Homeಕರ್ನಾಟಕಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

ಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

- Advertisement -
- Advertisement -

ಜುಲೈ 11ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯಲ್ಲಿರುವ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ (Aironics Media Pvt Ltd) ಕಂಪನಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಆ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ್ ಇಬ್ಬರಿಗೂ ಇರಿದು ಕೊಂದು ಪರಾರಿಯಾಗಿದ್ದಾರೆ. ಈ ಜೋಡಿ ಕೊಲೆಯನ್ನು ಕೋಮುವಾದೀಕರಿಸಿದ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು, ಹಿಂದೂ ಅರ್ಚಕ, ಹಿಂದೂ ಮುಖಂಡ ಫಣೀಂದ್ರ ಸುಬ್ರಮಣ್ಯರವರ ಕೊಲೆಯಾಗಿದೆ ಎಂದು ಪ್ರಚಾರ ಮಾಡಿದರು. ಇದೇ ಸಂದರ್ಭದಲ್ಲಿ ಬೆಳಗಾವಿಯ ಜೈನ ಮುನಿ ಮತ್ತು ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಸಂಭವಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಕೊಲೆಯಾಗುತ್ತಿದೆ ಎಂಬ ಕೋಮು ನಿರೂಪಣೆಯನ್ನು ಹರಿಯಬಿಟ್ಟರು.

ಬಿಜೆಪಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹಿಂದೂ ಮುಖಂಡನನ್ನು ಅನ್ಯಧರ್ಮದವರು ಕೊಂದಿದ್ದಾರೆ ಎಂದು ಆರೋಪಿಸಿದರು. ಆದರೆ ಪೊಲೀಸರು ಶೀಘ್ರವಾಗಿ ಕೊಲೆಗೆ ಸಂಬಂಧಿಸಿದಂತೆ ಸಂತೋಷ್, ಶಬರೀಶ್ (ಫೆಲಿಕ್ಸ್) ಮತ್ತು ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಹಿರಂಗವಾಗಿದೆ. ಅದರ ಪ್ರಕಾರ ವೃತ್ತಿ ಮತ್ಸರವೇ ಜೋಡಿ ಕೊಲೆಗೆ ಪ್ರಧಾನ ಕಾರಣ ಹೊರತು ಯಾವುದೇ ಕೋಮು ಸಂಘರ್ಷವಲ್ಲ. ಜೊತೆಗೆ ಕೊಲೆಯಾದವರು ಮತ್ತು ಕೊಲೆ ಆರೋಪಿಗಳೆಲ್ಲರೂ ಒಂದೇ ಧರ್ಮದವರಾಗಿದ್ದಾರೆ.

ಕೊಲೆಯಾದ ಫಣೀಂದ್ರ ಮತ್ತು ವಿನುಕುಮಾರ್ ಜೊತೆಗೆ ಆರೋಪಿಗಳಾದ ಸಂತೋಷ್, ಶಬರೀಶ್ ಈ ಹಿಂದೆ ಜಿ-ನೆಟ್ ಎಂಬ ಇಂಟರ್‌ನೆಟ್ ಸೇವೆ ಒದಗಿಸುವ ಕಂಪನಿಯಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಆ ಕಂಪನಿಯ ಮಾಲೀಕರಾದ ಅರುಣ್ ಕುಮಾರ್‌ರೊಂದಿಗೆ ಮನಸ್ತಾಪ ಬಂದ ಕಾರಣ ಕೆಲಸ ಬಿಟ್ಟ ಫಣೀಂದ್ರ ಮತ್ತು ವಿನುಕುಮಾರ್ 2022ರ ನವೆಂಬರ್‌ನಲ್ಲಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಸ್ವಂತ ಕಂಪನಿ ಆರಂಭಿಸಿದ್ದರು. ಆರಂಭದಿಂದಲೇ ಕಂಪನಿಯು ಸಾಕಷ್ಟು ಜನಪ್ರಿಯತೆ ಪಡೆದದ್ದರಿಂದ ಹಲವಾರು ಗ್ರಾಹಕರು ಜಿ-ನೆಟ್ ಕಂಪನಿ ಬಿಟ್ಟು ಏರೋನಿಕ್ಸ್‌ನಿಂದ ಸೇವೆ ಪಡೆದುಕೊಳ್ಳಲು ಆರಂಭಿಸಿದ್ದರು. ಅಷ್ಟು ಮಾತ್ರವಲ್ಲದೇ ಹಲವಾರು ಉದ್ಯೋಗಿಗಳು ಸಹ ಜಿ-ನೆಟ್ ತೊರೆದು ಏರೋನಿಕ್ಸ್ ಸೇರಿದ್ದರು. ಹಾಗಾಗಿ ಎರಡು ಕಂಪನಿಗಳ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಇದರಿಂದ ಹತಾಶಗೊಂಡ ಜಿ-ನೆಟ್ ಮಾಲೀಕ ಅರುಣ್ ಕುಮಾರ್ ಫೆಲಿಕ್ಸ್ ಮತ್ತು ಇತರರಿಗೆ ಸುಪಾರಿ ನೀಡಿ ಫಣೀಂದ್ರ ಮತ್ತು ವಿನುಕುಮಾರ್ ಕೊಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಪೊಲೀಸರು ಅರುಣ್ ಕುಮಾರ್‌ರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 120ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫಣೀಂದ್ರ ಸುಬ್ರಹ್ಮಣ್ಯಂ ಅವರು ಹಿಂದುತ್ವ ಸಂಘಟನೆಗಳೊಂದಿಗೆ ಶಾಮೀಲಾಗಿದ್ದರೂ ಕೂಡ ಅನ್ಯ ಧರ್ಮದ ಯಾರೊಂದಿಗೂ ಅವರಿಗೆ ವೈರತ್ವವಿರಲಿಲ್ಲ. ಅಲ್ಲದೆ, ಜಿ-ನೆಟ್ ಕಂಪನಿ ಜೊತೆಗಿನ ವ್ಯವಹಾರ ವೈಷಮ್ಯವೇ ಅವರ ಹತ್ಯೆಗೆ ಕಾರಣ ಎಂದು ದೂರುದಾರರಾದ ಅವರ ಸಹೋದ್ಯೋಗಿ ಶಂಕರ್ ನಾರಾಯಣ್ ತಿಳಿಸಿದ್ದಾರೆ; ಡಿಸಿಪಿ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಆರಂಭಿಕ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಫಣೀಂದ್ರರವರು ಪೂಜೆ ಮಾಡುತ್ತಿರುವ ಫೋಟೊ, ಅವರ ಕಚೇರಿ ಉದ್ಘಾಟನೆ ಸಮಯದಲ್ಲಿ ತೆಗೆಸಿಕೊಂಡಿರುವುದು; ಅದನ್ನು ರೀಲ್ ಒಂದರಲ್ಲಿ ಬಳಸಲಾಗಿದ್ದು ಅದನ್ನೇ ಮುಂದುಮಾಡಿ ಅವರು ಹಿಂದೂ ಅರ್ಚಕ ಎಂದು ತಪ್ಪಾಗಿ ಬಿಂಬಿಸಲಾಗಿದೆ

ಫಣೀಂದ್ರರವರ ವ್ಯವಹಾರ ಪಾಲುದಾರರಾದ ಕನ್ನಡಪರ ಹೋರಾಟಗಾರರಾದ ಬಿ.ಹರೀಶ್ ಕುಮಾರ್‌ರವರು ಮಾತನಾಡಿ, “ಫಣೀಂದ್ರರವರು ಒಳ್ಳೆಯ ಸ್ವಭಾವದವರು. ಅವರು ಹಿಂದುತ್ವವನ್ನು ಒಪ್ಪಿಕೊಂಡರೂ ಸಹ ಅನ್ಯಧರ್ಮದವರನ್ನು ದ್ವೇಷಿಸುವವರಲ್ಲ. ಕೇವಲ 4 ತಿಂಗಳ ಹಿಂದೆ ಹೊಸ ಇಂಟರ್‌ನೆಟ್ ಸೇವೆ ನೀಡುವ ಕಂಪನಿ ಆರಂಭಿಸಿದ್ದೇವೆ. ಎಲ್ಲವೂ ಚೆನ್ನಾಗಿ ನಡೆದುಕೊಂಡು ಹೋಗುತ್ತಿರುವಾಗ ಅವರ ಏಳಿಗೆ ಸಹಿಸದೇ ಕೊಲೆಗೈಯ್ಯಲಾಗಿದೆ” ಎಂದರು.

ಠುಸ್ ಆದ ಬಿಜೆಪಿಯ ಹೆಣದ ರಾಜಕೀಯ

4 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯು ಜನಪರ ಆಡಳಿತ ನೀಡಲು, ಅಭಿವೃದ್ದಿ ಮಾಡಲು ವಿಫಲವಾಗಿ ಸೋತು ಸುಣ್ಣವಾಗಿದೆ. ಆದರೂ ತನ್ನ ಹೆಣ ರಾಜಕಾರಣವನ್ನು ಮಾತ್ರ ಕೈಬಿಟ್ಟಿಲ್ಲ. ರಾಜ್ಯದಲ್ಲಿ ಯಾರಾದರೂ ಸಾವನಪ್ಪಿದ್ದರೆ ಹಿಂದೂ ಮುಖಂಡನ ಕೊಲೆ ಎಂದು ಗಲಭೆ ಎಬ್ಬಿಸಲು ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ಸಾವನಪ್ಪಿದ ಘಟನೆಯನ್ನು ಕೋಮುವಾದೀಕರಿಸಿ, ಗಲಭೆಗಳನ್ನು ಎಬ್ಬಿಸಿ ಮತಗಳ ಬೇಟೆಯಾಡಿದ್ದ ಬಿಜೆಪಿಗೆ ಇನ್ನೂ ರಕ್ತದ ರುಚಿ ಆರಿಲ್ಲ. ಹಾಗಾಗಿ ಹೆಣಗಳು ಬೀಳುವುದನ್ನೇ ಕಾಯ್ದು ಕೋಮು ಆಯಾಮ ನೀಡಲು ಯತ್ನಿಸುತ್ತಿದೆ. ಆ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಜೋಡಿ ಕೊಲೆ ವಿಚಾರದಲ್ಲಿಯೂ ಹಾಗೆ ಮಾಡಲು ಯತ್ನಿಸಿತು. ಆದರೆ ನೈಜ ಕಾರಣ ಹೊರಬರುತ್ತಲೇ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...