Homeಮುಖಪುಟಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲದೇ 13 ರಾಜ್ಯಗಳು ವಿರೋಧಿಸಿವೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲದೇ 13 ರಾಜ್ಯಗಳು ವಿರೋಧಿಸಿವೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಇಷ್ಟು ದಿನಗಳ ಕಾಲ ತಾನು ಒಳಮೀಸಲಾತಿಯ ಪರ ಎಂದು ಸೋಗಲಾಡಿ ನಿಲುವನ್ನು ತೋರುತ್ತಿದ್ದ ಬಿಜೆಪಿಯ ಅಸಲಿಯತ್ತು ನಿನ್ನೆ ಸಂಸತ್ತಿನಲ್ಲಿ ಬಯಲಾಗಿದೆ - ಶಿವಸುಂದರ್

- Advertisement -
- Advertisement -

ಒಳಮೀಸಲಾತಿ ವಿಚಾರವು ನ್ಯಾಯಾಲಯದ ಅಧೀನದಲ್ಲಿರುವುದರಿಂದ, ಅಲ್ಲದೇ ಸಂವಿಧಾನ ತಿದ್ದುಪಡಿಗೆ 13 ರಾಜ್ಯಗಳು ವಿರೋಧಿಸಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ಮಂತ್ರಿ ನಾರಾಯಣಸ್ವಾಮಿಯವರು ತಿಳಿಸಿದ್ದಾರೆ.

ಬುಧವಾರ ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರಾದ ಜಿ.ವಿ.ಎಲ್ ನರಸಿಂಹರಾವ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಸಚಿವರು, “ಸಂವಿಧಾನದಲ್ಲಿ ಈಗಿರುವ ಅವಕಾಶಗಳಂತೆ ಒಳಮೀಸಲಾತಿಯನ್ನು ಕಲ್ಪಿಸಲು ಸಾಧ್ಯವಾಗದು. ಇದರ ಬಗ್ಗೆ ರಚಿಸಲಾಗಿದ್ದ ರಾಷ್ಟ್ರೀಯ ಆಯೋಗವು ಒಳಮೀಸಲಾತಿಯನ್ನು ಕಲ್ಪಿಸಿಕೊಡುವಂತೆ ಸಂವಿಧಾನದ ಆರ್ಟಿಕಲ್ 341 ಕ್ಕೆ ತಿದ್ದುಪಡಿ ತರಲು ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿನ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡುವಂತೆ ಕೋರಲಾಗಿತ್ತು. ಈವರೆಗೆ 20ರಾಜ್ಯ ಸರ್ಕಾರಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಿವೆ. ಅದರಲ್ಲಿ 7 ರಾಜ್ಯಗಳು ಒಳಮೀಸಲಾತಿಯ ಪರವಾಗಿಯೂ, 13 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶವು ಒಳಮೀಸಲಾತಿಯ ವಿರುದ್ಧವಾಗಿಯೂ ಅಭಿಪ್ರಾಯಗಳನ್ನು ನೀಡಿವೆ” ಎಂದು ತಿಳಿಸಿದ್ದಾರೆ.

ಜಿ.ವಿ.ಎಲ್ ನರಸಿಂಹರಾವ್ ಅವರು, “ಒಳಮೀಸಲಾತಿಯ ಬಗ್ಗೆ ಈವರೆಗೆ ಬೇರೆಬೇರೆ ರಾಜ್ಯಗಳು ನೀಡಿರುವ ಅಭಿಪ್ರಾಯಗಳೇನು?  ಕೇಂದ್ರ ಸರ್ಕಾರದ ಮುಂದೆ ಸಂವಿಧಾನಕ್ಕೆ ತಿದ್ದುಪಡಿ ತಂದು ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಅಧಿಕಾರ ನೀಡುವ ಯೋಜನೆ ಇದೆಯೇ? ಮತ್ತು ಅಂಥ ಯೋಜನೆಯಿದ್ದಲ್ಲಿ ಎಷ್ಟು ಕಾಲಾವಧಿಯೊಳಗೆ ಅದು ಜಾರಿಯಾಗಲಿದೆ ಎಂಬುದರ ಕುರಿತು ಪ್ರಶ್ನೆಗಳನ್ನು ಕೇಳಿದ್ದರು.

ಇದಕ್ಕೆ ಮೇಲಿನಂತೆ ಉತ್ತರಿಸಿರುವ ಸಚಿವರು, “ಹಲವು ರಾಜ್ಯಗಳು ಒಳಮೀಸಲಾತಿಯನ್ನು ವಿರೋಧಿಸಿವೆ. ಎಲ್ಲಕ್ಕಿಂತ ಹೆಚ್ಚಾಗಿ ವಿಚಾರವು ನ್ಯಾಯಾಲಯದ ಅಧೀನದಲ್ಲಿದೆ ಮತ್ತು ಐವರು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಏಳು ನ್ಯಾಯಾಧೀಶರ ಅಥವಾ ಹೆಚ್ಚಿನ ಪೀಠಕ್ಕೆ ವರ್ಗಾಯಿಸಬೇಕೆಂದು ಕೋರಿದೆ” ಎಂದು ಉತ್ತರವನ್ನು ಮುಗಿಸಿದ್ದಾರೆ. ಅಲ್ಲಿಗೆ ಕೇಂದ್ರ ಸರ್ಕಾರ ಏನು ಮಾಡಲಾಗದು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಚಿಂತಕರಾದ ಶಿವಸುಂದರ್, “ಇಷ್ಟು ದಿನಗಳ ಕಾಲ ತಾನು ಒಳಮೀಸಲಾತಿಯ ಪರ ಎಂದು ಸೋಗಲಾಡಿ ನಿಲುವನ್ನು ತೋರುತ್ತಿದ್ದ ಬಿಜೆಪಿಯ ಅಸಲಿಯತ್ತು ನಿನ್ನೆ ಸಂಸತ್ತಿನಲ್ಲಿ ನಡೆದ ಪ್ರಶ್ನೋತ್ತರಗಳಲ್ಲಿ ಬಯಲಾಗಿದೆ” ಎಂದು ಕಿಡಿಕಾರಿದ್ದಾರೆ.

ತಮ್ಮ ಜಸ್ಟ್‌ ಆಸ್ಕಿಂಗ್ ಲೇಖನದಲ್ಲಿ ವಿವರವಾಗಿ ಬರೆದಿರುವ ಅವರು, “ಕರ್ನಾಟಕದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಘಟಾನುಘಟಿಗಳೆಲ್ಲಾ ಒಳಮೀಸಲಾತಿ ಒದಗಿಸಲು ಮೋದಿ ಸರ್ಕಾರ ಕಟಿಬದ್ಧವಾಗಿದೆ ಎಂದೆಲ್ಲಾ ಬೊಗಳೆ ಬಿಟ್ಟಿದ್ದರು. ಆದರೆ ಮೇಲಿನ ಉತ್ತರದಲ್ಲಿ ಸ್ಪಷ್ಟವಾಗಿರುವಂತೆ ಒಳಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ತರುವ ಉದ್ದೇಶವಿದೆಯೇ ಎಂಬ ಪ್ರಶ್ನೆಗೆ ಸರ್ಕಾರ ಉತ್ತರವನ್ನೇ ಕೊಡದೆ ಜಾರಿ ಕೊಂಡಿದೆ. ಅಷ್ಟು ಮಾತ್ರವಲ್ಲದೇ ಈ ವಿಷಯವು ಸಬ್ ಜುಡೀಸ್- ಅರ್ಥಾತ್ ನ್ಯಾಯಾಲಯದ ಅಧೀನದಲ್ಲಿರುವುದರಿಂದ ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗದು ಎಂದು ಸ್ಪಷ್ಟವಾಗಿ ಹೇಳಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ಸುಪ್ರೀಂ ಕೋರ್ಟಿನ ಅಧೀನದಲ್ಲಿರುವ ಅಥವಾ ಸುಪ್ರೀಂ ಕೋರ್ಟು ಆದೇಶ ನೀಡಿದ್ದರು ಅದಕ್ಕೆ ತದ್ವಿರುದ್ಧವಾದ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿಲ್ಲವೇ? ಇತಿಹಾಸದಲ್ಲಿ ಸಂಸತ್ತು ತನ್ನ ಸಾರ್ವಭೌಮತೆಯನ್ನು ಚಲಾಯಿಸಿ ಸಂವಿಧಾನ ತಿದ್ದುಪಡಿಯ ಮೂಲಕ ಸುಪ್ರೀಂ ಕೋರ್ಟು ಆದೇಶಗಳನ್ನು ಅಮಾನ್ಯಗೊಳಿಸಿಲ್ಲವೇ? ಅಷ್ಟೆಲ್ಲ ಏಕೆ? ದೆಹಲಿ ಸರ್ಕಾರಕ್ಕೆ ಅಧಿಕಾರಿಶಾಹಿಯ ಮೇಲಿನ ಅಧಿಕಾರದ ವ್ಯಾಪ್ತಿಯನ್ನು ಸುಪ್ರೀಂ ಕೋರ್ಟು ಎತ್ತಿ ಹಿಡಿದರೂ ಮೋದಿ ಸರ್ಕಾರ ಅದನ್ನು ಅಮಾನ್ಯಗೊಳಿಸಲು ಸುಗ್ರೀವಾಜ್ಞೆ ತರಲಿಲ್ಲವೇ? ಈಗ ಅದನ್ನು ಸಂಸತ್ತಿನಲ್ಲಿ ಮಸೂದೆಯಾಗಿ ಮಂಡಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟಿನ ಉನ್ನತ ಪೀಠ ಈ ವಿಷಯದಲ್ಲಿ ಇನ್ನು ರಚನೆಯೇ ಆಗಿಲ್ಲ. ಆದರೆ ಸುಪ್ರೀಂ ಪೀಠ ವಿಚಾರಣಾ ನೋಟೀಸ್ ಕೊಟ್ಟ ವಿಷಯಗಳಲ್ಲೂ ಸಂಸತ್ತು ಕಾನೂನು ಮಾಡಿಲ್ಲವೇ? ಸಂವಿಧಾನ ತಿದ್ದುಪಡಿಗಳನ್ನು ಮಾಡಿಲ್ಲವೇ? ಅಂದರೆ ಮೋದಿ ಸರ್ಕಾರ ಒಳಮೀಸಲಾತಿ ನಿರಾಕರಿಸಲು ಸಬ್ ಜುಡೀಸ್ ಸಬೂಬು ಹೇಳುತ್ತಿದೆಯಷ್ಟೆ. ಅದರ ಜೊತೆಗೆ 20 ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಒಪ್ಪಿರುವುವು ಕೇವಲ 7 ರಾಜ್ಯಗಳು- ಉಳಿದ 13 ರಾಜ್ಯಗಳು ವಿರೋಧಿಸಿವೆ ಎಂಬ ನೆಪವೂ ಈಗ ಮೋದಿ ಸರ್ಕಾರ ಮುಂದಿಟ್ಟಿದೆ ಎಂದು ಕಿಡಿಕಾರಿದ್ದಾರೆ.

ವಾಸ್ತವದಲ್ಲಿ ಸುಪ್ರೀಂನ ಐದು ನ್ಯಾಯಾಧೀಶರ ಪೀಠ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯದ ಬಗ್ಗೆ, ಏಳು ನ್ಯಾಯಾಧೀಶರ ಪೀಠ ರಚಿಸಲು ಸಲಹೆ ಮಾಡಿದ್ದು 2020ರ ಆಗಸ್ಟ್ 20 ರಂದು. ಅದು ಸಹ ದವಿಂದರ್ ಸಿಂಗ್ ವರ್ಸಸ್ ಸ್ಟೇಟ್ ಆಫ್ ಪಂಜಾಬ್ ಪ್ರಕರಣದಲ್ಲಿ. ಹಾಗಿದ್ದರೂ ಕೂಡ ಕಳೆದ ಎರಡು ವರ್ಷಗಳಲ್ಲಿ ಒಳಮೀಸಲಾತಿ ವಿಷಯವು ಸಬ್ ಜುಡೀಸ್ ಆಗಿದೆ ಎಂದು ಒಮ್ಮೆಯೂ ಹೇಳದೆ ಕರ್ನಾಟಕದ ಬಿಜೆಪಿ , ಸಂಘಪರಿವಾರ ಮತ್ತು ಕೇಂದ್ರದ ಮೋದಿ ಸರ್ಕಾರ ಒಳಮೀಸಲಾತಿ ಕಲ್ಪಿಸುವುದಾಗಿ ಭರವಸೆ ಕೊಟ್ಟಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಇದೇ ಪ್ರಶ್ನೆಯನ್ನು ಹೊರಟಗಾರರು ಕೇಳಿದಾಗ ಸಂವಿಧಾನ ತಿದ್ದುಪಡಿಯನ್ನು ಮಾಡದೆ, ಸುಪ್ರೀಂ ಕೋರ್ಟಿಗೂ ಹೋಗದೆ ಹೇಗೋ ಒಳಮೀಸಲಾತಿ ಕೊಟ್ಟೆ ತೀರುವುದಾಗಿ ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರು ಸಮುದಾಯಕ್ಕೆ ಮೋಸ ಮಾಡಿದ್ದೇಕೆ? ಇದಕ್ಕೆ ಸಂಘಪರಿವಾರ ಉತ್ತರಿಸುತ್ತದೆಯೇ? ಉತ್ತರಿಸುವಂತೆ ಸಮುದಾಯ ಪಟ್ಟುಹಿಡಿದು ಕೇಳುತ್ತದೆಯೇ? ಅಥವಾ 2024ರ ಚುನಾವಣೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಣ್ಣದ ಮಾತಾಡಿ ಸಮುದಾಯವನ್ನು ಮೋಸಗೊಳಿಸುವ ಪ್ರಯತ್ನಗಳನ್ನು ಮಾಡುತ್ತದೆಯೇ? ಎಂದು ಶಿವಸುಂದರ್ ಕೇಳಿದ್ದಾರೆ.

ದೇಶಮಟ್ಟದಲ್ಲಿ ಒಳಮೀಸಲಾತಿಗೆ ದೊಡ್ಡ ಹೋರಾಟ ಕಟ್ಟದೆ, ಬಿಜೆಪಿಯನ್ನೂ, ಸಂಘಪರಿವಾರವನ್ನೋ, ಇತರ ಪಕ್ಷಗಳನ್ನೂ ನಂಬಿ ಕೂತರೆ ಒಳಮೀಸಲಾತಿ ಕನ್ನಡಿಯೊಳಗಿನ ಗಂಟಾಗಿಯೇ ಉಳಿಯುವುದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...