Homeಮುಖಪುಟಜನಾಂಗೀಯ ನಿಂದನೆ: ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

ಜನಾಂಗೀಯ ನಿಂದನೆ: ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

- Advertisement -
- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ ಖಂಡ್ರೆ ಅವರ ಬಣ್ಣದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿಯಲ್ಲಿ ದೂರು ದಾಖಲಾಗಿದೆ.

ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ, ಖರ್ಗೆ ಅವರನ್ನು ನೋಡಿದರೆ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ ಎಂದು ನಾಲಿಗೆ ಹರಿಬಿಟ್ಟಿದ್ದ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿಯ ದಲಿತ ಮುಖಂಡರಾದ ಪಡುವಳ್ಳಿ ಹರ್ಷೇಂದ್ರ ಕುಮಾರ್‌ ಎನ್ನುವವರು ದೂರು ನೀಡಿದ್ದಾರೆ.

“ರಾಷ್ಟ್ರೀಯ ಪಕ್ಷವೊಂದರ ನಾಯಕರ ಮೈಬಣ್ಣದ ಬಗ್ಗೆ ಕೀಳಾಗಿ ಮಾತನಾಡಿದ ಜ್ಞಾನೇಂದ್ರರ ಹೇಳಿಕೆಯಿಂದ ನನ್ನ ಮನಸ್ಸಿಗೆ ನೋವಾಗಿದೆ. ನನ್ನ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ, ಪರಿಶಿಷ್ಟ ಜಾತಿ ದೌರ್ಜನ್ಯ ಕಾಯ್ದೆಯನ್ವಯ ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆ ಮಾಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಕೂಡಲೇ ಶಾಸಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

“ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..”  ಎಂದು ಭಾಷಣವೊಂದರಲ್ಲಿ ವರ್ಣ ಭೇದದ ಮಾತನಾಡಿದ ಆರಗ ಜ್ಞಾನೇಂದ್ರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಕ್ಷಮೆ ಯಾಚಿಸಿದ ಆರಗ ಜ್ಞಾನೇಂದ್ರ

“ನನ್ನನ್ನು ಯಾರೂ ತಪ್ಪು ತಿಳಿಯಬಾರದು. ನಾನು ಮಲೆನಾಡಿನ ಪಾಲಿಗೆ ಮರಣ ಶಾಸನವಾಗಿರುವಕಸ್ತೂರಿ ರಂಗನ್‌ ವರದಿಯನ್ನು ಟೀಕಿಸುತ್ತಾ, ಅರಣ್ಯ ಸಚಿವ ಈಶ್ವರ್‌ ಖಂಡಿಸುವ ಭರದಲ್ಲಿ ಖರ್ಗೆಯವರ ಹೆಸರನ್ನು ಹೇಳಿದೆ. ಈ ಕುರಿತು ನಡೆದ ತಪ್ಪಿಗೆ ನಾನು ಖರ್ಗೆಯವರ ಕ್ಷಮೆಯಾಚಿಸುತ್ತೇನೆ” ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾತಾಡುವ ಭರದಲ್ಲಿ ಆರಗ ಜ್ಞಾನೇಂದ್ರ ಬಣ್ಣದ ಬಗ್ಗೆ ಮಾತನಾಡಿದ್ದಾರೆ. ಹಾಗಾಗಿ ಬಿಜೆಪಿ ಪಕ್ಷದ ಪರವಾಗಿ ನಾನು ಕ್ಷಮೆ ಕೇಳುತ್ತೇನೆ. ಕಾಂಗ್ರೆಸ್ ಈ ವಿಷಯವನ್ನು ದೊಡ್ಡದು ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಆರಗ ಜ್ಞಾನೇಂದ್ರ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿಲ್ಲವೇಕೆ? – ಕಿಮ್ಮನೆ ರತ್ನಾಕರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...