Homeಕರ್ನಾಟಕಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ - ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಕಾಯ್ದೆ ಗಂಭೀರವಾಗಿದ್ದು ಅದರಂತೆ ಯಾರು ನಿರ್ಲಕ್ಷ್ಯ ಮಾಡುತ್ತಾರೆ, ಅವರ ವಿರುದ್ಧ ಕಾಯ್ದೆಯನ್ವಯ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ 2023-24ನೇ ಸಾಲಿನ 34,293.69 ಕೋಟಿ ರೂ. ಗಳ ಕ್ರಿಯಾ ಯೋಜನೆ ಅನುಮೋದನೆ ನಂತರ ಅವರು ಮಾತನಾಡಿದರು.

ಪ್ರತಿ ಇಲಾಖೆಯು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗಳ ಅನುಷ್ಠಾನದ ನಂತರ ಪರಿಣಾಮದ ಮೌಲ್ಯಮಾಪನ ವರದಿಯನ್ನೂ ಸಿದ್ಧಪಡಿಸಿ ಫಲಾನುಭವಿಗಳ ಸ್ಥಿತಿಗತಿಯಲ್ಲಿ ಆಗಿರುವ ಬದಲಾವಣೆ ಕುರಿತು ಮಾಹಿತಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.

ತಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಧಿನಿಯಮ 2013 ಮತ್ತು ನಿಯಮ 2017 ಅನ್ನು ಜಾರಿಗೆ ತರಲಾಗಿದೆ. ಇದರನ್ವಯ ಅಭಿವೃದ್ಧಿ ಯೋಜನೆಗಳಿಗೆ ಹಂಚಿಕೆ ಮಾಡಿರುವ ಅನುದಾನದ ಶೇ. 24.10 ರಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಒದಗಿಸಲಾಗುತ್ತಿದೆ. ಈ ಯೋಜನೆಯ ಅನುದಾನ ನೇರವಾಗಿ ಈ ಸಮುದಾಯಗಳಿಗೇ ತಲುಪಬೇಕು ಎಂಬ ಉದ್ದೇಶದಿಂದ ಕಾಯ್ದೆ ರೂಪಿಸಲಾಗಿದೆ. ಆದ್ದರಿಂದ ಈ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ವರ್ಷದ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಒಟ್ಟು 34,221.49 ಕೋಟಿ ರೂ ಮೀಸಲಿಡಲಾಗಿದೆ. ಜೊತೆಗೆ ಹಿಂದಿನ ವರ್ಷ ಬಳಕೆಯಾಗದ ಮೊತ್ತ 72.20 ಕೋಟಿ ರೂ. ಸೇರಿಸಿ, 34,293.69 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ಇದರಲ್ಲಿ ಶೇ. 84 ರಾಜಸ್ವ ಹಾಗೂ ಶೇ. 16 ಬಂಡವಾಳ ಮೇಲಣ ವೆಚ್ಚವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು..

2023-24 ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ 5790.67 ಕೋಟಿ ರೂ., ಇಂಧನ ಇಲಾಖೆಗೆ 5400.98 ಕೋಟಿ ರೂ., ಕಂದಾಯ ಇಲಾಖೆಗೆ 4041.78 ಕೋಟಿ ರೂ., ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 3787.29 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 2779.97 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಲಾಖೆಗೆ 2349.85 ಕೋಟಿ ರೂ., ವಸತಿ ಇಲಾಖೆಗೆ 1431.5 ಕೋಟಿ ರೂ., ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ 1387.35 ಕೋಟಿ ರೂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ 1296.96 ಕೋಟಿ ರೂ., ಆರೋಗ್ಯ ಇಲಾಖೆಗೆ 1122.25 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಮುಂದುವರೆದ ಯೋಜನೆಗಳಿಗೆ 1897 ಕೋಟಿ ರೂ. ಈವರೆಗೆ ವೆಚ್ಚ ಮಾಡಲಾಗಿದೆ. ಮುಂದಿನ ಎಂಟು ತಿಂಗಳಲ್ಲಿ ಇಂದು ಅನುಮೋದಿಸಲಾದ ಕ್ರಿಯಾ ಯೋಜನೆಯನ್ವಯ ಯೋಜನೆ ಅನುಷ್ಠಾನ ಮಾಡಿ, 34293.69 ಕೋಟಿ ರೂ. ಅನುದಾನ ಸಂಪೂರ್ಣ ವೆಚ್ಚ ಮಾಡಬೇಕು ಎಂದು ಸೂಚಿಸಲಾಯಿತು.

ಅನುದಾನದ ಸಂಪೂರ್ಣ ಸದ್ಬಳಕೆಗಾಗಿ ಅನುಮೋದಿಸಿದ ಕ್ರಿಯಾ ಯೋಜನೆಯಂತೆ ಅನುಷ್ಠಾನಗೊಳಿಸಲಾಗುವುದು. ಸಂಬಂಧಿಸಿದ ಇಲಾಖೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಅನುದಾನ ಉಳಿದರೆ, ಅದರ ಮರು ಹಂಚಿಕೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪರಿಶಿಷ್ಟ ಜಾತಿ, ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ ಸೌಲಭ್ಯ ಕಲ್ಪಿಸಬೇಕು. ಯಾವುದೇ ಕಾರಣಕ್ಕೆ ದಲಿತರ ಮಕ್ಕಳು ಶಾಲಾ-ಕಾಲೇಜು ತೊರೆಯಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸದಸ್ಯರಾದ ಸಚಿವರುಗಳಾದ ನಾಗೇಂದ್ರ, ಹೆಚ್‌.ಕೆ. ಪಾಟೀಲ್‌, ಪ್ರಿಯಾಂಕ್‌ ಖರ್ಗೆ, ಎಂ.ಸಿ. ಸುಧಾಕರ್‌, ರಾಜ್ಯ ಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಪ್ರಸಾದ ಅಬ್ಬಯ್ಯ, ಇ. ತುಕಾರಾಂ, ಪ್ರಕಾಶ ರಾಥೋಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್ 7D ರದ್ದು, 4,079 ಕೋಟಿ ರೂ ಹೆಚ್ಚುವರಿ ಅನುದಾನ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...