Homeಕರ್ನಾಟಕಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

- Advertisement -
- Advertisement -

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ಮತ್ತು ಅವರ ರಕ್ಷಕರು ಧರ್ಮಸ್ಥಳದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಗ್ರಹಿಸಿದರು.

ಸೌಜನ್ಯ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಶಾಪ ತಟ್ಟುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿಯೆಂದು ಬಂಧಿಸಿದ್ದ ಅಮಾಯಕನನ್ನು ನಿರಪರಾಧಿಯೆಂದು ಘೋಷಿಸಿ, ಖುಲಾಸೆಗೊಳಿಸಿದೆ. ಅಲ್ಲದೆ, ‘ಪ್ರಕರಣದ ತನಿಖೆಯು ಲೋಪಗಳಿಂದ ಕೂಡಿದ್ದು, ಮರು ತನಿಖೆಗೆ ಅರ್ಹವಾಗಿದೆ’ ಎಂದೂ ಹೇಳಿದೆ. ನ್ಯಾಯಾಲಯವೇ ಹೇಳುವಂತೆ ಪ್ರಕರಣವನ್ನು ಸಿಬಿಐ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ. ಹೀಗಾಗಿ, ಪ್ರಕರಣವನ್ನು ನ್ಯಾಯಾಂಗದ ನೇರ ತಪಾಸಣೆಯ ಅಡಿಯಲ್ಲಿ ಎಸ್‌ಐಟಿ ಮೂಲಕ ಮರುತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಎಂತಹ ಸಮಾಜವನ್ನು ಬಿಟ್ಟು ಹೋಗುತ್ತಿದ್ದೇವೆ ಎಂದು ಯೋಚಿಸದರೆ ದುಗುಡವಾಗುತ್ತದೆ. ಜನತೆ ಈ ರಾಜ್ಯ ಸರ್ಕಾರದ ಬಗ್ಗೆ ಅಪಾರವಾದ ಭರವಸೆ ಇಟ್ಟುಕೊಂಡಿದ್ದಾರೆ. ಅದನ್ನು ಉಳಿಸಿಕೊಳ್ಳುವಂತೆ ಸೌಜನ್ಯ ಪ್ರಕರಣದ ಅಪರಾಧಿಗಳನ್ನು ಹಿಡಿದು ಶಿಕ್ಷಿಸಬೇಕು. ಮನುಷ್ಯತ್ವದ ನೆಲೆಯಲ್ಲಿ ಸರ್ಕಾರ ಆಲೋಚಿಸಬೇಕು ಎಂದು ಹಿರಿಯ ಚಿಂತಕರಾದ ಎಸ್.ಜಿ ಸಿದ್ಧರಾಮಯ್ಯ ಒತ್ತಾಯಿಸಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರವಾದ, ಅಮಾನುಷವಾದ ಹಿಂಸೆ, ದೌರ್ಜನ್ಯ ಗಳ ಈ ಕಾಲದಲ್ಲಿ ಸರ್ಕಾರಗಳು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುವ ಮೂಲಕ ಮಹಿಳೆಯರಲ್ಲಿ ಬದುಕಿನ ಬಗ್ಗೆ, ಈ ರಾಜ್ಯದ ಸರ್ಕಾರದ ಬಗ್ಗೆ ಭರವಸೆ ಮೂಡಿಸಬೇಕು. ಇಲ್ಲವಾದರೆ ಇಡೀ ಮಹಿಳಾ ಸಮೂಹ ಭರವಸೆಯೇ ಇಲ್ಲದೆ ತತ್ತರಿಸಿಹೋಗುತ್ತದೆ ಎಂದು ಎನ್.ಎಫ್.ಐ.ಡಬ್ಲ್ಯು ಸಂಘಟನೆಯ ಎ. ಜ್ಯೋತಿ ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಐಟಿಯು ಮುಖಂಡ ಪ್ರಕಾಶ್, “ನಮ್ಮ ಅಳತೆಗೂ ಮೀರಿದ ಸಮಸ್ಯೆಗಳು ಸೌಜನ್ಯ ಪ್ರಕರಣವನ್ನು ಸುತ್ತುವರಿದಿವೆ. ಸರ್ಕಾರದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಿಂದ ಧರ್ಮಸ್ಥಳದ ಆದಾಯ ಹೆಚ್ಚಿದೆ. ಅದನ್ನು ಸಂಭ್ರಮಿಸಿ ಧರ್ಮಸ್ಥಳದ ಹೆಗ್ಗಡೆ ಮುಖ್ಯ ಮಂತ್ರಿಗಳಿಗೆ ದೀರ್ಘ ಪತ್ರ ಬರೆದಿದ್ದಾರೆ. ಬಿಜೆಪಿಯು ಅವರನ್ನು ರಾಜ್ಯ ಸಭೆ ಸದಸ್ಯ ಮಾಡಿದೆ.  ಇದರ ಜೊತೆಗೆ ಧರ್ಮಸ್ಥಳದ ಮೈಕ್ರೊ ಫೈನಾನ್ಸ್ ಯೋಜನೆ ರಾಜ್ಯಾದ್ಯಂತ ಮಹಿಳೆಯರನ್ನು ಸಾಲದ ಬಲೆಯೊಳಗೆ ಸಿಲುಕಿಸಿದೆ. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವು ಸೌಜನ್ಯಳ ದಾರುಣ ಸಾವಿಗೆ ಹೊಣೆಗಾರರನ್ನು ಹುಡುಕುತ್ತಿದ್ದೇವೆ” ಎಂದರು.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  • ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು. ಎಸ್‌ಐಟಿ ರಚಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು.
  • ಶಂಕಿತ ಆರೋಪಿಗಳಾದ ಉದಯ್ ಜೈನ್, ಮಲಿಕ್ ಜೈನ್ ಹಾಗೂ ಧೀರಜ್‌ ಜೈನ್‌ನನ್ನು ಬಂಧಿಸಿ, ವಿಚಾರಣೆ ನಡೆಸಬೇಕು.
  • ಸೌಜನ್ಯಳ ಮೃತದೇಹವನ್ನು ಪರೀಕ್ಷಿಸಿ, ಸರಿಯಾದ ಮರಣೋತ್ತರ ಪರೀಕ್ಷಾ ವರದಿ ನೀಡದ ಬೆಳ್ತಂಗಡಿ ವೈದ್ಯಕೀಯ ಆಸ್ಪತ್ರೆಯ ಸ್ತ್ರೀರೋಗತಜ್ಞ ಡಾ ರಶ್ಮಿ ಎನ್, ಡಾ. ಆಡಂ ವಿರುದ್ಧ ಕ್ರಮ ಕೈಗೊಳ್ಳಬೇಕು.
    ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ ಯೋಗೀಶ್ ಕುಮಾರ್, ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.
  • ಸಂತೋಷ್ ರಾವ್ ಅವರನ್ನು ಪರೀಕ್ಷಿಸಿದ ಫೋರೆನ್ಸಿಕ್ ಮೆಡಿಸಿನ್ ಪ್ರಾಧ್ಯಾಪಕ ಡಾ. ಮಹಾಬಲ ಶೆಟ್ಟಿ ಅವರನ್ನೂ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳಬೇಕು.
  • ನಿರಪರಾಧಿಯಾಗಿದ್ದರೂ ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಸಂತೋಷ್ ರಾವ್‌ ಮತ್ತು ಕುಟುಂಬಕ್ಕೆ ಪರಿಹಾರ ನೀಡಬೇಕು.
  • ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಕಾಮುಕರನ್ನು ಬಂಧಿಸಿಬೇಕು.
  • ರಾಜಸ್ಥಾನದಲ್ಲಿ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...