Homeಮುಖಪುಟಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

ಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

- Advertisement -
- Advertisement -

ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಒಂದು ದಿನಗಳ ಬಳಕ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಊಹಿಸಲು ಸಾಧ್ಯವಾಗದ ಅಮಾನವೀಯ ಘಟನೆಗಳು ಬೆಳಕಿಗೆ ಬರುತ್ತಿವೆ.

ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿರುವುದು ಇದೀಗ ಬಹಿರಂಗವಾಗಿದೆ. ಈ ಬಗ್ಗೆ ಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಿಂಗ್ ಜಿಲ್ಲೆಯ ಸೆರೋವ್‌ ಗ್ರಾಮದಲ್ಲಿ ಸಂಸ್ತ್ರಧಾರಿಗಳ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೋರ್ವರ 80 ವರ್ಷದ ಪತ್ನಿಯನ್ನು ಮನೆಯ ಒಳಗೆ ಕೂಡಿ ಹಾಕಿ ಬೆಂಕಿ ಹಚ್ಚಿ ಜೀವಂತವಾಗಿ ದಹಿಸಿದೆ ಎಂದು ಸೆರೋವ್‌ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾದ ಎಫ್‌ಐಆರ್ ನಲ್ಲಿ ಹೇಳಲಾಗಿದೆ. ಮೇ 28ರಂದು ಸೆರೋವ್‌ನಲ್ಲಿ ಸಾಮೂಹಿಕ ಹಿಂಸಾಚಾರ ಹಾಗೂ ಗುಂಡಿನ ಕಾಳಗ ನಡೆದ ಸಮಯದಲ್ಲಿ ಈ ಘಟನೆ ನಡೆದಿದೆ.

ಇಂಪಾಲ್‌ನಿಂದ ಸುಮಾರು 45 ಕಿಮೀ ದೂರದಲ್ಲಿರುವ ಸರ ಗ್ರಾಮದಲ್ಲಿ ಮೇ 28ರಂದು ಈ ಘಟನೆ ನಡೆದಿದೆ. 80 ವರ್ಷದ ಇಚಿತೊಂಬಿ ಮನೆಯೊಳಗೆ ಇದ್ದಾಗ ದಾಳಿಕೋರರು ಹೊರಗಿನಿಂದ ಬೀಗ ಹಾಕಿದ್ದರು. ಅನಂತರ ಮನೆಗೆ ಬೆಂಕಿ ಹಚ್ಚಲಾಗಿದೆ. ಕುಟುಂಬದವರು ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದ. ನಂತರ ಇಬೆಟೊಂಬಿಯು ಸಜೀವವಾಗಿ ಸುಟ್ಟು ಕರಕಲಾಗಿದ್ದರು ಎಂದು ಅವರು ಕುಟುಂಬದವರು ಹೇಳಿದ್ದಾರೆ.

ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗ್ರಾಮದ ಮೇಲೆ ದಾಳಿ ನಡೆಸಿದ ಸಶಸ್ತ್ರಧಾರಿಗಳ ಗುಂಪು ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯಾಗಿಯರುವ 80 ವರ್ಷದ ಇತೊಂಬಿ ಮನೆಯಲ್ಲಿರುವಾಗ ಹೊರಗಿ ನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದ್ದರು. ಅವರನ್ನು ರಕ್ಷಿಸಲು ಕುಟುಂಬದವರು ಬಂದ ಸಂದರ್ಭದಲ್ಲಿ ಮನೆ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಇಬೆತೊಂಬಿ ಅವರ ಮೊಮ್ಮಗ ಪ್ರೇಮಕಾಂತ್ ಹೇಳಿದ್ದಾರೆ.

”ನಾನು ಅಜ್ಜಿಯನ್ನು ರಕ್ಷಿಸಲು ಪ್ರಯತ್ನಿಸಿದ ಸಂದರ್ಭ ಗುಂಡಿನ ದಾಳಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ” ಎಂದು ಪ್ರೇಮಕಾಂತ್‌ ತಿಳಿಸಿದ್ದಾರೆ.

ದೇಶಾದ್ಯಂತ ಅಲ್ಲೋಲ ಕಲ್ಲೋಲ ಉಂಟು ಮಾಡಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ , ಅತ್ಯಾಚಾರ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ ಎಂದು ಮಣಿಪುರ ಸಿಎಂ ಬಿರೇನ್ ಸಿಂಗ್ ಹೇಳಿದ್ದರು. ಇದೀಗ ದಿನಕ್ಕೊಂಡು ಇಂತಹ ಕ್ರೌರ್ಯಗಳು ಬೆಳಕಿಗೆ ಬರುತ್ತಿವೆ.

ಇದನ್ನೂ ಓದಿ: ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...