Homeಮುಖಪುಟಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

ಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

- Advertisement -
- Advertisement -

ಹರಿಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಿಂದೂ ಧಾರ್ಮಿಕ ಮೆರವಣಿಗೆ ವೇಳೆ ಕತ್ತಿ ಮತ್ತು ಕೋಲುಗಳನ್ನು ಯಾರು ಒಯ್ಯುತ್ತಾರೆ ಎಂದು ಕೇಂದ್ರ ಸಚಿವ ಮತ್ತು ಗುರುಗ್ರಾಮ್ ಸಂಸದ ರಾವ್ ಇಂದರ್‌ಜಿತ್ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಈ ಹಿಂಸಾಚಾರದ ಬಗ್ಗೆ ಮಾತನಾಡಿರುವ ಅವರು, ಎರಡೂ ಕಡೆಯಿಂದ ಪ್ರಚೋದನೆ ನಡೆದಿರಬಹುದು. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಧಾರ್ಮಿಕ ಮೆರವಣಿಗೆಗಾಗಿ ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡಿದ್ದು ಯಾರು? ಇದು ತಪ್ಪು” ಎಂದು ಸಂಸದರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು ಮಧ್ಯಾಹ್ನ ಹರಿಯಾಣದ ನುಹ್‌ನಲ್ಲಿ ಸಂಭವಿಸಿದ ಕೋಮು ಉದ್ವಿಗ್ನತೆಯಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಹಿಂಸಾಚಾರ ಸೊಹ್ನಾ, ಪಲ್ವಾಲ್ ಮತ್ತು ಗುರುಗ್ರಾಮ್‌ ಹರಡಿತ್ತು. ನುಹ್‌ನಲ್ಲಿ ಹಿಂದೂ ರ್ಯಾಲಿ ಮೇಲೆ ಕಲ್ಲು ತೂರಾಟ ನಡೆಯಿತು. ಇದರ ಬೆನ್ನಲ್ಲೇ ಗುರುಗ್ರಾಮ್‌ನ ಮಸೀದಿಯ ಮೇಲೆ ದಾಳಿ ನಡೆದು, ಅಲ್ಲಿ ಇಮಾಮ್ ಹತ್ಯೆಗೊಳಗಾದರು.

ಈ ಹಿಂಸಾಚಾರಕ್ಕೆ ಗೋರಕ್ಷಕ ಮೋನು ಮಾನೇಸರ್ ಅವರ ವಿಡಿಯೊವೇ ಕಾರಣ ಎಂದು ಹೇಳಲಾಗಿದ್ದರೂ ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಮೆರವಣಿಗೆಗೆ ಆಯುಧಗಳನ್ನು ಕೊಟ್ಟವರು ಯಾರು? ಕತ್ತಿ ಅಥವಾ ಕೋಲುಗಳನ್ನು ಹೊತ್ತ ಮೆರವಣಿಗೆಗೆ ಯಾರು ಹೋಗುತ್ತಾರೆ? ಇದು ತಪ್ಪು. ಈ ಕಡೆಯಿಂದಲೂ ಪ್ರಚೋದನೆ ನಡೆದಿದೆ. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

”ಹಿಂಸಾಚಾರ ಪ್ರಾರಂಭವಾದ ದಿನ ಅಂದರೆ ಜುಲೈ 31 ರಂದು ಕೇಂದ್ರ ಸಚಿವರು ಈ ಬೆಳವಣಿಗೆಗಳು ದುರದೃಷ್ಟಕರ. 1947 ರಲ್ಲಿ, ಭಾರತ ಮತ್ತು ವಿಭಜನೆಯಾದಾಗ ಮತ್ತು ಪಾಕಿಸ್ತಾನವನ್ನು ರಚಿಸಿದಾಗ ಮೇವಾತ್‌ನಲ್ಲಿ ಶಾಂತಿ ನೆಲೆಸಿತ್ತು. ಗಲಭೆಗೆ ಕಾರಣರಾದವರನ್ನು ಬಿಡುವುದಿಲ್ಲ. ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಹರ್ಯಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಲಿದೆ” ಎಂದು ಸಂಸದರು ಹೇಳಿದ್ದಾರೆ.

ಕೇಂದ್ರ ಸಚಿವ ರಾವ್ ಇಂದರ್‌ಜಿತ್ ಸಿಂಗ್ ಅವರು ಇಂದು(ಬುಧವಾರ) ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನುಹ್‌ನಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಅವರು, ”ಎರಡೂ ಸಮುದಾಯಗಳು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ, ಅವರು ಆ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆದರು? ಅವರು ಅಂತಹ ವಾತಾವರಣವನ್ನು ಏಕೆ ಸೃಷ್ಟಿಸಿದರು? ಎಂಬುದು ವಿಚಾರಣೆಯ ವಿಷಯವಾಗಿದೆ. ಹರ್ಯಾಣ ಸರ್ಕಾರ ತನಿಖೆ ನಡೆಸುತ್ತದೆ” ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಮೋದಿ ಸರ್ಕಾರದ ಸಚಿವರ ಹೇಳಿಕೆಯ ಹೊರತಾಗಿಯೂ, ಕ್ರಮವು ಏಕಪಕ್ಷೀಯವಾಗಿರುತ್ತದೆ. ಬಂದೂಕು ಹಿಡಿದು ತಿರುಗಾಡುವ, ಅಮಾಯಕರ ಜೀವ ಮತ್ತು ಆಸ್ತಿಗೆ ಹಾನಿ ಮಾಡುವವರನ್ನು ‘ಹೃದಯ ಸಾಮ್ರಾಟ್’ ಎಂದು ಕರೆದು ಮಹಾಪಂಚಾಯತ್‌ನಲ್ಲಿ ಸನ್ಮಾನಿಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...