Homeಮುಖಪುಟಚುನಾವಣೆ ಗೆಲ್ಲಲು ಬಿಜೆಪಿಯವರು 'ರಾಮ ಮಂದಿರದ ಮೇಲೆ ದಾಳಿ' ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ

ಚುನಾವಣೆ ಗೆಲ್ಲಲು ಬಿಜೆಪಿಯವರು ‘ರಾಮ ಮಂದಿರದ ಮೇಲೆ ದಾಳಿ’ ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಂಬರು ಲೋಕಸಭಾ ಚುನಾವಣೆ ಗೆಲ್ಲಲು ದೇಶದಲ್ಲಿ ಗಂಭಿರವಾದ ಅನಾಹುತ ಮಾಡಬಹುದು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜಕೀಯ ಲಾಭ ಪಡೆಯಲು ಬಿಜೆಪಿ ನಾಯಕರು ಯಾವುದೇ ಹಂತಕ್ಕೂ ಹೋಗಬಹುದು ಎಂದು ಒತ್ತಿ ಹೇಳಿದ್ದಾರೆ.

ನ್ಯೂಸ್‌ಕ್ಲಿಕ್‌ಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, ”ಪ್ರಧಾನಿ ಮೋದಿ ಅಪಾಯಕಾರಿ ವ್ಯಕ್ತಿಯಾಗಿದ್ದು, ರಾಜಕೀಯ ಲಾಭ ಪಡೆಯಲು ರಾಮ ಮಂದಿರದ ಮೇಲೆ ದಾಳಿ ನಡೆಸಲೂಬಹುದು ಅಥವಾ ಬಿಜೆಪಿಯ ಯಾವುದೇ ಪ್ರಭಾವಿ ನಾಯಕನನ್ನು ಕೊಲ್ಲಲೂಬಹುದು. ಅವರ ಅಂತಹ ಕೆಟ್ಟ ತಂತ್ರಗಳನ್ನು ಮಾಡುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ನಿರ್ದಯ ಚುನಾವಣಾ ತಂತ್ರಗಳನ್ನು ಪ್ರತಿಪಾದಿಸಿದ ಮಲಿಕ್, ”2019ರ ಪುಲ್ವಾಮಾ ದಾಳಿಯನ್ನು ಉಲ್ಲೇಖಿಸಿ, ಇಂತಹ ಘಟನೆಗಳನ್ನು ಉಂಟುಮಾಡುವವರು ರಾಜಕೀಯ ಉದ್ದೇಶಗಳನ್ನು ಸಾಧಿಸಲು ಇನ್ನೂ ಏನು ಬೇಕಾದರೂ ಮಾಡಬಹುದು” ಎಂದರು.

”ಪ್ರಧಾನಿ ಮೋದಿಗೆ ಹೇಗೆ ಆಡಳಿತ ನಡೆಸಬೇಕು ಮತ್ತು ಹೇಗೆ ನಿರ್ದಯವಾಗಿ ಆಡಳಿತ ನಡೆಸಬೇಕು ಎಂದು ತಿಳಿದಿದೆ. ಆದರೆ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಯಶಸ್ವಿಯಾಗುವುದಿಲ್ಲ ಹಾಗಾಗಿ ಅವರು ಈಗಲೇ ರಾಜೀನಾಮೆ ನೀಡುವುದು ಒಳ್ಳೆಯದು” ಎಂದು ಅವರು ಹೇಳಿದರು.

ಈ ಹಿಂದೆ ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, ಪುಲ್ವಾಮಾ ದಾಳಿಯ ಬಗ್ಗೆ ಪ್ರಧಾನಿ ಮೋದಿ ಅವರೇ ಮೌನವಾಗಿರಲು ಹೇಳಿದ್ದರು ಎಂದಿದ್ದರು. ಅಲ್ಲಿ ಅವರು ಸಿಆರ್‌ಪಿಎಫ್ ಬೆಂಗಾವಲು ಪಡೆಯನ್ನು ಸಾಗಿಸಲು ವಿಮಾನಗಳನ್ನು ಕೇಳಿದೆ ಆದರೆ ರಕ್ಷಣಾ ಸಚಿವಾಲಯ ನಿರಾಕರಿಸಿತ್ತು. ಅದರಿಂದಲೇ ಆ ಪುಲ್ವಾಮಾ ದುರಂತ ನಡೆಯಿತು ಎಂದು ಹೇಳಿದ್ದರು.

ಯೋಧರ ಪ್ರಾಣಹಾನಿಯಲ್ಲಿ ನಮ್ಮದೇ ತಪ್ಪು ಮತ್ತು ವಿಮಾನಗಳಿಗೆ ಅನುಮತಿ ನೀಡುವ ಮೂಲಕ ಆ ದಾಳಿಯನ್ನು ತಡೆಯಬಹುದಿತ್ತು ಎಂದು ಮೋದಿ ಅವರಿಗೆ ಹೇಳಿದ್ದೆ. ಆಗ ಪ್ರಧಾನಿ ಮೋದಿ ಅವರು, ದಾಳಿಗೆ ಕಾರಣವಾದ ಲೋಪಗಳ ಬಗ್ಗೆ ಮೌನವಾಗಿಸಿದರು. 2019ರಲ್ಲಿ ದಾಳಿ ನಡೆದಾಗ ಮಲಿಕ್ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದರು.

ಈ ಮಧ್ಯೆ ಮಲಿಕ್ ಅವರು ಮಣಿಪುರ ಹಿಂಸಾಚಾರವನ್ನು ಪ್ರಸ್ತಾಪಿಸಿದರು, ಸರ್ಕಾರವು ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಅವ್ಯವಸ್ಥೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು.

ಈ ಹೇಳಿಕೆಯ ಮೇಲೆ ಇಷ್ಟೊಂದು ವಿಶ್ವಾಸ ಹೊಂದಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದಾಗ, ಅದಕ್ಕೆ ಉತ್ತರವಾಗಿ ಮಲಿಕ್, ಹಿಂಸಾಚಾರದಲ್ಲಿ ಬಳಸುತ್ತಿರುವ ಅಸ್ತ್ರಗಳು ಜನಸಾಮಾನ್ಯರಿಗೆ ಸುಲಭವಾಗಿ ಕೈಗೆಟುಕುವುದಿಲ್ಲ ಎಂದರು.

ಇನ್ಸಾಸ್ ರೈಫಲ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿಲ್ಲ ಆದರೆ ಸರ್ಕಾರದ ಪದಾತಿ ದಳದಲ್ಲಿ ಲಭ್ಯವಿವೆ ಎಂದು ಅವರು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಮಣಿಪುರದಲ್ಲಿ ಜನಸಮೂಹವು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದೆ ಎಂಬ ಹೇಳಿಕೆಗಳನ್ನು ಅವರು ತಳ್ಳಿಹಾಕಿದರು.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...