Homeಮುಖಪುಟಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

ಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಯ ನಂತರ ವಲಸಿಗರನ್ನು ಸ್ಥಳೀಯ ಹಿಂದುತ್ವ ಗುಂಪುಗಳು ಅಲ್ಲಿಂದ ಹೋಗುವಂತೆ ಹಿಂಸಾಚಾರದ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನೂರಾರು ಮುಸ್ಲಿಂ ವಲಸಿಗ ಕಾರ್ಮಿಕರು ಪಲಾಯನ ಮಾಡಬೇಕಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ.

ನುಹ್‌ನಲ್ಲಿನ ಕಾರ್ಮಿಕರಿಗೆ ಅಲ್ಲಿಂದ ಹೊರಡಲು ಸಮಯ ಸೀಮಿತಗೊಳಿಸಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅವರಲ್ಲಿ ಹಲವರು ಹಿಂಸಾಚಾರ ಪೀಡಿತ ಜಿಲ್ಲೆಯಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಸಣ್ಣ ಚೀಲಗಳೊಂದಿಗೆ ಅಲ್ವಾರ್ ಅಥವಾ ಸೊಹ್ನಾ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪತ್ರಿಕೆ ತಿಳಿಸಿದೆ.

ಸೋಮವಾರ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನಿಂದ ಧಾರ್ಮಿಕ ಮೆರವಣಿಗೆ ನಡೆಸಿತು. ಆನಂತರ ಹಿಂಸಾಚಾರ ಬುಗಿಲೆದ್ದು, ಇಬ್ಬರು ಹೋಮ್ ಗಾರ್ಡ್‌ಗಳು ಮತ್ತು ಒಬ್ಬ ಇಮಾಮ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಈ ಹಿಂಸಾಚಾರ ನುಹ್‌ನ ನೆರೆಯ ಜಿಲ್ಲೆಗಳಿಗೆ ಹರಡುತ್ತಿದ್ದಂತೆ, ಗುರುಗ್ರಾಮ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಲಾಯಿತು. ಗುಂಪುಗಳು ಮುಸ್ಲಿ ಸಮುದಾಯದವರು ಮನೆಗಳನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ ನಂತರ ಮುಸ್ಲಿಮರ ವಲಸೆ ಕುಟುಂಬಗಳ ಗುಡಿಸಲುಗಳನ್ನು ಸುಟ್ಟು ಹಾಕಲಾಯಿತು.

ಕೆಲವರು ಮಂಗಳವಾರ ರಾತ್ರಿ ಮೋಟಾರ್‌ಸೈಕಲ್‌ಗಳಲ್ಲಿ ಬಂದರು, ”ನಾವು ಮನೆ ಬಿಟ್ಟು ವಲಸೆ ಬರದೇ ಇದ್ದರೆ ನಮ್ಮ ಕೊಳೆಗೇರಿಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿದರು. ಪೊಲೀಸರು ರಾತ್ರಿಯಿಂದ ಇಲ್ಲಿ ಹಾಜರಿದ್ದಾರೆ ಆದರೆ ನನ್ನ ಕುಟುಂಬವು ಹೆದರುತ್ತಿದೆ ಮತ್ತು ನಾವು ನಗರವನ್ನು ತೊರೆಯುತ್ತಿದ್ದೇವೆ” ಎಂದು ವಲಸೆ ರಿಕ್ಷಾ ಚಾಲಕ ರೆಹಮತ್ ಅಲಿ ಪಿಟಿಐಗೆ ತಿಳಿಸಿದರು.

ಪಶ್ಚಿಮ ಬಂಗಾಳದಿಂದ ಸುಮಾರು 100 ವಲಸೆ ಕುಟುಂಬಗಳು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದು, ಕೇವಲ 15 ಕುಟುಂಬಗಳು ಮಾತ್ರ ಅಲ್ಲಿಯೇ ಉಳಿದುಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆ ಕುಟುಂಬಗಳು ಸಹ ಹೊರಡಲು ಬಯಸುತ್ತಾರೆ ಆದರೆ ಅವರ ಬಳಿ ಹಣ ಮತ್ತು ವಾಹನಗಳಿಲ್ಲದ ಕಾರಣ ಸಾಧ್ಯವಿಲ್ಲ” ಎಂದು ಚಾನೆಲ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಗುರುಗ್ರಾಮ್‌ನ ಮುಸ್ಲಿಂ ಪ್ರಾಬಲ್ಯದ ಕೊಳೆಗೇರಿಯಲ್ಲಿ ವಲಸಿಗರೊಬ್ಬರು ಮಾತನಾಡಿದ್ದು, ”ಒಬ್ಬ ವ್ಯಕ್ತಿ ತನ್ನ ಹೆಸರನ್ನು ಕೇಳಿದನು, ಅದಕ್ಕೆ ಅವನು ಹಿಂದೂ ಎಂದು ಸುಳ್ಳು ಹೇಳಿದ್ದಾನೆ. ನಂತರ, ಆತ ಸುಳ್ಳು ಹೇಳಿದ್ದಾನೆ ಎಂದು ತಿಳಿದು 40 ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.

ವಲಸಿಗರಲ್ಲಿ ಒಬ್ಬರಾದ 25 ವರ್ಷದ ಶಮೀಮ್ ಹುಸೇನ್, ”ಮಂಗಳವಾರದಂದು ಗುಂಪೊಂದು ಎಲ್ಲಾ ಮುಸ್ಲಿಮರು ಪ್ರದೇಶವನ್ನು ತೊರೆಯುವಂತೆ ಕೇಳಿದೆ” ಎಂದು NDTV ಗೆ ತಿಳಿಸಿದರು.

”ನಮ್ಮಲ್ಲಿ ಹಿಂತಿರುಗಲು ಹಣವಿಲ್ಲ ಮತ್ತು ಸ್ಥಳೀಯ ಅಂಗಡಿಯವರಿಗೆ ಪಾವತಿಸಲು ಸಾಲಗಳಿವೆ. ನನಗೆ ಏನಾದರೂ ಪರವಾಗಿಲ್ಲ, ಆದರೆ ನನಗೆ ಒಂದು ವರ್ಷದ ಮಗನಿದ್ದಾನೆ ಅವನನ್ನು ಕಾಪಾಡಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಸ್ಥಳೀಯ ನಿವಾಸಿಗಳು ನಮ್ಮನ್ನು ರಕ್ಷಿಸಬೇಕೆಂಬುದು ನನ್ನ ಪ್ರಾಮಾಣಿಕ ವಿನಂತಿ. ದಯವಿಟ್ಟು ನಮಗೆ ಸಹಾಯ ಮಾಡಿ” ಎಂದು ಅಳಲು ತೋಡಿಕೊಂಡಿದ್ದಾರೆ.

”ತಾನು ಏಳು ದಿನಗಳ ಹಿಂದೆಯಷ್ಟೇ ಗುರುಗ್ರಾಮಕ್ಕೆ ಬಂದಿದ್ದು, ಒಂದೆರಡು ದಿನಗಳ ಹಿಂದೆ ಬಂದಿಳಿದ ಡೆಲಿವರಿ ಕೆಲಸಗಾರನ ಕೆಲಸಕ್ಕೆ ಕೂಲಿ ನೀಡಿಲ್ಲ” ಎಂದು ಹುಸೇನ್ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇನ್ನೊಬ್ಬ ವಲಸೆ ಕಾರ್ಮಿಕ, ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ನಿವಾಸಿ ಧರಂಪಾಲ್ ಗುಜ್ಜರ್ ಅವರು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದು, ”ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕರು ಸೋಮವಾರ ಹೊರಡಲು ಹೇಳಿದರು. ತಾನು ಮತ್ತು ಇತರ ವಲಸೆ ಕಾರ್ಮಿಕರು ಇಡೀ ರಾತ್ರಿ ಬೀದಿಗಳಲ್ಲಿ ಕಳೆಯಬೇಕಾಯಿತು” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...