Homeಮುಖಪುಟಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

ಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಗುರುಗ್ರಾಮ್ ಸೆಕ್ಟರ್ 57ರಲ್ಲಿ ಆದಿತ್ಯವಾರ ಹಿಂದೂ ಮಹಾಪಂಚಾಯತ್ ಹೆಸರಿನಲ್ಲಿ ನೂರಾರು ಮಂದಿ ಸೇರಿದ್ದು, ಮುಸ್ಲಿಮರಿಗೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಕಳೆದ ವಾರ ಕೋಮುಗಲಭೆಯ ಸಂದರ್ಭದಲ್ಲಿ ಹಿಂದುತ್ವದ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ ಉಪ ಇಮಾಮ್‌ರನ್ನು ಹತ್ಯೆಗೈದ ಪ್ರದೇಶದಲ್ಲೇ ಈ ಬೆಳವಣಿಗೆ ನಡೆದಿದೆ.

ಅಂಜುಮನ್ ಮಸೀದಿ ಬಳಿಯಲ್ಲಿ ಇರುವ ಟಿಗ್ರಾ ಹಳ್ಳಿಯಲ್ಲಿ  ಮಹಾಪಂಚಾಯತ್ ನಡೆದಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಮಸೀದಿಯ ಮೇಲೆ ದಾಳಿ ಪ್ರಕರಣದ ಆರೋಪಿತರು ಅಮಾಯಕರು ಎಂದು ಸಭೆಯಲ್ಲಿ  ಸೇರಿದವರು ಹೇಳಿದ್ದಾರೆ. ಆರೋಪಿಗಳ ಹೆಸರನ್ನು 8 ದಿನಗಳ ಒಳಗೆ ಪ್ರಕರಣದಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಪ್ರತಿಭಟನೆ ಮಾಡುವ(ಚಕ್ಕಾ ಜಾಮ್) ಬೆದರಿಕೆಯನ್ನು ಹಾಕಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತರ ಬಗ್ಗೆ ಸಾಕ್ಷಿ ಕೊಡಬೇಕು. ಮಸೀದಿ ಬಳಿ ವಾಸಿಸುವ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ಮತ್ತು ದೌರ್ಜನ್ಯ ಮಾಡಲಾಗುತ್ತಿದೆ. ಇದನ್ನು ನಾವು ಮರುಕಳಿಸಲು ಬಿಡುವುದಿಲ್ಲ ಎಂದು ವಜೀರಾಬಾದ್ ಸೆಕ್ಟರ್ 57ರ ಸರಪಂಚ್ ಸುಬೇ ಸಿಂಗ್ ಬೊಹ್ರಾ ಹೇಳಿರುವುದಾಗಿ ಹಿಂದೂಸ್ತಾನ್  ಟೈಮ್ಸ್ ವರದಿ ಮಾಡಿದೆ.

ಗುರುಗ್ರಾಮ್‌ನಲ್ಲಿ ನೂರಾರು ಮುಸ್ಲಿಂ ಸಮುದಾಯದ ಜನರು ಬಡಗಿಗಳು, ಕ್ಷೌರಿಕರು, ತರಕಾರಿ ಮಾರಾಟಗಾರರು, ಮೆಕ್ಯಾನಿಕ್‌ಗಳು ಮತ್ತು ಕ್ಯಾಬ್ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ನಾವು ಯಾವಾಗಲೂ ಅವರನ್ನು ಬೆಂಬಲಿಸುತ್ತೇವೆ. ಆದರೆ ಈಗ ಅವರು ನಗರದ ಅಶಾಂತಿಗೆ ಕಾರಣವಾಗಿದ್ದು, ಅವರನ್ನು ನಾವು ಬೆಂಬಲಿಸುವುದಿಲ್ಲ. ಇನ್ನು ಮುಸ್ಲಿಮರನ್ನು ನಗರದಲ್ಲಿ ಕೆಲಸ ಮಾಡಲು ಬಿಡಬಾರದು. ಅಪಾರ್ಟ್‌ಮೆಂಟ್ ಅಥವಾ ಕೊಳೆಗೇರಿಗಳನ್ನು ಬಾಡಿಗೆಗೆ ನೀಡದಂತೆ ನಾವು ನಗರದ ಜನರಿಗೆ ಮನವಿ ಮಾಡುತ್ತೇವೆ ಎಂದು ಬಜರಂಗದಳದ ಸದಸ್ಯ ಕುಲಭೂಷಣ್ ಭಾರದ್ವಾಜ್ ಹೇಳಿದ್ದಾರೆ.

ಗುರುಗ್ರಾಮ್ ನ ಹಿರಿಯ ಪೊಲೀಸ್ ಅಧಿಕಾರಿ ವಿಕಾಶ್ ಕೌಶಿಕ್ ಅವರು ನಿನ್ನೆ ಎಎನ್ ಐ ಜೊತೆ ಮಾತನಾಡಿ, ಕ್ರಾಯಕ್ರಮ ಶಾಂತಿಯಿಂದ ನಡೆಯಲಿದೆ ಎಂದು ಸಂಘಟಕರು ಪೊಲೀಸರಿಗೆ ತಿಳಿಸಿದ್ದಾರೆ.ಕಳೆದ ಎರಡು ಮೂರು ದಿನಗಳಿಂದ ಗುರುಗ್ರಾಮ ಶಾಂತಿಯುತವಾಗಿದೆ. ಯಾವುದೇ ಅಹಿತಕರ  ಘಟನೆ ವರದಿಯಾಗಿಲ್ಲ. ಇಂದಿನ ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ನಾವು ಭಾವಿಸುತ್ತೇವೆ. ನಾವು ಎಲ್ಲರೊಂದಿಗೆ ಮಾತುಕತೆ ನಡೆಸಿದ್ದೇವೆ. ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ಅವರು ನಮಗೆ ಭರವಸೆ ನೀಡಿದ್ದಾರೆ  ಪಂಚಾಯತ್ 9 ಗಂಟೆಗೆ ಪ್ರಾರಂಭವಾಗುತ್ತದೆ. ಸುಮಾರು 500-1,000 ಜನರು ಬರುವ ನಿರೀಕ್ಷೆಯಿದೆ ಎಂದು  ಹೇಳಿದ್ದರು.ಆದರೆ, ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರು ಏಕೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತಿಲ್ಲ ಎಂದು ಅವರು ಹೇಳಲಿಲ್ಲ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಭಾನುವಾರ ಈ ಬಹಿಷ್ಕಾರದ ಕರೆಯನ್ನು  ಖಂಡಿಸಿದೆ. ಪಕ್ಷದ ನಾಲ್ವರು ಸದಸ್ಯರ ನಿಯೋಗ ಭಾನುವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ.

ಹರ್ಯಾಣ ಜಿಲ್ಲೆಯ ರೇವಾರಿ ಬ್ಲಾಕ್ ದಹಿನಾದಿಂದ ಜೈನಾಬಾದ್ ಪಂಚಾಯತ್ ಸರಪಂಚ ಭಾವನಾ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ,ಬಿಜೆಪಿ ಆಡಳಿತದಲ್ಲಿ ವ್ಯವಸ್ಥಿತವಾಗಿ ಬೆಳೆಸಲಾಗುತ್ತಿರುವ ಅಲ್ಪಸಂಖ್ಯಾತರ ವಿರುದ್ಧ ಸಂಘಟಿತ ತಾರತಮ್ಯದ ಕಹಿ ವಾಸ್ತವವನ್ನು ಈ ಬೆಳವಣಿಗೆ ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.

ಪತ್ರದಲ್ಲಿ ಆಘಾತಕಾರಿ ವಿಚಾರ ಉಲ್ಲೇಖಿಸಲಾಗಿದೆ. ಪಂಚಾಯತ್ ಪ್ರದೇಶದಲ್ಲಿ ಮುಸ್ಲಿಮರು ಅಥವಾ ದುಷ್ಕರ್ಮಿಗಳು ಯಾವುದೇ ವ್ಯಾಪಾರ  ಚಟುವಟಿಕೆಯನ್ನು ಮಾಡಲು ಅನುಮತಿಸುವುದಿಲ್ಲ ಎಂಬ ನಿರ್ಧಾರವನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸುತ್ತದೆ. ಇದರಲ್ಲಿ ಮುಸ್ಲಿಮರನ್ನು ಕಳ್ಳರು ಮತ್ತು ದನ-ಕಳ್ಳರಿಗೆ ಸಮನಾಗಿರುತ್ತದೆ ಎಂದು ಹೇಳಲಾಗಿದೆ ಎನ್ನಲಾಗಿದೆ.

ಗ್ರಾಮದಲ್ಲಿ ಶಾಂತಿಯನ್ನು ಖಾತ್ರಿಪಡಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ, ಗ್ರಾಮದಲ್ಲಿ ಮುಸ್ಲಿಮರ ಉಪಸ್ಥಿತಿಯು ಕೋಮುಗಲಭೆಗೆ ಏಕೈಕ ಕಾರಣವಾಗಿದೆ ಎಂದು ಬಿಂಬಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...