Homeಮುಖಪುಟಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

ಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಯ ನಂತರ ವಲಸಿಗರನ್ನು ಸ್ಥಳೀಯ ಹಿಂದುತ್ವ ಗುಂಪುಗಳು ಅಲ್ಲಿಂದ ಹೋಗುವಂತೆ ಹಿಂಸಾಚಾರದ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನೂರಾರು ಮುಸ್ಲಿಂ ವಲಸಿಗ ಕಾರ್ಮಿಕರು ಪಲಾಯನ ಮಾಡಬೇಕಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ.

ನುಹ್‌ನಲ್ಲಿನ ಕಾರ್ಮಿಕರಿಗೆ ಅಲ್ಲಿಂದ ಹೊರಡಲು ಸಮಯ ಸೀಮಿತಗೊಳಿಸಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅವರಲ್ಲಿ ಹಲವರು ಹಿಂಸಾಚಾರ ಪೀಡಿತ ಜಿಲ್ಲೆಯಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಸಣ್ಣ ಚೀಲಗಳೊಂದಿಗೆ ಅಲ್ವಾರ್ ಅಥವಾ ಸೊಹ್ನಾ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪತ್ರಿಕೆ ತಿಳಿಸಿದೆ.

ಸೋಮವಾರ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನಿಂದ ಧಾರ್ಮಿಕ ಮೆರವಣಿಗೆ ನಡೆಸಿತು. ಆನಂತರ ಹಿಂಸಾಚಾರ ಬುಗಿಲೆದ್ದು, ಇಬ್ಬರು ಹೋಮ್ ಗಾರ್ಡ್‌ಗಳು ಮತ್ತು ಒಬ್ಬ ಇಮಾಮ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಈ ಹಿಂಸಾಚಾರ ನುಹ್‌ನ ನೆರೆಯ ಜಿಲ್ಲೆಗಳಿಗೆ ಹರಡುತ್ತಿದ್ದಂತೆ, ಗುರುಗ್ರಾಮ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಲಾಯಿತು. ಗುಂಪುಗಳು ಮುಸ್ಲಿ ಸಮುದಾಯದವರು ಮನೆಗಳನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ ನಂತರ ಮುಸ್ಲಿಮರ ವಲಸೆ ಕುಟುಂಬಗಳ ಗುಡಿಸಲುಗಳನ್ನು ಸುಟ್ಟು ಹಾಕಲಾಯಿತು.

ಕೆಲವರು ಮಂಗಳವಾರ ರಾತ್ರಿ ಮೋಟಾರ್‌ಸೈಕಲ್‌ಗಳಲ್ಲಿ ಬಂದರು, ”ನಾವು ಮನೆ ಬಿಟ್ಟು ವಲಸೆ ಬರದೇ ಇದ್ದರೆ ನಮ್ಮ ಕೊಳೆಗೇರಿಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿದರು. ಪೊಲೀಸರು ರಾತ್ರಿಯಿಂದ ಇಲ್ಲಿ ಹಾಜರಿದ್ದಾರೆ ಆದರೆ ನನ್ನ ಕುಟುಂಬವು ಹೆದರುತ್ತಿದೆ ಮತ್ತು ನಾವು ನಗರವನ್ನು ತೊರೆಯುತ್ತಿದ್ದೇವೆ” ಎಂದು ವಲಸೆ ರಿಕ್ಷಾ ಚಾಲಕ ರೆಹಮತ್ ಅಲಿ ಪಿಟಿಐಗೆ ತಿಳಿಸಿದರು.

ಪಶ್ಚಿಮ ಬಂಗಾಳದಿಂದ ಸುಮಾರು 100 ವಲಸೆ ಕುಟುಂಬಗಳು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದು, ಕೇವಲ 15 ಕುಟುಂಬಗಳು ಮಾತ್ರ ಅಲ್ಲಿಯೇ ಉಳಿದುಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆ ಕುಟುಂಬಗಳು ಸಹ ಹೊರಡಲು ಬಯಸುತ್ತಾರೆ ಆದರೆ ಅವರ ಬಳಿ ಹಣ ಮತ್ತು ವಾಹನಗಳಿಲ್ಲದ ಕಾರಣ ಸಾಧ್ಯವಿಲ್ಲ” ಎಂದು ಚಾನೆಲ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಗುರುಗ್ರಾಮ್‌ನ ಮುಸ್ಲಿಂ ಪ್ರಾಬಲ್ಯದ ಕೊಳೆಗೇರಿಯಲ್ಲಿ ವಲಸಿಗರೊಬ್ಬರು ಮಾತನಾಡಿದ್ದು, ”ಒಬ್ಬ ವ್ಯಕ್ತಿ ತನ್ನ ಹೆಸರನ್ನು ಕೇಳಿದನು, ಅದಕ್ಕೆ ಅವನು ಹಿಂದೂ ಎಂದು ಸುಳ್ಳು ಹೇಳಿದ್ದಾನೆ. ನಂತರ, ಆತ ಸುಳ್ಳು ಹೇಳಿದ್ದಾನೆ ಎಂದು ತಿಳಿದು 40 ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.

ವಲಸಿಗರಲ್ಲಿ ಒಬ್ಬರಾದ 25 ವರ್ಷದ ಶಮೀಮ್ ಹುಸೇನ್, ”ಮಂಗಳವಾರದಂದು ಗುಂಪೊಂದು ಎಲ್ಲಾ ಮುಸ್ಲಿಮರು ಪ್ರದೇಶವನ್ನು ತೊರೆಯುವಂತೆ ಕೇಳಿದೆ” ಎಂದು NDTV ಗೆ ತಿಳಿಸಿದರು.

”ನಮ್ಮಲ್ಲಿ ಹಿಂತಿರುಗಲು ಹಣವಿಲ್ಲ ಮತ್ತು ಸ್ಥಳೀಯ ಅಂಗಡಿಯವರಿಗೆ ಪಾವತಿಸಲು ಸಾಲಗಳಿವೆ. ನನಗೆ ಏನಾದರೂ ಪರವಾಗಿಲ್ಲ, ಆದರೆ ನನಗೆ ಒಂದು ವರ್ಷದ ಮಗನಿದ್ದಾನೆ ಅವನನ್ನು ಕಾಪಾಡಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಸ್ಥಳೀಯ ನಿವಾಸಿಗಳು ನಮ್ಮನ್ನು ರಕ್ಷಿಸಬೇಕೆಂಬುದು ನನ್ನ ಪ್ರಾಮಾಣಿಕ ವಿನಂತಿ. ದಯವಿಟ್ಟು ನಮಗೆ ಸಹಾಯ ಮಾಡಿ” ಎಂದು ಅಳಲು ತೋಡಿಕೊಂಡಿದ್ದಾರೆ.

”ತಾನು ಏಳು ದಿನಗಳ ಹಿಂದೆಯಷ್ಟೇ ಗುರುಗ್ರಾಮಕ್ಕೆ ಬಂದಿದ್ದು, ಒಂದೆರಡು ದಿನಗಳ ಹಿಂದೆ ಬಂದಿಳಿದ ಡೆಲಿವರಿ ಕೆಲಸಗಾರನ ಕೆಲಸಕ್ಕೆ ಕೂಲಿ ನೀಡಿಲ್ಲ” ಎಂದು ಹುಸೇನ್ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇನ್ನೊಬ್ಬ ವಲಸೆ ಕಾರ್ಮಿಕ, ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ನಿವಾಸಿ ಧರಂಪಾಲ್ ಗುಜ್ಜರ್ ಅವರು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದು, ”ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕರು ಸೋಮವಾರ ಹೊರಡಲು ಹೇಳಿದರು. ತಾನು ಮತ್ತು ಇತರ ವಲಸೆ ಕಾರ್ಮಿಕರು ಇಡೀ ರಾತ್ರಿ ಬೀದಿಗಳಲ್ಲಿ ಕಳೆಯಬೇಕಾಯಿತು” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...