Homeಮುಖಪುಟಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

- Advertisement -
- Advertisement -

ಸೋಮವಾರ ಹರಿಯಾಣ ರಾಜ್ಯದ ಮುಸ್ಲಿಂ ಪ್ರಾಬಲ್ಯದ ನುಹ್ ಜಿಲ್ಲೆಯಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವಿನ ಘರ್ಷಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಪ್ರದೇಶದಲ್ಲಿ ಆರಂಭವಾದ ಹಿಂಸಾಚಾರ ಮುಂದುವರೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತಾದ ಪೋಸ್ಟ್‌ಗಳು ಹರಿದಾಡುತ್ತಿರುವುದು ಹಿಂಸಾಚಾರದ ಪ್ರಚೋದನೆಗೆ ಕಾರಣವಾಗಿದೆ.

ಹರಿಯಾಣದಲ್ಲಿ ಭುಗಿಲೆದ್ದಿರುವ ಕೋಮುಗಲಭೆ ದೆಹಲಿಗೂ ವ್ಯಾಪಿಸುವ ಭೀತಿ ಎದುರಾಗಿದೆ. ಗುರುಗ್ರಾಮದ ಸಕ್ಕರೆ 70ರಲ್ಲಿ ಹಲವು ಅಂಗಡಿ ಹಾಗೂ ಗುಡಿಸಲುಗಳಿಗೆ ಬೆಂಕಿ ಹಚ್ಚಲಾಗಿದೆ ಗಲಭೆ ನಿಯಂತ್ರಿಸಲು ಪೆಟ್ರೋಲ್ ಹಾಗೂ ಡೀಸೆಲ್ ಚಿಲ್ಲರೆ ಮಾರಾಟವನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಹರಿಯಾಣದ ನೂಹ್ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮೆರವಣಿಗೆ ವೇಳೆ ಸೋಮವಾರ ಪ್ರಾರಂಭವಾದ ಘರ್ಷಣೆಯು ಮಂಗಳವಾರ ಹೊತ್ತಿಗೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತು. ಗುರುಗ್ರಾಮದ ಸೆಕ್ಕರ್ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಸಿಟ್ಟರು ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.

ಹರಿಯಾಣದ ಕೋಮು ಸಂಘರ್ಷದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಬೆಂಬಲಿಗರು ಹರ್ಯಾಣದಲ್ಲಿ ನಡೆದ ಕೋಮು ಹಿಂಸಾಚಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರಣ, ಯಾವುದೇ ಹಿಂಸಾಚಾರ ಉಲ್ಬಣಗೊಳ್ಳುವುದನ್ನು ತಡೆಯಲು ಪ್ರತಿಭಟನೆಗಳ ಬಿಗಿ ಭದ್ರತೆ ಮತ್ತು ಸಿಸಿಟಿವಿ ಕಣ್ಗಾವಲು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ.

ಈ ಪ್ರತಿಭಟನೆಗಳಲ್ಲಿ ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಅರೆಸೇನಾ ಪಡೆಗಳ ಸಿಬ್ಬಂದಿ ಸೇರಿದಂತೆ ಸಾಕಷ್ಟು ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

”ದಯವಿಟ್ಟು ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಖಚಿತಪಡಿಸಿಕೊಳ್ಳಿ. ಸಿಸಿಟಿವಿಗಳನ್ನು ನಿಯೋಜಿಸಿ ಇದರಿಂದ ಎಲ್ಲವೂ ರೆಕಾರ್ಡ್ ಆಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಮನೆಯಿಂದಲೇ ಕೆಲಸ ಮಾಡುವಂತೆ ಬಹುರಾಷ್ಟ್ರೀಯ ಕಂಪನಿ ಅಮೆರಿಕನ್ ಎಕ್ಸ್‌ಪ್ರೆಸ್ ಹಾಗೂ ಕೆಪಿಎಂಜಿ ತನ್ನ ಉದ್ಯೋಗಿಗಳಿಗೆ ತಿಳಿಸಿದೆ. ಗುರುಗ್ರಾಮದ ಗಡಿ ಪ್ರದೇಶದ ಸೊಕ್ಕಾದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ದೊಡ್ ಮೂಲಕ ಸಲಕ, ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ:

ಕಳೆದ ವರ್ಷ ಇಬ್ಬರು ಮುಸ್ಲಿಂ ಜಾನುವಾರು ವ್ಯಾಪಾರಿಗಳ ಹತ್ಯೆಯ ಆರೋಪಿ ಸ್ವಯಂಘೋಷಿತ ‘ಗೋ ರಕ್ಷಕ’ ಅಥವಾ ಗೋರಕ್ಷಕ ಮೋನು ಮಾನೇಸರ್ ಎನ್ನುವವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊ ಪ್ರಸ್ತುತ ನಡೆಯುತ್ತಿರುವ ಘರ್ಷಣೆಗಳಿಗೆ ಭಾಗಶಃ ಕಾರಣವಾಗಿವೆ. ಮನೇಸರ್ ಅವರ ವೀಡಿಯೊದಲ್ಲಿ ಅವರು ಈ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶವನ್ನು ಘೋಷಿಸಿದರು ಮತ್ತು ಇತರರನ್ನು ತನ್ನೊಂದಿಗೆ ಸೇರುವಂತೆ ಕರೆ ಕೊಟ್ಟಿದ್ದಾರೆ. ಇದು ಮುಸ್ಲಿಂ ಸಮುದಾಯವನ್ನು ಕೆರಳಿಸಿತು, ಕೆಲವರು ಮನೇಸರ್‌ಗೆ ಪ್ರತಿಯಾಗಿ ಸವಾಲು ಮತ್ತು ಬೆದರಿಕೆ ಹಾಕಿದರು.

ಮಾನೇಸರ್ ಅಂತಿಮವಾಗಿ ಕಾರ್ಯಕ್ರಮಕ್ಕೆ ಹಾಜರಾಗದಿದ್ದರೂ, ಅವರ ಪೋಸ್ಟ್ ಮಾತ್ರ ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ.

ಈ ಬಗ್ಗೆ ನುಹ್‌ನ ಶಾಸಕ ಚೌಧರಿ ಅಫ್ತಾಬ್ ಅಹ್ಮದ್ ಎನ್‌ಡಿಟಿವಿ ಜೊತೆ ಮಾತನಾಡಿದ್ದು, ”ಇದು ಆಡಳಿತದ ವೈಫಲ್ಯ. ವಾತಾವರಣವು ಉದ್ವಿಗ್ನಗೊಳ್ಳುವ ಮೊದಲು ನಾವು ಅಧಿಕಾರಿಗಳ ಬಳಿಗೆ ಹೋಗಿ ಅದು ಉಲ್ಬಣಗೊಳ್ಳುವ ಮೊದಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಸೂಕ್ತ ಸಮಯದಲ್ಲಿ  ಕ್ರಮ ಕೈಗೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಮೋನು ಮನೇಸರ್ ಇಲ್ಲಿದ್ದಾರೆ ಎಂಬ ವದಂತಿಯೂ ಇದಕ್ಕೆ ಸೇರಿದೆ.

ನುಹ್ ಮತ್ತು ಗುರುಗ್ರಾಮ್ ಎರಡರಲ್ಲೂ ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮಂಗಳವಾರ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ, ಶಾಂತವಾಗಿರುವಂತೆ ಮನವಿ ಮಾಡಿದರು. ಆದರೆ ಗುರುಗ್ರಾಮ್ ಅಶಾಂತಿಯ ಪರಿಸ್ಥಿತಿ ಮುಂದುವರೆದಿದೆ. ಕೋಮು ಗುಂಪುಗಳು ಬೀದಿಗಳಿದಿವೆ, ಸ್ಕ್ರ್ಯಾಪ್ ಅಂಗಡಿಗಳಿಗೆ ಬೆಂಕಿ ಹಚ್ಚಿವೆ ಮತ್ತು ಸಣ್ಣ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ.

ಹರಿಯಾಣದ ನೂಹ್ ಜಿಲ್ಲೆಯಲ್ಲಿ ಸೋಮವಾರ ಪ್ರಾರಂಭವಾದ ಘರ್ಷಣೆಯು ಮಂಗಳವಾರ ಹೊತ್ತಿಗೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತು. ಗುರುಗ್ರಾಮದ ಸೆಕ್ಕರ್ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಸಿಟ್ಟರು ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.

ಸೆಕ್ಸ‌ 57ರಲ್ಲಿರುವ ಅಂಜುಮನ್ ಮಸೀದಿಗೆ ಮಧ್ಯರಾತ್ರಿ ಗುಂಪು ತಲುಪಿದ್ದು, ಗುಂಪಿನಲ್ಲಿದ್ದವರು ಮಸೀದಿಗೆ ಬೆಂಕಿ ಹಚ್ಚಿದ್ದಾರೆ, ಗಲಭೆಯು ಬುಧವಾರ ಸೆಕ್ಕ‌ 70ರವರೆಗೂ ವ್ಯಾಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಗ್ರಹರಕ್ಷಕ ದಳದ ಇಬ್ಬರು ಸಿಬ್ಬಂದಿ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. 20 ಜನ ಗಾಯಗೊಂಡಿದ್ದಾರೆ. ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ. ಡಿಎಸ್‌ಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಬಗ್ಗೆ ಪೊಲೀಸರು ಏಕೆ ಕ್ರಮಕೈಗೊಳ್ಳಲಿಲ್ಲ, ಮೋನು ಮಾನೇಸರ್‌ನನ್ನು ಇನ್ನೂ ಏಕೆ ಪತ್ತೆ ಮಾಡಿ ಬಂಧಿಸಲಾಗಿಲ್ಲ, ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ನಿರೀಕ್ಷಿಸಲು ಏಕೆ ವಿಫಲರಾದರು ಎಂಬ ಪ್ರಶ್ನೆಗಳು ಕಾಡುತ್ತಿವೆ.

ಗಲಭೆಯಲ್ಲಿ ಗಾಯಗೊಂಡ ಭಜರಂಗದಳದ 6 ಜನ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಮತಪಟ್ಟಿದ್ದಾರೆ ಎಂದು ವಿಶ್ವ ಹಿಂದು ಪರಿಷತ್‌ ಹೇಳಿದೆ. ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ ತನ್ಮಾರ್ ಅವರು ಮಾಹಿತಿ ನೀಡಿ, ನೂಹನಲ್ಲಿ ಸೋಮವಾರ ನಡೆದ ಗಲಭೆಯಲ್ಲಿ ಭಜರಂಗದಳದ ಕಾರ್ಯಕರ್ತ ಪ್ರದೀಪ್ ಶರ್ಮಾ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿ ಗಾಯಗೊಳಿಸಿತ್ತು. ಅವರನ್ನು ದೆಹಲಿಯ ಸಪದರ್ರಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ವದಂತಿಗಳನ್ನು ನಾಗರಿಕರು ನಂಬದಂತೆ ಪೊಲೀಸರು ಕೋರಿದ್ದಾರೆ ದೆಹಲಿಯಲ್ಲಿ ಶಾಲಾ, ಕಾಲೇಜು ಹಾಗೂ ಕಚೇರಿಗಳು ಮುಚ್ಚಲಾಗಿವೆ ಎಂಬ ವದಂತಿ ಸುಳ್ಳು, ಎಲ್ಲವೂ ಎಂದಿನಂತೆಯೇ ಇದೆ’ ಎಂದು ಗುರುಗ್ರಾಮದ ಸಹಾಯಕ ಪೊಲೀಸ್ ಆಯುಕ್ತ ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...