Homeಮುಖಪುಟಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

ಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಯ ನಂತರ ವಲಸಿಗರನ್ನು ಸ್ಥಳೀಯ ಹಿಂದುತ್ವ ಗುಂಪುಗಳು ಅಲ್ಲಿಂದ ಹೋಗುವಂತೆ ಹಿಂಸಾಚಾರದ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನೂರಾರು ಮುಸ್ಲಿಂ ವಲಸಿಗ ಕಾರ್ಮಿಕರು ಪಲಾಯನ ಮಾಡಬೇಕಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ.

ನುಹ್‌ನಲ್ಲಿನ ಕಾರ್ಮಿಕರಿಗೆ ಅಲ್ಲಿಂದ ಹೊರಡಲು ಸಮಯ ಸೀಮಿತಗೊಳಿಸಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅವರಲ್ಲಿ ಹಲವರು ಹಿಂಸಾಚಾರ ಪೀಡಿತ ಜಿಲ್ಲೆಯಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಸಣ್ಣ ಚೀಲಗಳೊಂದಿಗೆ ಅಲ್ವಾರ್ ಅಥವಾ ಸೊಹ್ನಾ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪತ್ರಿಕೆ ತಿಳಿಸಿದೆ.

ಸೋಮವಾರ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನಿಂದ ಧಾರ್ಮಿಕ ಮೆರವಣಿಗೆ ನಡೆಸಿತು. ಆನಂತರ ಹಿಂಸಾಚಾರ ಬುಗಿಲೆದ್ದು, ಇಬ್ಬರು ಹೋಮ್ ಗಾರ್ಡ್‌ಗಳು ಮತ್ತು ಒಬ್ಬ ಇಮಾಮ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಈ ಹಿಂಸಾಚಾರ ನುಹ್‌ನ ನೆರೆಯ ಜಿಲ್ಲೆಗಳಿಗೆ ಹರಡುತ್ತಿದ್ದಂತೆ, ಗುರುಗ್ರಾಮ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಲಾಯಿತು. ಗುಂಪುಗಳು ಮುಸ್ಲಿ ಸಮುದಾಯದವರು ಮನೆಗಳನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ ನಂತರ ಮುಸ್ಲಿಮರ ವಲಸೆ ಕುಟುಂಬಗಳ ಗುಡಿಸಲುಗಳನ್ನು ಸುಟ್ಟು ಹಾಕಲಾಯಿತು.

ಕೆಲವರು ಮಂಗಳವಾರ ರಾತ್ರಿ ಮೋಟಾರ್‌ಸೈಕಲ್‌ಗಳಲ್ಲಿ ಬಂದರು, ”ನಾವು ಮನೆ ಬಿಟ್ಟು ವಲಸೆ ಬರದೇ ಇದ್ದರೆ ನಮ್ಮ ಕೊಳೆಗೇರಿಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿದರು. ಪೊಲೀಸರು ರಾತ್ರಿಯಿಂದ ಇಲ್ಲಿ ಹಾಜರಿದ್ದಾರೆ ಆದರೆ ನನ್ನ ಕುಟುಂಬವು ಹೆದರುತ್ತಿದೆ ಮತ್ತು ನಾವು ನಗರವನ್ನು ತೊರೆಯುತ್ತಿದ್ದೇವೆ” ಎಂದು ವಲಸೆ ರಿಕ್ಷಾ ಚಾಲಕ ರೆಹಮತ್ ಅಲಿ ಪಿಟಿಐಗೆ ತಿಳಿಸಿದರು.

ಪಶ್ಚಿಮ ಬಂಗಾಳದಿಂದ ಸುಮಾರು 100 ವಲಸೆ ಕುಟುಂಬಗಳು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದು, ಕೇವಲ 15 ಕುಟುಂಬಗಳು ಮಾತ್ರ ಅಲ್ಲಿಯೇ ಉಳಿದುಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆ ಕುಟುಂಬಗಳು ಸಹ ಹೊರಡಲು ಬಯಸುತ್ತಾರೆ ಆದರೆ ಅವರ ಬಳಿ ಹಣ ಮತ್ತು ವಾಹನಗಳಿಲ್ಲದ ಕಾರಣ ಸಾಧ್ಯವಿಲ್ಲ” ಎಂದು ಚಾನೆಲ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಗುರುಗ್ರಾಮ್‌ನ ಮುಸ್ಲಿಂ ಪ್ರಾಬಲ್ಯದ ಕೊಳೆಗೇರಿಯಲ್ಲಿ ವಲಸಿಗರೊಬ್ಬರು ಮಾತನಾಡಿದ್ದು, ”ಒಬ್ಬ ವ್ಯಕ್ತಿ ತನ್ನ ಹೆಸರನ್ನು ಕೇಳಿದನು, ಅದಕ್ಕೆ ಅವನು ಹಿಂದೂ ಎಂದು ಸುಳ್ಳು ಹೇಳಿದ್ದಾನೆ. ನಂತರ, ಆತ ಸುಳ್ಳು ಹೇಳಿದ್ದಾನೆ ಎಂದು ತಿಳಿದು 40 ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.

ವಲಸಿಗರಲ್ಲಿ ಒಬ್ಬರಾದ 25 ವರ್ಷದ ಶಮೀಮ್ ಹುಸೇನ್, ”ಮಂಗಳವಾರದಂದು ಗುಂಪೊಂದು ಎಲ್ಲಾ ಮುಸ್ಲಿಮರು ಪ್ರದೇಶವನ್ನು ತೊರೆಯುವಂತೆ ಕೇಳಿದೆ” ಎಂದು NDTV ಗೆ ತಿಳಿಸಿದರು.

”ನಮ್ಮಲ್ಲಿ ಹಿಂತಿರುಗಲು ಹಣವಿಲ್ಲ ಮತ್ತು ಸ್ಥಳೀಯ ಅಂಗಡಿಯವರಿಗೆ ಪಾವತಿಸಲು ಸಾಲಗಳಿವೆ. ನನಗೆ ಏನಾದರೂ ಪರವಾಗಿಲ್ಲ, ಆದರೆ ನನಗೆ ಒಂದು ವರ್ಷದ ಮಗನಿದ್ದಾನೆ ಅವನನ್ನು ಕಾಪಾಡಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಸ್ಥಳೀಯ ನಿವಾಸಿಗಳು ನಮ್ಮನ್ನು ರಕ್ಷಿಸಬೇಕೆಂಬುದು ನನ್ನ ಪ್ರಾಮಾಣಿಕ ವಿನಂತಿ. ದಯವಿಟ್ಟು ನಮಗೆ ಸಹಾಯ ಮಾಡಿ” ಎಂದು ಅಳಲು ತೋಡಿಕೊಂಡಿದ್ದಾರೆ.

”ತಾನು ಏಳು ದಿನಗಳ ಹಿಂದೆಯಷ್ಟೇ ಗುರುಗ್ರಾಮಕ್ಕೆ ಬಂದಿದ್ದು, ಒಂದೆರಡು ದಿನಗಳ ಹಿಂದೆ ಬಂದಿಳಿದ ಡೆಲಿವರಿ ಕೆಲಸಗಾರನ ಕೆಲಸಕ್ಕೆ ಕೂಲಿ ನೀಡಿಲ್ಲ” ಎಂದು ಹುಸೇನ್ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇನ್ನೊಬ್ಬ ವಲಸೆ ಕಾರ್ಮಿಕ, ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ನಿವಾಸಿ ಧರಂಪಾಲ್ ಗುಜ್ಜರ್ ಅವರು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದು, ”ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕರು ಸೋಮವಾರ ಹೊರಡಲು ಹೇಳಿದರು. ತಾನು ಮತ್ತು ಇತರ ವಲಸೆ ಕಾರ್ಮಿಕರು ಇಡೀ ರಾತ್ರಿ ಬೀದಿಗಳಲ್ಲಿ ಕಳೆಯಬೇಕಾಯಿತು” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...