Homeಮುಖಪುಟಉತ್ತರ ಪ್ರದೇಶ: ಮಗನ ಹುಟ್ಟುಹಬ್ಬಕ್ಕೆ ಪಾರ್ಟಿ ಕೊಡಿಸದಿದ್ದಕ್ಕೆ ದಲಿತ ವ್ಯಕ್ತಿಯ ಕೊಲೆ

ಉತ್ತರ ಪ್ರದೇಶ: ಮಗನ ಹುಟ್ಟುಹಬ್ಬಕ್ಕೆ ಪಾರ್ಟಿ ಕೊಡಿಸದಿದ್ದಕ್ಕೆ ದಲಿತ ವ್ಯಕ್ತಿಯ ಕೊಲೆ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯಲ್ಲಿ 24 ವರ್ಷದ ದಲಿತ ವ್ಯಕ್ತಿ ಹಣಕಾಸಿನ ತೊಂದರೆ ಇದೆ ಎಂದು ಕಾರಣ ನೀಡಿ, ತನ್ನ ಮಗನ ಜನ್ಮದಿನದಂದು ಔತಣ ಮತ್ತು ಮದ್ಯ ಕೊಡಿಸಲು ನಿರಾಕರಿಸಿದ್ದಕ್ಕೆ ನಾಲ್ವರು ಕಬ್ಬಿಣದ ರಾಡ್‌ಗಳಿಂದ ಹೊಡೆದಿದ್ದರು. ಆಸ್ಪತ್ರೆಯಲ್ಲಿದ್ದ ಆ ವ್ಯಕ್ತಿ ಮಂಗಳವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಪರಿದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಸಚಿನ್ ಎಂಬವರೇ ಮೃತ ದುರ್ದೈವಿ, ಜುಲೈ 11 ರಂದು ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸಚಿನ್‌ ಬುಧವಾರ ಕೊನೆಯುಸಿಗಳೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ಕುಮಾರ್ ಅಗರ್‌ವಾಲ್ ತಿಳಿಸಿದ್ದಾರೆ.

ಮೃತ ಸಚಿನ್‌ನ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಅದೇ ಗ್ರಾಮದ ವಿಶಾಲ್, ಅಕ್ಕು, ಆಕಾಶ್ ಮತ್ತು ಕಲ್ಲು ಎಂಬ ನಾಲ್ವರ ವಿರುದ್ಧ ಐಪಿಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ವಿಶಾಲ್‌ಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆ ಬಗ್ಗೆ ವಿವರಣೆ ನೀಡಿರುವ ಪೊಲೀಸರು, ಜುಲೈ 11ರಂದು ವಿಶಾಲ್ ಹಾಗೂ ಗುಂಪಿನವರು ಕಬ್ಬಿಣದ ರಾಡ್‌ಗಳನ್ನು ಹಿಡಿದುಕೊಂಡು ಮನೆಗೆ ನುಗಿದ್ದರು. ಮಗನ ಹುಟ್ಟು ಹಬ್ಬದ ಪ್ರಯುಕ್ತ ಪಾರ್ಟಿ ಕೊಡಿಸಬೇಕು ಎಂದು ಬೇಡಿಕೆ ಇಟ್ಟಿದ್ದರು” ಎಂದು ಹೇಳಿದ್ದಾರೆ.

”ಹಣಕಾಸಿನ ಸಮಸ್ಯೆಯಿಂದ ಸಂತ್ರಸ್ತ ಅದನ್ನು ತಳ್ಳಿ ಹಾಕಿದ್ದರು. ಹೀಗಾಗಿ ಆರೋಪಿಗಳು ಮದ್ಯ ಕೊಡಿಸಲೇಬೇಕು ಎಂದು ಬೆದರಿಸಿದ್ದರು. ಅದನ್ನೂ ನಿರಾಕರಿಸಿದಾಗ, ಸಚಿನ್ ಅವರನ್ನು ಮನೆಯಿಂದ ಹೊರಗೆ ತಳ್ಳಿ, ಕಟ್ಟಿಹಾಕಿ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಮನುಸ್ಮೃತಿ ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ಏಳಿಗೆ ಬಗ್ಗೆ ಅಸಹನೆ ಇದೆ: ಆರಗ ಜಾತಿವಾದಿ ನಿಂದನೆಗೆ ಪ್ರಿಯಾಂಕ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...