Homeಮುಖಪುಟಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

ಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

1969ರ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧವಾರ ಮಂಡಿಸಿದೆ. ಈ ಕಾಯ್ದೆ ಜಾರಿಗೆ ಬಂದು 54 ವರ್ಷಗಳ ನಂತರ ಮೊದಲ ಬಾರಿಗೆ ತಿದ್ದುಪಡಿ ಮಾಡುತ್ತಿರುವುದು ಗಮನಾರ್ಹವಾಗಿದೆ.

ಈ ತಿದ್ದುಪಡಿ ಮೂಲಕ ಇನ್ನುಮುಂದೆ ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹಾಗೂ ಸರ್ಕಾರಿ ನೌಕರಿಗೆ ನಡೆಯುವ ನೇಮಕಾತಿ ಸಂದರ್ಭಗಳಲ್ಲಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆ ಬಳಸಲು ಅವಕಾಶ ನೀಡಲಾಗುತ್ತದೆ.

ಅಷ್ಟೇ ಅಲ್ಲದೇ ಮತದಾರರ ಪಟ್ಟಿ ಸಿದ್ಧಪಡಿಸಲು, ಆಧಾರ್ ಸಂಖ್ಯೆ, ನೀಡುವಾಗ ಹಾಗೂ ವಿವಾಹ ನೋಂದಣಿ ಸಂದರ್ಭದಲ್ಲಿಯೂ ಜನನ ಪ್ರಮಾಣಪತ್ರವನ್ನು ಬಳಸುವುದನ್ನು ಈ ಉದ್ದೇಶಿತ ತಿದ್ದುಪಡಿ ಒಳಗೊಂಡಿದೆ.

ಈ ಹಿಂದೆ ಜನನ ಪ್ರಮಾಣಪತ್ರ ಬಳಸಬೇಕು ಎಂಬ ಸರ್ಕಾರದ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಖಾಸಗಿತನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಲವರು ಈ ನಡೆಯು ರಾಜ್ಯಗಳ ಹಕ್ಕುಗಳನ್ನು ಕಸಿಯಲಿದೆ ಎಂದು ದೂರಿದ್ದರು. ಜನರಿಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರವು ಅನಿಯಂತ್ರಿತವಾಗಿ ಪಡೆಯುವುದು ಸಾಧ್ಯವಾಗಲಿದೆ ಎಂಬ ಆತಂಕವನ್ನು ಹೊರಹಾಕಿದ್ದರು.

ಈ ಬಗ್ಗೆ ಮಾತನಾಡಿದ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ”ಸಾಮಾಜಿಕ ಬದಲಾವಣೆ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿಗೆ ತಕ್ಕಂತೆ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

”ತಿದ್ದುಪಡಿ ಮೂಲಕ ಕಾಯ್ಕೆಯನ್ನು ಮತ್ತಷ್ಟು ನಾಗರಿಕಸ್ನೇಹಿಯಾಗಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳು, ಸಾರ್ವಜನಿಕರು ಹಾಗೂ ಇತರ ಭಾಗೀದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ” ಎಂದು ಅವರು ತಿಳಿಸಿದರು.

ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ, ”ಈ ಮಸೂದೆಯು ವ್ಯಕ್ತಿಯ ಖಾಸಗಿತನ ಹಕ್ಕು ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ವಿಂಗಡಣೆಯ ಉಲ್ಲಂಘನೆಯಾಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಈ ಮಸೂದೆಯಲ್ಲಿನ ಪ್ರಮಖ ಅಂಶಗಳು:

* ಜನನ ಪ್ರಮಾಣಪತ್ರವನ್ನು ಜನಿಸಿದ ದಿನಾಂಕ ಮತ್ತು ಸ್ಥಳದ ಪುರಾವೆಯ ದಾಖಲೆಯಂತೆ ಬಳಸಬಹುದು.

* ಜನಸಂಖ್ಯಾ, ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಪಡಿತರ ಚೀಟಿ, ಪಾಸ್‌ಪೋರ್ಟ್, ಆಸ್ತಿ ನೋಂದಣಿ ಹಾಗೂ ಕೇಂದ್ರ ಸರ್ಕಾರದಿಂದ ಅಧಿಸೂಚಿತ ಇತರ ಡೇಟಾಬೇಸ್‌ಗಳನ್ನು ನಿರ್ವಹಿಸುವ ಪ್ರಾಧಿಕಾರಗಳಿಗೆ ಜನನ ಮತ್ತು ಮರಣಗಳ ಡೇಟಾಬೇಸ್ ಒದಗಿಸುವುದು.

* ದತ್ತು ಪಡೆದ ಮಗು, ಅನಾಥ, ಪರಿತ್ಯಕ್ತ, ಬಾಡಿಗೆ ತಾಯ್ತನದಿಂದ ಪಡೆದ ಮಗು, ಒಬ್ಬರೇ ಪಾಲಕರಿರುವ ಅಥವಾ ಅವಿವಾಹಿತ ತಾಯಿಯ ಮಗುವಿನ ನೋಂದಣಿಗೆ ತಿದ್ದುಪಡಿ ನೆರವಾಗಲಿದೆ.

* ವಿಪತ್ತು ಅಥವಾ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಮರಣಗಳ ನೋಂದಣಿ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವುದಕ್ಕಾಗಿ ವಿಶೇಷ ಸಬ್‌ರಿಜಿ‌ಗಳ ನೇಮಕಕ್ಕೆ ಅವಕಾಶ.

* ಜನನ ನೋಂದಣಿ ಸಂದರ್ಭದಲ್ಲಿ ಪಾಲಕರ ಅಥವಾ ಮಾಹಿತಿ ನೀಡುವವರ ಆಧಾ‌ ಸಂಖ್ಯೆಯನ್ನು ಸಂಗ್ರಹಿಸಲು ಅವಕಾಶ.

* ರಿಜಿಸ್ಕಾ‌ ಅಥವಾ ಜಿಲ್ಲಾ ರಿಜಿಸ್ಟ್ರಾ‌ಗಳು ತೆಗೆದುಕೊಂಡ ಕ್ರಮ ಇಲ್ಲವೇ ಹೊರಡಿಸಿದ ಆದೇಶದಿಂದ ತೊಂದರೆಗೆ ಒಳಗಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಮತ್ತು ದಂಡದ ಮೊತ್ತವನ್ನು ಹೆಚ್ಚಿಸಲು ಅವಕಾಶ ಕಲ್ಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...