Homeಮುಖಪುಟಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅಧಿಕಾರವಧಿ ಸೆಪ್ಟಂಬರ್‌ವರೆಗೆ ವಿಸ್ತರಣೆ: ಇದೇ ಕೊನೆ ಬಾರಿ ಎಂದ ಸುಪ್ರೀಂ

ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅಧಿಕಾರವಧಿ ಸೆಪ್ಟಂಬರ್‌ವರೆಗೆ ವಿಸ್ತರಣೆ: ಇದೇ ಕೊನೆ ಬಾರಿ ಎಂದ ಸುಪ್ರೀಂ

- Advertisement -
- Advertisement -

ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ಸೆಪ್ಟಂಬರ್‌ವರೆಗೂ ವಿಸ್ತರಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದ್ದು, ಇದು ಕೊನೆಯ ಬಾರಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಜುಲೈ 31ಕ್ಕೆ ಅವರ ಅಧಿಕಾರವಧಿ ಮುಗಿಯುತ್ತಿದ್ದು, ಅಕ್ಟೋಬರ್ 15ರವರೆಗೂ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಮನವಿ ಮಾಡಿತ್ತು.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರ ಪೀಠವು “ಮಹತ್ತರ ಸಾರ್ವಜನಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿ”ಗಾಗಿ ವಿಸ್ತರಣೆಯನ್ನು ನೀಡುತ್ತಿದ್ದೇವೆ. ಆದರೆ ಮಿಶ್ರಾ ಸೆಪ್ಟೆಂಬರ್ 15 ರ ಮಧ್ಯರಾತ್ರಿಯಿಂದ ಇಡಿ ಮುಖ್ಯಸ್ಥರಾಗಿ ಇರುವುದಿಲ್ಲ ಎಂದು ಹೇಳಿದೆ.

ಇಡೀ ಇಲಾಖೆಯು ಮಿಶ್ರಾ ಒಬ್ಬರನ್ನು ಹೊರತುಪಡಿಸಿ ಅಸಮರ್ಥರಿಂದ ತುಂಬಿದೆಯೇ? ಎಂದು ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಸಂಸ್ಥೆಯಲ್ಲಿ ಈ ಕೆಲಸವನ್ನು ಮಾಡುವ ಇನ್ನೊಬ್ಬ ವ್ಯಕ್ತಿ ಇಲ್ಲವೇ? ಒಬ್ಬ ವ್ಯಕ್ತಿ ಇಷ್ಟೊಂದು ಅನಿವಾರ್ಯವಾಗಬಹುದೇ? ಇಡಿಯಲ್ಲಿ ಸಮರ್ಥರು ಬೇರೆ ಯಾರೂ ಇಲ್ಲವೇ? ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರನ್ನು ಸುಪ್ರೀಂ ಪ್ರಶ್ನಿಸಿದೆ.

ಜುಲೈ 11 ರಂದು ಇದೇ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮಿಶ್ರಾ ಅವರಿಗೆ ಮೂರನೇ ಅವಧಿಗೆ ಅಧಿಕಾರ ವಿಸ್ತರಿಸುವ ಕೇಂದ್ರ ಸರ್ಕಾರದ ಆದೇಶವನ್ನು ಕಾನೂನುಬಾಹಿರ ಎಂದು ಕರೆದಿತ್ತು. ಅಲ್ಲದೇ ಜುಲೈ 31ರ ಒಳಗೆ ಇಡಿ ಮುಖ್ಯಸ್ಥರ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿತ್ತು.

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮತ್ತು ಇತರರು ಮಿಶ್ರಾ ಅವರ ಅಧಿಕಾರ ವಿಸ್ತರಣೆಯನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ನವೆಂಬರ್ 19, 2018ರಂದು 1984-ಬ್ಯಾಚ್ ಭಾರತೀಯ ಕಂದಾಯ ಸೇವಾ ಅಧಿಕಾರಿ ಮಿಶ್ರಾ ಅವರನ್ನು ಮೊದಲು 2 ವರ್ಷಗಳ ಅವಧಿಗೆ ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ನೇಮಿಸಲಾಯಿತು. 2020ರಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿತು.

ಆ ಬಳಿಕ ಸೆಪ್ಟೆಂಬರ್ 2021 ರಲ್ಲಿ, ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಸರ್ಕಾರವು ನವೆಂಬರ್ 2021ರಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ ಮತ್ತು ಕೇಂದ್ರ ವಿಜಿಲೆನ್ಸ್ ಕಮಿಷನ್ ಕಾಯಿದೆ ಸುಗ್ರೀವಾಜ್ಞೆಗಳನ್ನು ತಂದಿತು. ಇದರಿಂದ ಮಿಶ್ರಾ ಅವರು ಇನ್ನೊಂದು ವರ್ಷ ಮುಂದುವರಿಯಲು ಸಾಧ್ಯವಾಯಿತು.

ಇತ್ತೀಚಿನ ತೀರ್ಪಿನಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ ಮತ್ತು ಕೇಂದ್ರ ವಿಜಿಲೆನ್ಸ್ ಕಮಿಷನ್ ಕಾಯಿದೆಯಲ್ಲಿನ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ದೃಢಪಡಿಸಿತು. ಸಿಬಿಐ ಮುಖ್ಯಸ್ಥ ಮತ್ತು ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು ಅವರ ಕಡ್ಡಾಯ ಎರಡು ವರ್ಷಗಳ ನಂತರ ಸಂಭವನೀಯ ಮೂರು ವರ್ಷಗಳವರೆಗೆ ವಿಸ್ತರಿಸುವ ಅಧಿಕಾರವನ್ನು ಕೇಂದ್ರಕ್ಕೆ ನೀಡಿದೆ. ಆದರೆ ಆನಂತರ ಮತ್ತೆ ಅಧಿಕಾರ ಅವಧಿ ವಿಸ್ತರಿಸುವುದು ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ರಾಜಕೀಯ ಎದುರಾಳಿಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಇಡಿ, ಸಿಬಿಐ ನಂತಹ ತನಿಖಾ ಸಂಸ್ಥೆಗಳ ಸ್ವಾಯುತ್ತತೆ ಕಸಿದುಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿ: ಇಡಿ ಮುಖ್ಯಸ್ಥ ಮಿಶ್ರಾ ಅವಧಿ ವಿಸ್ತರಣೆ: ಬೇರೆ ಯಾರೂ ಸಮರ್ಥರು ಇಲ್ಲವೇ?; ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...