Homeಕರ್ನಾಟಕಮೈತ್ರಿ ಸರ್ಕಾರ ಪತನಕ್ಕೆ ಯಡಿಯೂರಪ್ಪನವರೊಂದಿಗೆ ಸಿದ್ದರಾಮಯ್ಯ ಸಾಥ್: ಸಂದರ್ಶನದಲ್ಲಿ ದೇವೇಗೌಡರ ಆರೋಪ

ಮೈತ್ರಿ ಸರ್ಕಾರ ಪತನಕ್ಕೆ ಯಡಿಯೂರಪ್ಪನವರೊಂದಿಗೆ ಸಿದ್ದರಾಮಯ್ಯ ಸಾಥ್: ಸಂದರ್ಶನದಲ್ಲಿ ದೇವೇಗೌಡರ ಆರೋಪ

- Advertisement -
- Advertisement -

ಕಳೆದ ಒಂದೂವರೆ ವರ್ಷದಿಂದ ಯಾವುದೇ ವಿವಾದಾತ್ಮಕ ಹೇಳಿಕೆ ಕೊಡದೇ ಅಂತರ ಕಾಯ್ದುಕೊಂಡಿದ್ದ ಮಾಜಿ ಪ್ರಧಾನಿ ದೇವೆಗೌಡರು ಈಗ ಮೈತ್ರಿ ಸರ್ಕಾರದ ಪತನದ ನಂತರ ಅದರ ಹೊಣೆಯನ್ನು ಸಿದ್ದರಾಮಯ್ಯನವರ ತಲೆಗೆ ಕಟ್ಟಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ತಿರುವು ತೆಗೆದುಕೊಳ್ಳಬಹುದಾದ ವಿಷಯವಾಗಿದೆ. ದಿ ಹಿಂದು ಪತ್ರಿಕೆಯ ಶರತ್ ಎಸ್. ಶ್ರೀವತ್ಸ ರವರು ದೇವೇಗೌಡರವರೊಂದಿಗೆ ನಡೆಸಿದ ಸಂದರ್ಶನವನ್ನು ಕನ್ನಡ ಓದುಗರಿಗಾಗಿ ನಿಖಿಲ್ ಕೋಲ್ಪೆಯವರು ಅನುವಾದಿಸಿದ್ದಾರೆ. ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ

ಕೃಪೆ: ದಿ ಹಿಂದು
ಅನುವಾದ: ನಿಖಿಲ್ ಕೋಲ್ಪೆ

ಪ್ರಶ್ನೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಎಡವಟ್ಟಾದುದು ಎಲ್ಲಿ?

ಕಾಂಗ್ರೆಸ್‌ನ ಉದ್ದೇಶ ಬಿಜೆಪಿಯನ್ನು ಹೊರಗಿಡುವುದಾಗಿತ್ತು; ಆದರೆ, ಸಿದ್ದರಾಮಯ್ಯ ಈ ನಿರ್ಧಾರಕ್ಕೆ ಒಗ್ಗಿಕೊಳ್ಳಲಿಲ್ಲ. ಸ್ಪರ್ಧೆ ಅವರ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ಇತ್ತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ನೋಡುವುದು ಅವರಿಗೆ ಕಷ್ಟವಾಗಿತ್ತು. ಅವರಿಗೆ ನೋವಾಗಿತ್ತು, ಸಿಟ್ಟೂ ಬಂದಿತ್ತು. ಮೈಸೂರಿನಲ್ಲಿ (ಚಾಮುಂಡೇಶ್ವರಿ) ತನ್ನ ಸೋಲಿನ ಬಳಿಕ ಜೆಡಿಎಸ್ ಪಕ್ಷವನ್ನು ನಾಶಗೊಳಿಸುವ ಅವರ ನಿರ್ಧಾರ ಇನ್ನಷ್ಟು ಬಲವಾಯಿತು.

ಪ್ರಶ್ನೆ: ಸಮ್ಮಿಶ್ರ ಸರಕಾರದ ವೈಫಲ್ಯಕ್ಕೆ ನೀವು ಸಿದ್ದರಾಮಯ್ಯ ಒಬ್ಬರನ್ನೇ ಹೊಣೆಮಾಡುತ್ತೀರಾ?

ಮೈತ್ರಿ ಸರಕಾರದ ಕುರಿತು ನಿರ್ಧಾರಕ್ಕೆ ಬರುವ ಮೊದಲು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಜೊತೆ ಸಮಾಲೋಚನೆ ನಡೆಸಿರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ನನ್ನ ಮತ್ತು ನನ್ನ ಮೊಮ್ಮಗನ ಸೋಲಿಗೆ ಸಿದ್ದರಾಮಯ್ಯ ಹೊಣೆ ಎಂದು ಅವರ ಸ್ವಂತ ಬೆಂಬಲಿಗರೇ (ಬಂಡುಕೋರ ಕಾಂಗ್ರೆಸಿಗರು) ಬಹಿರಂಗವಾಗಿ ಹೇಳಿದ್ದಾರೆ. ನಮ್ಮ ವಿರುದ್ದ ಕೆಲಸ ಮಾಡಿದ ಕಾಂಗ್ರೆಸಿಗರಿಗೆ ಅವರು ನೋಟೀಸು ನೀಡಿದ್ದರೆಯೆ? ಕಾಂಗ್ರೆಸ್ ಒಳಗೆಯೇ ಈಗ ಸಿದ್ದರಾಮಯ್ಯರನ್ನು ಪ್ರಶ್ನಿಸಬಲ್ಲವರಾಗಲೀ, ಅವರ ವಿರುದ್ದ ಸ್ಪರ್ಧಿಸುವವರಾಗಲೀ ಯಾರೂ ಇಲ್ಲ.

ಪ್ರಶ್ನೆ: ಅವರು ಅದನ್ನು ಮಾಡಿದ್ದಾದರೂ ಏಕೆ?

ಸಿದ್ದರಾಮಯ್ಯ ಅವರ ಗುರಿ ಎಂದರೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ, ತಾನು ಪ್ರತಿಪಕ್ಷದ ನಾಯಕನಾಗುವುದು. ಅವರು ಮತ್ತು ಯಡಿಯೂರಪ್ಪ ಹಿಂದೆ ಜೊತೆಯಲ್ಲಿ ಕೆಲಸ ಮಾಡಿದ್ದಿದೆ. ಬಳ್ಳಾರಿಗೆ ಪಾದಯಾತ್ರೆ (ಅಕ್ರಮ ಗಣಿಗಾರಿಕೆ ವಿರುದ್ಧ) ಹೋದದ್ದು ಬಿಟ್ಟರೆ, ಪ್ರತಿಪಕ್ಷ ನಾಯಕರಾಗಿ ಅವರು ಬೇರೇನು ಮಾಡಿದ್ದಾರೆ? ಯಡಿಯೂರಪ್ಪ ಸರಕಾರದ ವಿರುದ್ಧ ಹೋರಾಟ ಮಾಡಿದವರು ಯಾರು? ನಿಜವಾದ ಹೋರಾಟಗಾರ ಕುಮಾರಸ್ವಾಮಿ. ಸಿದ್ದರಾಮಯ್ಯ ಕೇವಲ ಮೆಲ್ನೋಟಕ್ಕೆ ಮಾತ್ರ ಇದ್ದಂತೆ ತೋರಿಸಿದರು.

ಪ್ರಶ್ನೆ: ಆದರೆ ಅವರು ಒಂದು ದಶಕಕ್ಕೂ ಹಿಂದೆ ಪಕ್ಷದಿಂದ ಹೊರಹೋದಾಗಿನಿಂದಲೇ ಜೆಡಿಎಸ್‌ಗೆ ವಿರೋಧವಿದ್ದಾರೆ ಅಲ್ಲವೇ?

ಸಿದ್ದರಾಮಯ್ಯ ಜೆಡಿಎಸ್‌ಗೆ ಹಾನಿ ಮಾಡಲು ಬಯಸುತ್ತಾರೆ ಎಂಬುದು ಹೊಸ ವಿಷಯವಲ್ಲ. 2016ರ ರಾಜ್ಯಸಭಾ ಚುನಾವಣೆಯ ವೇಳೆ ನಮ್ಮ ಎಂಟು ಶಾಸಕರನ್ನು ಅವರು ಹೊತ್ತೊಯ್ದಿದ್ದರು. ವಾಸ್ತವವಾಗಿ ನಮ್ಮ ಪಕ್ಷಕ್ಕೆ ಹಾನಿ ಮಾಡುವ ಅವರ ಕಾರ್ಯಾಚರಣೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನೆರವಿನೊಂದಿಗೆ 2004ರಲ್ಲಿಯೇ ಆರಂಭವಾಗಿತ್ತು. ಅಹಿಂದ ಸಮಾವೇಶಗಳಲ್ಲಿ ಎನ್. ಧರಂಸಿಂಗ್ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗಲೂ ಕಾಂಗ್ರೆಸ್ ನಾಯಕರು ನನ್ನ ಮೇಲೆ ದಾಳಿ ನಡೆಸಿದರು; ಮತ್ತಾಗ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಆಗಿದ್ದರು. ಇದು ಜೆಡಿಎಸ್‌ನಿಂದ ಅವರ ಉಚ್ಛಾಟನೆಗೆ ಕಾರಣವಾಯಿತು….

ನಾನು 1996ರಲ್ಲಿ ಪ್ರಧಾನಮಂತ್ರಿ ಆಗಲು ದಿಲ್ಲಿಗೆ ಹೋದಾಗ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಅವರು ಕೋಪಗೊಂಡಿದ್ದರು; ಮತ್ತೊಮ್ಮೆ 2004ರಲ್ಲಿ ಸಮ್ಮಿಶ್ರ ಸರಕಾರ ರಚನೆಯಾದಾಗ. 2004ರಲ್ಲಿ ನಾನು ಅವರನ್ನು ಮುಖ್ಯಮಂತ್ರಿ ಮಾಡಲು ಎಷ್ಟೊಂದು ಪ್ರಯತ್ನಪಟ್ಟೆ ಎಂಬುದನ್ನು ಕಾಂಗ್ರೆಸ್‌ನ ತಾತ್ಕಾಲಿಕ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅವರಿಗಾಗಿ ನಾನು- ತನ್ನನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಬೇಕೆಂಬ ಎಸ್.ಎಂ. ಕೃಷ್ಣ ಅವರ ಮನವಿಯನ್ನೂ ಒಪ್ಪಿಕೊಂಡಿರಲಿಲ್ಲ.

ಪ್ರಶ್ನೆ: ಪರಿಣಾಮ ಏನಾಗಿತ್ತು?

ನಮ್ಮನ್ನು ನಾಶಮಾಡಲು ಅವರು ಮಾಡಿದ ಪ್ರಯತ್ನದ ಪರಿಣಾಮವಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ 130ರಿಂದ 79ಕ್ಕೆ ಕುಸಿಯಿತು. ಶಾದಿಭಾಗ್ಯ ಮತ್ತು ಬಾಕಿ ಎಲ್ಲಾ ಭಾಗ್ಯಗಳಿಗೆ ಏನಾಯಿತು? ಅಹಿಂದಕ್ಕೆ ಏನಾಯಿತು? ಅವರಿಂದ ತಪ್ಪುದಾರಿಗಿಳಿದ ರಾಹುಲ್ ಗಾಂಧಿ ನಮ್ಮನ್ನು ಹಾಸನದಲ್ಲಿ ಬಿಜೆಪಿಯ ಬಿ. ಟೀಮ್ ಎಂದು ಕರೆದರು. ಪರಿಣಾಮವಾಗಿ ಹಾಸನ ಬಿಜೆಪಿ ಪರವಾಯಿತು ಮತ್ತು ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಮೊದಲ ಬಾರಿಗೆ 14 ಸ್ಥಾನಗಳನ್ನು ಗೆದ್ದಿತು. ಇವತ್ತು ಹಾಸನ ಮತ್ತು ಮಂಡ್ಯದಲ್ಲಿ ಬಿಜೆಪಿ ನುಸುಳಲು ಪ್ರಯತ್ನಿಸುತ್ತಿದೆ ಎಂದರೆ, ಮತ್ತೆ ಅವರ ಕಾರಣದಿಂದ. ಅವರು ಪರೋಕ್ಷವಾಗಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯನ್ನು (ಸುಮಲತಾ) ಮಂಡ್ಯದಲ್ಲಿ ಬೆಂಬಲಿಸಿದರು.

ಪ್ರಶ್ನೆ: ಇತ್ತೀಚೆಗೆ ನೀವವರನ್ನು ಸಂಪರ್ಕಿಸಲು ಯತ್ನಿಸಿದ್ದೀರಾ?

ನನ್ನನ್ನು ನಂಬಿ,  ಮೈತ್ರಿ ಸರಕಾರ ಆದ ಮೇಲೆ ನಾನು ಅವರಲ್ಲಿ ಹೋಗಿ, ಎರಡು ಸಲ ರಾಜ್ಯದಲ್ಲಿ ಜಂಟಿ ಯಾತ್ರೆ ಮಾಡೋಣ ಎಂದು ವಿನಂತಿದೆ. ಹಿಂದಿನದ್ದು ಮರೆಯೋಣ ಎಂದೆ. ಆದರೂ ಏನೂ ಆಗಲಿಲ್ಲ.

ಪ್ರಶ್ನೆ: ಸದ್ಯಕ್ಕೆ ಕಾಂಗ್ರೆಸ್ ಜೊತೆ ನಿಮ್ಮ ಹೊಂದಾಣಿಕೆ ಏನು? ಒಂದುವೇಳೆ ಉಪಚುನಾವಣೆ ನಡೆದರೆ, ಎರಡೂ ಪಕ್ಷಗಳು ಜೊತೆಗೆ ಬರುತ್ತವೆಯೆ?

ಕಾಂಗ್ರೆಸ್ ಜೊತೆ ಯಾವುದೇ ಸಂಪರ್ಕ ಇಲ್ಲ. ಕುಮಾರಸ್ವಾಮಿ ಕೂಡಾ ಹಾಗೆ ಮಾಡುತ್ತಾರೆ ಎಂದು ನನಗನಿಸುವುದಿಲ್ಲ. ಸಿದ್ದರಾಮಯ್ಯ ಹೇಳುವುದೇನೆಂದರೆ ದೇವೇಗೌಡರ ಜೊತೆ ಹೋಗಿ ತಾವು ಸೋತೆವು ಎಂದು. (ನಗು) ಯಾವುದೇ ಸ್ಥಳೀಯ ನಾಯಕರು ಮಾತನಾಡಲು ಸಿದ್ಧರಿಲ್ಲ. ಸಿದ್ದರಾಮಯ್ಯ ಅವರು ಬಲಪ್ರದರ್ಶನ ಮಾಡಲು ಬಯಸುತ್ತಿದ್ದಾರೆ. ಆದರೆ, ಸೋನಿಯಾ ಗಾಂಧಿಯವರು ಉಪಚುನಾವಣೆಯಲ್ಲಿ ಸ್ಥಾನ ಹಂಚಿಕೆ ವಿಷಯ ಮಾತನಾಡಿದರೆ, ಅದು ಬೇರೆಯೇ ವಿಷಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ? ಬೆಕ್ಕು ಕಣ್ಣುಮುಚ್ಚಿ ಹಾಲುಕುಡಿಯುತ್ತಿತಾ ತಿಳಿದುಕೊಂಡಿರುವಂತಿದೆ…family politics dangerous to democracy

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...