Homeಅಂಕಣಗಳುಮೋದಿ ಸಾಧನೆ ಹಳ್ಳಿಗೆ ತಲುಪಿಸಿ ಎಂದ ಭೈರಪ್ಪ!

ಮೋದಿ ಸಾಧನೆ ಹಳ್ಳಿಗೆ ತಲುಪಿಸಿ ಎಂದ ಭೈರಪ್ಪ!

- Advertisement -
- Advertisement -

ಕೂದಲೆಳೆ ಅಂತರದಲ್ಲಿ ಘನಘೋರ ಅಪಾಯ ತಪ್ಪಿತು ಎನ್ನುವಂತೆ ಸಿದ್ದರಾಮಯ್ಯ ವಿಕೃತ ಭಟ್ಟನ ಪುಸ್ತಕದ ಬಿಡುಗಡೆ ಸಮಾರಂಭಕ್ಕೆ ತಪ್ಪಿಸಿಕೊಂಡು ಬುದ್ಧಿಜೀವಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರಲ್ಲಾ. ಅದಕ್ಕೆ ಹೇಳುವುದು ಜನರ ನಡುವೆ ಇರುವ ನಾಯಕ ತಪ್ಪು ಮಾಡಲಾರ ಎಂದು. ಇದಕ್ಕೊಂದು ಐತಿಹಾಸಿಕ ಉದಾಹರಣೆ ಬಸವಣ್ಣ ಅವರು ನಡೆಸಿದ ಕ್ರಾಂತಿಕಾರಿ ಚಳವಳಿ; ಈ ಶರಣ ಕ್ರಾಂತಿಯ ಬಗ್ಗೆ ಆಕ್ರೋಶಗೊಂಡ ಪುರೋಹಿತರು ಗಲಭೆ ನಡೆಸುತ್ತಾರೆ. ಅಲ್ಲೊಂದು ಕೊಲೆಯಾಗುತ್ತದೆ, ದೂರು ಬಿಜ್ಜಳನ ಬಳಿಗೆ ಹೋಗುತ್ತದೆ. ವಿಚಾರಣೆ ನಡೆಯುತ್ತದೆ. ಬಿಜ್ಜಳ ಕೊಲೆಯ ವಿಷಯದಲ್ಲಿ ಸಂಶಯಗೊಂಡು ಈ ಕೊಲೆ ಮಾಡಿದವರಾರು ಎಂದು ತನ್ನ ಆಸ್ಥಾನದಲ್ಲಿ ಪ್ರಶ್ನಿಸುತ್ತಾನೆ. ಅದಕ್ಕೆ ಬಸವಣ್ಣ ಪುರೋಹಿತಶಾಹಿಗಳು ಎನ್ನುತ್ತಾನೆ. ಆಗ ಬಿಜ್ಜಳ ಅದು ಹೇಗೆ ಹೇಳುತ್ತೀರಿ ಎಂದಾಗ, ಅದಕ್ಕೆ ಬಸವಣ್ಣ, ನಾನು ಜನಗಳ ನಡುವೆ ಇದ್ದೇನೆ ಎನ್ನುತ್ತಾನೆ. ಬಿಜ್ಜಳ ಮರುಮಾತನಾಡುವುದಿಲ್ಲ. ಈ ಐತಿಹಾಸಿಕ ಘಟನೆಯ ಸತ್ಯವನ್ನು ನಮ್ಮ ರಾಜಕಾರಣಿಗಳು ಪಾಲಿಸಿದ್ದಾದರೆ ವಿಕೃತ ಭಟ್ಟನಂತರವರ ಬಲೆಗೆ ಬೀಳಲಾರರು. ಅಕಸ್ಮಾತ್ ಬಿದ್ದರೆ ಸರ್ವನಾಶ ಗ್ಯಾರಂಟಿಯಂತಲ್ಲಾ, ಥೂತ್ತೇರಿ.

******

ಕಾದಂಬರಿ ಕಾರ್ಖಾನೆಯಾದ ಆರೆಸ್ಸೆಸ್ ಲೇಖಕ ಎಸ್.ಎಲ್ ಭೈರಪ್ಪನವರು ಯುವ ಮಾಣಿಗಳಿಗೊಂದು ಅದ್ಭುತವಾದಂತಹ ಕರೆ ಕೊಟ್ಟಿದ್ದಾರಲ್ಲಾ. ಅದೇನೆಂದರೆ ವಿದ್ಯಾವಂತ ಯುವ ಜನ ಹಳ್ಳಿಹಳ್ಳಿಗಳಿಗೆ ಹೋಗಿ ಮೋದಿ ಮಾಡಿದ ಒಳ್ಳೆ ಕೆಲಸಗಳನ್ನ ಅಲ್ಲಿನ ಗ್ರಾಮವಾಸಿಗಳಿಗೆ ಮನವರಿಕೆ ಮಾಡಿ ಎಂದು. ಎಂದಿನಂತೆ ವಿದ್ಯಾವಂತರು ಹಳ್ಳಿಗೆ ಹೋಗಿ ಹೇಳುವ ಮೋದಿ ಸಾಧನೆ ಪಟ್ಟಿ ಮಾಡಲಾಗಿ ಅವು ಇಂತಿವೆಯಲ್ಲಾ.

  • ಒಂದನೆಯದಾಗಿ ಹಿಂದುಮುಂದು ನೋಡದೆ ನೋಟು ಬ್ಯಾನು ಮಾಡಿ ದೇಶದ ಉದ್ದಗಲಕ್ಕೂ ಅಲ್ಲೋಲಕಲ್ಲೋಲವಾಗಿ ನೂರಾರು ಜನ ಸತ್ತು, ಸಾವಿರಾರು ಸಣ್ಣ ಉದ್ಯಮಗಳು ಕಣ್ಮರೆಯಾದದ್ದು.
  • ಎರಡನೆಯದಾಗಿ ಜಿಎಸ್‌ಟಿ ಎಂಬ ಮನೆಹಾಳ ತೆರಿಗೆ ವಸೂಲಿಯಿಂದಲೂ ಸಣ್ಣಪುಟ್ಟ ಉದ್ಯಮ ಬಾಗಿಲು ಹಾಕಿ ಬಡವರು ತಿನ್ನುವ ಕಡ್ಲೆಪುರಿ ಮೇಲೂ ಜಿಎಸ್‌ಟಿ ಬಂದಿದ್ದು.
  • ಸಿಎಎ ಕಾನೂನು ತರಲು ಹೊರಟು ಇಡೀ ಭಾರತದ ಮುಸ್ಲಿಮರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುವಂತೆ ಮಾಡಿದ್ದು.
  • ಕೃಷಿಕಾಯ್ದೆ ತಂದು ದೆಹಲಿ ಗಡಿಯಲ್ಲಿ ಹೋರಾಟನಿರತ 750 ಜನ ರೈತರು ಸಾಯುವಂತೆ ಮಾಡಿದ್ದು.
  • ಸಾವಿರಾರು ಕೋಟಿ ಒಪ್ಪಂದದ ರಫೇಲ್ ಹಗರಣ ಮುಚ್ಚಿಹಾಕಿ, ತ್ವರಿತವಾಗಿ ಮಾಡಿದ ಒಪ್ಪಂದ ಎಂದು ಬಿಂಬಿಸಿದ್ದು.
  • ಭಾರತದ ಸುಮಾರು ಹನ್ನೆರಡು ಉದ್ಯಮಗಳನ್ನು ಮಾರಿದ್ದೂ ಅಲ್ಲದೆ, ವಿಶೇಷ ಘಟಕವಾಗಿದ್ದ ರೈಲ್ವೆ ಇಲಾಖೆಯನ್ನ ಮುಗಿಸಲು ಪ್ರಯತ್ನಿಸುತ್ತಿರುವುದು; ಅವುಗಳ ಬಣ್ಣ ಬದಲಿಸಿ ಸೀಟಿನ ಅಳತೆ ಕಡಿಮೆ ಮಾಡಿ ಪ್ರಯಾಣಿಕರನ್ನ ಹಿಂಸಿಸುತ್ತಿರುವುದು.
  • ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಗೆ ದಾಳಿಯಿಟ್ಟು ಒಂದು ಡಜನ್ ರೋಡ್ ಶೋ ಮಾಡಿ ಸೋತ ಸಿಟ್ಟಿಗೆ ಕರ್ನಾಟಕದ ಪಾಲಿನ ಅಕ್ಕಿ ನಿಲ್ಲಿಸಿದ್ದಲ್ಲದೆ ಇತಿಹಾಸದಲ್ಲಿ ದಾಖಲಾಗುವಂತೆ ವಿರೋಧಪಕ್ಷದ ನಾಯಕರನ್ನೆ ನೇಮಿಸದಿದ್ದುದು.
  • ನಮ್ಮದೇ ದೇಶದ ಭುಜದಂತಿರುವ ಮಣಿಪುರ ಎರಡು ತಿಂಗಳಿಂದ ಉರಿಯುತ್ತಿದ್ದರೂ ಆ ಕಡೆ ತಿರುಗಿಯೂ ನೋಡದೆ ಅಮೆರಿಕದಲ್ಲಿ ಯೋಗ ಮಾಡುತ್ತ ಕುಳಿತದ್ದು.

ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ಕಡೆಗೂ ಮೋದಿ ಬಾಯಿ ಬಿಟ್ಟಿದ್ದು ಯಾವಾಗೆಂದರೆ ನಿಸ್ಸಹಾಯಕ ಹೆಣ್ಣುಮಕ್ಕಳನ್ನು ಬೆತ್ತಲೆ ಮಾಡಿ ಅವರನ್ನ ಅತ್ಯಾಚಾರ ಮಾಡಿ ಕೊಲೆ ಮಾಡಿದ ವಿಡಿಯೋ ತುಣುಕೊಂದು ತಿಂಗಳುಗಳ ನಂತರ ವೈರಲ್ ಆದಾಗ! ಇಂತಹ ಮೋದಿಯ ಸಾಧನೆಗಳನ್ನ ಹಳ್ಳಿಹಳ್ಳಿಗೆ ಹೋಗಿ ಹೇಳಿ ಎಂದು ಕರೆಕೊಡುತ್ತಿರುವ ಭೈರಪ್ಪರಿಗೆ ವಯೋಸಹಜ ಮರೆವೇನೂ ಇಲ್ಲ, ಆದರೆ ದಶಕಗಳಿಂದ ಸಂಘ ಪರಿವಾರದಿಂದ ತರಬೇತು ಪಡೆದಿರುವ ಮಿದುಳು ಹಾಗೆ ಕೆಲಸ ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಈಚೆಗೆ ಚಂದ್ರಯಾನ ಉಡಾವಣೆಯಾಗಿದೆ. ಇಸ್ರೊ ಅಧ್ಯಕ್ಷ ಸೋಮನಾಥ್ ಸಾರಥ್ಯದಲ್ಲಿ ಎಂಟು ಜನ ವಿಜ್ಞಾನಿಗಳೆಂಬುವರು ತಿರುಪತಿಯಲ್ಲಿ ನಿಂತು ಭಯ ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ. ತಿಮ್ಮಪ್ಪ ಇಡೀ ಕರ್ನಾಟಕದ ಸಕಲಿಷ್ಟು ಜಾತಿಗಳ ದೇವರಾದ್ದರಿಂದ ಜನರಿಗೆಲ್ಲಾ ಈ ಚಂದ್ರಯಾನ ಉಡಾವಣೆಯಿಂದ ಒಳ್ಳೆಯದಾಗುತ್ತದಂತೆ. ಇವರ ಇಂಗಿತವನ್ನ ಆಡಿಕೊಳ್ಳುವುದಾದರೆ ಚಂದ್ರನ ಮೇಲೆ ಈ ಯಂತ್ರ ಕಾಲೂರಿದ ಕ್ಷಣದಿಂದಲೇ ಭಾರತದಲ್ಲಿ ಬಿಜೆಪಿಗಳ ಹಾವಳಿಯಿಂದ ಕ್ಷೆಭೆಗೊಂಡಿರುವ ಮನಸ್ಸುಗಳು ಶಾಂತಗೊಳ್ಳಲಿವೆ. ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ. ರೈತರು ಯಾವ ಸಮಸ್ಯೆಗಳು ಇಲ್ಲದೆ ಸಂತೃಪ್ತ ಜೀವನ ನಡೆಸುತ್ತಾರೆ. ಇತ್ಯಾದಿ ಸಮಸ್ಯೆಗಳಿಗೆಲ್ಲಾ ಸಂಜೀವಿನಿಯಾಗಿ ಚಂದ್ರನ ನೆಲೆಯಿಂದಲೇ ಛೂಮಂತ್ರ ಕಾಳಿ ಮಾಡುವ ಈ ಯಂತ್ರ ಪುರೋಹಿತಶಾಹಿಗಳಿಗೆ ಹೆಮ್ಮೆಯ ಸಾಧನೆ. ಪುರಾಣ ಸದೃಶ ಕಥೆ ಹೆಣೆಯುವುದರಲ್ಲಿ ನಿಸ್ಸೀಮರಾದ ಇವರು ಟಿ.ವಿಯೊಳಕ್ಕೂ ಬಂದು ಕೂತಿರುವುದಲ್ಲದೆ, ವಿಜ್ಞಾನಕ್ಕೂ ತಿರುಪತಿ ಭಕ್ತಿಗೂ ಏನು ಸಂಬಂಧ ಎಂದವರ ಮೇಲೆ ಎಗರಿ ಬೀಳತೊಡಗಿವೆ. ಇದಂತಿರಲಿ ಹಿಂದಿನ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಪುರೋಹಿತರೊಬ್ಬರು, ತಿರುಪತಿ ದರ್ಶನ ಪಡೆದ ವಿಜ್ಞಾನಿಗಳನ್ನ ಆಡಿಕೊಂಡಿದ್ದಕ್ಕೆ ಸಿಟ್ಟುಗೊಂಡು, ಹುಲಿಕುಂಟೆ ಮೂರ್ತಿ ಮೇಲೆ ನರಿಯಂತೆ ಎಗರಾಡಿದ್ದಾರಲ್ಲಾ. ಈತನ ನಡವಳಿಕೆ ನೋಡಿದರೆ ಚಕ್ರತೀರ್ಥ ವಕ್ರತೀರ್ಥ ನಾಗೇಶ ಇತ್ಯಾದಿಗಳ ಸಂಬಂಧಿಯಾಗಿರುವುದರಲ್ಲಿ ಯಾವ ಸಂಶಯವೂ ಇಲ್ಲ. ಬಿಜೆಪಿಗಳ ಮಂದೆಯಲ್ಲಿ ಈತ ಪರವಾಗಿಲ್ಲ ಎಂದು ನಮ್ಮ ಎಂ.ಪಿ ಪ್ರಕಾಶರು ವಾದಿಸುತ್ತಿದ್ದುದಲ್ಲದೆ, ತಮ್ಮ ಊರಿಗೂ ಕರೆದಿದ್ದರು. ಆದರೀಗ ಈತ ತನ್ನ ಚರ್ಮದೊಳಕ್ಕೆ ಸೇರಿಸಿಕೊಂಡಿರುವ ಜನಿವಾರದ ಅನಾವರಣ ಮಾಡಿದ್ದಾರೆ. ಅದೂ ಹುಲಿಕುಂಟೆ ಮೂರ್ತಿಯವರನ್ನ ಕೆಣಕಿ. ಅಂತೂ ಹುಲಿಕುಂಟೆ ಮೂರ್ತಿಗೆ ಥ್ಯಾಂಕ್ಸ್, ಥೂತ್ತೇರಿ.

******

ಕರ್ನಾಟಕದಲ್ಲಿ ಹೊಸದಾಗಿ ರಚನೆಗೊಂಡ ಸರಕಾರ ವಿರೋಧಪಕ್ಷಗಳ ವಿಕೃತ ದಾಳಿಯಿಂದ ಚೇತರಿಸಿಕೊಳ್ಳುತ್ತಿದೆ. ಇಂತಹ ಸಮಯದಲ್ಲಿ ಹರಿಪ್ರಸಾದ್ ಎಂಬ ಮಹಾನಾಯಕರು ನಮ್ಮ ಜನಾಂಗವನ್ನು ಕಡೆಗಣಿಸಿದರೆ ಮುಖ್ಯಮಂತ್ರಿಯನ್ನು ಇಳಿಸುವುದೂ ಗೊತ್ತು ಎಂದು ಹೇಳಿ ಕುಮಾರಣ್ಣ ಮತ್ತು ಬೊಮ್ಮಾಯಿಗೆ ರೋಮಾಂಚನವುಂಟುಮಾಡಿದ್ದಾರಲ್ಲಾ. ಹರಿಪ್ರಸಾದ್ ಎಲ್ಲ ಜನಾಂಗ ಎಂದಿದ್ದರೆ ಇಂತ ಅಣಕ ಬರೆಯುವ ಅಗತ್ಯವಿರಲಿಲ್ಲ. ಆದರೆ ಅವರು ತನ್ನ ಜನಾಂಗದ ಹೆಸರನ್ನು ಎಳೆದು ತಂದಿರುವುದರಿಂದ ಕೆಲ ಮಾಹಿತಿಯನ್ನ ಮುಖಕ್ಕೆ ಹಿಡಿಯುವ ಅಗತ್ಯವಂತಲ್ಲ.

1995ರಲ್ಲಿ ಈ ನಾಡಿನ ಎರಡನೇ ಬಹುದೊಡ್ಡ ಸಂಖ್ಯೆಯಾದ ಒಕ್ಕಲಿಗರ ಪೈಕಿ ಕೇವಲ ಎರಡು ಜನ ಎಂ.ಪಿಗಳಿದ್ದರೆ ಹರಿಪ್ರಸಾದರ ಸಮುದಾಯದ ಪೈಕಿ ಐದು ಜನ ಎಂ.ಪಿ ಗಳಿದ್ದರು. ಹಲವು ವ್ಯವಹಾರಗಳಲ್ಲೂ ಅವರು ಪ್ರಧಾನವಾಗಿ ಇದ್ದರು. ಕನ್ನಡ ಚಿತ್ರರಂಗದಲ್ಲೂ ಅನೇಕ ಗಣ್ಯರಿದ್ದರು. ಪತ್ರಿಕಾರಂಗದಲ್ಲೂ ಪ್ರಧಾನವಾಗಿ ಮುಂಚೂಣಿಯಲ್ಲಿದ್ದರು. ಹೀಗೆ ಸರಕಾರ, ಸಿನಿಮಾ, ಮಾಧ್ಯಮ ಮತ್ತು ಉದ್ಯಮದಲ್ಲಿದ್ದ ಹರಿಪ್ರಸಾದರ ಸಮುದಾಯದ ಜನ ತುಂಬ ಘನತೆಯಿಂದ ನಡೆದುಕೊಂಡು ಈ ನಾಡಿನ ಕೀರ್ತಿಯನ್ನ ಬೆಳಗಿದರು. ಈಗ ಅಂತವರ ಹೆಸರಿಗೆ ಮಸಿ ಬಳಿಯುತ್ತಿರುವ ಹರಿಪ್ರಸಾದ್ ಅವರಿಗೆ ಸೈರಣೆ ಬೇಕಾಗಿದೆಯಂತಲ್ಲಾ. ಅದೂ ಜವಾಬ್ದಾರಿಯುತ ಸೈರಣೆ ಮುಖ್ಯ. ಇಲ್ಲವಾದರೆ ’ಬಂ’ನಂತೆ ಜೆಡಿಎಸ್‌ಗೆ ಹೋಗಿ ಕಡೆಗಣನೆಗೆ ಒಳಗಾಗಬೇಕಾಗುತ್ತಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...