Homeಮುಖಪುಟಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

ಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

- Advertisement -
- Advertisement -

ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಒಂದು ದಿನಗಳ ಬಳಕ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಊಹಿಸಲು ಸಾಧ್ಯವಾಗದ ಅಮಾನವೀಯ ಘಟನೆಗಳು ಬೆಳಕಿಗೆ ಬರುತ್ತಿವೆ.

ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿರುವುದು ಇದೀಗ ಬಹಿರಂಗವಾಗಿದೆ. ಈ ಬಗ್ಗೆ ಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಿಂಗ್ ಜಿಲ್ಲೆಯ ಸೆರೋವ್‌ ಗ್ರಾಮದಲ್ಲಿ ಸಂಸ್ತ್ರಧಾರಿಗಳ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೋರ್ವರ 80 ವರ್ಷದ ಪತ್ನಿಯನ್ನು ಮನೆಯ ಒಳಗೆ ಕೂಡಿ ಹಾಕಿ ಬೆಂಕಿ ಹಚ್ಚಿ ಜೀವಂತವಾಗಿ ದಹಿಸಿದೆ ಎಂದು ಸೆರೋವ್‌ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾದ ಎಫ್‌ಐಆರ್ ನಲ್ಲಿ ಹೇಳಲಾಗಿದೆ. ಮೇ 28ರಂದು ಸೆರೋವ್‌ನಲ್ಲಿ ಸಾಮೂಹಿಕ ಹಿಂಸಾಚಾರ ಹಾಗೂ ಗುಂಡಿನ ಕಾಳಗ ನಡೆದ ಸಮಯದಲ್ಲಿ ಈ ಘಟನೆ ನಡೆದಿದೆ.

ಇಂಪಾಲ್‌ನಿಂದ ಸುಮಾರು 45 ಕಿಮೀ ದೂರದಲ್ಲಿರುವ ಸರ ಗ್ರಾಮದಲ್ಲಿ ಮೇ 28ರಂದು ಈ ಘಟನೆ ನಡೆದಿದೆ. 80 ವರ್ಷದ ಇಚಿತೊಂಬಿ ಮನೆಯೊಳಗೆ ಇದ್ದಾಗ ದಾಳಿಕೋರರು ಹೊರಗಿನಿಂದ ಬೀಗ ಹಾಕಿದ್ದರು. ಅನಂತರ ಮನೆಗೆ ಬೆಂಕಿ ಹಚ್ಚಲಾಗಿದೆ. ಕುಟುಂಬದವರು ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದ. ನಂತರ ಇಬೆಟೊಂಬಿಯು ಸಜೀವವಾಗಿ ಸುಟ್ಟು ಕರಕಲಾಗಿದ್ದರು ಎಂದು ಅವರು ಕುಟುಂಬದವರು ಹೇಳಿದ್ದಾರೆ.

ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗ್ರಾಮದ ಮೇಲೆ ದಾಳಿ ನಡೆಸಿದ ಸಶಸ್ತ್ರಧಾರಿಗಳ ಗುಂಪು ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯಾಗಿಯರುವ 80 ವರ್ಷದ ಇತೊಂಬಿ ಮನೆಯಲ್ಲಿರುವಾಗ ಹೊರಗಿ ನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದ್ದರು. ಅವರನ್ನು ರಕ್ಷಿಸಲು ಕುಟುಂಬದವರು ಬಂದ ಸಂದರ್ಭದಲ್ಲಿ ಮನೆ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಇಬೆತೊಂಬಿ ಅವರ ಮೊಮ್ಮಗ ಪ್ರೇಮಕಾಂತ್ ಹೇಳಿದ್ದಾರೆ.

”ನಾನು ಅಜ್ಜಿಯನ್ನು ರಕ್ಷಿಸಲು ಪ್ರಯತ್ನಿಸಿದ ಸಂದರ್ಭ ಗುಂಡಿನ ದಾಳಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ” ಎಂದು ಪ್ರೇಮಕಾಂತ್‌ ತಿಳಿಸಿದ್ದಾರೆ.

ದೇಶಾದ್ಯಂತ ಅಲ್ಲೋಲ ಕಲ್ಲೋಲ ಉಂಟು ಮಾಡಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ , ಅತ್ಯಾಚಾರ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ ಎಂದು ಮಣಿಪುರ ಸಿಎಂ ಬಿರೇನ್ ಸಿಂಗ್ ಹೇಳಿದ್ದರು. ಇದೀಗ ದಿನಕ್ಕೊಂಡು ಇಂತಹ ಕ್ರೌರ್ಯಗಳು ಬೆಳಕಿಗೆ ಬರುತ್ತಿವೆ.

ಇದನ್ನೂ ಓದಿ: ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...