Homeಕರ್ನಾಟಕಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

- Advertisement -
- Advertisement -

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಉಡುಪಿಯ ಕಾಲೇಜೊಂದರ ಟಾಯ್ಲೆಟ್​ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್​ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮಾತನಾಡಿ ಜೈಲು ಪಾಲಾಗಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಅವರು ಪ್ರಧಾನಿ ಮೋದಿ ಅವರೊಂದಿಗಿನ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾಕಾರ್ಯದರ್ಶಿ ಸಿಟಿ ರವಿ ಅವರು ಟ್ವಿಟರ್ ನಲ್ಲಿ ಫಾಲೋ ಮಾಡುತ್ತಾರೆ. ಆದರೆ ಶಕುಂತಲಾ ಇದೇ ಮೊದಲ ಬಾರಿಗೆ ಇಂತಹ ಪೋಸ್ಟಗಳನ್ನು ಹಂಚಿಕೊಂಡವಳಲ್ಲ, ಇದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕವಾಗಿ ಪೋಸ್ಟ್ ಮಾಡುವ ಮೂಲಕ ಕುಖ್ಯಾತಿ ಗಳಿಸಿದ್ದಾರೆ.

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿಜೆಪಿ ನಾಯಕಿ ಶಕುಂತಲಾ ಎನ್ನುವವರು ಅವಹೇಳನ ಟ್ವೀಟ್ ಮಾಡಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿತ್ತು.

ಈ ಹಿಂದೆ ಕಾಂಗ್ರೆಸ್ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ”ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ABVP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ?” ಎಂದು ಪ್ರಶ್ನೆ ಮಾಡಿತ್ತು.

”ವಿದ್ಯಾರ್ಥಿನಿಯರ ಮಕ,ಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಲಾಗಿತ್ತು.

ಇದರಬೆನ್ನಲ್ಲೇ ಬಿಜೆಪಿ ನಾಯಕಿ ಶಕುಂತಲಾ ಅವರು ಸಿಎಂ ಸೊಸೆ, ಹೆಂಡ್ತಿ ವೀಡಿಯೋ ಮಾಡಿದ್ರೆ ಹೀಗೆ ಹೇಳ್ತಿದ್ರಾ? ಎಂದು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಶಕುಂತಲಾ ಅವರು, ”ಮುಸ್ಲಿಂ ಯುವತಿಯರು ಹಿಂದೂ ಹುಡುಗಿಯರ ನಗ್ನ ಚಿತ್ರ ವೀಡಿಯೋ ಮಾಡಿದ್ದು ತಮಾಷೆ,ಮಕ್ಕಳಾಟ ಎನ್ನುತ್ತಿರುವ ಕಾಂಗ್ರೆಸ್ ಮತ್ತದರ ಅನುಯಾಯಿಗಳು, ಅನ್ಯಾಯವಾದ ಹೆಣ್ಣುಮಕ್ಕಳು ಬರೆದಿರುವ ದೂರು ಕೂಡ ನಕಲಿ ಎಂದು ಹೇಳುತ್ತಾರೆಯೇ?” ಎಂದು ಪ್ರಶ್ನೆ ಮಾಡಿದ್ದರು.

ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿದ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ನಾಯಕಿ ಶಕುಂತಲಾಳನ್ನ ಬಂಧಿಸಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಮತ್ತು ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ತುಮಕೂರು ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆಯಲ್ಲಿ ಶಕುಂತಲಾ ಭಾಗಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...