Homeಮುಖಪುಟಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

- Advertisement -
- Advertisement -

ಮಣಿಪುರದಲ್ಲಿ ಮೇ 4 ರಂದು ಇಬ್ಬರು ಬುಡುಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ಕುರಿತು ಶಿವಸೇನ (ಯುಬಿಟಿ) ಮುಖ್ಯಸ್ಥ ಉದ್ಭವ್ ಠಾಕ್ರೆ ಶನಿವಾರ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಥಾಣೆ ನಗರದಲ್ಲಿ ಉತ್ತರ ಭಾರತೀಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ ಮಣಿಪುರದಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದಾಗ ದೆಹಲಿಯಲ್ಲಿ ಅಧಿಕಾರದಲ್ಲಿರುವವರು (ಕೇಂದ್ರ ಸರ್ಕಾರ) ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿ ಮಹಾಭಾರತದ ಧೃತರಾಷ್ಟ್ರನಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಇಂತಹ ಹಲವಾರು ಘಟನೆಗಳು ನಡೆದಿವೆ. ಇದಕ್ಕೆ ಮುಖ್ಯಮಂತ್ರಿಗಳ ಆಡಳಿತ ವ್ಯಫಲ್ಯವೇ ಕಾರಣ ಎಂದು ಎನ್ ಬಿರೇನ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡರು.

ರಾಷ್ಟ್ರ ಪತಿ ದೌಪದಿ ಮುರ್ಮು ಕೂಡ ಒಬ್ಬ ಬುಡಕಟ್ಟು ಮಹಿಳೆ, ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ನೀವು ಏನು ಮಾಡುತ್ತಿದ್ದೀರಿ? ನಿಮಗೆ ಯಾವುದೇ ಸೂಕ್ಷ್ಮತೆ ಇಲ್ಲವೇ? ಎಂದು ಠಾಕ್ರೆ ಪ್ರಶ್ನಿಸಿದರು. ಮಣಿಪುರ ಗವರ್ನರ್ ಅನುಸೂಯಾ ಉಯಿಕ ಜೊಡ ಒಬ್ಬ ಮಹಿಳೆ, ಅವರು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ ಉದ್ಭವ್ ಠಾಕ್ರೆ ನಿಮಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.

ಹಿಂದೂ ಮಹಾಕಾವ್ಯ ಮಹಾಭಾರತದ ರಾಜ ಧೃತರಾಷ್ಟ್ರನಂತೆ ಬಿಜೆಪಿ ಸರ್ಕಾರ ಕುರುಡಾಗಿದೆ ಎಂದು ಹೇಳಿದರು.

”ಮಣಿಪುರ ಹೊತ್ತಿಯುರಿಯುತ್ತಿದೆ ಆ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ? ಮಹಾಭಾರತದಲ್ಲಿ ಧೃತರಾಷ್ಟ್ರನ ಮುಂದೆ ದ್ರೌಪದಿಯ ವಸ್ತ್ರಾಪಹರಣ ಮಾಡಲಾಯಿತು ಆದರೆ ಅವನು ಕುರುಡನಾಗಿದ್ದರಿಂದ ಅವನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅವರಂತೆಯೇ ಬಿಜೆಪಿ ನೇತೃತ್ವದ ಸರ್ಕಾರವೂ ಕುರುಡಾಗಿದೆ” ಎಂದು  ಠಾಕ್ರೆ ಗುಡುಗಿದರು.

”ಒಂದು ವೀಡಿಯೊದಿಂದ ನಾವು ಆ ಇಬ್ಬರು ಮಹಿಳೆಯರ ಬಗ್ಗೆ ತಿಳಿದುಕೊಂಡಿದ್ದೇವೆ ಆದರೆ ಮಣಿಪುರದಲ್ಲಿ ಇಂತಹ ಘಟನೆಗಳು ಸಾಕಷ್ಟು ನಡೆಯುತ್ತವೆ” ಎಂದು ಮಣಿಪುರದ ಮುಖ್ಯಮಂತ್ರಿ ಹೇಳಿದರು… ಇದು ನಾಚಿಕೆಗೇಡಿನ ಸಂಗತಿ!” ಎಂದು ಠಾಕ್ರೆ ಕಿಡಿಕಾರಿದರು.

”ಶ್ರೀಕೃಷ್ಣನು ದ್ರೌಪದಿಯನ್ನು ವಸ್ತ್ರಾಪಹರಣದಿಂದ ರಕ್ಷಿಸಲು ಬಂದಿದ್ದನು, ಆದರೆ ಇಂದು ಮಹಿಳೆಯರನ್ನು ರಕ್ಷಿಸಲು ಯಾರೂ ಬರುವುದಿಲ್ಲ.” ನಂತರ ಪುಷ್ಯಮಿತ್ರ ಉಪಾಧ್ಯಾಯ ಅವರ ಸುನೋ ದ್ರೌಪದಿ ಶಾಸ್ತ್ರ ಉತಾ ಲೋ (ದ್ರೌಪದಿಯನ್ನು ಆಲಿಸಿ, ನಿಮ್ಮನ್ನು ತೋಳು ಮಾಡಿಕೊಳ್ಳಿ) ಎಂಬ ಕವಿತೆಯನ್ನು ಠಾಕ್ರೆ ಉಲ್ಲೇಖಿಸಿದರು.

”ಪ್ರಧಾನಿಗೆ ಮಣಿಪುರಿಗಳ ಬಗ್ಗೆ ಕಾಳಜಿಯಿಲ್ಲ, ಆದರೆ ರಾಮಮಂದಿರ ನಿರ್ಮಾಣದ ಬಗ್ಗೆ ಮಾತ್ರ ಕಾಳಜಿ ಇದೆ. ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಸುಪ್ರೀಂ ಕೋರ್ಟ್‌ನ ಆದೇಶದಿಂದ ಹೊರತು ಅವರಿಂದ ಅಲ್ಲ ಎಂಬುದನ್ನು ಅವರು ಅರಿತುಕೊಳ್ಳಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು.

ವಿರೋಧ ಪಕ್ಷಗಳ ಒಕ್ಕೂಟವನ್ನು ಭಯೋತ್ಪಾದಕ ಸಂಘಟನೆಯೊಂದಿಗೆ ಹೋಲಿಸಿದ ಪ್ರಧಾನಿ ವಿರುದ್ಧ ಹರಿಹಾಯ್ದ ಠಾಕ್ರೆ, ”ಪ್ರಧಾನಿ ಅವರು INDIA [ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ]ಅನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯಲ್ಲೂ INDIA ಇದೆ ಎಂದು ಹೇಳಿದರು. ಭ್ರಷ್ಟಾಚಾರದ ಆರೋಪ ಹೊತ್ತಿರುವವರ ಜೊತೆ ಕೈಜೋಡಿಸಿರುವುದು ನಿಮ್ಮದೆಂತಹ ಹಿಂದುತ್ವ. ನಾನು ಅವರಿಗೆ ನೆನಪಿಸಲು ಬಯಸುತ್ತೇನೆ, ನೀವು ವಿದೇಶಕ್ಕೆ ಹೋದಾಗ, ನೀವು ನಮ್ಮ ಭಾರತವನ್ನು ಪ್ರತಿನಿಧಿಸುತ್ತೀರಿ, ಇಂಡಿಯನ್ ಮುಜಾಹಿದೀನ್ ಅಲ್ಲ” ಎಂದು ತಿವಿದಿದ್ದಾರೆ.

ಇದನ್ನೂ ಓದಿ: ಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...