Homeಕರ್ನಾಟಕಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

”ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ, ಅವರು ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ ಈ ಬಗ್ಗೆ ಎಚ್ಚರದಿಂದಿರಿ” ಎಂದು ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

”ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳನ್ನು ಸೃಷ್ಟಿಸಿ, ಅದನ್ನು ಸತ್ಯ ಎನ್ನುವಂತೆ ಬಿಂಬಿಸುತ್ತಾರೆ. ಇದಕ್ಕಾಗಿ ಅವರು ವಿಪರೀತ ಖರ್ಚು ಮಾಡುತ್ತಾರೆ. ಇದನ್ನೆಲ್ಲಾ ನಾವು ಸರಿಯಾಗಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕು” ಎಂದು ತಮ್ಮ ಎಲ್ಲ ಶಾಸಕರಿಗೂ ಸಿದ್ದರಾಮಯ್ಯ ಹೇಳಿದರು.

”ಹೊಸ ಸರ್ಕಾರ ಬಂದ ಬಳಿಕ ನಮ್ಮ ಎದುರಿಗೆ ತಕ್ಷಣಕ್ಕೆ ರಾಜ್ಯದ ಆರ್ಥಿಕತೆಯನ್ನು ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿ ಇತ್ತು. ಜತೆಗೆ ಆಯವ್ಯಯ ರೂಪಿಸುವ ಹೊಣೆಗಾರಿಕೆಯೂ ಇತ್ತು ಹಾಗೂ ಹೊಸ ಸರ್ಕಾರವಾದ್ದರಿಂದ ಜಂಟಿ ಅಧಿವೇಶನವನ್ನೂ ಕರೆಯಬೇಕಿತ್ತು. ಹೊಸ ಶಾಸಕರಿಗೂ ತಮ್ಮ ಅಭಿಪ್ರಾಯ, ನಿಲುವನ್ನು ವ್ಯಕ್ತಪಡಿಸಲು ಅವಕಾಶ ಆಗಬೇಕು ಎನ್ನುವ ಕಾರಣದಿಂದ ಮೂರು ವಾರ ಮೊದಲ ಅಧಿವೇಶನವನ್ನು ನಡೆಸಿದೆವು” ಎಂದರು.

”ಈ ಆಯವ್ಯಯ ಅತ್ಯಂತ ಮಹತ್ವದ್ದಾಗಿತ್ತು. ಐದು ಗ್ಯಾರಂಟಿಗಳನ್ನು ಜಾರಿ ಮಾಡಲು 58 ಸಾವಿರ ಕೋಟಿ ರೂಪಾಯಿ ಬೇಕು ಎಂದು ಅಂದಾಜಿಸಲಾಗಿತ್ತು. ಹೀಗಾಗಿ ಈ ಆಯವ್ಯಯವನ್ನು ಅತ್ಯಂತ ಎಚ್ಚರಿಕೆಯಿಂದ ರೂಪಿಸುವುದಕ್ಕಾಗಿ, ಜತೆಗೆ ಐದು ಗ್ಯಾರಂಟಿಗಳಿಗೆ ಹಣ ಮೀಸಲಿಡುವ ಅಗತ್ಯವೂ ಇತ್ತು. ಆದ್ದರಿಂದ ನಾನೇ ಸ್ವತಃ ಬಜೆಟ್ ಸಿದ್ಧತೆಗೆ ಕೂರುವುದು ಅನಿವಾರ್ಯವಾಗಿತ್ತು. ಈ ಎಲ್ಲಾ ಕಾರಣಗಳಿಂದ ನಾನು ಇತರೆ ಸಂಗತಿಗಳ ಕಡೆಗೆ ಗಮನ ಕೊಡಲು ಸಾಧ್ಯ ಆಗಲಿಲ್ಲ” ಎಂದರು.

”ಅಧಿವೇಶನದ ನಡುವೆ ರಾಷ್ಟ್ರ ಮಟ್ಟದ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ನಡೆಸಿದೆವು. ಈ ಸಭೆ ಮುಗಿಯುತ್ತಿದ್ದಂತೆ ನಮ್ಮ ವರಿಷ್ಠರು ಶಾಸಕರು ಮತ್ತು ಸಚಿವರ ಜತೆ ಸಭೆ ನಡೆಸಲು ತೀರ್ಮಾನಿಸಿದ್ದರು. ಈ ಎರಡೂ ಕಾರಣಗಳಿಂದ ಶಾಸಕಾಂಗ ಸಭೆ ಕರೆಯುವುದು ತಡವಾಗಿದೆ” ಎಂದು ಹೇಳಿದರು.

”ಬಿಜೆಪಿಯ ದುರಾಡಳಿತ, ಬೆಲೆ ಏರಿಕೆ, ಹಣದುಬ್ಬರದಿಂದ ನಾಡಿನ ಜನತೆ ಹೈರಾಣಾಗಿ ಅವರ ಬದುಕು ದುಸ್ತರವಾಗಿತ್ತು. ಹೀಗಾಗಿ ಐದು ಗ್ಯಾರಂಟಿಗಳ ಮೂಲಕ ನಾಡಿನ ಜನತೆಯ ಸಂಕಷ್ಟಗಳಿಗೆ ಸ್ಪಂದಿಸಲು ನಾವು ಮುಂದಾದೆವು. ಇಡಿ ದೇಶದಲ್ಲಿ ಇಷ್ಟೊಂದು ದೊಡ್ಡ ಮಟ್ಟದ , ದೊಡ್ಡ ಮೊತ್ತದ ಜನ ಸ್ಪಂದನೆಯ ಯೋಜನೆಗಳನ್ನು ಜಾರಿಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ” ಎಂದರು.

”ನಮ್ಮ ಗ್ಯಾರಂಟಿ ಯೋಜನೆಗಳನ್ನು ನಮ್ಮ ನಾಡಿನ ಶೇ. 97ಕ್ಕೂ ಹೆಚ್ಚು ಜನ ಸ್ವಾಗತಿಸಿ, ಸಂಭ್ರಮಿಸಿದ್ದಾರೆ. ಸಮಾಧಾನ ಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲೆಲ್ಲಾ ವರದಿ ಮಾಡಿವೆ. ಇದು ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಎದೆ ಎತ್ತಿ ಹೆಮ್ಮೆ ಪಡುವ ಸಂದರ್ಭ” ಎಂದು ಸಂತಸ ವ್ಯಕ್ತಪಡಿಸಿದರು.

”ನಮ್ಮ ಐದು ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗಗಳ ಬದುಕಿಗೂ ಸ್ಪಂದಿಸಿವೆ. ಇದು ಬಿಜೆಪಿ ಪರಿವಾರಕ್ಕೆ ನಡುಕ ಹುಟ್ಟಿಸಿದೆ. ಹೀಗಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ವಿಪರೀತ ಸುಳ್ಳುಗಳನ್ನು, ನಕಲಿ ವಿಡಿಯೊಗಳನ್ನು ಸೃಷ್ಟಿಸುತ್ತಾರೆ. ಶಾಸಕರೊಬ್ಬರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ, ಸುದ್ದಿ ಮಾಡಿಸಿದ್ದು ಈ ಕುತಂತ್ರದ ಭಾಗವೇ ಆಗಿದೆ’ ಎಂದರು.

”ಈಗ ಶಾಸಕರೇ ಆ ಪತ್ರ ತಮ್ಮದಲ್ಲ ಎಂದು ಸ್ಪಷ್ಟನೆ ನೀಡಿದ್ದಾಗಿದೆ. ವಿಪರ್ಯಾಸ ಅಂದರೆ ಸತ್ಯ ಏನು ಎಂದು ಗೊತ್ತಾಗುವುದರೊಳಗೆ ಅವರು ಸುಳ್ಳನ್ನು ವ್ಯಾಪಕವಾಗಿ ಹರಡಿದ್ದಾರೆ” ಎಂದು ಹೇಳಿದರು.

”ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡಿ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ‌ ಸರಮಾಲೆಗಳ ಮೂಲಕ ಅವರು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿದ್ದು ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ” ಎಂದು ಎಚ್ಚರಿಸಿದರು.

”ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ” ಎಂದು ಸಿಎಂ ಸಿದ್ದರಾಮಯ್ಯ ತಿಳಿಹೇಳಿದರು.

ಇದನ್ನೂ ಓದಿ: ಲಲಿತ ಮೋದಿ, ನೀರವ್ ಮೋದಿಯನ್ನು ನಿಮ್ಮೊಂದಿಗೆ ಹೋಲಿಸಬಹುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...