Homeಕರ್ನಾಟಕಮಣಿಪುರ: ಸುಪ್ರೀಂ ಚಾಟಿ ಏಟು ಡಬಲ್ ಇಂಜೀನ್ ಸರ್ಕಾರಕ್ಕೆ ತಾಗುತ್ತಿಲ್ಲ; ಮೋದಿ ವಿರುದ್ಧ ಗುಡುಗಿದ ಗುಂಡೂರಾವ್‌

ಮಣಿಪುರ: ಸುಪ್ರೀಂ ಚಾಟಿ ಏಟು ಡಬಲ್ ಇಂಜೀನ್ ಸರ್ಕಾರಕ್ಕೆ ತಾಗುತ್ತಿಲ್ಲ; ಮೋದಿ ವಿರುದ್ಧ ಗುಡುಗಿದ ಗುಂಡೂರಾವ್‌

- Advertisement -
- Advertisement -

ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣ ಹಳಿ ತಪ್ಪಿದೆ. ಆಡಳಿತ ಯಂತ್ರ ತುಕ್ಕು ಹಿಡಿದಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆ ತೆಗೆದುಕೊಂಡಿದೆ.

ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸರಣಿ ಟ್ವೀಟ್ ಮೂಲಕ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ”ಮಣಿಪುರ ಗಲಭೆ ಸಂಬಂಧ ಸುಪ್ರೀಂ ಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪದೇ ಪದೇ ಚಾಟಿ ಬೀಸುತ್ತಲೇ ಇದೆ. ಇಷ್ಟಾದರೂ ಡಬಲ್ ಇಂಜೀನ್ ಸರ್ಕಾರದ ದಪ್ಪ ಚರ್ಮಕ್ಕೆ ಯಾವುದೇ ಚಾಟಿ ಏಟು ತಾಗುತ್ತಿಲ್ಲ. ಮಣಿಪುರ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ತಾಳಿರುವ ಕೇಂದ್ರ ಭಾರತದ ನೆಲದಲ್ಲಿ ಸುದೀರ್ಘ ರಕ್ತಸಿಕ್ತ ಅಧ್ಯಾಯ ಬರೆಯಲು ಮುಂದಾಗಿದೆ” ಎಂದು ಹೇಳಿದ್ದಾರೆ.

”ಮಣಿಪುರ ವಿಚಾರದಲ್ಲಿ ಪ್ರಧಾನಿಯವರು ಯಾಕೆ ಮೌನ ಮುರಿಯುತ್ತಿಲ್ಲ? ಅವರ ಮೌನದ ಹಿಂದಿರುವುದು ಅಸಹಾಯಕತೆಯೋ ಅಥವಾ ರಾಜಕೀಯ ಲಾಭ ಗಳಿಸುವ ಕುಯುಕ್ತಿಯೋ ತಿಳಿಯುತ್ತಿಲ್ಲ. ಗುಜರಾತ್ ಗಲಭೆ ಸಂದರ್ಭದಲ್ಲೂ ಮೋದಿ ಇದೇ ಮೌನ ವಹಿಸಿದ್ದರು. ಈಗ ಪ್ರಧಾನಿಯಾದಾಗಲೂ ಮಣಿಪುರ ವಿಚಾರದಲ್ಲಿ ಮೌನವಹಿಸಿದ್ದಾರೆ. ಮೋದಿಯವರ ಮೌನದ ಹಿಂದಿನ ಮರ್ಮವೇನು?” ಎಂದು ಪ್ರಶ್ನಿಸಿದ್ದಾರೆ.

”ಗುಜರಾತ್ ಗಲಭೆ ನಡೆಯುವಾಗ ಕೇಂದ್ರದಲ್ಲಿ BJP ಸರ್ಕಾರವಿತ್ತು. ಈಗ ಮಣಿಪುರದಲ್ಲಿ ಗಲಭೆ ನಡೆಯುತ್ತಿರುವಾಗಲೂ ಕೇಂದ್ರದಲ್ಲಿ BJPಸರ್ಕಾರವೇ ಇದೆ. ಕನಿಷ್ಠ ಪಕ್ಷ ಅಂದು ಪ್ರಧಾನಿಯಾಗಿದ್ದ ವಾಜಪೇಯಿ ಮೋದಿಯವರಿಗೆ ‘ರಾಜಧರ್ಮ’ ಪಾಲಿಸುವಂತೆ ಹೇಳಿದ್ದರು. ಈಗ ಮತ್ತೊಮ್ಮೆ ಮೋದಿಯವರಿಗೆ ರಾಜಧರ್ಮ ಪಾಲಿಸುವಂತೆ ಹೇಳಲು BJPಯಲ್ಲಿ ಯಾರಿಗೆ ತಾಕತ್ತಿದೆ?” ಎಂದು ಕೇಳಿದ್ದಾರೆ.

ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ. ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ ಎಂದು ಪ್ರಧಾನಿ ಮೋದಿ ವಿರುದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಮೋದಿಯವರು ಮೌನವಾಗುವ ಸಂದರ್ಭಗಳು.

* ಗಲಭೆಗಳಾದಾಗ

* ಸಾಮೂಹಿಕ ನರಮೇಧಗಳಾಗುವಾಗ

* ಮಹಿಳೆಯರ ನಗ್ನ ಮೆರೆವಣಿಗೆಯಾಗುವಾಗ

* ಬೆಲೆಯೇರಿಕೆಯಾದಾಗ

* PMCares ಫಂಡ್ ಬಗ್ಗೆ ಕೇಳಿದಾಗ

* 2 ಕೋಟಿ ಉದ್ಯೋಗದ ಬಗ್ಗೆ ಕೇಳಿದಾಗ

* ಕಪ್ಪುಹಣದ ಬಗ್ಗೆ ಕೇಳಿದಾಗ

* ಟೆಲಿಪ್ರಾಂಪ್ಟರ್ ಕೈ ಕೊಟ್ಟಾಗ ಈ ಸಂದರ್ಭಗಳಲ್ಲಿ ಮೋದಿ ಕಠೋರ ಮೌನ ತಪಸ್ವಿಗಳಾಗುತ್ತಾರೆ.

 

ಮೋದಿಯವರು ಮಾತನಾಡುವ ಸಂದರ್ಭಗಳು.

* ಚುನಾವಣೆ ಬಂದಾಗ

* ಪ್ರಚಾರಕ್ಕೆ ಕರೆದಾಗ

* ಮನ್ ಕಿ ಬಾತ್ ಕಾರ್ಯಕ್ರಮವಿದ್ದಾಗ

* ಎದುರಿಗೆ ಪ್ರಶ್ನೆ ಮಾಡದ ಪತ್ರಕರ್ತರಿಲ್ಲದಿದ್ದಾಗ

* ಜೀ ಹುಜೂರ್ ಎಂದು ಅಡ್ಡಡ್ಡ ಬೀಳುವ ತಮ್ಮ‌ ಪಕ್ಷದ ನಾಯಕರು ಎದುರಿರುವಾಗ ಈ ಸಂದರ್ಭಗಳಲ್ಲಿ ‌ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ.

”ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ. ಮಣಿಪುರ ಗಲಭೆಗೆ ಸಂಬಂಧಪಟ್ಟಂತೆ ಮೋದಿಯವರ ಮೌನವನ್ನು ಬುದ್ಧಿವಂತರ ಲಕ್ಷಣವೆನ್ನಬೇಕೋ ಅಥವಾ ಸಮರ್ಥಿಸಿಕೊಳ್ಳಲು ಆಗದ ಅಜ್ಞಾನವೆನ್ನಬೇಕೋ?” ಎಂದು ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಬೆತ್ತಲೆ ಪ್ರಕರಣದಲ್ಲಿ FIR ವಿಳಂಬ: ‘14 ದಿನಗಳಿಂದ ಪೊಲೀಸರು ಏನು ಮಾಡುತ್ತಿದ್ದರು?’- ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...