಸದಸ್ಯ ಆಯೋಗವು 3 ತಿಂಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.

ಪಿಎಸ್‌ಐ ಹಗರಣದ ವಿರುದ್ಧ ತೀವ್ರ ಹೋರಾಟ ನಡೆಸಿದ್ದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ತನಿಖೆ ನಡೆಸುವುದಾಗಿ ಘೋಷಿಸಿತ್ತು. ಅಂತೆಯೇ ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ರಮವನ್ನು ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಜನವರಿ 21, 2021ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್‌ 3, 2021 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಿತ್ತು.

ರಾಜ್ಯದ ನಾನಾ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರಿಸಲಾಗಿದೆ.

ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20 ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ನೇಮಕಾತಿ ಡಿಜಿಪಿಯನ್ನು ಜೂನ್‌ 20, 2023ರಲ್ಲಿ ಪೊಲೀಸ್‌ ಇಲಾಖೆ ನಡೆಸುವ ಎಲ್ಲ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿತ್ತು.

545 ಪೊಲೀಸ್ ಸಬ್-ಇನ್ಸ್​ಪೆಕ್ಟರ್ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಆಯಾಮದ ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಮತ್ತು ಈ ಅಕ್ರಮ ಪ್ರಕರಣವು ಗಂಭೀರ ಸ್ವರೂಪದ್ದಾಗಿದೆ‌. ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು ಕಮಿಷನ್‌ ಆಪ್‌ ಎನ್‌ಕ್ವಾರಿ ಆಕ್ಟ್‌ 1952ರ ನಿಯಮ 3ರ ಉಪ ನಿಯಮ ರನ್ವಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದೆ.

ವಿಚಾರಣಾ ಆಯೋಗ 21.01.2021 ರನ್ವಯ ಜರುಗಿದ 545 ಗಳ ಆಯ್ಕೆ ಪ್ರಕ್ರಿಯೆಗಳಲ್ಲಿ ನೇಮಕಾತಿ ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ? ಎಂದು ತನಿಖೆ ನಡೆಸಬೇಕು. ಆಯ್ಕೆ ಪ್ರಕ್ರಿಯೆಗಳಲ್ಲಿ ನೇಮಕಾತಿ ನಿಯಮಗಳು ಉಲ್ಲಂಘನೆಯಾಗಿದ್ದಲ್ಲಿ ಅಂತಹ ಉಲ್ಲಂಘನೆ ಅಥವಾ ಅಕ್ರಮಗಳು ಯಾವುವು? ಮತ್ತು ಆ ಅಕ್ರಮಗಳು ಯಾವ ಹಂತದಲ್ಲಿ ಜರುಗಿವೆ? ಎಂದು ತನಿಖೆ ನಡೆಸಬೇಕು.

ಅಕ್ರಮಗಳಲ್ಲಿ ಭಾಗಿಗಳಾಗಿ ದುರ್ಲಾಭ ಪಡೆದಿರುವ ವ್ಯಕ್ತಿಗಳು ಯಾರು? ಪಿಎಸ್ಐ ಹುದ್ದೆಗೆ ಅಭ್ಯರ್ಥಿಗಳ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಾನುಸಾರ, ಪಾರದರ್ಶಕವಾಗಿ ಮತ್ತು ಲೋಪರಹಿತವಾಗಿ ನಡೆಸುವ ನಿಟ್ಟಿನಲ್ಲಿ ಸರ್ಕಾರವು ಕೈಗೊಳ್ಳಬಹುದಾದ ಕ್ರಮಗಳಾವುವು? ಎಂಬುದನ್ನು ತನಿಖೆ ನಡೆಸಲು ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ; ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...