Homeಮುಖಪುಟಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮನೆ ಧ್ವಂಸಗೊಳಿಸಿದ ಸ್ಥಳೀಯ ಆಡಳಿತ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮನೆ ಧ್ವಂಸಗೊಳಿಸಿದ ಸ್ಥಳೀಯ ಆಡಳಿತ

- Advertisement -
- Advertisement -

ಮಧ್ಯಪ್ರದೇಶದ ಪ್ರಸಿದ್ಧ ದೇವಸ್ಥಾನದ ಬಳಿಯ ಕಾಡಿನಲ್ಲಿ 11 ವರ್ಷದ ಬಾಲಕಿಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಶುಕ್ರವಾರ ಬೆಳಗ್ಗೆ ಕಂಡುಬಂದಿತ್ತು. ಶನಿವಾರ ಮೈಹಾರ್ ಪಟ್ಟಣದ ಸ್ಥಳೀಯ ಆಡಳಿತವು ಆರೋಪಿಗಳಿಬ್ಬರ ಮನೆಗಳನ್ನು ಧ್ವಂಸಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿಗಳಾದ ರವೀಂದ್ರ ಕುಮಾರ್ ಮತ್ತು ಅತುಲ್ ಭಡೋಲಿಯಾ ಗುರುವಾರ ಬಾಲಕಿಯನ್ನು ಪ್ರತ್ಯೇಕ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಒಂದು ದಿನದ ನಂತರ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶುಕ್ರವಾರ ಮೈಹಾರ್ ಮುನ್ಸಿಪಲ್ ಕೌನ್ಸಿಲ್ ಮುಖ್ಯ ಪುರಸಭೆ ಅಧಿಕಾರಿಯಿಂದ ಆರೋಪಿಗಳ ಕುಟುಂಬಗಳಿಗೆ ಜಮೀನು ಮತ್ತು ಮನೆಗಳ ದಾಖಲೆಗಳನ್ನು ಕೋರಿ ನೋಟಿಸ್ ನೀಡಲಾಗಿದೆ ಎಂದು ಉಪವಿಭಾಗಾಧಿಕಾರಿ ಲೋಕೇಶ್ ದಾಬರ್ ಹೇಳಿದ್ದರು.

ಆರೋಪಿಗಳಿಬ್ಬರ ಮನೆಗಳು ಅಕ್ರಮವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ದಬರ್ ಹೇಳಿದರು. ಭಡೋಲಿಯಾ ಅವರ ಮನೆಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬಳಸಿದ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದರೆ, ಕುಮಾರ್ ಅವರ ಮನೆಯನ್ನು ಅನುಮತಿಯಿಲ್ಲದೆ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಕ್ರಮ ಕೈಗೊಳ್ಳುವಂತೆ ಆರೋಪಿಗಳ ಕುಟುಂಬಸ್ಥರು ಅಧಿಕಾರಿಗಳನ್ನು ವಿನಂತಿಸಿದರೂ ಅವರ ಮನೆಗಳನ್ನು ಕೆಡವಲಾಗಿದೆ ಎಂದು ಸ್ಥಳೀಯರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಅಪರಾಧದ ಆರೋಪಿಗಳ ಆಸ್ತಿಯನ್ನು ನಾಶಮಾಡಲು ಯಾವುದೇ ಕಾನೂನು ಅವಕಾಶಗಳಿಲ್ಲದಿದ್ದರೂ, ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸುವ ಕ್ರಮವನ್ನು ಹೆಚ್ಚು ಮಾಡುತ್ತಿವೆ. ಈ ಹೆಚ್ಚಿನ ಪ್ರಕರಣಗಳು ಮುಸ್ಲಿಮರ ಒಡೆತನದ ಆಸ್ತಿಗಳನ್ನು ಗುರಿಯಾಗಿಸಿಕೊಂಡಿವೆ.

”ವೈದ್ಯರ ತಂಡವು ಸಂತ್ರಸ್ತೆಯ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಭೋಪಾಲ್ ಅಥವಾ ದೆಹಲಿಗೆ ಸ್ಥಳಾಂತರಿಸಬಹುದು” ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಗುಪ್ತಾ ಹೇಳಿದರು.

ಏನಿದು ಘಟನೆ:

ಗುರುವಾರ ಸಂಜೆ ಬಾಲಕಿ ನಾಪತ್ತೆಯಾಗಿದ್ದು, ತಡರಾತ್ರಿಯಾದರೂ ಮನೆಗೆ ಬಾರದೆ ಇದ್ದಾಗ ಆಕೆಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿ ಹುಡುಕಾಟ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ತನ್ನ ಮನೆಯಿಂದ ಒಂದು ಕಿಲೋಮೀಟರ್ ದೂರದ ಕಾಡಿನಲ್ಲಿ ಆಕೆ ಪತ್ತೆಯಾಗಿದ್ದಳು.

ಈ ಕಾಡು ಮೈಹಾರ್ ಪಟ್ಟಣದಲ್ಲಿರುವ ಶಾರದಾ ದೇವಿಯ ದೇವಸ್ಥಾನಕ್ಕೆ ಸಮೀಪದಲ್ಲಿದೆ, ಇಲ್ಲಿಗೆ ದೇಶದಾದ್ಯಂತ ಯಾತ್ರಾರ್ಥಿಗಳ ಬರುತ್ತಾರೆ.

”ಬಾಲಕಿ ಪತ್ತೆಯಾಗಿರುವ ಬಗ್ಗೆ ಇಂದು ಬೆಳಗ್ಗೆ ನಮಗೆ ಮಾಹಿತಿ ಲಭಿಸಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ನಮ್ಮ ತನಿಖೆಯಿಂದ ದೃಢಪಟ್ಟಿದೆ. ಇಬ್ಬರು ಶಂಕಿತರನ್ನು ಬಂಧಿಸಿ ಪೊಲೀಸರ ವಶದಲ್ಲಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಬಾಲಕಿಯನ್ನು ರೇವಾ ವೈದ್ಯಕೀಯ ಕಾಲೇಜಿಗೆ ಶಿಫಾರಸು ಮಾಡಲಾಗಿದೆ” ಎಂದು ಮೈಹಾರ್ ಉಪವಿಭಾಗದ ಪೊಲೀಸ್ ಅಧಿಕಾರಿ ಲೋಕೇಶ್ ದಬರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...