HomeಮುಖಪುಟINDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

- Advertisement -
- Advertisement -

ವಿರೋಧ ಪಕ್ಷದ INDIA ಒಕ್ಕೂಟದ ನಿಯೋಗವು ಕಲಹ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ ಹಿಂತಿರುಗಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು ಸೋಮವಾರ ಶ್ಲಾಘಿಸಿದ್ದಾರೆ.

ಮಣಿಪುರದ ಪರಿಸ್ಥಿತಿ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದ ಮುಂದಿನ ಕಾರ್ಯತಂತ್ರದ ಕುರಿತು 21 ಸಂಸದ ನಿಯೋಗವು ಉಳಿದ ಪ್ರತಿಪಕ್ಷಗಳ ಸದಸ್ಯರಿಗೆ ವಿವರಿಸಲು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದರು.

ಈ ಸಭೆಯ ಬಳಿಕ ಮಣಿಪುರದ ಬಗ್ಗೆ ಪ್ರತಿಪಕ್ಷಗಳ ಮುಂದಿನ ನಡೆಯ ಬಗ್ಗೆ ನಿಯೋಗ ತಿಳಿಸಲಿದೆ ಎಂದು ಚಾಡಾ ಹೇಳಿದರು. ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ INDIAದ ನಿಯೋಗ ಮರಳಿದೆ. ಇಂದು, ಸಂಸದರು ಸಭೆಯಲ್ಲಿ ಮಣಿಪುರದ ಪರಿಸ್ಥಿತಿಯನ್ನು ವಿವರಿಸುತ್ತಾರೆ, ನಂತರ ನಾವು ಈ ನಿಟ್ಟಿನಲ್ಲಿ ನಮ್ಮ ಮುಂದಿನ ನಡೆಯ ಬಗ್ಗೆ ನಿಮಗೆ ತಿಳಿಸುತ್ತೇವೆ…” ಎಂದು ಹೇಳಿದರು.

ಮೇ 3ರಿಂದ ಭಾರೀ ಹಿಂಸಾಚಾರದಿಂದ ಈಶಾನ್ಯ ರಾಜ್ಯ ಮಣಿಪುರ ನಲುಗಿಹೋಗಿದೆ. ಅಲ್ಲಿಯ ಪರಿಸ್ಥಿತಿಯನ್ನು ತಿಳಿಯಲು ವಿರೋಧಪಕ್ಷಗಳ INDIA ನೀಯೋಗ ಶನಿವಾರ ಹಾಗೂ ಭಾನುವಾರ ಮಣಿಪುರಕ್ಕೆ ಭೇಟಿ ನೀಡಿದ್ದರು.

ಮಣಿಪುರ ಚರ್ಚೆಗೆ ವಿಪಕ್ಷಗಳ ಪಟ್ಟು; ಉಭಯ ಸದನಗಳ ಕಲಾಪ ಮುಂದೂಡಿಕೆ

ಮಾನ್ಸೂನ್ ಅಧಿವೇಶನದಲ್ಲಿ ಎರಡು ಪ್ರಮುಖ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ. ಸರ್ಕಾರವು ದೆಹಲಿ ಸೇವೆಗಳ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ಒಕ್ಕೂಟ INDIAದಿಂದ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಹಾಗಾಗಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಪ್ರತಿಪಕ್ಷಗಳು ಮಂಡಿಸಿವೆ. ಕೇಂದ್ರ ಮತ್ತು ಈಶಾನ್ಯ ರಾಜ್ಯಗಳೆರಡರಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಆದಾಗ್ಯೂ, ಸರ್ಕಾರವು ಬಹುಮತ ಹೊಂದಿರುವುದರಿಂದ ವಿಪಕ್ಷಗಳು ಸೋಲನುಭವಿಸಲಿದೆ. ಮತ್ತೊಂದೆಡೆ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ತಮ್ಮ ಮೌನವನ್ನು ಮುರಿಯುವಂತೆ ಮಾಡಲು ಪ್ರಧಾನಿ ಮೋದಿಯನ್ನು ಒತ್ತಾಯಿಸಲು ಬಯಸುತ್ತವೆ.

ಮಣಿಪುರ ವಿಚಾರದ ಕುರಿತು ಚರ್ಚೆ ನಡೆಸಲು ಪ್ರತಿಪಕ್ಷಗಳುಯ ಪಟ್ಟು ಹಿಡಿದ ಕಾರಣಕ್ಕೆ ಉಭಯ ಸದನ ಕಲಾಪವನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಂಜೀತ್ ರಂಜನ್, ”ನಾವು ಮಣಿಪುರದ ಬಗ್ಗೆ ಚರ್ಚೆಯನ್ನು ಬಯಸುತ್ತಿದ್ದೇವೆ…ಇಂದು ಲೋಕಸಭೆಯಲ್ಲಿ ಚರ್ಚೆ ಆಗಬೇಕು…” ಎಂದು ಹೇಳಿದ್ದಾರೆ.

”ನಾವು ಈ ಅಧಿವೇಶನದ ಆರಂಭದಿಂದಲೂ ಸಂಸತ್ತಿನಲ್ಲಿ ಮಣಿಪುರ (ಸಮಸ್ಯೆ) ಕುರಿತು ಚರ್ಚೆ ನಡೆಸುತ್ತಿದ್ದೇವೆ. ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರತಿಪಕ್ಷಗಳ ಮೈತ್ರಿಕೂಟದ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಂಜೀತ್ ರಂಜನ್ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಸಂಘರ್ಷ ಪರಿಹರಿಸದಿದ್ರೆ ದೇಶದ ಭದ್ರತೆಗೂ ಸಮಸ್ಯೆ ಆಗಲಿದೆ: ಅಧೀರ್ ಚೌಧರಿ ಎಚ್ಚರಿಕೆ

ದೆಹಲಿ ಆಡಳಿತ ಸೇವಾ ಮಸೂದೆ:

ದೆಹಲಿಯಲ್ಲಿನ ಆಡಳಿತ ಸೇವೆಗಳ ನಿಯಂತ್ರಣದ ಕುರಿತು ಮಸೂದೆಯನ್ನು ಮಂಡನೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಸಂಸದರು ಕಿಡಿಕಾರಿದರು.

ಸುಗ್ರೀವಾಜ್ಞೆಯನ್ನು ಪ್ರಜಾಸತ್ತಾತ್ಮಕವಲ್ಲ ಎಂದು ಕರೆದ ಚಡ್ಡಾ, ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ನಾಶಮಾಡಲು ಇದು ಬಿಜೆಪಿಯ ತಂತ್ರವಾಗಿದೆ ಎಂದು ಹೇಳಿದರು.

”ಈ ಮಸೂದೆ ಕೇವಲ ದೇಶದ ಸಂವಿಧಾನದ ವಿರುದ್ಧ ಮಾತ್ರವಲ್ಲದೆ ದೆಹಲಿಯ 2 ಕೋಟಿ ಜನರ ವಿರುದ್ಧವೂ ಆಗಿದೆ. ದೆಹಲಿಯ ಜನರು ಅವರನ್ನು ಧಿಕ್ಕರಿಸಿ, ಎಎಪಿಗೆ ಬೆಂಬಲಿಸಿದ್ದಾರೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಇದೀಗ ದೆಹಲಿ ಸರ್ಕಾರವನ್ನು ನಾಶಮಾಡಲು ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಅವರು ಹೇಳಿದರು.

”ಆಗಸ್ಟ್ 4ರವರೆಗೆ ಸದನದಲ್ಲಿ ಹಾಜರಿರಲು ರಾಜ್ಯಸಭೆಯಲ್ಲಿ ತನ್ನ ಎಲ್ಲಾ ಸಂಸದರಿಗೆ ಎಎಪಿ ಮೂರು ಸಾಲಿನ ವಿಪ್ ನೀಡಿದೆ. ಈ ಮಸೂದೆಯು ದೆಹಲಿ ಸರ್ಕಾರಕ್ಕೆ ವರ್ಗಾವಣೆ ಮತ್ತು ಪೋಸ್ಟಿಂಗ್ ಅಧಿಕಾರವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ಬದಲಿಸಲು ಪ್ರಯತ್ನಿಸುತ್ತದೆ.”

ಕೇಂದ್ರ ಸರ್ಕಾರವು ಉಭಯ ಸದನಗಳಲ್ಲಿ ಸಾಕಷ್ಟು ಸಂಖ್ಯಾಬಲ ಹೊಂದಿದ್ದರೂ ಮಸೂದೆ ಅಂಗೀಕಾರವನ್ನು ವಿರೋಧಿಸುವುದಾಗಿ I.N.D.I.A ಗುಂಪು ಈ ಹಿಂದೆ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...