Homeಮುಖಪುಟಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

ಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

- Advertisement -
- Advertisement -

ಮಣಿಪುರ ಹಿಂಸಾಚಾರ ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಕುರಿತು ಯೂಟ್ಯೂಬ್ ಸಂದರ್ಶನವೊಂದರಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ಬರಹಗಾರ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪೆರಂಬಲೂರು ಜಿಲ್ಲೆಯ ವಕೀಲ ಕವಿಯರಸು ಅವರು ನೀಡಿದ ದೂರಿನ ಮೇರೆಗೆ ಶೇಷಾದ್ರಿ ಅವರನ್ನು ಬಂಧಿಸಲಾಗಿದೆ. ನ್ಯಾಯಾಂಗದ ಬಗ್ಗೆ ಶೇಷಾದ್ರಿ ಅವರ ದೃಷ್ಟಿಕೋನದಿಂದ ವಿಚಲಿತನಾಗಿದ್ದೇನೆ ಎಂದು ಅವರುಆರೋಪಿಸಿದ್ದಾರೆ.

ಐಪಿಸಿ ಸೆಕ್ಷನ್ 153, 153 ಎ ಮತ್ತು 505 (1) (B) ಅಡಿಯಲ್ಲಿ ಶೇಷಾದ್ರಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಸಂದರ್ಶನದಲ್ಲಿ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚಿಸುವಾಗ, ಮೇ 4 ರಂದು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಕುಕಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಖಂಡಿಸಿರುವುದನ್ನು ಶೇಷಾದ್ರಿ ಅವರು ಟೀಕಿಸಿದ್ದರು.

”ನಿಮಗೆ (ಕೇಂದ್ರ ಸರ್ಕಾರಕ್ಕೆ) ಏನನ್ನೂ ಮಾಡುವುದು ಸಾಧ್ಯವಿಲ್ಲ ಎಂದಾದರೆ, ನಾವು (ನ್ಯಾಯಾಲಯ) ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಹಾಗಾದರೆ ಚಂದ್ರಚೂಡ್ ಅವರ ಕೈಗೆ ಗನ್ ನೀಡಿ, ಅಲ್ಲಿಗೆ ಕಳುಹಿಸಿ. ಅವರು ಅಲ್ಲಿ ಶಾಂತಿ ಮರುಸ್ಥಾಪನೆ ಮಾಡುತ್ತಾರೆಯೇ ಎಂದು ನೋಡೋಣ” ಎಂಬುದಾಗಿ ಬದ್ರಿ ಶೇಷಾದ್ರಿ ಹೇಳಿದ್ದರು.

”ಅದು ಬೆಟ್ಟಗುಡ್ಡದ ಮತ್ತು ಸಂಕೀರ್ಣ ಪ್ರದೇಶವಾಗಿದೆ. ಅಲ್ಲಿ ಕೊಲೆಗಳು ಸಾಮಾನ್ಯವಾಗಿ ನಡೆಯುತ್ತವೆ. ಅಲ್ಲಿ ಹಿಂಸಾಚಾರಗಳು ನಡೆಯದಂತೆ ತಡೆಯುವುದು ನಮಗೆ ಸಾಧ್ಯವಿಲ್ಲ” ಎಂದು ತಿಳಿಸಿದ್ದರು.

ಈ ಸಂದರ್ಶನದ ವಿಚಾರವಾಗಿ ವಕೀಲ ಕವಿಯರಸು ಎಂಬುವವರು ಶೇಷಾದ್ರಿ ವಿರುದ್ಧ ದೂರು ಸಲ್ಲಿಸಿದ್ದರು. ಜುಲೈ 22ರಂದು ವೀಕ್ಷಿಸಿದ ಯೂಟ್ಯೂಬ್ ಸಂದರ್ಶನದ ತುಣುಕಿನಲ್ಲಿ, ಲೇಖಕ ಶೇಷಾದ್ರಿ ಅವರು ಸುಪ್ರೀಂಕೋರ್ಟ್ ಮತ್ತು ಸಿಜೆಐ ಡಿವೈ ಚಂದ್ರಚೂಡ್ ಅವರನ್ನು ಟೀಕಿಸಿದ್ದಾರೆ. ಇದರಿಂದ ತೀವ್ರ ಆಘಾತವಾಗಿದೆ ಎಂದು ವಕೀಲ ಆರೋಪಿಸಿದ್ದಾರೆ.

ಮೈತೇಯಿ ಸಮುದಾಯಕ್ಕೆ ಬುಡಕಟ್ಟು ಸಮುದಾಯದ ಮಾನ್ಯತೆ ನೀಡುವ ಮಣಿಪುರ ಹೈಕೋರ್ಟ್ ನಿರ್ಧಾರದ ಕಾರಣದಿಂದಲೇ ಮಣಿಪುರ ಹಿಂಸಾಚಾರದ ಸಮಸ್ಯೆ ಶುರುವಾಗಿತ್ತು ಎಂದು ಶೇಷಾದ್ರಿ ಹೇಳಿದ್ದರು. ”ಶೇಷಾದ್ರಿ ಅವರು ಸಿಜೆಐ ಸ್ಥಾನವನ್ನು ಕೀಳಾಗಿಸಲು ಪ್ರಯತ್ನಿಸುತ್ತಿದ್ದರು. ಈ ದೇಶದ ಸುಪ್ರೀಂಕೋರ್ಟ್ ಮತ್ತು ನ್ಯಾಯಾಂಗ ವ್ಯವಸ್ಥೆಯ ಗೌರವವನ್ನೂ ಅವರು ಕಡೆಗಣಿಸಿದ್ದಾರೆ” ಎಂದು ಕವಿಯರಸು ದೂರಿನಲ್ಲಿ ಹೇಳಿದ್ದಾರೆ.

ಬದ್ರಿ ಅವರು ನ್ಯೂ ಹಾರಿಜಾನ್ ಮೀಡಿಯಾ ಪ್ರೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಕ್ರಿಕ್ ಇನ್‌ಫೋದ ಸಹ ಸಂಸ್ಥಾಪಕರಾಗಿದ್ದು, ಸ್ವರಾಜ್ಯ ನಿಯತಕಾಲಿಕೆಯಲ್ಲಿ ಲೇಖನಗಳನ್ನು ಬರೆಯುತ್ತಾರೆ.

ಶೇಷಾದ್ರಿ ಅವರ ಬಂಧನವನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಖಂಡಿಸಿದ್ದಾರೆ. ಡಿಎಂಕೆ ಸರ್ಕಾರವು ಬಂಧನಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅವರು ಟೀಕಿಸಿದ್ದಾರೆ.

”ಖ್ಯಾತ ಪ್ರಕಾಶಕ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು ಶುಕ್ರವಾರ ಮುಂಜಾನೆ ತಮಿಳುನಾಡು ಪೊಲೀಸರು ಬಂಧಿಸಿರುವುದನ್ನು ತಮಿಳುನಾಡು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಈ ಭ್ರಷ್ಟ ಡಿಎಂಕೆ ಸರ್ಕಾರವು, ಸಾಮಾನ್ಯ ಜನರ ಅಭಿಪ್ರಾಯಗಳನ್ನು ಈಡೇರಿಸುವ ಸಾಮರ್ಥ್ಯ ಇಲ್ಲದ ಕಾರಣ ಬಂಧನಗಳ ಮೇಲೆ ಮಾತ್ರವೇ ಅವಲಂಬಿತವಾಗಿದೆ. ಭ್ರಷ್ಟ ಡಿಎಂಕೆ ಸರ್ಕಾರದ ಪ್ರತೀಕಾರದ ಕ್ರಮಗಳನ್ನು ಹೇರುವುದು ಮಾತ್ರವೇ ತಮಿಳುನಾಡು ಪೊಲೀಸರ ಕೆಲಸವೇ?” ಎಂದು ಅಣ್ಣಾಮಲೈ ಅವರು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು INDIAದ ನಿಯೋಗ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...