Homeಮುಖಪುಟಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

ಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಯ ನಂತರ ವಲಸಿಗರನ್ನು ಸ್ಥಳೀಯ ಹಿಂದುತ್ವ ಗುಂಪುಗಳು ಅಲ್ಲಿಂದ ಹೋಗುವಂತೆ ಹಿಂಸಾಚಾರದ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನೂರಾರು ಮುಸ್ಲಿಂ ವಲಸಿಗ ಕಾರ್ಮಿಕರು ಪಲಾಯನ ಮಾಡಬೇಕಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ.

ನುಹ್‌ನಲ್ಲಿನ ಕಾರ್ಮಿಕರಿಗೆ ಅಲ್ಲಿಂದ ಹೊರಡಲು ಸಮಯ ಸೀಮಿತಗೊಳಿಸಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅವರಲ್ಲಿ ಹಲವರು ಹಿಂಸಾಚಾರ ಪೀಡಿತ ಜಿಲ್ಲೆಯಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಸಣ್ಣ ಚೀಲಗಳೊಂದಿಗೆ ಅಲ್ವಾರ್ ಅಥವಾ ಸೊಹ್ನಾ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪತ್ರಿಕೆ ತಿಳಿಸಿದೆ.

ಸೋಮವಾರ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನಿಂದ ಧಾರ್ಮಿಕ ಮೆರವಣಿಗೆ ನಡೆಸಿತು. ಆನಂತರ ಹಿಂಸಾಚಾರ ಬುಗಿಲೆದ್ದು, ಇಬ್ಬರು ಹೋಮ್ ಗಾರ್ಡ್‌ಗಳು ಮತ್ತು ಒಬ್ಬ ಇಮಾಮ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಈ ಹಿಂಸಾಚಾರ ನುಹ್‌ನ ನೆರೆಯ ಜಿಲ್ಲೆಗಳಿಗೆ ಹರಡುತ್ತಿದ್ದಂತೆ, ಗುರುಗ್ರಾಮ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಲಾಯಿತು. ಗುಂಪುಗಳು ಮುಸ್ಲಿ ಸಮುದಾಯದವರು ಮನೆಗಳನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ ನಂತರ ಮುಸ್ಲಿಮರ ವಲಸೆ ಕುಟುಂಬಗಳ ಗುಡಿಸಲುಗಳನ್ನು ಸುಟ್ಟು ಹಾಕಲಾಯಿತು.

ಕೆಲವರು ಮಂಗಳವಾರ ರಾತ್ರಿ ಮೋಟಾರ್‌ಸೈಕಲ್‌ಗಳಲ್ಲಿ ಬಂದರು, ”ನಾವು ಮನೆ ಬಿಟ್ಟು ವಲಸೆ ಬರದೇ ಇದ್ದರೆ ನಮ್ಮ ಕೊಳೆಗೇರಿಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿದರು. ಪೊಲೀಸರು ರಾತ್ರಿಯಿಂದ ಇಲ್ಲಿ ಹಾಜರಿದ್ದಾರೆ ಆದರೆ ನನ್ನ ಕುಟುಂಬವು ಹೆದರುತ್ತಿದೆ ಮತ್ತು ನಾವು ನಗರವನ್ನು ತೊರೆಯುತ್ತಿದ್ದೇವೆ” ಎಂದು ವಲಸೆ ರಿಕ್ಷಾ ಚಾಲಕ ರೆಹಮತ್ ಅಲಿ ಪಿಟಿಐಗೆ ತಿಳಿಸಿದರು.

ಪಶ್ಚಿಮ ಬಂಗಾಳದಿಂದ ಸುಮಾರು 100 ವಲಸೆ ಕುಟುಂಬಗಳು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದು, ಕೇವಲ 15 ಕುಟುಂಬಗಳು ಮಾತ್ರ ಅಲ್ಲಿಯೇ ಉಳಿದುಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆ ಕುಟುಂಬಗಳು ಸಹ ಹೊರಡಲು ಬಯಸುತ್ತಾರೆ ಆದರೆ ಅವರ ಬಳಿ ಹಣ ಮತ್ತು ವಾಹನಗಳಿಲ್ಲದ ಕಾರಣ ಸಾಧ್ಯವಿಲ್ಲ” ಎಂದು ಚಾನೆಲ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಗುರುಗ್ರಾಮ್‌ನ ಮುಸ್ಲಿಂ ಪ್ರಾಬಲ್ಯದ ಕೊಳೆಗೇರಿಯಲ್ಲಿ ವಲಸಿಗರೊಬ್ಬರು ಮಾತನಾಡಿದ್ದು, ”ಒಬ್ಬ ವ್ಯಕ್ತಿ ತನ್ನ ಹೆಸರನ್ನು ಕೇಳಿದನು, ಅದಕ್ಕೆ ಅವನು ಹಿಂದೂ ಎಂದು ಸುಳ್ಳು ಹೇಳಿದ್ದಾನೆ. ನಂತರ, ಆತ ಸುಳ್ಳು ಹೇಳಿದ್ದಾನೆ ಎಂದು ತಿಳಿದು 40 ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.

ವಲಸಿಗರಲ್ಲಿ ಒಬ್ಬರಾದ 25 ವರ್ಷದ ಶಮೀಮ್ ಹುಸೇನ್, ”ಮಂಗಳವಾರದಂದು ಗುಂಪೊಂದು ಎಲ್ಲಾ ಮುಸ್ಲಿಮರು ಪ್ರದೇಶವನ್ನು ತೊರೆಯುವಂತೆ ಕೇಳಿದೆ” ಎಂದು NDTV ಗೆ ತಿಳಿಸಿದರು.

”ನಮ್ಮಲ್ಲಿ ಹಿಂತಿರುಗಲು ಹಣವಿಲ್ಲ ಮತ್ತು ಸ್ಥಳೀಯ ಅಂಗಡಿಯವರಿಗೆ ಪಾವತಿಸಲು ಸಾಲಗಳಿವೆ. ನನಗೆ ಏನಾದರೂ ಪರವಾಗಿಲ್ಲ, ಆದರೆ ನನಗೆ ಒಂದು ವರ್ಷದ ಮಗನಿದ್ದಾನೆ ಅವನನ್ನು ಕಾಪಾಡಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಸ್ಥಳೀಯ ನಿವಾಸಿಗಳು ನಮ್ಮನ್ನು ರಕ್ಷಿಸಬೇಕೆಂಬುದು ನನ್ನ ಪ್ರಾಮಾಣಿಕ ವಿನಂತಿ. ದಯವಿಟ್ಟು ನಮಗೆ ಸಹಾಯ ಮಾಡಿ” ಎಂದು ಅಳಲು ತೋಡಿಕೊಂಡಿದ್ದಾರೆ.

”ತಾನು ಏಳು ದಿನಗಳ ಹಿಂದೆಯಷ್ಟೇ ಗುರುಗ್ರಾಮಕ್ಕೆ ಬಂದಿದ್ದು, ಒಂದೆರಡು ದಿನಗಳ ಹಿಂದೆ ಬಂದಿಳಿದ ಡೆಲಿವರಿ ಕೆಲಸಗಾರನ ಕೆಲಸಕ್ಕೆ ಕೂಲಿ ನೀಡಿಲ್ಲ” ಎಂದು ಹುಸೇನ್ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇನ್ನೊಬ್ಬ ವಲಸೆ ಕಾರ್ಮಿಕ, ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ನಿವಾಸಿ ಧರಂಪಾಲ್ ಗುಜ್ಜರ್ ಅವರು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದು, ”ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕರು ಸೋಮವಾರ ಹೊರಡಲು ಹೇಳಿದರು. ತಾನು ಮತ್ತು ಇತರ ವಲಸೆ ಕಾರ್ಮಿಕರು ಇಡೀ ರಾತ್ರಿ ಬೀದಿಗಳಲ್ಲಿ ಕಳೆಯಬೇಕಾಯಿತು” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...