Homeಮುಖಪುಟರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

ರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

- Advertisement -
- Advertisement -

ರೈಲ್ವೇ ಸಂರಕ್ಷಣಾ ಪಡೆಯ ಕಾನ್‌ಸ್ಟೆಬಲ್‌ ಚೇತನ್ ಸಿಂಗ್ ಎನ್ನುವವರು ಮೂವರು ಮುಸ್ಲಿಂ ಪ್ರಯಾಣಿಕರ ಮೇಲೆ ಗುಂಡಿನ ದಾಳಿ ನಡೆಸಿದ ಕುರಿತು ಪತ್ರಕರ್ತೆ ರಾಣಾ ಅಯ್ಯೂಬ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಾಡಿದ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರದ ಬೇಡಿಕೆಯ ಮೇರೆಗೆ ತೆಗೆದುಹಾಕಲಾಗಿದೆ.

ಸೋಮವಾರ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಎಫ್‌ಪಿ) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಎನ್ನುವ ವ್ಯಕ್ತಿ ಆರ್‌ಪಿಎಫ್ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಟಿಕಾ ರಾಮ್ ಮೀನಾ ಸೇರಿದಂತೆ ನಾಲ್ವರನ್ನು ಕೊಂದ ಭೀಕರ ಘಟನೆ ನಡೆದಿದೆ.

ಚೇತನ್ ಸಿಂಗ್ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಬೆಳಗ್ಗೆ 5 ಗಂಟೆಗೆ ತನ್ನ ಆಟೊಮ್ಯಾಟಿಕ್ ಗನ್‌ನಿಂದ ಆರ್‌ಪಿಎಫ್‌ನ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಟಿಕಾ ರಾಮ್ ಮೀನಾ (58), ಮೂವರು ಪ್ರಯಾಣಿಕರಾದ ಅಬ್ದುಲ್ ಖಾದಿರ್ ಭಾಯ್ ಮುಹಮ್ಮದ್ ಹುಸೈನ್ ಭಾನುಪುರ್ವಾಲ (62), ಅಖ್ತರ್ ಅಬ್ಬಾಸ್ ಅಲಿ (48) ಹಾಗೂ ಸದಾರ್ ಮುಹಮ್ಮದ್ ಹುಸೈನ್ (48) ಅವರನ್ನು ಹತ್ಯೆಗೈದಿದ್ದರು.

ಘಟನೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ ಚೇತನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಪ್ರಶಂಸಿಸುತ್ತಿರುವುದು ಕೇಳಿ ಬಂದಿದೆ.

”ಅವರು (ಮುಸ್ಲಿಮರು) ಪಾಕಿಸ್ತಾನದ ಪರವಾಗಿ ಕಾರ್ಯನಿರ್ವಹಿಸುತ್ತಾರೆ. ಇದನ್ನೇ ಮಾಧ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ” ಎಂದು ಸಿಂಗ್ ಹೇಳಿರುವುದು ಕೂಡ ವೀಡಿಯೊದಲ್ಲಿ ಕೇಳಿ ಬಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕ್ರೇನ್ ಅವಘಡ: 18 ಜನರ ಸಾವು

ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿದೆ. ಈ ಉನ್ನತ ಮಟ್ಟದ ಸಮಿತಿ ಮಂಗಳವಾರ ಮುಂಬೈಗೆ ತಲುಪಿದೆ ಹಾಗೂ ತನಿಖೆ ಆರಂಭಿಸಿದೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಮಾಡಲಾಗಿದೆ. ಅಯ್ಯೂಬ್ ಮತ್ತು ಒವೈಸಿ ಅವರು ತಮ್ಮ ಟ್ವೀಟ್‌ಗಳಲ್ಲಿ “ಮುಸ್ಲಿಂ ವಿರೋಧಿ ದ್ವೇಷದ ಭಾಷಣ” ಕ್ಕೆ ನರೇಂದ್ರ ಮೋದಿ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

”ಭಾರತ ಸರ್ಕಾರದ ಬೇಡಿಕೆಗೆ ಪ್ರತಿಕ್ರಿಯೆಯಾಗಿ ರೈಲು ಘಟನೆಯ ಕುರಿತು ನನ್ನ ಟ್ವೀಟ್ ಅನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಈ ಬಗ್ಗೆ ತಿಳಿಸಲು ಟ್ವಿಟರ್ ನನಗೆ ಪತ್ರ ಬರೆದಿದೆ. ಪ್ರಜಾಪ್ರಭುತ್ವದ ಮಾತೇ ಇಷ್ಟು” ಎಂದು ಆಯ್ಯೂಬ್ ಟ್ವೀಟ್ ಮಾಡಿದ್ದಾರೆ.

”#JaipurExpressTerrorAttack ಕುರಿತ ನನ್ನ ಟ್ವೀಟ್ ಅನ್ನು ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಭಾರತದಲ್ಲಿ ತಡೆಹಿಡಿಯಲಾಗಿದೆ. ಇದು ಯಾವ ಕಾನೂನನ್ನು ಉಲ್ಲಂಘಿಸಿದೆ? ಭಯೋತ್ಪಾದಕ ದಾಳಿಯನ್ನು ಭಯೋತ್ಪಾದಕ ದಾಳಿ ಎಂದು ಕರೆಯುವುದು ಅಪರಾಧವೇ? ಮುಸ್ಲಿಮರ ವಿರುದ್ಧದ ದ್ವೇಷದ ಅಪರಾಧಗಳನ್ನು ತಡೆಗಟ್ಟುವಲ್ಲಿ ಮೋದಿ ಸರ್ಕಾರವು ಈ ಪೂರ್ವಭಾವಿಯಾಗಿದೆ ಎಂದು ಹಾರೈಸುತ್ತೇನೆ” ಎಂದು ಒವೈಸಿ ಪ್ರಶ್ನೆ ಮಾಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 69A ಅಡಿಯಲ್ಲಿ ಭಾರತದಲ್ಲಿ ವೀಡಿಯೊವನ್ನು ತೆಗೆದುಹಾಕಲು ಕೇಂದ್ರವು Twitter ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...