Homeಕರ್ನಾಟಕರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

- Advertisement -
- Advertisement -

ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ನೆರೆ ಪರಿಸ್ಥಿತಿ ಉಂಟಾಗಿದೆ ಕೆಲವು ಗ್ರಾಮಗಳು, ರಸ್ತೆಗಳು ಜಲಾವೃತವಾಗಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಇದರ ಪರಿಣಾಮ ಅನೇಕ ಕಡೆಗಳಲ್ಲಿ ಸಂಪರ್ಕ ಕಡಿತವಾಗಿದೆ.

ಅತಿಯಾದ ಮಳೆಯಿಂದಾಗಿ ಅವಘಡಗಳೂ ಸಂಭವಿಸಿದ್ದು, ಸೋಮವಾರ ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಒಬ್ಬರು ಜಲಪಾತದಲ್ಲಿ ಕೊಚ್ಚಿ ಹೋಗಿದ್ದಾರೆ ಕೆಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃತಿಯಾಗಿದೆ. ಇನ್ನೂ ಕೆಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ವಿದ್ಯುತ್‌ ಕಂಬಗಳು ಧರೆಗುರುಳಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಯ ಗೋಕುಲ ದಾಸ್‌ ಪ್ರಭು (53) ಸೋಮವಾರ ಕರ್ಕುಂಜೆಯ ತೋಟಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕು ಶೇಡಿಮನೆಯ ಬಡಬೈಲು ದರಕಾಶು ಎಂಬಲ್ಲಿ ಬಾಲಕಿ ರಚನಾ (12) ಭಾನುವಾರ ಹೊಳೆಗೆ ಬಿದ್ದು ಮೃತಪಟ್ಟಿದ್ದಾಳೆ.

ಭದ್ರಾವತಿಯ ಶರತ್‌ ಕುಮಾರ್ (23) ಎಂಬುವವರು ಬೈಂದೂರು ತಾಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಕೊಚ್ಚಿ ಹೋಗಿದ್ದಾರೆ. ಬಂಡೆಯ ತುದಿಯಲ್ಲಿ ನಿಂತು ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಬಿರಾಳ(ಬಿ)ಯಲ್ಲಿ ಎರಡು ಅಂತಸ್ತಿನ ಮನೆ ಕುಸಿದು ಬಸಮ್ಮ ಬಸವರಾಜ (35) ಮೃತಪಟ್ಟಿದ್ದಾರೆ. ಮನೆಯಲ್ಲಿ ಬಸಮ್ಮ ಹಾಗೂ ಅವರ ಪುತ್ರಿ ಅಶ್ವಿನಿ ಇದ್ದರು. ಮನೆ ಕುಸಿಯುತ್ತಿರುವ ಸಪ್ಪಳ ಕೇಳುತ್ತಿದ್ದಂತೆಯೇ ಪುತ್ರಿ ಅಶ್ವಿನಿ ಓಡಿ ಹೊರಗೆ ಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೋಡಿ, ಮರವಂತೆಯಲ್ಲಿ ಕಡಲ್ಕೂರೆತ ಮುಂದುವರಿದಿದೆ. ಮಲ್ಪೆ, ಪಡುಕರೆ, ಪಡುಬಿದ್ರಿ, ಕಾಪು, ಕೋಡಿ ಸೀ ವಾಕ್‌ನಲ್ಲಿ ಅಲೆಗಳು ಹೆಚ್ಚಾಗಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹಲವೆಡೆ ಕೃಷಿ ಭೂಮಿ ಸಹಿತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 41 ಮನೆಗಳಿಗೆ ಹಾನಿಯಾಗಿದೆ. 230ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 24 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ. ಬೃಹತ್ ಮರಗಳು ಬುಡ ಸಹಿತ ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಶಂಕರನಾರಾಯಣ, ಈ ಕಾಪು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮೆಸ್ಕಾಂ ಇಲಾಖೆಗೆ ಹಾನಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.

ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿದೆ. ಹಾಗಾಗಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿರಲು ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯ ಮಿಸ್ಸಾ ನಗರದ ನಿವಾಸಿ ಮಹಬೂಬ್‌ ಪಾಷಾ ಅವರ ಪುತ್ರ ಮಹಮದ್‌ ನಹೀಮ (4) ಮೃತ ಬಾಲಕ ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ನೀರು ತುಂಬಿದ ಗುಂಡಿಯಲ್ಲಿ ಬಿದ್ದು ನಾಲ್ಕು ವರ್ಷದ ಬಾಲಕ ಸಮ್ಮತಪಟ್ಟಿದ್ದಾನೆ.

ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ ದೇಗಲಮಡಿ, ಕೊಳ್ಳೂರು, ನಾಗಾಈದಲಾಯಿ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ನಿರಂತರ ಮಳೆಗೆ. ಉತ್ತರಕನ್ನಡ ಜಿಲ್ಲೆಯ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕುಮಟಾ ತಾಲ್ಲೂಕಿನ ಹೆಗಡೆ, ಮುರೂರು, ಮಣಕಿ, ದಿವಗಿ ಗ್ರಾಮಗಳು ಜಲಾವೃತಗೊಂಡಿವೆ. ಹೊನ್ನಾವರದ ಗುಂಡಬಾಳ ನದಿ ಪಾತ್ರದಲ್ಲೂ ನೆರೆ ಸ್ಥಿತಿ ಮುಂದುವರಿದಿದೆ.

ಕೊಡಗಿನ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ಭಗಂಡೇಶ್ವರ ದೇಗುಲದ ಮುಖ್ಯದ್ವಾರದ ಎರಡು ಮೆಟ್ಟಿಲುಗಳವರೆಗೆ ನೀರು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲದಲ್ಲಿ ಕಾಳಜಿ ಕೇಂದ್ರ ತೆರೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ. ಎನ್‌ಆರ್ ತಂಡ ಭಾಗಮಂಡಲಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ ಕೆಲವೆಡೆ ಶಾಲೆ- ಕಾಲೇಜುಗಳಿಗೆ ಇಂದು ರಜೆ ನಿರಂತರ ಮಳೆಯಾಗುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಹಾಸನ ಜಿಲ್ಲೆಯ ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಯಾ ಜಿಲ್ಲಾಡಳಿತಗಳು ಮಂಗಳವಾರ ರಜೆ ಘೋಷಿಸಿವೆ.

ಇದನ್ನೂ ಓದಿ: ಭಾರೀ ಮಳೆಗೆ ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...