Homeಮುಖಪುಟನಾಟಕ ವಿಮರ್ಶೆ; ಪ್ರಭಾಸ: ಪ್ರಜ್ವಲಿಸಿದ ಪ್ರತಿಭೆ ಮೇರಿ ಕ್ಯೂರಿ

ನಾಟಕ ವಿಮರ್ಶೆ; ಪ್ರಭಾಸ: ಪ್ರಜ್ವಲಿಸಿದ ಪ್ರತಿಭೆ ಮೇರಿ ಕ್ಯೂರಿ

- Advertisement -
- Advertisement -

ಮಹಿಳೆಯರ ಪ್ರತಿಭೆ, ಚೈತನ್ಯಗಳ ಬಗ್ಗೆ ಅಜ್ಞಾನ, ಅನಾದರವಿದ್ದುದು ಭಾರತದಲ್ಲಿ ಮಾತ್ರವಲ್ಲ, ಇದೊಂದು ಜಾಗತಿಕ ವಿದ್ಯಮಾನವೇ ಆಗಿತ್ತು. ಈ ಅಜ್ಞಾನ, ಅನಾದರಗಳು ಇನ್ನೂ ಪೂರ್ಣ ಅಳಿದಿಲ್ಲ. ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಪೋಲೆಂಡಿನಲ್ಲಿ ಜನಿಸಿದ, ನಂತರ ಫ್ರಾನ್ಸಿನಲ್ಲಿ ನೆಲೆನಿಂತ ಮೇರಿ ಕ್ಯೂರಿ ಅವರೂ ಇಂತಹ ಮನೋಭಾವದ ಸಮಾಜದ ವಾತಾವರಣದಿಂದ ನಲುಗಿದವರು. ಈ ವಾತಾವರಣದಲ್ಲಿಯೂ, ಆಧುನಿಕ ಕಾಲಘಟ್ಟದಲ್ಲಿ ವ್ಯಾಪಕವಾಗಿ ಜನರನ್ನು ನರಳಿಸುತ್ತಿರುವ ಭೀಕರ ಕಾಯಿಲೆ ಕ್ಯಾನ್ಸರ್‌ನ ನಿವಾರಣೆಗೆ ಅತ್ಯುತ್ತಮ ಪರಿಹಾರವಾಗಿ ಒದಗಿರುವ ರೇಡಿಯೋ ವಿಕಿರಣ ಚಿಕಿತ್ಸೆಗೆ ಮೂಲಧಾತುವಾದ ರೇಡಿಯಂ ಧಾತುವನ್ನು ಸಂಶೋಧಿಸಿದ ವಿಜ್ಞಾನಿ ಇವರು. ಇವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ ನಾಟಕ ’ಪ್ರಭಾಸ’. ಪ್ರಭಾಸ ಎಂದರೆ ಕಿರಣ ಎಂದು ಅರ್ಥ.

ಮೈಸೂರಿನ ಪರಿವರ್ತನ ರಂಗ ಸಮಾಜ, ಕಲಾಸುರುಚಿ, ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ ’ಕುತೂಹಲಿ’ ಮೈಸೂರು ವಿಜ್ಞಾನ ನಾಟಕೋತ್ಸವದಲ್ಲಿ ಪ್ರದರ್ಶಿತವಾದ ’ಪ್ರಭಾಸ’ ನಾಟಕವನ್ನು ಧಾರವಾಡದ ಅಭಿನಯ ಭಾರತಿ ರಂಗ ತಂಡದವರು ರಂಗಕ್ಕೆ ತಂದಿದ್ದಾರೆ. ಅಮೆರಿಕದ ರಂಗ ನಿರ್ದೇಶಕ ಅಲನ್ ಅಲ್ಡಾ ರಚಿಸಿದ ಮೂಲ ’ರೇಡಿಯಮ್’ ನಾಟಕವನ್ನು ಸುಮನಾ ಡಿ ಮತ್ತು ಶಶಿಧರ ಡೋಂಗ್ರೆ ಕನ್ನಡಕ್ಕೆ ತಂದಿದ್ದಾರೆ. ಮೈಸೂರಿನ ರಂಗಾಯಣದ ಕಿರುರಂಗಮಂದಿರದಲ್ಲಿ ಈ ನಾಟಕವು ಪ್ರದರ್ಶಿತಗೊಂಡಿತು.

ಮೇರಿ ಕ್ಯೂರಿ

ನಾಟಕ ಮೇರಿ ಕ್ಯೂರಿ ಅವರ ಕೌಟುಂಬಿಕ ಬದುಕು, ಅವರ ವೈಜ್ಞಾನಿಕ ಸಂಶೋಧನೆಯ ವಿವಿಧ ಹಂತದ ಏಳುಬೀಳುಗಳು, ಮಡದಿಯ ಸಾಧನೆಯಲ್ಲಿ ಸಂತೋಷ ಕಾಣುವ ಪತಿ ವಿಜ್ಞಾನಿ ಪಿಯರ್ ಕ್ಯೂರಿ ಕೌಟುಂಬಿಕ ಬದುಕು ಮತ್ತು ಸಂಶೋಧನೆಯಲ್ಲಿ ನೀಡುವ ಸಹಕಾರ, ಸಂಶೋಧನೆಯ ಪ್ರಯೋಗಕ್ಕೆ ತನ್ನನ್ನು ಒಡ್ಡಿಕೊಳ್ಳುವ ಪಿಯರ್ ಅದರಿಂದಲೇ ಅಸು ನೀಗುವುದು, ಇದು ಮೇರಿ ಕ್ಯೂರಿ ಬಾಳಿನಲ್ಲಿ ತುಂಬುವ ಶೂನ್ಯ, ಇಂತಹ ಸಂದರ್ಭದಲ್ಲಿ ಮೇರಿಯವರಿಗೆ ಬೆಂಬಲವಾಗಿ ನಿಲ್ಲುವ ಗೆಳೆಯ ಎಮೆಲ್ ಬೋರಿಲ್, ಸಂದರ್ಭದ ಸಹಜ ಬೆಳವಣಿಗೆಯಲ್ಲಿ ಪರಸ್ಪರ ಹತ್ತಿರವಾಗುವ ಎಮೆಲ್ ಮತ್ತು ಮೇರಿ ಕ್ಯೂರಿ, ಇದು ಎಮೆಲ್ ಕುಟುಂಬದಲ್ಲಿ ಎಬ್ಬಿಸುವ ಬಿರುಗಾಳಿ, ಇವುಗಳನ್ನೆಲ್ಲ ಮೀರಿ ಸಂಶೋಧನೆಯಲ್ಲಿ ತೊಡಗುವ ಮೇರಿ ಕ್ಯೂರಿ, ಯಶಸ್ವಿ ಸಂಶೋಧನೆಗೆ ದೊರಕುವ ಎರಡೆರಡು ನೊಬೆಲ್ ಪ್ರಶಸ್ತಿಗಳು, ಕೊನೆಗೆ ತನ್ನ ಸಂಶೋಧನೆಯ ರೇಡಿಯೋ ವಿಕಿರಣದಿಂದಲೇ ತನ್ನ 66ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸುವ ಮೇರಿ ಕ್ಯೂರಿ.. ಇವೆಲ್ಲವುಗಳು ನಾಟಕದಲ್ಲಿ ಸಹಜವಾಗಿ ಮೂಡಿ ಬರುತ್ತವೆ. ಈ ನಡುವೆ ನಾಟಕ ಧರ್ಮ, ದೇವರು ಮತ್ತು ವಿಜ್ಞಾನದ ನಡುವಿನ ಸಂಘರ್ಷವನ್ನೂ ನಿರೂಪಿಸುತ್ತದೆ. ಹಾಗೆ ನೋಡಿದರೆ ಇದನ್ನೊಂದು ’ವಿಜ್ಞಾನ ನಾಟಕ’ ಎಂದು ಕರೆದುಬಿಟ್ಟರೆ ನಾಟಕಕ್ಕೆ ಅನ್ಯಾಯವಾಗುತ್ತದೆ. ಮನುಷ್ಯ ಸಹಜ ಪ್ರೀತಿ, ದಾಂಪತ್ಯದ ಏಳುಬೀಳುಗಳು, ದಾಂಪತ್ಯೇತರ ಸಂಬಂಧ, ಇಂತಹ ಸಂಬಂಧಗಳು ಉಂಟುಮಾಡುವ ಕೌಟುಂಬಿಕ ಸಮಸ್ಯೆಗಳು ಎಲ್ಲವನ್ನೂ ನಿರ್ದೇಶಕರು (ನಿ: ಸಾಲಿಯಾನ್ ಉಮೇಶ ನಾರಾಯಣ) ಹದವಾಗಿ ಬೆಸೆದಿದ್ದಾರೆ.

ಆರಂಭದ ಸುಮಾರು ಅರ್ಧತಾಸು ನಾಟಕ ಕುತೂಹಲ ಕೆರಳಿಸದೆ ಮಂದಗತಿಯಲ್ಲಿ ಸಾಗಿದರೆ ನಂತರದ ದೃಶ್ಯಗಳು ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಂತೆ ಜೀವಪಡೆಯುತ್ತಾ ಸಾಗುತ್ತದೆ. ನಾಟಕದಲ್ಲಿ ಬಳಸಿದ ಪಾಶ್ಚಾತ್ಯ ವೀಡಿಯೋ ತುಣುಕುಗಳ ಹಿನ್ನೆಲೆ, ಪಾಶ್ಚಾತ್ಯ ಸಂಗೀತ ಕೊಂಚ ಅಬ್ಬರದೆನಿಸಿದರೂ ಆ ದೇಶದ ಆವರಣವನ್ನು ಮೂಡಿಸುವುದರಲ್ಲಿ ಸಹಾಯ ಮಾಡಿತು. ಆದರೆ ಒಟ್ಟು ಸಂಗೀತ ಇನ್ನಷ್ಟು ಸುಧಾರಿಸಬೇಕಿತ್ತು (ಸಂಗೀತ: ವಿಶ್ವಜಿತ್ ಹಂಪಿಹೊಳೆ). ನಾಟಕದ ಅಂತಿಮ ಹಂತದಲ್ಲಿ ಬರುವ ಮೇರಿಕ್ಯೂರಿ ನೊಬೆಲ್ ಸ್ವೀಕಾರ ಸಂದರ್ಭದ ಭಾಷಣದ ಸನ್ನಿವೇಶ ಪೇಲವವಾಗಿದ್ದು ಇದನ್ನು ಪರಿಣಾಮಕಾರಿಯಾಗಿ ತರಬಹುದಿತ್ತು.

ಪಿಯರ್ ಕ್ಯೂರಿ

ನಾಟಕದಲ್ಲಿ ಪ್ರತಿಯೊಬ್ಬ ನಟನಟಿಯರೂ ತಮ್ಮ ಪಾತ್ರಕ್ಕೆ ಜೀವ ತುಂಬುವ ಕೆಲಸವನ್ನು ಶ್ರದ್ಧೆಯಿಂದ ಮಾಡಿದರು. ಮೇರಿ ಕ್ಯೂರಿ (ಜ್ಯೋತಿ ಪುರಾಣಿಕ), ಮಾರ್ಗರಿತ ಬೋರೆಲ್ (ಜಯಶ್ರೀ ಜೋಶಿ), ಪಾಲ್ ಲಾಂಗೆವಿನ (ಸುನೀಲ ಗಿರಡ್ಡಿ), ಟಾರ್ನ್ ಬ್ಲಾಡ್ (ಅರವಿಂದ ಕುಲಕರ್ಣಿ) ಪಾತ್ರಗಳು ವಿಶೇಷ ಗಮನ ಸೆಳೆದವು. ತಾಂತ್ರಿಕ ನಿರ್ವಹಣೆ (ನಾಗರಾಜ ಪಾಟೀಲ), ಬೆಳಕು (ಯೋಗೀಶ ಬಿ) ಪ್ರಸಾಧನ (ಸಂತೋಷ ಮಹಾಲೆ), ರಂಗ ನಿರ್ವಹಣೆ (ವಿಜಯೇಂದ್ರ ಅರ್ಚಕ) ನಾಟಕಕ್ಕೆ ಪೂರಕವಾಗಿತ್ತು.

ಪಠ್ಯಗಳಿಂದ ವಿಜ್ಞಾನದ ಸಂಗತಿಗಳನ್ನು ತೆಗೆದು, ಆ ಜಾಗದಲ್ಲಿ ಜ್ಯೋತಿಷ್ಯ, ಮತ- ಸಂಪ್ರದಾಯಗಳನ್ನು ತುಂಬುವ ಕೆಲಸ ರಾಷ್ಟ್ರಮಟ್ಟದಲ್ಲಿ ನಡೆಯುತ್ತಿದೆ. ಇದು ನಮ್ಮನ್ನು ಗತಕಾಲಕ್ಕೆ ಕೊಂಡೊಯ್ಯುವ ಪ್ರಯತ್ನ ಎಂದು ದೇಶದ ವಿದ್ವಾಂಸರು ಮತ್ತು ಶಿಕ್ಷಣ ತಜ್ಞರು ಎಚ್ಚರಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ತನ್ನದೇ ಹೊಸ ಶಿಕ್ಷಣ ನೀತಿಯನ್ನು ತರಲು ಸಜ್ಜಾಗಿದೆ. ತನ್ನ ನೂತನ ರಾಜ್ಯ ಶಿಕ್ಷಣ ನೀತಿಯ ಭಾಗವಾಗಿ ವಿಜ್ಞಾನ ನಾಟಕಗಳನ್ನು ರಾಜ್ಯದ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳುವ ಯೋಜನೆಯನ್ನು ಸರ್ಕಾರ ರೂಪಿಸಿ ಜಾರಿಗೆ ತಂದರೆ ಮಕ್ಕಳಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವವನ್ನು ಮೂಡಿಸುವ ಕಾರ್ಯ ಹೆಚ್ಚು ಸುಲಭವಾಗಿ ಸಾಧ್ಯವಾಗುತ್ತದೆ.

ಡಾ. ಸರ್ಜಾಶಂಕರ ಹರಳಿಮಠ

ಡಾ. ಸರ್ಜಾಶಂಕರ ಹರಳಿಮಠ
ಲೇಖಕ, ಕವಿ ಸರ್ಜಾಶಂಕರ್ ಅವರು ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಹರಳಿಮಠ ಗ್ರಾಮದವರು. ’ಅಂತರಾಳ’, ’ಬೆಚ್ಚಿ ಬೀಳಿಸಿದ ಬೆಂಗಳೂರು’, ’ಬಾರಯ್ಯ ಬೆಳದಿಂಗಳೇ’, ’ಸುಡುಹಗಲ ಸೊಲ್ಲು’ ಅವರ ಕೆಲವು ಪ್ರಕಟಿತ ಪುಸ್ತಕಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...