Homeಮುಖಪುಟಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

ಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

- Advertisement -
- Advertisement -

ಹರಿಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಿಂದೂ ಧಾರ್ಮಿಕ ಮೆರವಣಿಗೆ ವೇಳೆ ಕತ್ತಿ ಮತ್ತು ಕೋಲುಗಳನ್ನು ಯಾರು ಒಯ್ಯುತ್ತಾರೆ ಎಂದು ಕೇಂದ್ರ ಸಚಿವ ಮತ್ತು ಗುರುಗ್ರಾಮ್ ಸಂಸದ ರಾವ್ ಇಂದರ್‌ಜಿತ್ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಈ ಹಿಂಸಾಚಾರದ ಬಗ್ಗೆ ಮಾತನಾಡಿರುವ ಅವರು, ಎರಡೂ ಕಡೆಯಿಂದ ಪ್ರಚೋದನೆ ನಡೆದಿರಬಹುದು. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಧಾರ್ಮಿಕ ಮೆರವಣಿಗೆಗಾಗಿ ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡಿದ್ದು ಯಾರು? ಇದು ತಪ್ಪು” ಎಂದು ಸಂಸದರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು ಮಧ್ಯಾಹ್ನ ಹರಿಯಾಣದ ನುಹ್‌ನಲ್ಲಿ ಸಂಭವಿಸಿದ ಕೋಮು ಉದ್ವಿಗ್ನತೆಯಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಹಿಂಸಾಚಾರ ಸೊಹ್ನಾ, ಪಲ್ವಾಲ್ ಮತ್ತು ಗುರುಗ್ರಾಮ್‌ ಹರಡಿತ್ತು. ನುಹ್‌ನಲ್ಲಿ ಹಿಂದೂ ರ್ಯಾಲಿ ಮೇಲೆ ಕಲ್ಲು ತೂರಾಟ ನಡೆಯಿತು. ಇದರ ಬೆನ್ನಲ್ಲೇ ಗುರುಗ್ರಾಮ್‌ನ ಮಸೀದಿಯ ಮೇಲೆ ದಾಳಿ ನಡೆದು, ಅಲ್ಲಿ ಇಮಾಮ್ ಹತ್ಯೆಗೊಳಗಾದರು.

ಈ ಹಿಂಸಾಚಾರಕ್ಕೆ ಗೋರಕ್ಷಕ ಮೋನು ಮಾನೇಸರ್ ಅವರ ವಿಡಿಯೊವೇ ಕಾರಣ ಎಂದು ಹೇಳಲಾಗಿದ್ದರೂ ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಮೆರವಣಿಗೆಗೆ ಆಯುಧಗಳನ್ನು ಕೊಟ್ಟವರು ಯಾರು? ಕತ್ತಿ ಅಥವಾ ಕೋಲುಗಳನ್ನು ಹೊತ್ತ ಮೆರವಣಿಗೆಗೆ ಯಾರು ಹೋಗುತ್ತಾರೆ? ಇದು ತಪ್ಪು. ಈ ಕಡೆಯಿಂದಲೂ ಪ್ರಚೋದನೆ ನಡೆದಿದೆ. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

”ಹಿಂಸಾಚಾರ ಪ್ರಾರಂಭವಾದ ದಿನ ಅಂದರೆ ಜುಲೈ 31 ರಂದು ಕೇಂದ್ರ ಸಚಿವರು ಈ ಬೆಳವಣಿಗೆಗಳು ದುರದೃಷ್ಟಕರ. 1947 ರಲ್ಲಿ, ಭಾರತ ಮತ್ತು ವಿಭಜನೆಯಾದಾಗ ಮತ್ತು ಪಾಕಿಸ್ತಾನವನ್ನು ರಚಿಸಿದಾಗ ಮೇವಾತ್‌ನಲ್ಲಿ ಶಾಂತಿ ನೆಲೆಸಿತ್ತು. ಗಲಭೆಗೆ ಕಾರಣರಾದವರನ್ನು ಬಿಡುವುದಿಲ್ಲ. ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಹರ್ಯಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಲಿದೆ” ಎಂದು ಸಂಸದರು ಹೇಳಿದ್ದಾರೆ.

ಕೇಂದ್ರ ಸಚಿವ ರಾವ್ ಇಂದರ್‌ಜಿತ್ ಸಿಂಗ್ ಅವರು ಇಂದು(ಬುಧವಾರ) ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನುಹ್‌ನಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಅವರು, ”ಎರಡೂ ಸಮುದಾಯಗಳು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ, ಅವರು ಆ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆದರು? ಅವರು ಅಂತಹ ವಾತಾವರಣವನ್ನು ಏಕೆ ಸೃಷ್ಟಿಸಿದರು? ಎಂಬುದು ವಿಚಾರಣೆಯ ವಿಷಯವಾಗಿದೆ. ಹರ್ಯಾಣ ಸರ್ಕಾರ ತನಿಖೆ ನಡೆಸುತ್ತದೆ” ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಮೋದಿ ಸರ್ಕಾರದ ಸಚಿವರ ಹೇಳಿಕೆಯ ಹೊರತಾಗಿಯೂ, ಕ್ರಮವು ಏಕಪಕ್ಷೀಯವಾಗಿರುತ್ತದೆ. ಬಂದೂಕು ಹಿಡಿದು ತಿರುಗಾಡುವ, ಅಮಾಯಕರ ಜೀವ ಮತ್ತು ಆಸ್ತಿಗೆ ಹಾನಿ ಮಾಡುವವರನ್ನು ‘ಹೃದಯ ಸಾಮ್ರಾಟ್’ ಎಂದು ಕರೆದು ಮಹಾಪಂಚಾಯತ್‌ನಲ್ಲಿ ಸನ್ಮಾನಿಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...