Homeಮುಖಪುಟಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

ಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

1969ರ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧವಾರ ಮಂಡಿಸಿದೆ. ಈ ಕಾಯ್ದೆ ಜಾರಿಗೆ ಬಂದು 54 ವರ್ಷಗಳ ನಂತರ ಮೊದಲ ಬಾರಿಗೆ ತಿದ್ದುಪಡಿ ಮಾಡುತ್ತಿರುವುದು ಗಮನಾರ್ಹವಾಗಿದೆ.

ಈ ತಿದ್ದುಪಡಿ ಮೂಲಕ ಇನ್ನುಮುಂದೆ ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹಾಗೂ ಸರ್ಕಾರಿ ನೌಕರಿಗೆ ನಡೆಯುವ ನೇಮಕಾತಿ ಸಂದರ್ಭಗಳಲ್ಲಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆ ಬಳಸಲು ಅವಕಾಶ ನೀಡಲಾಗುತ್ತದೆ.

ಅಷ್ಟೇ ಅಲ್ಲದೇ ಮತದಾರರ ಪಟ್ಟಿ ಸಿದ್ಧಪಡಿಸಲು, ಆಧಾರ್ ಸಂಖ್ಯೆ, ನೀಡುವಾಗ ಹಾಗೂ ವಿವಾಹ ನೋಂದಣಿ ಸಂದರ್ಭದಲ್ಲಿಯೂ ಜನನ ಪ್ರಮಾಣಪತ್ರವನ್ನು ಬಳಸುವುದನ್ನು ಈ ಉದ್ದೇಶಿತ ತಿದ್ದುಪಡಿ ಒಳಗೊಂಡಿದೆ.

ಈ ಹಿಂದೆ ಜನನ ಪ್ರಮಾಣಪತ್ರ ಬಳಸಬೇಕು ಎಂಬ ಸರ್ಕಾರದ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಖಾಸಗಿತನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಲವರು ಈ ನಡೆಯು ರಾಜ್ಯಗಳ ಹಕ್ಕುಗಳನ್ನು ಕಸಿಯಲಿದೆ ಎಂದು ದೂರಿದ್ದರು. ಜನರಿಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರವು ಅನಿಯಂತ್ರಿತವಾಗಿ ಪಡೆಯುವುದು ಸಾಧ್ಯವಾಗಲಿದೆ ಎಂಬ ಆತಂಕವನ್ನು ಹೊರಹಾಕಿದ್ದರು.

ಈ ಬಗ್ಗೆ ಮಾತನಾಡಿದ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ”ಸಾಮಾಜಿಕ ಬದಲಾವಣೆ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿಗೆ ತಕ್ಕಂತೆ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

”ತಿದ್ದುಪಡಿ ಮೂಲಕ ಕಾಯ್ಕೆಯನ್ನು ಮತ್ತಷ್ಟು ನಾಗರಿಕಸ್ನೇಹಿಯಾಗಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳು, ಸಾರ್ವಜನಿಕರು ಹಾಗೂ ಇತರ ಭಾಗೀದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ” ಎಂದು ಅವರು ತಿಳಿಸಿದರು.

ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ, ”ಈ ಮಸೂದೆಯು ವ್ಯಕ್ತಿಯ ಖಾಸಗಿತನ ಹಕ್ಕು ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ವಿಂಗಡಣೆಯ ಉಲ್ಲಂಘನೆಯಾಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಈ ಮಸೂದೆಯಲ್ಲಿನ ಪ್ರಮಖ ಅಂಶಗಳು:

* ಜನನ ಪ್ರಮಾಣಪತ್ರವನ್ನು ಜನಿಸಿದ ದಿನಾಂಕ ಮತ್ತು ಸ್ಥಳದ ಪುರಾವೆಯ ದಾಖಲೆಯಂತೆ ಬಳಸಬಹುದು.

* ಜನಸಂಖ್ಯಾ, ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಪಡಿತರ ಚೀಟಿ, ಪಾಸ್‌ಪೋರ್ಟ್, ಆಸ್ತಿ ನೋಂದಣಿ ಹಾಗೂ ಕೇಂದ್ರ ಸರ್ಕಾರದಿಂದ ಅಧಿಸೂಚಿತ ಇತರ ಡೇಟಾಬೇಸ್‌ಗಳನ್ನು ನಿರ್ವಹಿಸುವ ಪ್ರಾಧಿಕಾರಗಳಿಗೆ ಜನನ ಮತ್ತು ಮರಣಗಳ ಡೇಟಾಬೇಸ್ ಒದಗಿಸುವುದು.

* ದತ್ತು ಪಡೆದ ಮಗು, ಅನಾಥ, ಪರಿತ್ಯಕ್ತ, ಬಾಡಿಗೆ ತಾಯ್ತನದಿಂದ ಪಡೆದ ಮಗು, ಒಬ್ಬರೇ ಪಾಲಕರಿರುವ ಅಥವಾ ಅವಿವಾಹಿತ ತಾಯಿಯ ಮಗುವಿನ ನೋಂದಣಿಗೆ ತಿದ್ದುಪಡಿ ನೆರವಾಗಲಿದೆ.

* ವಿಪತ್ತು ಅಥವಾ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಮರಣಗಳ ನೋಂದಣಿ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವುದಕ್ಕಾಗಿ ವಿಶೇಷ ಸಬ್‌ರಿಜಿ‌ಗಳ ನೇಮಕಕ್ಕೆ ಅವಕಾಶ.

* ಜನನ ನೋಂದಣಿ ಸಂದರ್ಭದಲ್ಲಿ ಪಾಲಕರ ಅಥವಾ ಮಾಹಿತಿ ನೀಡುವವರ ಆಧಾ‌ ಸಂಖ್ಯೆಯನ್ನು ಸಂಗ್ರಹಿಸಲು ಅವಕಾಶ.

* ರಿಜಿಸ್ಕಾ‌ ಅಥವಾ ಜಿಲ್ಲಾ ರಿಜಿಸ್ಟ್ರಾ‌ಗಳು ತೆಗೆದುಕೊಂಡ ಕ್ರಮ ಇಲ್ಲವೇ ಹೊರಡಿಸಿದ ಆದೇಶದಿಂದ ತೊಂದರೆಗೆ ಒಳಗಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಮತ್ತು ದಂಡದ ಮೊತ್ತವನ್ನು ಹೆಚ್ಚಿಸಲು ಅವಕಾಶ ಕಲ್ಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...