Homeಮುಖಪುಟಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

ಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಗುರುಗ್ರಾಮ್ ಸೆಕ್ಟರ್ 57ರಲ್ಲಿ ಆದಿತ್ಯವಾರ ಹಿಂದೂ ಮಹಾಪಂಚಾಯತ್ ಹೆಸರಿನಲ್ಲಿ ನೂರಾರು ಮಂದಿ ಸೇರಿದ್ದು, ಮುಸ್ಲಿಮರಿಗೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಕಳೆದ ವಾರ ಕೋಮುಗಲಭೆಯ ಸಂದರ್ಭದಲ್ಲಿ ಹಿಂದುತ್ವದ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ ಉಪ ಇಮಾಮ್‌ರನ್ನು ಹತ್ಯೆಗೈದ ಪ್ರದೇಶದಲ್ಲೇ ಈ ಬೆಳವಣಿಗೆ ನಡೆದಿದೆ.

ಅಂಜುಮನ್ ಮಸೀದಿ ಬಳಿಯಲ್ಲಿ ಇರುವ ಟಿಗ್ರಾ ಹಳ್ಳಿಯಲ್ಲಿ  ಮಹಾಪಂಚಾಯತ್ ನಡೆದಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಮಸೀದಿಯ ಮೇಲೆ ದಾಳಿ ಪ್ರಕರಣದ ಆರೋಪಿತರು ಅಮಾಯಕರು ಎಂದು ಸಭೆಯಲ್ಲಿ  ಸೇರಿದವರು ಹೇಳಿದ್ದಾರೆ. ಆರೋಪಿಗಳ ಹೆಸರನ್ನು 8 ದಿನಗಳ ಒಳಗೆ ಪ್ರಕರಣದಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಪ್ರತಿಭಟನೆ ಮಾಡುವ(ಚಕ್ಕಾ ಜಾಮ್) ಬೆದರಿಕೆಯನ್ನು ಹಾಕಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತರ ಬಗ್ಗೆ ಸಾಕ್ಷಿ ಕೊಡಬೇಕು. ಮಸೀದಿ ಬಳಿ ವಾಸಿಸುವ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ಮತ್ತು ದೌರ್ಜನ್ಯ ಮಾಡಲಾಗುತ್ತಿದೆ. ಇದನ್ನು ನಾವು ಮರುಕಳಿಸಲು ಬಿಡುವುದಿಲ್ಲ ಎಂದು ವಜೀರಾಬಾದ್ ಸೆಕ್ಟರ್ 57ರ ಸರಪಂಚ್ ಸುಬೇ ಸಿಂಗ್ ಬೊಹ್ರಾ ಹೇಳಿರುವುದಾಗಿ ಹಿಂದೂಸ್ತಾನ್  ಟೈಮ್ಸ್ ವರದಿ ಮಾಡಿದೆ.

ಗುರುಗ್ರಾಮ್‌ನಲ್ಲಿ ನೂರಾರು ಮುಸ್ಲಿಂ ಸಮುದಾಯದ ಜನರು ಬಡಗಿಗಳು, ಕ್ಷೌರಿಕರು, ತರಕಾರಿ ಮಾರಾಟಗಾರರು, ಮೆಕ್ಯಾನಿಕ್‌ಗಳು ಮತ್ತು ಕ್ಯಾಬ್ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ನಾವು ಯಾವಾಗಲೂ ಅವರನ್ನು ಬೆಂಬಲಿಸುತ್ತೇವೆ. ಆದರೆ ಈಗ ಅವರು ನಗರದ ಅಶಾಂತಿಗೆ ಕಾರಣವಾಗಿದ್ದು, ಅವರನ್ನು ನಾವು ಬೆಂಬಲಿಸುವುದಿಲ್ಲ. ಇನ್ನು ಮುಸ್ಲಿಮರನ್ನು ನಗರದಲ್ಲಿ ಕೆಲಸ ಮಾಡಲು ಬಿಡಬಾರದು. ಅಪಾರ್ಟ್‌ಮೆಂಟ್ ಅಥವಾ ಕೊಳೆಗೇರಿಗಳನ್ನು ಬಾಡಿಗೆಗೆ ನೀಡದಂತೆ ನಾವು ನಗರದ ಜನರಿಗೆ ಮನವಿ ಮಾಡುತ್ತೇವೆ ಎಂದು ಬಜರಂಗದಳದ ಸದಸ್ಯ ಕುಲಭೂಷಣ್ ಭಾರದ್ವಾಜ್ ಹೇಳಿದ್ದಾರೆ.

ಗುರುಗ್ರಾಮ್ ನ ಹಿರಿಯ ಪೊಲೀಸ್ ಅಧಿಕಾರಿ ವಿಕಾಶ್ ಕೌಶಿಕ್ ಅವರು ನಿನ್ನೆ ಎಎನ್ ಐ ಜೊತೆ ಮಾತನಾಡಿ, ಕ್ರಾಯಕ್ರಮ ಶಾಂತಿಯಿಂದ ನಡೆಯಲಿದೆ ಎಂದು ಸಂಘಟಕರು ಪೊಲೀಸರಿಗೆ ತಿಳಿಸಿದ್ದಾರೆ.ಕಳೆದ ಎರಡು ಮೂರು ದಿನಗಳಿಂದ ಗುರುಗ್ರಾಮ ಶಾಂತಿಯುತವಾಗಿದೆ. ಯಾವುದೇ ಅಹಿತಕರ  ಘಟನೆ ವರದಿಯಾಗಿಲ್ಲ. ಇಂದಿನ ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ನಾವು ಭಾವಿಸುತ್ತೇವೆ. ನಾವು ಎಲ್ಲರೊಂದಿಗೆ ಮಾತುಕತೆ ನಡೆಸಿದ್ದೇವೆ. ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ಅವರು ನಮಗೆ ಭರವಸೆ ನೀಡಿದ್ದಾರೆ  ಪಂಚಾಯತ್ 9 ಗಂಟೆಗೆ ಪ್ರಾರಂಭವಾಗುತ್ತದೆ. ಸುಮಾರು 500-1,000 ಜನರು ಬರುವ ನಿರೀಕ್ಷೆಯಿದೆ ಎಂದು  ಹೇಳಿದ್ದರು.ಆದರೆ, ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರು ಏಕೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತಿಲ್ಲ ಎಂದು ಅವರು ಹೇಳಲಿಲ್ಲ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಭಾನುವಾರ ಈ ಬಹಿಷ್ಕಾರದ ಕರೆಯನ್ನು  ಖಂಡಿಸಿದೆ. ಪಕ್ಷದ ನಾಲ್ವರು ಸದಸ್ಯರ ನಿಯೋಗ ಭಾನುವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ.

ಹರ್ಯಾಣ ಜಿಲ್ಲೆಯ ರೇವಾರಿ ಬ್ಲಾಕ್ ದಹಿನಾದಿಂದ ಜೈನಾಬಾದ್ ಪಂಚಾಯತ್ ಸರಪಂಚ ಭಾವನಾ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ,ಬಿಜೆಪಿ ಆಡಳಿತದಲ್ಲಿ ವ್ಯವಸ್ಥಿತವಾಗಿ ಬೆಳೆಸಲಾಗುತ್ತಿರುವ ಅಲ್ಪಸಂಖ್ಯಾತರ ವಿರುದ್ಧ ಸಂಘಟಿತ ತಾರತಮ್ಯದ ಕಹಿ ವಾಸ್ತವವನ್ನು ಈ ಬೆಳವಣಿಗೆ ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.

ಪತ್ರದಲ್ಲಿ ಆಘಾತಕಾರಿ ವಿಚಾರ ಉಲ್ಲೇಖಿಸಲಾಗಿದೆ. ಪಂಚಾಯತ್ ಪ್ರದೇಶದಲ್ಲಿ ಮುಸ್ಲಿಮರು ಅಥವಾ ದುಷ್ಕರ್ಮಿಗಳು ಯಾವುದೇ ವ್ಯಾಪಾರ  ಚಟುವಟಿಕೆಯನ್ನು ಮಾಡಲು ಅನುಮತಿಸುವುದಿಲ್ಲ ಎಂಬ ನಿರ್ಧಾರವನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸುತ್ತದೆ. ಇದರಲ್ಲಿ ಮುಸ್ಲಿಮರನ್ನು ಕಳ್ಳರು ಮತ್ತು ದನ-ಕಳ್ಳರಿಗೆ ಸಮನಾಗಿರುತ್ತದೆ ಎಂದು ಹೇಳಲಾಗಿದೆ ಎನ್ನಲಾಗಿದೆ.

ಗ್ರಾಮದಲ್ಲಿ ಶಾಂತಿಯನ್ನು ಖಾತ್ರಿಪಡಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ, ಗ್ರಾಮದಲ್ಲಿ ಮುಸ್ಲಿಮರ ಉಪಸ್ಥಿತಿಯು ಕೋಮುಗಲಭೆಗೆ ಏಕೈಕ ಕಾರಣವಾಗಿದೆ ಎಂದು ಬಿಂಬಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಮಾಲೋಚನಾ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಆಘಾತಕಾರಿ ಜಾತಿ ನಿಂದನೆ-ವರದಿ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...