Homeಅಂಕಣಗಳುಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

- Advertisement -
- Advertisement -

ಸಾಮಾನ್ಯ ಮನುಷ್ಯನೂ ಕೂಡ ಅಸಹ್ಯ ಪಟ್ಟುಕೊಳ್ಳುವುದು ಯಾವುದಕ್ಕೆಂದರೆ ಅನವಶ್ಯಕವಾದ ಭಟ್ಟಂಗಿತನಕ್ಕಂತಲ್ಲಾ. ಅದು ಯಂಗೋ ಏನೋ ಭಟ್ಟಂಗಿಗಳು ಎಡೂರಪ್ಪನನ್ನು ರಾಜಾಹುಲಿ ಎಂದು ಕರೆದುಬಿಟ್ಟವು. ಸೂಕ್ಷ್ಮಜ್ಞರು ಆಲೋಚಿಸಿದಾಗ ಎಡೂರಪ್ಪ ಬರಿ ಹುಲಿಯಷ್ಟೆ; ಏಕೆಂದರೆ ಇಪ್ಪತ್ತಮೂರು ದಿನ ಕಂಬಿ ಹಿಂದೆ ಇದ್ದ ಈ ಹುಲಿ, ಬಿಡುಗಡೆಯ ನಂತರ ಕಾಡಿಗೇ ಕಾಂಪೌಂಡ್ ಹಾಕಿ ದಕ್ಕಿಸಿಕೊಂಡಿತು. ಜೊತೆಗೆ ಪತ್ರಕರ್ತರಿಗೂ ಮನೆ, ಸೈಟು ಮಾಡಿಕೊಟ್ಟಾಗ ಅವರೆಲ್ಲಾ ರಾಜಾಹುಲಿಯೆಂಬ ಬಿರುದು ಬರೆದುಕೊಟ್ಟರು. ಈಗ ರಾಜಾಹುಲಿಯ ಹಲ್ಲು ಮತ್ತು ಉಗುರುಗಳನ್ನ ಬಿಜೆಪಿಗಳು ಕಿತ್ತು ಕೂರಿಸಿವೆ. ಆದರೂ ನಿರಾಶೆಗೊಳ್ಳದೆ ಭಟ್ಟಂಗಿ ಮಾಧ್ಯಮದವರು ಯಡ್ಡಿ ಮಗನನ್ನಾಗಲೇ ಮರಿ ರಾಜಾಹುಲಿ ಎಂದು ನಾಮಕರಣ ಮಾಡಿ, ಸದನವನ್ನು ನಡುಗಿಸಿದ ಮರಿ ರಾಜಾಹುಲಿ ಎಂದು ನರಿಗಳಂತೆ ಊಳಿಟ್ಟಿವೆ. ಈ ಭಟ್ಟಂಗಿಗಳ ಬತ್ತಳಿಕೆಯಲ್ಲಿ ಇನ್ನು ಎಂತೆಂತಹ ಪದಪುಂಜಗಳಿವೆಯೆಂದರೆ, ಶಿಸ್ತಿನ ಪಕ್ಷ ಬಿಜೆಪಿ ಎಂದೇ ಯಾವಾಗಲೂ ನಮೂದಿಸುವ ಇವಕ್ಕೆ ಬಿಜೆಪಿ ಶುದ್ಧ ಅಶಿಸ್ತಿನ ಪಕ್ಷ ಎಂಬುದು ತಿಳಿದೇ ಇಲ್ಲವಂತಲ್ಲ. ಅಲ್ಲದೆ ಬಿಜೆಪಿಗಳನ್ನ ಸಂಬೋಧಿಸಬೇಕಾದರೆ ಕೇಸರಿ ಕಲಿಗಳು, ಕೇಸರಿಪಡೆ ಎನ್ನುತ್ತಿದ್ದ ಇವಕ್ಕೆ ಆ ಕಲಿಗಳು ಕಿಸುಗೊಂಡು ಬಿದ್ದು ಕ್ಷೇತ್ರ ಮರೆತು ಅಲೆಯುತ್ತಿರುವುದೇ ಕಾಣುತ್ತಿಲ್ಲವಂತಲ್ಲಾ, ಥೂತ್ತೇರಿ.

*****

ವಿಕೃತಭಟ್ಟನ ವಿಕೃತ ಪುಸ್ತಕಗಳನ್ನು ಬಿಡುಗಡೆ ಮಾಡಲು ಹೋಗುವ ಸಿದ್ದರಾಮಯ್ಯನವರ ಬೌದ್ಧಿಕ ಪತನ ಆರಂಭವಾಗಲಿದೆಯಂತಲ್ಲಾ. ಏಕೆಂದರೆ ವಿಕೃತಭಟ್ಟನ ಇತಿಹಾಸವೇ ಹಾಗಿದೆ. ಈತ ಪತ್ರಿಕೆಯಲ್ಲಿ ಸಿದ್ದರಾಮಯ್ಯನ ಉಚ್ಛಾರಣೆ ಆಡಿಕೊಂಡ ದಾಖಲೆಯಿದೆ. ಸಿದ್ದುಗೆ ಶ,ಷ,ಸ,ಗಳ ವ್ಯತ್ಯಾಸ ಗೊತ್ತಿಲ್ಲವೆಂದು ಆಡಿಕೊಂಡ ಉದಾಹರಣೆಯಿದೆ. ಎಲ್ಲಕ್ಕಿಂತ ಹೆಚ್ಚಾಗಿ ಹೆಣ್ಣಿನ ದ್ವೇಷಿಯಾದ ಈತ ಗೌರಿ ಸಂಘಿಗಳ ಗುಂಡೇಟಿನಿಂದ ಹುತಾತ್ಮಳಾದಾಗ, “ಆಕೆ ಗುಂಡಿಗೆ ಬಲಿಯಾಗದೆ ಗುಂಡುಹಾಕಿ ಬಲಿಯಾಗಿದ್ದರೆ ಸಿಂಗಲ್ ಕಾಲಮ್ಮಿನ ಸುದ್ದಿಯಾಗುತ್ತಿದ್ದಳು” ಎಂದು ಬರೆದ. ಗೌರಿ ಸಿದ್ದು ಅಭಿಮಾನಿಯಾಗಿದ್ದರೆ ವಿಕೃತಭಟ್ಟ ಸಿದ್ದು ವಿರೋಧಿಯಾಗಿದ್ದ. ಗೌರಿ ಹುತಾತ್ಮಳಾದಾಗ ಸರಕಾರಿ ಗೌರವದೊಂದಿಗೆ ಸಂಸ್ಕಾರ ನೆರವೇರಿಸಿದ ಸಿದ್ದು ಆಕೆಗೆ ಗೌರವ ಕೊಡಲೋಸ್ಕರವಾಗಿಯಾದರೂ ವಿಕೃತಭಟ್ಟನ ಪುಸ್ತಕ ಬಿಡುಗಡೆಗೆ ಬಂದಿದ್ದ ಕರೆಯನ್ನು ನಿರಾಕರಿಸಬೇಕಿತ್ತು. ಸಿದ್ದುಗೆ ವಿರೋಧಿಗಳನ್ನ ಒಲಿಸಿಕೊಳ್ಳುವ ತಂತ್ರವಿದಾಗಿರಬಹುದು ಆದರೆ ಭಟ್ಟನ ವಿಷ ಹುಟ್ಟಿನಿಂದಲೇ ಬಂದಿದ್ದು. ಈತ ಹೆಣ್ಣಿನ ಬಗ್ಗೆ ಎಷ್ಟು ವಿಕೃತಿ ಮೆರೆದಿದ್ದಾನೆಂಬುದಕ್ಕೆ ಇನ್ನೂ ನೂರಾರು ಉದಾಹರಣೆಗಳಿವೆ. ಮಮತಾ ಬ್ಯಾನರ್ಜಿ ಮಂಚ್‌ಗೆ (ವೇದಿಕೆ) ಬರುವಂತೆ ಕರೆಕೊಟ್ಟಾಗ ಭಟ್ಟ ಮಂಚ್‌ಅನ್ನು ಮಂಚ ಎಂದು ತಿರುಚಿ ಬರೆದು ಮೋದಿ ವಿರೋಧಿಗಳಿಗೆ ಮಂಚಕ್ಕೆ ಬರುವಂತೆ ಮಮತಾ ಕರೆ ಎಂದು ವಿಕೃತ ಮೆರೆದ. ಆ ಮಟ್ಟಿನ ವಿಕೃತ ಭಟ್ಟನ ಮನಸ್ಸನ್ನ ಮುಂದೆ ಸಿದ್ದು ಬದಲಿಸಿದರೆ, ಆತನ ಪುಸ್ತಕ ಬಿಡುಗಡೆ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ. ಅದು ಸಾಧ್ಯವೇ, ಥೂತ್ತೇರಿ.

ಇದನ್ನೂ ಓದಿ: ಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

ಒಂದು ಕಡೆ ಗೋಹತ್ಯೆ ನಿಷೇಧದ ಕಾಯಿದೆ ತಂದು ಗೋವುಗಳನ್ನೆಲ್ಲಾ ಗೋಶಾಲೆಗೆ ಹೊಡೆದು, ಅವು ನೀರು ಮೇವಿಲ್ಲದೆ ಸಾಯುತ್ತಿದ್ದರೂ, ಗೋರಕ್ಷಣೆಯ ಅನುದಾನ ಪಡೆಯುತ್ತ ಸುಳ್ಳು ಲೆಕ್ಕ ತೋರಿಸುತ್ತ ಗೋವಿನ ಹೆಸರಲ್ಲಿ ಕೊಳ್ಳೆಹೊಡೆಯುತ್ತ ಕುಳಿತಿರುವ ಬಿಜೆಪಿಗಳು ಗೋವುಗಳೆಲ್ಲಾ ಗೋಶಾಲೆ ಸೇರಿದ ಮೇಲೆ ಗೋಮಾಳವೇಕೆ ಎಂದು ಆರೆಸ್ಸೆಸ್ ಸಂಸ್ಥೆಗೆ ಖಾತೆಮಾಡಿ ಕೊಟ್ಟಿದ್ದಾರಂತಲ್ಲಾ. ಇದನ್ನ ಪತ್ತೆ ಹಚ್ಚಿದ ಸರಕಾರ ತಡೆಯೊಡ್ಡಿದರೆ ಚಡ್ಡಿಗಳ ಬದಲು ಪೈಜಾಮಿನ ಬೊಮ್ಮಾಯಿಂದ ಖಂಡನಾ ಹೇಳಿಕೆ ಕೊಡಿಸಿದ್ದಾರಲ್ಲಾ. ಒಂದೇ ಅವಧಿಗೆ ರಾಜ್ಯದ ಗೋಮಾಳಗಳನ್ನೆಲ್ಲಾ ಕಬಳಿಸಿ ಹೊರಟ ಬಿಜೆಪಿಗಳು ಕಬಳಿಸಿದ ಜಾಗದಲ್ಲಿ ಏನೇನು ಮಾಡಬೇಕೆಂದು ನೀಲಿನಕ್ಷೆಯ ತಯಾರಿ ನಡೆಸುತ್ತಿದ್ದಾಗ, ಕರ್ನಾಟಕದ ಕತೆಯೇ ಇಷ್ಟಿದ್ದರೆ ಇನ್ನು ದೇಶದ ನಾನಾ ಕಡೆಗಳಲ್ಲಿ ಸರ್ಕಾರ ನಡೆಸುತ್ತಿರುವ ಚೆಡ್ಡಿಗಳು ಇನ್ನೆಷ್ಟು ಭೂಮಿ ಲಪಟಾಯಿಸಿರಬಹುದೆಂಬುದು ಊಹೆಗೂ ಸಿಲುಕುತ್ತಿಲ್ಲವಂತಲ್ಲಾ, ಥೂತ್ತೇರಿ.

*****

ಸದ್ಯಕ್ಕೆ ಸದನದ ವಿರೋಧಪಕ್ಷವನ್ನ ಆವರಿಸಿರುವ ಕುಮಾರಣ್ಣನವರು ಸದರಿ ಸರಕಾರದ ಎಲ್ಲ ನಡೆಗಳನ್ನು ಟೀಕಿಸುವ ಭರದಲ್ಲಿ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ವರ್ಗಾವಣೆ ಪಟ್ಟಿಯನ್ನ ಮರೆತು, ಈ ಸರಕಾರದ ವರ್ಗಾವಣೆ ದರಪಟ್ಟಿಯನ್ನ ಪತ್ರಿಕೆಗೆ ಬಿಡುಗಡೆ ಮಾಡಿದ್ದಲ್ಲದೆ ಸದನದಲ್ಲೂ ಬಿಡುಗಡೆಗೊಳಿಸಿದರಂತಲ್ಲಾ. ಆದರೇನು ಹಿಂದೆ ಕುಮಾರಣ್ಣನ ಸರಕಾರ ವರ್ಗಾವಣೆಗೆ ದರ ನಿಗದಿ ಮಾಡಿ ವಸೂಲಿ ಮಾಡಿದ್ದ ಪತ್ರಿಕಾ ವರದಿಯನ್ನೇ ಚಲುವರಾಯಸ್ವಾಮಿ ಬಿಡುಗಡೆ ಮಾಡಲಾಗಿ ಸಿಟ್ಟಾದ ಕುಮಾರಣ್ಣ ಜೆಡಿಎಸ್‌ಅನ್ನೆ ಬಿಜೆಪಿಯಲ್ಲಿ ಲೀನಗೊಳಿಸಿ ಅಧಿಕೃತ ವಿರೋಧ ಪಕ್ಷದ ನಾಯಕನಾಗಲು ಹೊರಟಿದ್ದಾರಂತಲ್ಲಾ. ಹಾಗೇನಾದರು ಆದರೆ ದೇವೇಗೌಡರು ಮಕ್ಕಳಿಗಾಗಿ ಕಟ್ಟಿಬೆಳೆಸಿದ ಪಾರ್ಟಿಯ ಕತೆಯೇನು ಎಂದು ನಿರಾಶ್ರಿತರಂತಾಗಿರುವ ಜೆಡಿಎಸ್‌ನವರು ಆತಂಕಗೊಂಡಿದ್ದಾರಂತಲ್ಲಾ. ಕುಮಾರಣ್ಣ ಪಂಚರತ್ನ ಮುಂದಿಟ್ಟುಕೊಂಡು ಕರ್ನಾಟಕ ಸುತ್ತುವಾಗ ನನಗೆ ನೀವು ನೂರ ಇಪ್ಪತ್ತುಮೂರು ಸೀಟು ಗೆಲ್ಲಿಸಿಕೊಡದಿದ್ದರೆ ಪಾರ್ಟಿಯನ್ನೆ ವಿಸರ್ಜನೆ ಮಾಡುತ್ತೇನೆ ಎಂದು ಶಪಥಗೈದಿದ್ದರು ಎಂದು ಕಾಂಗ್ರೆಸ್‌ನವರು ಪದೇಪದೇ ಆರೋಪಿಸುತ್ತಿದ್ದಾರೆ. ಈಗ ಕುಮಾರಣ್ಣ ಬಿಜೆಪಿ ಸೇರಿದರೆ ಪಾರ್ಟಿ ತಂತಾನೆ ವಿಸರ್ಜನೆಯಾಗುತ್ತದಂತಲ್ಲಾ. ಹಾಗೇನಾದರು ಆದರೆ ರೇವಣ್ಣ, ಜಿ.ಟಿ.ದೇವೇಗೌಡ ಇನ್ನು ಮುಂತಾದವರು ಸಿದ್ದು ಸನಿಹಕ್ಕೆ ಬಂದರೆ ಆಶ್ಚರ್ಯವಿಲ್ಲ. 123 ಸೀಟು ಬರದಿದ್ದರೆ ಪಾರ್ಟಿಯನ್ನೇ ವಿಸರ್ಜಿಸುವೆನೆಂದು ಕುಮಾರಸ್ವಾಮಿ ಹೇಳಿದ್ದರು ಎಂದು ಸದನದಲ್ಲಿಯೇ ಸಿದ್ದು ಹೇಳಿದ ಮಾತಿಗೆ ಕುಮಾರಣ್ಣನ ಕಡೆ ಇರುವ ನಾಗಮಂಗಲ ಕಡೆಯ ಕಾರ್ಯಕರ್ತರು, “ಹೌದು ಕುಮಾರಣ್ಣ ಅಂಗೇಳಿದ್ರು. ಆದ್ರೆ ಅಕಸ್ಮಾತ್ 19 ಸೀಟು ಬಂದ್ರೆ ವಿಸರ್ಜನೆ ಮಾಡ್ತಿನಿ ಅಂತ ಎಲ್ಲೇಳಿದ್ರು ಎಂದವಂತಲ್ಲಾ. ಇದಲ್ಲವೆ ಬಿಜೆಪಿ ಸೇರುವ ತಯಾರಿ, ಥೂತ್ತೇರಿ.

*****

ಬಿಜೆಪಿ ಜೊತೆ ಸೇರಿ ರಾಜಕೀಯ ಕೂಡಾವಳಿ ಜೀವನ ನಡೆಸಲು ಹೊರಟಿರುವ ಕುಮಾರಣ್ಣನ ಬಗ್ಗೆ ಸಹಜವಾಗಿ ಕರ್ನಾಟಕದ ಕೆಲ ಮನಸ್ಸುಗಳು ಮಮ್ಮಲ ಮರುಗಿವೆ. ಏಕೆಂದರೆ ಇದೇ ಕುಮಾರಣ್ಣ ಪ್ರಹ್ಲಾದ ಜೋಶಿ ಟೀಮನ್ನು ಪೇಶ್ವೆ ಸಂತತಿಗೆ ಹೋಲಿಸಿದ್ದರು ಮತ್ತು ಆರೆಸ್ಸೆಸ್ಸಿಗರ ಮೇಲೆ ದಾಳಿ ಮಾಡಿದ್ದರು. ಆದರೆ ಈಗ ಈ ಮಾತುಗಳು ಅರ್ಥ ಕಳೆದುಕೊಳ್ಳತೊಡಗಿವೆ. ಅಧಿಕಾರಕ್ಕಾಗಿ ಏನನ್ನಾದರೂ ಮಾಡುವ ಬಿಜೆಪಿಗಳಿಗೆ ಕುಮಾರಣ್ಣನೇ ಆದರ್ಶ, ಏಕೆಂದರೆ ಎಮ್ಮೆ ನಡಿಗೆಯಲ್ಲಿ ಹೋಗುತ್ತಿದ್ದ ಧರ್ಮಸಿಂಗ್ ಸರಕಾರ ಕೆಡವಿ ಮುಖ್ಯಮಂತ್ರಿಯಾದ ಕುಮಾರಣ್ಣನಿಗೆ ಕೆಲ ಸತ್ಯಸಂಗತಿಗಳು ಗೊತ್ತಿವೆ. ಅದೇನೆಂದರೆ ತಾನು ಯಾವತ್ತೂ ಜನಾಭಿಪ್ರಾಯದ ಮುಖ್ಯಮಂತ್ರಿಯಾಗಲೂ ಸಾಧ್ಯವಿಲ್ಲ ಎಂದು; ಒಂದೋ ಕಾಂಗೈ ತೆಕ್ಕೆಗೆ ಬೀಳಬೇಕು, ಇಲ್ಲ ಬಿಜೆಪಿ ಆಲಿಂಗನಕ್ಕೆ ಅರ್ಪಿಸಿಕೊಳ್ಳಬೇಕು. ಆದರೆ ಬಿಜೆಪಿಯದ್ದು ದೃತರಾಷ್ಟ್ರಲಿಂಗನ. ಅವರು ಕುಮಾರಣ್ಣನನ್ನ ಆಲಂಗಿಸಿ ಜೆಡಿಎಸ್ ಸಮಾಧಿಯ ಮೇಲೆ ಪಾಪಾಸು ಕಳ್ಳಿಯಂತೆ ಬೆಳೆಯಬಲ್ಲರಂತಲ್ಲಾ. ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆಯ ಉದಾಹರಣೆ ಕಣ್ಣಮುಂದೆಯಿದ್ದರೂ, ಕುಮಾರಸ್ವಾಮಿಯವರಿಗೆ ಅದು ಕಾಣುತ್ತಿಲ್ಲವಂತಲ್ಲಾ, ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...