Homeಕರ್ನಾಟಕವೀರೇಂದ್ರ ಹೆಗಡೆ ಬೆಂಬಲಿಗರಿಂದ ಸೌಜನ್ಯ ತಾಯಿ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು

ವೀರೇಂದ್ರ ಹೆಗಡೆ ಬೆಂಬಲಿಗರಿಂದ ಸೌಜನ್ಯ ತಾಯಿ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು

- Advertisement -
- Advertisement -

ಅಖಿಲ ಕರ್ನಾಟಕ ಶ್ರೀ ಮಂಜುನಾಥಸ್ವಾಮಿ ಭಕ್ತ ವೃಂದದ ವತಿಯಿಂದ ಶುಕ್ರವಾರ ಉಜಿರೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ತಮ್ಮ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆ ಯತ್ನ ನಡೆದಿದೆ ಎಂದು ಆರೋಪಿಸಿ ಸೌಜನ್ಯ ತಾಯಿ ಕುಸುಮಾವತಿಯವರು ದೂರು ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಮತ್ತು ಅವರ ಕುಟುಂಬ ಸದಸ್ಯರು ಕಾಣಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನಾನಿರತನೊಬ್ಬ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ. ಘಟನೆಯ ವಿಡಿಯೋ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಸೌಜನ್ಯ ತಾಯಿ ಮಾನಹಾನಿಗೆ ಯತ್ನ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಕುಸುಮಾವತಿ, ‘ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ್ದಾರೆ. ಅಲ್ಲದೇ, ತನ್ನ ಮಗನಿಗೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಸೌಜನ್ಯ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ – ಕಾಂಗ್ರೆಸ್

ಧರ್ಮವೆಂದರೆ ನ್ಯಾಯ, ನ್ಯಾಯವನ್ನು ಕೇಳುವುದು ಕೂಡ ಧರ್ಮವೇ.. ಸೌಜನ್ಯ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ, ಸಂತ್ರಸ್ತ ಕುಟುಂಬದ ಮೇಲಿನ ಹಲ್ಲೆ, ಬೆದರಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನೊಂದ ಕುಟುಂಬದ ಮೇಲೆ ದಬ್ಬಾಳಿಕೆ ನಡೆಸುವುದನ್ನು ಧರ್ಮ ಎನ್ನಲಾಗದು. ಪೊಲೀಸರು ಸೌಜನ್ಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸೌಜನ್ಯ ತಾಯಿಯ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆಗೆ ಯತ್ನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...