Homeಮುಖಪುಟನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ: ಶಾ ಹೇಳಿಕೆಗೆ ಸ್ಟಾಲಿನ್ ತಿರುಗೇಟು

ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ: ಶಾ ಹೇಳಿಕೆಗೆ ಸ್ಟಾಲಿನ್ ತಿರುಗೇಟು

- Advertisement -
- Advertisement -

ಯಾವುದೇ ರೀತಿಯ ಹಿಂದಿ ಪ್ರಾಬಲ್ಯ ಮತ್ತು ಹೇರಿಕೆಯನ್ನು ತಮಿಳುನಾಡು ರಾಜ್ಯವು ತಿರಸ್ಕರಿಸುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿಧಾನವಾಗಿಯಾದರೂ ಭಾಷೆಯನ್ನು ವಿರೋಧವಿಲ್ಲದೆ ಸ್ವೀಕರಿಸಬೇಕು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ಅಧಿಕೃತ ಭಾಷೆ ಕುರಿತು ಸಂಸದೀಯ ಸಮಿತಿಯ 38ನೇ ಸಭೆಯಲ್ಲಿ, ‘ಹಿಂದಿಯನ್ನು ಸ್ವೀಕರಿಸುವುದು ನಿಧಾನವಾದರೂ ಅಂತಿಮವಾಗಿ ನಾವು ಅದನ್ನು ಯಾವುದೇ ವಿರೋಧವಿಲ್ಲದೆ ಸ್ವೀಕರಿಸಲೇಬೇಕು’ ಎಂಬ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬಲವಾಗಿ ಖಂಡಿಸಿದ್ದಾರೆ.

ಅಮಿತ್ ಶಾ ಅವರ ಅಭಿಪ್ರಾಯವನ್ನು ಆಕ್ಷೇಪಿಸಿದ ಸ್ಟಾಲಿನ್ ಅವರು, ”ಇದು ಹಿಂದಿ ಮಾತನಾಡದವರನ್ನು ದಮನಿಸುವ ರಾಜಾರೋಷ ಪ್ರಯತ್ನವಾಗಿದೆ. ತಮಿಳುನಾಡು ಯಾವುದೇ ರೂಪದಲ್ಲಿ ಹಿಂದಿಯ ಪ್ರಾಬಲ್ಯ ಮತ್ತು ಹೇರಿಕೆಯನ್ನು ವಿರೋಧಿಸುತ್ತದೆ. ಏಕೆಂದರೆ ಅದು ಇಂತಹ ಕ್ರಮವನ್ನು ಅನುಮೋದಿಸುವ ರಾಜ್ಯವಲ್ಲ. ನಮ್ಮ ಭಾಷೆ ಮತ್ತು ಪರಂಪರೆ ನಮ್ಮನ್ನು ವ್ಯಾಖ್ಯಾನಿಸುತ್ತವೆ. ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ. ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಂತೆ ಹಲವಾರು ರಾಜ್ಯಗಳೂ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿವೆ. ಹಿಂದಿ ಹೇರಿಕೆಗೆ ಹೆಚ್ಚುತ್ತಿರುವ ಪ್ರತಿರೋಧವನ್ನು ಗಮನಕ್ಕೆ ತೆಗೆದುಕೊಳ್ಳಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.

”1965ರ ಹಿಂದಿ ಹೇರಿಕೆ ವಿರುದ್ಧ ಆಂದೋಲನದ ಬೆಂಕಿಯನ್ನು ಮತ್ತೆ ಹೊತ್ತಿಸುವುದು ಅವಿವೇಕದ ನಡೆಯಾಗುತ್ತದೆ” ಎಂದು ಸ್ಟಾಲಿನ್ ಎಚ್ಚರಿಕೆ ನೀಡಿದ್ದಾರೆ.

”ಬಿಜೆಪಿ ನಾಯಕರು ಅನುಸರಿಸುತ್ತಿರುವ ಸೋಗಿನ ರಾಜಕೀಯದ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿದೆ. ತಮಿಳುನಾಡಿನಲ್ಲಿ ತಮಿಳನ್ನು ಪ್ರಾಚೀನ ಭಾಷೆ ಎಂದು ಪ್ರಶಂಸಿಸುವ ಅವರು ದಿಲ್ಲಿಯನ್ನು ತಲುಪಿದಾಗ ವಿಷವನ್ನು ಕಾರುತ್ತಾರೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

1967ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಅಂತಿಮವಾಗಿ ದ್ರಾವಿಡ ಮುನ್ನೇತ್ರ ಕಳಗಂ ಅಧಿಕಾರಕ್ಕೆ ಬರಲು ಕಾರಣವಾದ ತಮಿಳುನಾಡಿನಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಸ್ಟಾಲಿನ್ ಉಲ್ಲೇಖಿಸಿದ್ದಾರೆ.

1960ರ ದಶಕದಿಂದಲೂ ಇಂಗ್ಲಿಷ್ ಮತ್ತು ತಮಿಳು ಎಂಬ ಎರಡು ಭಾಷೆಯ ಸೂತ್ರಕ್ಕೆ ತಮಿಳುನಾಡು ಹೊಂದಿಕೊಂಡಿದೆ. ಕಳೆದ ವರ್ಷ, ಸ್ಟಾಲಿನ್ ಅವರು ಮೋದಿಗೆ ಬರೆದ ಪತ್ರದಲ್ಲಿ, ಬಿಜೆಪಿ ಸರ್ಕಾರವು “ಒಂದು ರಾಷ್ಟ್ರ” ಎನ್ನುವ ಹೆಸರಿನಲ್ಲಿ ಹಿಂದಿ ಹೇರಿಕೆಯ ನಿರಂತರ ಪ್ರಯತ್ನಗಳು ಭಾರತದ ಸಮಗ್ರತೆಗೆ ಹಾನಿಕಾರಕವಾಗಿದೆ ಎಂದು ಬರೆದಿದ್ದಾರೆ.

ತಮಿಳು ಸೇರಿದಂತೆ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಸಮಾನವಾಗಿ ಪರಿಗಣಿಸಬೇಕು ಮತ್ತು ಕೇಂದ್ರ ಸರ್ಕಾರದ ಅಧಿಕೃತ ಭಾಷೆಯ ಸ್ಥಾನಮಾನವನ್ನು ನೀಡಬೇಕು ಎಂದು ಅವರು ಪ್ರತಿಪಾದಿಸಿದರು.

ಈ ನಡುವೆ ಪಿಎಂಕೆ ಸ್ಥಾಪಕ ಎಸ್.ರಾಮದಾಸ್ ಅವರೂ ಶಾ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ. ”ಶಾ ಹೇಳಿಕೆಯು ಹಿಂದಿ ಭಾಷೆಯಲ್ಲಿ ಅವರ ವಿಶ್ವಾಸವನ್ನು ತೋರಿಸುವುದಿಲ್ಲ, ಬದಲಿಗೆ ಹಿಂದಿ ಹೇರುವ ಅವರ ಆಶಯವನ್ನು ಬಹಿರಂಗಗೊಳಿಸಿದೆ. ಹಿಂದಿಯನ್ನು ಹೇರುವ ಪ್ರಯತ್ನಗಳು ಭೂತಕಾಲದಂತೆ ಭವಿಷ್ಯದಲ್ಲಿಯೂ ಯಶಸ್ವಿಯಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...