Homeಕರ್ನಾಟಕಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

ಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

- Advertisement -
- Advertisement -

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು SITತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಶುಕ್ರವಾರ (ಜು.28) ಬೆಳಿಗ್ಗೆ11ರಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಕರೆ ಕೊಟ್ಟಿದೆ.

ಈ ಕುರಿತು ಸಮಿತಿಯು ಪ್ರಕಟಣೆ ಹೊರಡಿಸಿದ್ದು, ”2012ರ ಆಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಂಗಳದ ವಿದ್ಯಾರ್ಥಿನಿ ಸೌಜನ್ಯ ಎಂಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಂತ ಘೋರವಾದ ಅತ್ಯಾಚಾರವನ್ನು ನಡೆಸಿ, ಆಕೆಯನ್ನು ಕೊಲೆ ಮಾಡಲಾಗಿತ್ತು, ಅದನ್ನು ಮುಚ್ಚಿ ಹಾಕಲು ಯತ್ನಿಸಿದ ಶಕ್ತಿಗಳ ವಿರುದ್ಧ ಬೆಳ್ತಂಗಡಿ, ಮಂಗಳೂರು ಹಾಗೂ ಬೆಂಗಳೂರು ಸೇರಿದಂತೆ ಇಡೀ ರಾಜ್ಯಾದ್ಯಂತ ನಡೆಸಿದ ನಿರಂತರ ಹೋರಾಟ ಹಾಗೂ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಹತ್ತು ದಿನ ನಡೆಸಿದ ಅನಿರ್ದಿಷ್ಟಾವಧಿ ಹೋರಾಟಗಳ ಫಲವಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು” ಎಂದು ತಿಳಿಸಿದೆ.

”ಈ ಪ್ರಕರಣದ ಕುರಿತು 11 ವರ್ಷಗಳ ಕಾಲ ದೀರ್ಘ ತನಿಖೆ ನಡೆಸಿದ ಸಿ.ಬಿ.ಐನ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿ ಎಂದು ಗುರುತಿಸಲಾಗಿದ್ದ ಸಂತೋಷ್ ರಾವ್‌ರನ್ನು ದೋಷಮುಕ್ತಗೊಳಿಸಿ, ಈ ತನಿಖೆಯು ಲೋಪ-ದೋಷಗಳಿಂದ ಕೂಡಿದ್ದು, ಆ ಕಾರಣದಿಂದ ಈ ಪ್ರಕರಣವು ಮುಂದುವರಿದೆ ತನಿಖೆಗೆ ಅರ್ಹ ಪ್ರಕರಣವಾಗಿದೆ ಎಂದೂ ಹೇಳಿದ ಸಿಬಿಐ ತನಿಖೆಯ ಲೋಪಗಳನ್ನು ಪಟ್ಟಿ ಮಾಡಿರುವ ವಿಶೇಷ ನ್ಯಾಯಾಲಯವು ‘ಸಿಬಿಐನ ತನಿಖೆಯು ಸರಿಯಾದ ದಿಕ್ಕಿನಲ್ಲಿ ನಡೆದಿಲ್ಲ’ ಎಂದು ಬೊಟ್ಟು ಮಾಡಿದೆ, ಮತ್ತು ನಿರ್ದೋ ಸಂತೋಷ್ ರಾವ್ ಅವರಿಗೆ ಕಾನೂನು ಪರಿಹಾರ ನೀಡಬೇಕೆಂದು ಆದೇಶಿಸಿದೆ” ಎಂದು ಹೇಳಿದೆ.

ಸೌಜನ್ಯಳ ಮೇಲೆ ನಡೆದದ್ದು “ಅತ್ಯಂತ ಕ್ರೂರ ಅತ್ಯಾಚಾರ ಮತ್ತು ಕೊಲೆ” ಎಂದು ಪರಿಗಣಿಸಿದ್ದ ವಿಶೇಷ ನ್ಯಾಯಾಲಯವು ಇದನ್ನು ಆದ್ಯತೆಯಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರಂಭದಲ್ಲಿಯೇ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶಿಸಿತ್ತು. ಆದರೆ, ಈ ವಿಶೇಷ ನ್ಯಾಯಾಲಯದ ನಿರ್ದೇಶನವನ್ನು ನಿರ್ಲಕ್ಷಿಸಿದ ಸಿ.ಬಿ.ಐ. ರಾಜಕೀಯ ಪ್ರಭಾವದಿಂದ ತನಿಖೆ ನಡೆಸಿ ನಿಜವಾದ ತಪ್ಪಿತಸ್ಥರನ್ನು ರಕ್ಷಿಸಿ ನಿರಪರಾಧಿಯೊಬ್ಬರನ್ನು ಬಲಿ ಹಾಕಿದ್ದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಸೌಜನ್ಯ ಪ್ರಕರಣ: ವೀರೇಂದ್ರ ಹೆಗ್ಗಡೆ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಜನಪರ ಸಂಘಟನೆಗಳು ಆರಂಭದಿಂದಲೂ ಎತ್ತಿತೋರಿಸಿರುವ ಲೋಪಗಳು ಹೀಗಿವೆ:

1) ತನಿಖೆ ನಡೆಯಬೇಕಿದ್ದ ಸುವರ್ಣಾವಧಿಯಲ್ಲಿ ಸರಿಯಾದ ತನಿಖೆ ನಡೆದಿಲ್ಲ.

2) ಮರಣೋತ್ತರ ಪರೀಕ್ಷೆಯನ್ನು ಅವೈಜ್ಞಾನಿಕವಾಗಿ ಮತ್ತು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು ಕಂಡುಬಂದಿರುತ್ತದೆ. ಅದರಲ್ಲೂ ಬೆಳ್ತಂಗಡಿಯ ಸರ್ಕಾರಿ ಆಸತ್ರೆಯಲ್ಲಿ ಅಗತ್ಯ ಬೆಳಕು ಇಲ್ಲದ ವಾತಾವರಣದಲ್ಲಿ ಮಾಡಿರುವುದನ್ನೂ ಪ್ರಶ್ನಿಸಲಾಗಿಲ್ಲ.

3) ಅತ್ಯಾಚಾರ ನಡೆದ ಸ್ಥಳದಲ್ಲಿ ಬೆರಳು ಮತ್ತು ಹೆಜ್ಜೆ ಗುರುತುಗಳನ್ನು ಸಂಗ್ರಹಿಸಿಲ್ಲ.

4) ನಗ್ನ ಸ್ಥಿತಿಯಲ್ಲಿದ್ದ ಸೌಜನ್ಯ ಹಾಕಿಕೊಂಡಿದ್ದ ಬಟ್ಟೆಗಳು ಸಿಗದ ಕಾರಣ ಸ್ಥಳೀಯ ಪೊಲೀಸರು ಸೌಜನ್ಯಾ ಮನೆಯಿಂದ ಬಟ್ಟೆ ಸಂಗ್ರಹಿಸಿ ಸಾಕ್ಷ್ಯವೆಂದು ತೋರಿಸಲಾಗಿದೆ.

5) ಸೌಜನ್ಯಾಳ ಖಾಸಗಿ ಅಂಗಕ್ಕೆ ಮಣ್ಣು ತುಂಬಿಸಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿರುವುದು, ಮಣ್ಣಿನ DNA ಪರೀಕ್ಷೆ ಆಗಬೇಕು.

6) ಸೌಜನ್ಯಳ ಗೆಳತಿಯನ್ನು ವಿಚಾರಣೆ ಮಾಡದಿರುವುದು.

7) ಒಬ್ಬನೇ ವ್ಯಕ್ತಿ ಈ ಕೃತ್ಯವನ್ನು ನಡೆಸಲಾಗದು ಎಂಬ ಅಂಶವನ್ನು ಕಡೆಗಣಿಸಿರುವುದು.

8) ಸ್ಥಳೀಯ ಸಾಕ್ಷಿಗಳು ಹೇಳಿದ ವ್ಯಕ್ತಿಗಳನ್ನು ಗಂಭೀರ ವಿಚಾರಣೆಗೆ ಒಳಪಡಿಸದೇ ಮಾನಸಿಕ ಚಿಕಿತ್ಸೆಯಲ್ಲಿದ್ದ ಸಂತೋಷ್ ರಾವ್‌ಗೆ ಇಡೀ ತನಿಖೆಯನ್ನು ಕೇಂದ್ರೀಕರಿಸಿರುವುದು.

9) ಘಟನೆ ನಡೆದ ದಿನ ಮತ್ತು ಸ್ಥಳದಲ್ಲಿ ಸಂತೋಷ್ ರಾವ್ ಇದ್ದುದನ್ನು ನೋಡಿದ ಯಾವುದೇ ಸಾಕ್ಷ್ಯಗಳು ಸಿಗದಿರುವುದು.

10) ಸಂತೋಷ್ ರಾವ್ ವಿರುದ್ಧ ಮಾಡಲಾದ ಚಾರ್ಜ್ ಶೀಟ್‌ನ ಆರೋಪಗಳನ್ನು ಸಾಬೀತು ಮಾಡಲಾಗದೆ ವಿಫಲವಾಗಿರುವುದು..

11) ವಿಡಿಯೋ ಮಾಡುವ ನಿಪುಣತೆ ಇಲ್ಲದ ಪೊಲೀಸ್ ಸಿಬ್ಬಂದಿಯನ್ನು ವಿಡಿಯೋ ಮಾಡಲು ನಿಯೋಜಿಸಿರುವುದು

12) ಪ್ರಮುಖ ಸಾಕ್ಷಿಯಾಗಿದ್ದ ಧರ್ಮಸ್ಥಳದ ಬಾಡ್‌ನ ರೂಮ್ ಬಾಂಡ್ ರವಿಪೂಜಾರಿಯ ಆತ್ಮಹತ್ಯೆಯನ್ನೂ ಹಾಗೂ ಮತ್ತೊಬ್ಬ ಸಾಕ್ಷಿ ರೂಮ್ ಬಾಯ್ ಗೋಪಾಲಕೃಷ್ಣಗೌಡರ ಅಸಹಜ ಸಾವನ್ನು ಪರಿಗಣಿಸದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತದೆ.

13) ನೇಚರ್ ಕ್ಯೂರ್ ಸೆಂಟರ್‌ನ ಸಿಸಿ ಕ್ಯಾಮೆರಾದ ರೆಕಾಡಿರ್ಂಗ್‌ಗಳನ್ನು ಉದ್ದೇಶಪೂರ್ವಕವಾಗಿ ಸೆಕ್ಯೂರ್ ಮಾಡದಿರುವುದು ಸಂಶಯಕ್ಕೆ ಎಡೆ ಮಾಡಿಕೊಡುತ್ತದೆ. ಹೀಗೆ. ಆರಂಭದ ಸ್ಥಳೀಯ ಪೊಲೀಸರ ತನಿಖೆ, ನಂತರ ರಾಜ್ಯದ ಸಿಐಡಿ ತನಿಖೆ, ಅನಂತರದ ಸಿಬಿಐ ತನಿಖೆಯೂ ಸೇರಿ ಈ 11 ವರ್ಷಗಳ ಕಾಲಾವಧಿಯಲ್ಲಿ ನಡೆದ ಎಲ್ಲ ತನಿಖೆಗಳು ತಪ್ಪಿತಸ್ಥರನ್ನು ರಕ್ಷಿಸುವ ಕೊಡೆಯ ಅಡಿಯಲ್ಲೇ ನಡೆದಂತಿವೆ.

ಹಾಗಾದರೆ, ಆತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರು?

ನಿಜವಾದ ಅತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಪತ್ತೆ ಮಾಡಿ ಶಿಕ್ಷಿಸಬೇಕೆಂದು ಆಗ್ರಹಿಸಿ ನಾವಿಂದು ಮತ್ತೆ ಹೋರಾಟಕ್ಕೆ ಇಳಿದಿದ್ದೇವೆ ಎಂದು ಹೋರಾಟ ಸಮಿತಿ ಹೇಳಿದೆ.

1 ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ SIT ತನಿಖೆ ಆಗಬೇಕು. ವಿಶೇಷ ನ್ಯಾಯಾಲಯವು ಗುರುತಿಸಿರುವ ಲೋಪಗಳ ಆಧಾರದಲ್ಲಿ ತನಿಖೆ ನಡೆಯಬೇಕು, ಅದಕ್ಕಾಗಿ ವಿಶೇಷ ತನಿಖಾ ದಳವನ್ನು ರಚನೆ ಮಾಡಬೇಕು. ವಿಶೇಷ ನ್ಯಾಯಾಲಯವು ಗುರುತಿಸಿರುವಂತೆ ಮೂಲ ತನಿಖೆ ನಡೆಸಿದ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ತನಿಖೆಯ ದಿಕ್ಕು ತಪ್ಪಿಸಿದ ಕಾಣದ ಕೈಗಳನ್ನು ಸಹ ಆರೋಪಿಗಳೆಂದು ಪರಿಗಣಿಸಬೇಕು.

2. ಈ ಪ್ರಕರಣಕ್ಕೂ ಹಿಂದೆ ಧರ್ಮಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿರುವ ಸರಿಸುಮಾರು 462 ಆಸಹಜ ಸಾವಿನ ಪ್ರಕರಣಗಳ ಕುರಿತೂ ಸಮಗ್ರ ತನಿಖೆಗೆ ಆದೇಶಿಸಬೇಕು. ಆ ಮೂಲಕ ಅಸಹಾಯಕ ಜನರ ಅಸಹಜ ಸಾವಿಗೆ ಸರಣಿಗೆ ಕೊನೆ ಹಾಕಬೇಕು,

3. ಇದರಲ್ಲಿ ಸುಮಾರು 90 ಸಾವುಗಳು ಮಹಿಳೆಯರು ಮತ್ತು ಮಕ್ಕಳದಾಗಿವೆ ಎನ್ನುವುದು ಗಮನಾರ್ಹ. ಹಾಗಾಗಿ ರಾಜ್ಯ ಮಹಿಳಾ ಆಯೋಗ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಗಳೂ ಈ ಬಗ್ಗೆ ತುರ್ತು ಗಮನ ಹರಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...