Homeಕರ್ನಾಟಕಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

ಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

- Advertisement -
- Advertisement -

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು SITತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಶುಕ್ರವಾರ (ಜು.28) ಬೆಳಿಗ್ಗೆ11ರಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಕರೆ ಕೊಟ್ಟಿದೆ.

ಈ ಕುರಿತು ಸಮಿತಿಯು ಪ್ರಕಟಣೆ ಹೊರಡಿಸಿದ್ದು, ”2012ರ ಆಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಂಗಳದ ವಿದ್ಯಾರ್ಥಿನಿ ಸೌಜನ್ಯ ಎಂಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಂತ ಘೋರವಾದ ಅತ್ಯಾಚಾರವನ್ನು ನಡೆಸಿ, ಆಕೆಯನ್ನು ಕೊಲೆ ಮಾಡಲಾಗಿತ್ತು, ಅದನ್ನು ಮುಚ್ಚಿ ಹಾಕಲು ಯತ್ನಿಸಿದ ಶಕ್ತಿಗಳ ವಿರುದ್ಧ ಬೆಳ್ತಂಗಡಿ, ಮಂಗಳೂರು ಹಾಗೂ ಬೆಂಗಳೂರು ಸೇರಿದಂತೆ ಇಡೀ ರಾಜ್ಯಾದ್ಯಂತ ನಡೆಸಿದ ನಿರಂತರ ಹೋರಾಟ ಹಾಗೂ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಹತ್ತು ದಿನ ನಡೆಸಿದ ಅನಿರ್ದಿಷ್ಟಾವಧಿ ಹೋರಾಟಗಳ ಫಲವಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು” ಎಂದು ತಿಳಿಸಿದೆ.

”ಈ ಪ್ರಕರಣದ ಕುರಿತು 11 ವರ್ಷಗಳ ಕಾಲ ದೀರ್ಘ ತನಿಖೆ ನಡೆಸಿದ ಸಿ.ಬಿ.ಐನ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿ ಎಂದು ಗುರುತಿಸಲಾಗಿದ್ದ ಸಂತೋಷ್ ರಾವ್‌ರನ್ನು ದೋಷಮುಕ್ತಗೊಳಿಸಿ, ಈ ತನಿಖೆಯು ಲೋಪ-ದೋಷಗಳಿಂದ ಕೂಡಿದ್ದು, ಆ ಕಾರಣದಿಂದ ಈ ಪ್ರಕರಣವು ಮುಂದುವರಿದೆ ತನಿಖೆಗೆ ಅರ್ಹ ಪ್ರಕರಣವಾಗಿದೆ ಎಂದೂ ಹೇಳಿದ ಸಿಬಿಐ ತನಿಖೆಯ ಲೋಪಗಳನ್ನು ಪಟ್ಟಿ ಮಾಡಿರುವ ವಿಶೇಷ ನ್ಯಾಯಾಲಯವು ‘ಸಿಬಿಐನ ತನಿಖೆಯು ಸರಿಯಾದ ದಿಕ್ಕಿನಲ್ಲಿ ನಡೆದಿಲ್ಲ’ ಎಂದು ಬೊಟ್ಟು ಮಾಡಿದೆ, ಮತ್ತು ನಿರ್ದೋ ಸಂತೋಷ್ ರಾವ್ ಅವರಿಗೆ ಕಾನೂನು ಪರಿಹಾರ ನೀಡಬೇಕೆಂದು ಆದೇಶಿಸಿದೆ” ಎಂದು ಹೇಳಿದೆ.

ಸೌಜನ್ಯಳ ಮೇಲೆ ನಡೆದದ್ದು “ಅತ್ಯಂತ ಕ್ರೂರ ಅತ್ಯಾಚಾರ ಮತ್ತು ಕೊಲೆ” ಎಂದು ಪರಿಗಣಿಸಿದ್ದ ವಿಶೇಷ ನ್ಯಾಯಾಲಯವು ಇದನ್ನು ಆದ್ಯತೆಯಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರಂಭದಲ್ಲಿಯೇ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶಿಸಿತ್ತು. ಆದರೆ, ಈ ವಿಶೇಷ ನ್ಯಾಯಾಲಯದ ನಿರ್ದೇಶನವನ್ನು ನಿರ್ಲಕ್ಷಿಸಿದ ಸಿ.ಬಿ.ಐ. ರಾಜಕೀಯ ಪ್ರಭಾವದಿಂದ ತನಿಖೆ ನಡೆಸಿ ನಿಜವಾದ ತಪ್ಪಿತಸ್ಥರನ್ನು ರಕ್ಷಿಸಿ ನಿರಪರಾಧಿಯೊಬ್ಬರನ್ನು ಬಲಿ ಹಾಕಿದ್ದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಸೌಜನ್ಯ ಪ್ರಕರಣ: ವೀರೇಂದ್ರ ಹೆಗ್ಗಡೆ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಜನಪರ ಸಂಘಟನೆಗಳು ಆರಂಭದಿಂದಲೂ ಎತ್ತಿತೋರಿಸಿರುವ ಲೋಪಗಳು ಹೀಗಿವೆ:

1) ತನಿಖೆ ನಡೆಯಬೇಕಿದ್ದ ಸುವರ್ಣಾವಧಿಯಲ್ಲಿ ಸರಿಯಾದ ತನಿಖೆ ನಡೆದಿಲ್ಲ.

2) ಮರಣೋತ್ತರ ಪರೀಕ್ಷೆಯನ್ನು ಅವೈಜ್ಞಾನಿಕವಾಗಿ ಮತ್ತು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು ಕಂಡುಬಂದಿರುತ್ತದೆ. ಅದರಲ್ಲೂ ಬೆಳ್ತಂಗಡಿಯ ಸರ್ಕಾರಿ ಆಸತ್ರೆಯಲ್ಲಿ ಅಗತ್ಯ ಬೆಳಕು ಇಲ್ಲದ ವಾತಾವರಣದಲ್ಲಿ ಮಾಡಿರುವುದನ್ನೂ ಪ್ರಶ್ನಿಸಲಾಗಿಲ್ಲ.

3) ಅತ್ಯಾಚಾರ ನಡೆದ ಸ್ಥಳದಲ್ಲಿ ಬೆರಳು ಮತ್ತು ಹೆಜ್ಜೆ ಗುರುತುಗಳನ್ನು ಸಂಗ್ರಹಿಸಿಲ್ಲ.

4) ನಗ್ನ ಸ್ಥಿತಿಯಲ್ಲಿದ್ದ ಸೌಜನ್ಯ ಹಾಕಿಕೊಂಡಿದ್ದ ಬಟ್ಟೆಗಳು ಸಿಗದ ಕಾರಣ ಸ್ಥಳೀಯ ಪೊಲೀಸರು ಸೌಜನ್ಯಾ ಮನೆಯಿಂದ ಬಟ್ಟೆ ಸಂಗ್ರಹಿಸಿ ಸಾಕ್ಷ್ಯವೆಂದು ತೋರಿಸಲಾಗಿದೆ.

5) ಸೌಜನ್ಯಾಳ ಖಾಸಗಿ ಅಂಗಕ್ಕೆ ಮಣ್ಣು ತುಂಬಿಸಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿರುವುದು, ಮಣ್ಣಿನ DNA ಪರೀಕ್ಷೆ ಆಗಬೇಕು.

6) ಸೌಜನ್ಯಳ ಗೆಳತಿಯನ್ನು ವಿಚಾರಣೆ ಮಾಡದಿರುವುದು.

7) ಒಬ್ಬನೇ ವ್ಯಕ್ತಿ ಈ ಕೃತ್ಯವನ್ನು ನಡೆಸಲಾಗದು ಎಂಬ ಅಂಶವನ್ನು ಕಡೆಗಣಿಸಿರುವುದು.

8) ಸ್ಥಳೀಯ ಸಾಕ್ಷಿಗಳು ಹೇಳಿದ ವ್ಯಕ್ತಿಗಳನ್ನು ಗಂಭೀರ ವಿಚಾರಣೆಗೆ ಒಳಪಡಿಸದೇ ಮಾನಸಿಕ ಚಿಕಿತ್ಸೆಯಲ್ಲಿದ್ದ ಸಂತೋಷ್ ರಾವ್‌ಗೆ ಇಡೀ ತನಿಖೆಯನ್ನು ಕೇಂದ್ರೀಕರಿಸಿರುವುದು.

9) ಘಟನೆ ನಡೆದ ದಿನ ಮತ್ತು ಸ್ಥಳದಲ್ಲಿ ಸಂತೋಷ್ ರಾವ್ ಇದ್ದುದನ್ನು ನೋಡಿದ ಯಾವುದೇ ಸಾಕ್ಷ್ಯಗಳು ಸಿಗದಿರುವುದು.

10) ಸಂತೋಷ್ ರಾವ್ ವಿರುದ್ಧ ಮಾಡಲಾದ ಚಾರ್ಜ್ ಶೀಟ್‌ನ ಆರೋಪಗಳನ್ನು ಸಾಬೀತು ಮಾಡಲಾಗದೆ ವಿಫಲವಾಗಿರುವುದು..

11) ವಿಡಿಯೋ ಮಾಡುವ ನಿಪುಣತೆ ಇಲ್ಲದ ಪೊಲೀಸ್ ಸಿಬ್ಬಂದಿಯನ್ನು ವಿಡಿಯೋ ಮಾಡಲು ನಿಯೋಜಿಸಿರುವುದು

12) ಪ್ರಮುಖ ಸಾಕ್ಷಿಯಾಗಿದ್ದ ಧರ್ಮಸ್ಥಳದ ಬಾಡ್‌ನ ರೂಮ್ ಬಾಂಡ್ ರವಿಪೂಜಾರಿಯ ಆತ್ಮಹತ್ಯೆಯನ್ನೂ ಹಾಗೂ ಮತ್ತೊಬ್ಬ ಸಾಕ್ಷಿ ರೂಮ್ ಬಾಯ್ ಗೋಪಾಲಕೃಷ್ಣಗೌಡರ ಅಸಹಜ ಸಾವನ್ನು ಪರಿಗಣಿಸದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತದೆ.

13) ನೇಚರ್ ಕ್ಯೂರ್ ಸೆಂಟರ್‌ನ ಸಿಸಿ ಕ್ಯಾಮೆರಾದ ರೆಕಾಡಿರ್ಂಗ್‌ಗಳನ್ನು ಉದ್ದೇಶಪೂರ್ವಕವಾಗಿ ಸೆಕ್ಯೂರ್ ಮಾಡದಿರುವುದು ಸಂಶಯಕ್ಕೆ ಎಡೆ ಮಾಡಿಕೊಡುತ್ತದೆ. ಹೀಗೆ. ಆರಂಭದ ಸ್ಥಳೀಯ ಪೊಲೀಸರ ತನಿಖೆ, ನಂತರ ರಾಜ್ಯದ ಸಿಐಡಿ ತನಿಖೆ, ಅನಂತರದ ಸಿಬಿಐ ತನಿಖೆಯೂ ಸೇರಿ ಈ 11 ವರ್ಷಗಳ ಕಾಲಾವಧಿಯಲ್ಲಿ ನಡೆದ ಎಲ್ಲ ತನಿಖೆಗಳು ತಪ್ಪಿತಸ್ಥರನ್ನು ರಕ್ಷಿಸುವ ಕೊಡೆಯ ಅಡಿಯಲ್ಲೇ ನಡೆದಂತಿವೆ.

ಹಾಗಾದರೆ, ಆತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರು?

ನಿಜವಾದ ಅತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಪತ್ತೆ ಮಾಡಿ ಶಿಕ್ಷಿಸಬೇಕೆಂದು ಆಗ್ರಹಿಸಿ ನಾವಿಂದು ಮತ್ತೆ ಹೋರಾಟಕ್ಕೆ ಇಳಿದಿದ್ದೇವೆ ಎಂದು ಹೋರಾಟ ಸಮಿತಿ ಹೇಳಿದೆ.

1 ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ SIT ತನಿಖೆ ಆಗಬೇಕು. ವಿಶೇಷ ನ್ಯಾಯಾಲಯವು ಗುರುತಿಸಿರುವ ಲೋಪಗಳ ಆಧಾರದಲ್ಲಿ ತನಿಖೆ ನಡೆಯಬೇಕು, ಅದಕ್ಕಾಗಿ ವಿಶೇಷ ತನಿಖಾ ದಳವನ್ನು ರಚನೆ ಮಾಡಬೇಕು. ವಿಶೇಷ ನ್ಯಾಯಾಲಯವು ಗುರುತಿಸಿರುವಂತೆ ಮೂಲ ತನಿಖೆ ನಡೆಸಿದ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ತನಿಖೆಯ ದಿಕ್ಕು ತಪ್ಪಿಸಿದ ಕಾಣದ ಕೈಗಳನ್ನು ಸಹ ಆರೋಪಿಗಳೆಂದು ಪರಿಗಣಿಸಬೇಕು.

2. ಈ ಪ್ರಕರಣಕ್ಕೂ ಹಿಂದೆ ಧರ್ಮಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿರುವ ಸರಿಸುಮಾರು 462 ಆಸಹಜ ಸಾವಿನ ಪ್ರಕರಣಗಳ ಕುರಿತೂ ಸಮಗ್ರ ತನಿಖೆಗೆ ಆದೇಶಿಸಬೇಕು. ಆ ಮೂಲಕ ಅಸಹಾಯಕ ಜನರ ಅಸಹಜ ಸಾವಿಗೆ ಸರಣಿಗೆ ಕೊನೆ ಹಾಕಬೇಕು,

3. ಇದರಲ್ಲಿ ಸುಮಾರು 90 ಸಾವುಗಳು ಮಹಿಳೆಯರು ಮತ್ತು ಮಕ್ಕಳದಾಗಿವೆ ಎನ್ನುವುದು ಗಮನಾರ್ಹ. ಹಾಗಾಗಿ ರಾಜ್ಯ ಮಹಿಳಾ ಆಯೋಗ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಗಳೂ ಈ ಬಗ್ಗೆ ತುರ್ತು ಗಮನ ಹರಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...