Homeಕರ್ನಾಟಕಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

- Advertisement -
- Advertisement -

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ಮತ್ತು ಅವರ ರಕ್ಷಕರು ಧರ್ಮಸ್ಥಳದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಗ್ರಹಿಸಿದರು.

ಸೌಜನ್ಯ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಶಾಪ ತಟ್ಟುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿಯೆಂದು ಬಂಧಿಸಿದ್ದ ಅಮಾಯಕನನ್ನು ನಿರಪರಾಧಿಯೆಂದು ಘೋಷಿಸಿ, ಖುಲಾಸೆಗೊಳಿಸಿದೆ. ಅಲ್ಲದೆ, ‘ಪ್ರಕರಣದ ತನಿಖೆಯು ಲೋಪಗಳಿಂದ ಕೂಡಿದ್ದು, ಮರು ತನಿಖೆಗೆ ಅರ್ಹವಾಗಿದೆ’ ಎಂದೂ ಹೇಳಿದೆ. ನ್ಯಾಯಾಲಯವೇ ಹೇಳುವಂತೆ ಪ್ರಕರಣವನ್ನು ಸಿಬಿಐ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ. ಹೀಗಾಗಿ, ಪ್ರಕರಣವನ್ನು ನ್ಯಾಯಾಂಗದ ನೇರ ತಪಾಸಣೆಯ ಅಡಿಯಲ್ಲಿ ಎಸ್‌ಐಟಿ ಮೂಲಕ ಮರುತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಎಂತಹ ಸಮಾಜವನ್ನು ಬಿಟ್ಟು ಹೋಗುತ್ತಿದ್ದೇವೆ ಎಂದು ಯೋಚಿಸದರೆ ದುಗುಡವಾಗುತ್ತದೆ. ಜನತೆ ಈ ರಾಜ್ಯ ಸರ್ಕಾರದ ಬಗ್ಗೆ ಅಪಾರವಾದ ಭರವಸೆ ಇಟ್ಟುಕೊಂಡಿದ್ದಾರೆ. ಅದನ್ನು ಉಳಿಸಿಕೊಳ್ಳುವಂತೆ ಸೌಜನ್ಯ ಪ್ರಕರಣದ ಅಪರಾಧಿಗಳನ್ನು ಹಿಡಿದು ಶಿಕ್ಷಿಸಬೇಕು. ಮನುಷ್ಯತ್ವದ ನೆಲೆಯಲ್ಲಿ ಸರ್ಕಾರ ಆಲೋಚಿಸಬೇಕು ಎಂದು ಹಿರಿಯ ಚಿಂತಕರಾದ ಎಸ್.ಜಿ ಸಿದ್ಧರಾಮಯ್ಯ ಒತ್ತಾಯಿಸಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರವಾದ, ಅಮಾನುಷವಾದ ಹಿಂಸೆ, ದೌರ್ಜನ್ಯ ಗಳ ಈ ಕಾಲದಲ್ಲಿ ಸರ್ಕಾರಗಳು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುವ ಮೂಲಕ ಮಹಿಳೆಯರಲ್ಲಿ ಬದುಕಿನ ಬಗ್ಗೆ, ಈ ರಾಜ್ಯದ ಸರ್ಕಾರದ ಬಗ್ಗೆ ಭರವಸೆ ಮೂಡಿಸಬೇಕು. ಇಲ್ಲವಾದರೆ ಇಡೀ ಮಹಿಳಾ ಸಮೂಹ ಭರವಸೆಯೇ ಇಲ್ಲದೆ ತತ್ತರಿಸಿಹೋಗುತ್ತದೆ ಎಂದು ಎನ್.ಎಫ್.ಐ.ಡಬ್ಲ್ಯು ಸಂಘಟನೆಯ ಎ. ಜ್ಯೋತಿ ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಐಟಿಯು ಮುಖಂಡ ಪ್ರಕಾಶ್, “ನಮ್ಮ ಅಳತೆಗೂ ಮೀರಿದ ಸಮಸ್ಯೆಗಳು ಸೌಜನ್ಯ ಪ್ರಕರಣವನ್ನು ಸುತ್ತುವರಿದಿವೆ. ಸರ್ಕಾರದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಿಂದ ಧರ್ಮಸ್ಥಳದ ಆದಾಯ ಹೆಚ್ಚಿದೆ. ಅದನ್ನು ಸಂಭ್ರಮಿಸಿ ಧರ್ಮಸ್ಥಳದ ಹೆಗ್ಗಡೆ ಮುಖ್ಯ ಮಂತ್ರಿಗಳಿಗೆ ದೀರ್ಘ ಪತ್ರ ಬರೆದಿದ್ದಾರೆ. ಬಿಜೆಪಿಯು ಅವರನ್ನು ರಾಜ್ಯ ಸಭೆ ಸದಸ್ಯ ಮಾಡಿದೆ.  ಇದರ ಜೊತೆಗೆ ಧರ್ಮಸ್ಥಳದ ಮೈಕ್ರೊ ಫೈನಾನ್ಸ್ ಯೋಜನೆ ರಾಜ್ಯಾದ್ಯಂತ ಮಹಿಳೆಯರನ್ನು ಸಾಲದ ಬಲೆಯೊಳಗೆ ಸಿಲುಕಿಸಿದೆ. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವು ಸೌಜನ್ಯಳ ದಾರುಣ ಸಾವಿಗೆ ಹೊಣೆಗಾರರನ್ನು ಹುಡುಕುತ್ತಿದ್ದೇವೆ” ಎಂದರು.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  • ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು. ಎಸ್‌ಐಟಿ ರಚಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು.
  • ಶಂಕಿತ ಆರೋಪಿಗಳಾದ ಉದಯ್ ಜೈನ್, ಮಲಿಕ್ ಜೈನ್ ಹಾಗೂ ಧೀರಜ್‌ ಜೈನ್‌ನನ್ನು ಬಂಧಿಸಿ, ವಿಚಾರಣೆ ನಡೆಸಬೇಕು.
  • ಸೌಜನ್ಯಳ ಮೃತದೇಹವನ್ನು ಪರೀಕ್ಷಿಸಿ, ಸರಿಯಾದ ಮರಣೋತ್ತರ ಪರೀಕ್ಷಾ ವರದಿ ನೀಡದ ಬೆಳ್ತಂಗಡಿ ವೈದ್ಯಕೀಯ ಆಸ್ಪತ್ರೆಯ ಸ್ತ್ರೀರೋಗತಜ್ಞ ಡಾ ರಶ್ಮಿ ಎನ್, ಡಾ. ಆಡಂ ವಿರುದ್ಧ ಕ್ರಮ ಕೈಗೊಳ್ಳಬೇಕು.
    ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ ಯೋಗೀಶ್ ಕುಮಾರ್, ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.
  • ಸಂತೋಷ್ ರಾವ್ ಅವರನ್ನು ಪರೀಕ್ಷಿಸಿದ ಫೋರೆನ್ಸಿಕ್ ಮೆಡಿಸಿನ್ ಪ್ರಾಧ್ಯಾಪಕ ಡಾ. ಮಹಾಬಲ ಶೆಟ್ಟಿ ಅವರನ್ನೂ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳಬೇಕು.
  • ನಿರಪರಾಧಿಯಾಗಿದ್ದರೂ ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಸಂತೋಷ್ ರಾವ್‌ ಮತ್ತು ಕುಟುಂಬಕ್ಕೆ ಪರಿಹಾರ ನೀಡಬೇಕು.
  • ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಕಾಮುಕರನ್ನು ಬಂಧಿಸಿಬೇಕು.
  • ರಾಜಸ್ಥಾನದಲ್ಲಿ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...