Homeಕರ್ನಾಟಕದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ...

ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

30 ವರ್ಷದ ಸೋನು ಮಾತನಾಡಿ "ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?" ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ದೆಹಲಿಯ ತುಘಲಕಾಬಾದ್‌ನ ರವಿದಾಸ್ ದೇವಾಲಯವನ್ನು ಧ್ವಂಸಗೊಳಿಸುವುದರ ವಿರುದ್ಧ ಇಂದು ದೆಹಲಿಯಲ್ಲಿ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಆದರೆ ಅದಾದ ಕೆಲವೇ ಸಂದರ್ಭದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಿಗೆ ಗುಂಡು ಹಾರಿಸಲಾಗಿದೆ ಎಂಬ ವದಂತಿಯ ನಂತರ ಪ್ರತಿಭಟನಾಕಾರರು ಬಸ್‌ಗಳನ್ನು ಧ್ವಂಸಗೊಳಿಸಿದರು. ಆಗ ಪ್ರತಿಭಟನಾಕಾರರು ದೇವಾಲಯದ ಸ್ಥಳಕ್ಕೆ ಬರದಂತೆ ತಡೆಯಲು ಪೊಲೀಸರು ಲಾಠಿ ಚಾರ್ಜ್ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯಕ್ಕೆ ದೇವಾಲಯದ ಬಳಿ ಭಾರಿ ಭದ್ರತಾ ಕಾರ್ಡನ್ ಸ್ಥಾಪಿಸಲಾಗಿದೆ.

ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಆಗಸ್ಟ್ 10 ರಂದು ರವಿದಾಸ್ ದೇವಾಲಯವನ್ನು ನೆಲಸಮ ಮಾಡಿತ್ತು. ಇದನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ದಲಿತರು ಇಂದು ದೆಹಲಿಯಲ್ಲಿ ‘ಮಂದೀರ್ ವಹಿ ಬನೇಗಾ’(ಇಲ್ಲೇ ದೇವಸ್ಥಾನ ಕಟ್ಟಿ) ಎಂದು ಕೂಗುತ್ತಾ ರಾಮ್‌ಲೀಲಾ ಮೈದಾನದಿಂದ ತುಘಲಕಾಬಾದ್‌ಗೆ ಮೆರವಣಿಗೆ ನಡೆಸಿದರು.

ಪಂಜಾಬ್, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ಆಗಮಿಸಿದ ಪ್ರತಿಭಟನಾಕಾರರು ಸರ್ಕಾರವು ಜಮೀನಿನ ಜಾಗವನ್ನು ಸಮುದಾಯಕ್ಕೆ ಹಸ್ತಾಂತರಿಸಿ ದೇವಾಲಯವನ್ನು ಪುನರ್ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಇಂದಿನ ಈ ಪ್ರತಿಭಟನೆಯಲ್ಲಿ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಭಾಗವಹಿಸಿ ಸ್ಫೂರ್ತಿ ತುಂಬಿದರೆ, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಸಹ ಪ್ರತಿಭಟನೆಯ ನೇತೃತ್ವ ವಹಿಸಿ ಅಚ್ಚರಿ ಮೂಡಿಸಿದ್ದಾರೆ.

ನಮ್ಮ ಹೋರಾಟವು ಸಮುದಾಯಕ್ಕೆ ಆಗಿರುವ ಅನ್ಯಾಯದ ವಿರುದ್ಧವಾಗಿದೆಯೆ ಹೊರತು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಲ್ಲ ಎಂದು ರಾಜೇಂದ್ರ ಪಾಲ್ ಗೌತಮ್ ಹೇಳಿದ್ದಾರೆ. “ನಾನು ಇಲ್ಲಿ ಸಮುದಾಯದ ಪ್ರತಿನಿಧಿಯಾಗಿರುತ್ತೇನೆ ಮತ್ತು ದೆಹಲಿ ಮಂತ್ರಿ ಅಥವಾ ರಾಜಕಾರಣಿಯಾಗಿ ಅಲ್ಲ. ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ, ಆದರೆ ದಲಿತ ಸಮುದಾಯದ ದೇವಾಲಯಗಳು ಮತ್ತು ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಮಾತ್ರ ದೇಶಾದ್ಯಂತ ಏಕೆ ನೆಲಸಮ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕು?” ಎಂದಿದ್ದಾರೆ.

ದೇವಸ್ಥಾನ ಉಳಿಸುವುದು ಪ್ರಧಾನಿಯವರ ಜವಾಬ್ದಾರಿ: ಚಂದ್ರಶೇಖರ್ ಅಜಾದ್ ರಾವಣ್

ತುಘಲಕಾಬಾದ್‌ನ 600 ವರ್ಷಗಳ ಹಿಂದಿನ ರಾಜ ಸಿಖಂದರ್ ಲೋಧಿ ಅವರು ದಲಿತ ಸಮುದಾಯಕ್ಕೆ ಸೇರಿದ ಭಕ್ತಿ ಚಳವಳಿಯಲ್ಲಿ ಹೆಸರು ಮಾಡಿರುವ ಗುರು ರವಿದಾಸ್ ಅವರಿಗೆ ಈ ಭೂಮಿಯನ್ನು ನೀಡಿದ್ದರು. ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರಿಂದ ಅದು ದಲಿತರ ಭೂಮಿ ಆಗಿತ್ತು. ಆದರೆ 2011 ರಲ್ಲಿ ಡಿಡಿಎ ಅವರು ಕೋರ್ಟ್‍ನಲ್ಲಿ ದಾವೆ ಹೂಡಿ ಕೇಸ್ ಗೆದ್ದು 2019 ರ ಆಗಸ್ಟ್ 10 ರಂದು ಆ ಜಾಗವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿದ್ದಾರೆ. ಅಲ್ಲಿದ್ದ ರವಿದಾಸ್ ದೇವಾಲಯವನ್ನು ಕೆಡವಿದ್ದಾರೆ. ದಲಿತರ ಭೂಮಿಯನ್ನು ಸರ್ಕಾರದ ಭೂಮಿ ಎಂದು ಹೇಳಿ ದಲಿತರ ಮೇಲೆ ದಮನವನ್ನು ಮಾಡಲಾಗುತ್ತಿದೆ. ದೇಶದ ಕೊನೆ ವ್ಯಕ್ತಿಯ ಘನತೆಯ ಜೀವನದ ಜವಾಬ್ದಾರಿಯು ಪ್ರಧಾನ ಮಂತ್ರಿಗಳ ಮೇಲೆ ಮತ್ತು ಮುಖ್ಯಮಂತ್ರಿಗಳ ಮೇಲೆ ಇರುತ್ತದೆ. ಈ ದೇವಾಸ್ಥಾನ ಉಳಿಸುವುದು ಪ್ರಧಾನಿಯವರ ಕರ್ತವ್ಯ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮತ್ತು ಕೇಂದ್ರ ಮಾಜಿ ಸಚಿವ ವಿಜಯ್ ಗೋಯೆಲ್ ಅವರು ಆಮ್ ಆದ್ಮಿ ಪಕ್ಷವು ಈ ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ‘ಇತ್ತೀಚೆಗೆ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಅವರಿಗೆ ಪರಿಹಾರವನ್ನು ನೀಡಿದ್ದೇನೆ ಎಂದಿದ್ದಾರೆ’. “ಸುಪ್ರೀಂ ಕೋರ್ಟ್ ಅನುಮೋದನೆಯ ನಂತರ ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಅವರು ಒಪ್ಪಿದರೆ, ನಾವು ಈ ವಿಷಯವನ್ನು ಡಿಡಿಎಯೊಂದಿಗೆ ಚರ್ಚಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಈ ದೇವಾಲಯದ ಆಂದೋಲನಕ್ಕಾಗಿ ರೂಪುಗೊಂಡ ದಲಿತ ಗುಂಪುಗಳ ಸಂಸ್ಥೆಯಾದ ‘ಅಖಿಲ ಭಾರತೀಯ ಸಂತ ಶಿರೋಮಣಿ ಗುರು ರವಿದಾಸ್ ಮಂದಿರ ಸನ್ಯುಕ್ತಾ ಸನ್ರಕ್ಷಣ್ ಸಮಿತಿಯ ಬ್ಯಾನರ್ ಅಡಿಯಲ್ಲಿ ಒಟ್ಟುಗೂಡಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟವನ್ನು ಮುಂದುವರೆಸಲು ನಿರ್ಧರಿಸಿದರು. ಕೆಲವರು ರಾಮ್‌ಲೀಲಾ ಮೈದಾನದಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಪಂಜಾಬ್‌ನ ಜಲಂಧರ್‌ನಿಂದ ದೆಹಲಿಗೆ ಪ್ರಯಾಣಿಸಿದ ಹನ್ಸರಾಜ್ ರಾಜ್, “ನಮ್ಮ ಬೇಡಿಕೆ ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಿಂತ ಹೇಗೆ ಭಿನ್ನವಾಗಿದೆ? ಆ ನಿರ್ದಿಷ್ಟ ಸಮುದಾಯಕ್ಕೆ ಅದು ತುಂಬಾ ಮುಖ್ಯವಾಗಿದ್ದರೆ, ಇದು ಸಹ ನಮಗೆ ಮುಖ್ಯವಾಗಿದೆ” ಎಂದಿದ್ದಾರೆ.

ಸರ್ಕಾರ ಮತ್ತು ಅರಣ್ಯ ಭೂಮಿಯಲ್ಲಿ ಹಲವು ಧರ್ಮದ ಸಾವಿರಾರು ದೇವಾಲಯಗಳಿವೆ. ಆದರೆ “ಸಂತ ರವಿದಾಸ್ ದೇವಾಲಯವನ್ನು ಮಾತ್ರ ಏಕೆ ಧ್ವಂಸಗೊಳಿಸಲಾಯಿತು? ಇದಕ್ಕೆ ಸರ್ಕಾರ ಉತ್ತರಿಸಬೇಕು” ಎಂದು ಎಂದು ಗಾಜಿಯಾಬಾದ್‌ನ ವಿ.ಪಿ.ಸಿಂಗ್ (60) ಹೇಳಿದ್ದಾರೆ.

30 ವರ್ಷದ ಸೋನು ಮಾತನಾಡಿ “ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ದಲಿತರ ಅಭಿಪ್ರಾಯಗಳನ್ನು ಪರಿಗಣಿಸದೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ನಿಬಂಧನೆಗಳನ್ನು ಸುಪ್ರೀಂ ಕೋರ್ಟ್ ದುರ್ಬಲಗೊಳಿಸಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರ ಆರೋಪಿಸಿದರು.

ಸುಪ್ರೀಂ ಕೋರ್ಟ್ ಏನು ಹೇಳಿದೆ?
ರವಿದಾಸ್ ದೇವಾಲಯದ ವಿಷಯದಲ್ಲಿ ತನ್ನ ಆದೇಶಗಳಿಗೆ “ರಾಜಕೀಯ ಬಣ್ಣ” ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 19 ರ ಸೋಮವಾರ ಹೇಳಿದೆ. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ನ್ಯಾಯಪೀಠವು ಪಂಜಾಬ್, ಹರಿಯಾಣ ಮತ್ತು ದೆಹಲಿ ಸರ್ಕಾರಗಳಿಗೆ, ಈ ವಿಚಾರವಾಗಿ ಯಾವುದೇ ಪ್ರತಿಭಟನೆ ನಡೆದರೆ ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಮತ್ತು  ರಾಜಕೀಯ ಇರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರ ಭಕ್ತಿಗೂ ಯಾರಿಂದನೂ ಅಡ್ಡಿಯಾಗಬಾರದು ಅವರವರ ಹಕ್ಕು ಅವರವರಿಗೆ ದೊರಕಬೇಕು

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...