Homeಕರ್ನಾಟಕಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

- Advertisement -
- Advertisement -

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ಮತ್ತು ಅವರ ರಕ್ಷಕರು ಧರ್ಮಸ್ಥಳದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಗ್ರಹಿಸಿದರು.

ಸೌಜನ್ಯ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಶಾಪ ತಟ್ಟುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿಯೆಂದು ಬಂಧಿಸಿದ್ದ ಅಮಾಯಕನನ್ನು ನಿರಪರಾಧಿಯೆಂದು ಘೋಷಿಸಿ, ಖುಲಾಸೆಗೊಳಿಸಿದೆ. ಅಲ್ಲದೆ, ‘ಪ್ರಕರಣದ ತನಿಖೆಯು ಲೋಪಗಳಿಂದ ಕೂಡಿದ್ದು, ಮರು ತನಿಖೆಗೆ ಅರ್ಹವಾಗಿದೆ’ ಎಂದೂ ಹೇಳಿದೆ. ನ್ಯಾಯಾಲಯವೇ ಹೇಳುವಂತೆ ಪ್ರಕರಣವನ್ನು ಸಿಬಿಐ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ. ಹೀಗಾಗಿ, ಪ್ರಕರಣವನ್ನು ನ್ಯಾಯಾಂಗದ ನೇರ ತಪಾಸಣೆಯ ಅಡಿಯಲ್ಲಿ ಎಸ್‌ಐಟಿ ಮೂಲಕ ಮರುತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಎಂತಹ ಸಮಾಜವನ್ನು ಬಿಟ್ಟು ಹೋಗುತ್ತಿದ್ದೇವೆ ಎಂದು ಯೋಚಿಸದರೆ ದುಗುಡವಾಗುತ್ತದೆ. ಜನತೆ ಈ ರಾಜ್ಯ ಸರ್ಕಾರದ ಬಗ್ಗೆ ಅಪಾರವಾದ ಭರವಸೆ ಇಟ್ಟುಕೊಂಡಿದ್ದಾರೆ. ಅದನ್ನು ಉಳಿಸಿಕೊಳ್ಳುವಂತೆ ಸೌಜನ್ಯ ಪ್ರಕರಣದ ಅಪರಾಧಿಗಳನ್ನು ಹಿಡಿದು ಶಿಕ್ಷಿಸಬೇಕು. ಮನುಷ್ಯತ್ವದ ನೆಲೆಯಲ್ಲಿ ಸರ್ಕಾರ ಆಲೋಚಿಸಬೇಕು ಎಂದು ಹಿರಿಯ ಚಿಂತಕರಾದ ಎಸ್.ಜಿ ಸಿದ್ಧರಾಮಯ್ಯ ಒತ್ತಾಯಿಸಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರವಾದ, ಅಮಾನುಷವಾದ ಹಿಂಸೆ, ದೌರ್ಜನ್ಯ ಗಳ ಈ ಕಾಲದಲ್ಲಿ ಸರ್ಕಾರಗಳು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುವ ಮೂಲಕ ಮಹಿಳೆಯರಲ್ಲಿ ಬದುಕಿನ ಬಗ್ಗೆ, ಈ ರಾಜ್ಯದ ಸರ್ಕಾರದ ಬಗ್ಗೆ ಭರವಸೆ ಮೂಡಿಸಬೇಕು. ಇಲ್ಲವಾದರೆ ಇಡೀ ಮಹಿಳಾ ಸಮೂಹ ಭರವಸೆಯೇ ಇಲ್ಲದೆ ತತ್ತರಿಸಿಹೋಗುತ್ತದೆ ಎಂದು ಎನ್.ಎಫ್.ಐ.ಡಬ್ಲ್ಯು ಸಂಘಟನೆಯ ಎ. ಜ್ಯೋತಿ ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಐಟಿಯು ಮುಖಂಡ ಪ್ರಕಾಶ್, “ನಮ್ಮ ಅಳತೆಗೂ ಮೀರಿದ ಸಮಸ್ಯೆಗಳು ಸೌಜನ್ಯ ಪ್ರಕರಣವನ್ನು ಸುತ್ತುವರಿದಿವೆ. ಸರ್ಕಾರದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಿಂದ ಧರ್ಮಸ್ಥಳದ ಆದಾಯ ಹೆಚ್ಚಿದೆ. ಅದನ್ನು ಸಂಭ್ರಮಿಸಿ ಧರ್ಮಸ್ಥಳದ ಹೆಗ್ಗಡೆ ಮುಖ್ಯ ಮಂತ್ರಿಗಳಿಗೆ ದೀರ್ಘ ಪತ್ರ ಬರೆದಿದ್ದಾರೆ. ಬಿಜೆಪಿಯು ಅವರನ್ನು ರಾಜ್ಯ ಸಭೆ ಸದಸ್ಯ ಮಾಡಿದೆ.  ಇದರ ಜೊತೆಗೆ ಧರ್ಮಸ್ಥಳದ ಮೈಕ್ರೊ ಫೈನಾನ್ಸ್ ಯೋಜನೆ ರಾಜ್ಯಾದ್ಯಂತ ಮಹಿಳೆಯರನ್ನು ಸಾಲದ ಬಲೆಯೊಳಗೆ ಸಿಲುಕಿಸಿದೆ. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವು ಸೌಜನ್ಯಳ ದಾರುಣ ಸಾವಿಗೆ ಹೊಣೆಗಾರರನ್ನು ಹುಡುಕುತ್ತಿದ್ದೇವೆ” ಎಂದರು.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  • ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು. ಎಸ್‌ಐಟಿ ರಚಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು.
  • ಶಂಕಿತ ಆರೋಪಿಗಳಾದ ಉದಯ್ ಜೈನ್, ಮಲಿಕ್ ಜೈನ್ ಹಾಗೂ ಧೀರಜ್‌ ಜೈನ್‌ನನ್ನು ಬಂಧಿಸಿ, ವಿಚಾರಣೆ ನಡೆಸಬೇಕು.
  • ಸೌಜನ್ಯಳ ಮೃತದೇಹವನ್ನು ಪರೀಕ್ಷಿಸಿ, ಸರಿಯಾದ ಮರಣೋತ್ತರ ಪರೀಕ್ಷಾ ವರದಿ ನೀಡದ ಬೆಳ್ತಂಗಡಿ ವೈದ್ಯಕೀಯ ಆಸ್ಪತ್ರೆಯ ಸ್ತ್ರೀರೋಗತಜ್ಞ ಡಾ ರಶ್ಮಿ ಎನ್, ಡಾ. ಆಡಂ ವಿರುದ್ಧ ಕ್ರಮ ಕೈಗೊಳ್ಳಬೇಕು.
    ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ ಯೋಗೀಶ್ ಕುಮಾರ್, ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.
  • ಸಂತೋಷ್ ರಾವ್ ಅವರನ್ನು ಪರೀಕ್ಷಿಸಿದ ಫೋರೆನ್ಸಿಕ್ ಮೆಡಿಸಿನ್ ಪ್ರಾಧ್ಯಾಪಕ ಡಾ. ಮಹಾಬಲ ಶೆಟ್ಟಿ ಅವರನ್ನೂ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳಬೇಕು.
  • ನಿರಪರಾಧಿಯಾಗಿದ್ದರೂ ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಸಂತೋಷ್ ರಾವ್‌ ಮತ್ತು ಕುಟುಂಬಕ್ಕೆ ಪರಿಹಾರ ನೀಡಬೇಕು.
  • ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಕಾಮುಕರನ್ನು ಬಂಧಿಸಿಬೇಕು.
  • ರಾಜಸ್ಥಾನದಲ್ಲಿ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...