Homeಕರ್ನಾಟಕಮೈತ್ರಿ ಸರ್ಕಾರ ಪತನಕ್ಕೆ ಯಡಿಯೂರಪ್ಪನವರೊಂದಿಗೆ ಸಿದ್ದರಾಮಯ್ಯ ಸಾಥ್: ಸಂದರ್ಶನದಲ್ಲಿ ದೇವೇಗೌಡರ ಆರೋಪ

ಮೈತ್ರಿ ಸರ್ಕಾರ ಪತನಕ್ಕೆ ಯಡಿಯೂರಪ್ಪನವರೊಂದಿಗೆ ಸಿದ್ದರಾಮಯ್ಯ ಸಾಥ್: ಸಂದರ್ಶನದಲ್ಲಿ ದೇವೇಗೌಡರ ಆರೋಪ

- Advertisement -
- Advertisement -

ಕಳೆದ ಒಂದೂವರೆ ವರ್ಷದಿಂದ ಯಾವುದೇ ವಿವಾದಾತ್ಮಕ ಹೇಳಿಕೆ ಕೊಡದೇ ಅಂತರ ಕಾಯ್ದುಕೊಂಡಿದ್ದ ಮಾಜಿ ಪ್ರಧಾನಿ ದೇವೆಗೌಡರು ಈಗ ಮೈತ್ರಿ ಸರ್ಕಾರದ ಪತನದ ನಂತರ ಅದರ ಹೊಣೆಯನ್ನು ಸಿದ್ದರಾಮಯ್ಯನವರ ತಲೆಗೆ ಕಟ್ಟಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ತಿರುವು ತೆಗೆದುಕೊಳ್ಳಬಹುದಾದ ವಿಷಯವಾಗಿದೆ. ದಿ ಹಿಂದು ಪತ್ರಿಕೆಯ ಶರತ್ ಎಸ್. ಶ್ರೀವತ್ಸ ರವರು ದೇವೇಗೌಡರವರೊಂದಿಗೆ ನಡೆಸಿದ ಸಂದರ್ಶನವನ್ನು ಕನ್ನಡ ಓದುಗರಿಗಾಗಿ ನಿಖಿಲ್ ಕೋಲ್ಪೆಯವರು ಅನುವಾದಿಸಿದ್ದಾರೆ. ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ

ಕೃಪೆ: ದಿ ಹಿಂದು
ಅನುವಾದ: ನಿಖಿಲ್ ಕೋಲ್ಪೆ

ಪ್ರಶ್ನೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಎಡವಟ್ಟಾದುದು ಎಲ್ಲಿ?

ಕಾಂಗ್ರೆಸ್‌ನ ಉದ್ದೇಶ ಬಿಜೆಪಿಯನ್ನು ಹೊರಗಿಡುವುದಾಗಿತ್ತು; ಆದರೆ, ಸಿದ್ದರಾಮಯ್ಯ ಈ ನಿರ್ಧಾರಕ್ಕೆ ಒಗ್ಗಿಕೊಳ್ಳಲಿಲ್ಲ. ಸ್ಪರ್ಧೆ ಅವರ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ಇತ್ತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ನೋಡುವುದು ಅವರಿಗೆ ಕಷ್ಟವಾಗಿತ್ತು. ಅವರಿಗೆ ನೋವಾಗಿತ್ತು, ಸಿಟ್ಟೂ ಬಂದಿತ್ತು. ಮೈಸೂರಿನಲ್ಲಿ (ಚಾಮುಂಡೇಶ್ವರಿ) ತನ್ನ ಸೋಲಿನ ಬಳಿಕ ಜೆಡಿಎಸ್ ಪಕ್ಷವನ್ನು ನಾಶಗೊಳಿಸುವ ಅವರ ನಿರ್ಧಾರ ಇನ್ನಷ್ಟು ಬಲವಾಯಿತು.

ಪ್ರಶ್ನೆ: ಸಮ್ಮಿಶ್ರ ಸರಕಾರದ ವೈಫಲ್ಯಕ್ಕೆ ನೀವು ಸಿದ್ದರಾಮಯ್ಯ ಒಬ್ಬರನ್ನೇ ಹೊಣೆಮಾಡುತ್ತೀರಾ?

ಮೈತ್ರಿ ಸರಕಾರದ ಕುರಿತು ನಿರ್ಧಾರಕ್ಕೆ ಬರುವ ಮೊದಲು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಜೊತೆ ಸಮಾಲೋಚನೆ ನಡೆಸಿರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ನನ್ನ ಮತ್ತು ನನ್ನ ಮೊಮ್ಮಗನ ಸೋಲಿಗೆ ಸಿದ್ದರಾಮಯ್ಯ ಹೊಣೆ ಎಂದು ಅವರ ಸ್ವಂತ ಬೆಂಬಲಿಗರೇ (ಬಂಡುಕೋರ ಕಾಂಗ್ರೆಸಿಗರು) ಬಹಿರಂಗವಾಗಿ ಹೇಳಿದ್ದಾರೆ. ನಮ್ಮ ವಿರುದ್ದ ಕೆಲಸ ಮಾಡಿದ ಕಾಂಗ್ರೆಸಿಗರಿಗೆ ಅವರು ನೋಟೀಸು ನೀಡಿದ್ದರೆಯೆ? ಕಾಂಗ್ರೆಸ್ ಒಳಗೆಯೇ ಈಗ ಸಿದ್ದರಾಮಯ್ಯರನ್ನು ಪ್ರಶ್ನಿಸಬಲ್ಲವರಾಗಲೀ, ಅವರ ವಿರುದ್ದ ಸ್ಪರ್ಧಿಸುವವರಾಗಲೀ ಯಾರೂ ಇಲ್ಲ.

ಪ್ರಶ್ನೆ: ಅವರು ಅದನ್ನು ಮಾಡಿದ್ದಾದರೂ ಏಕೆ?

ಸಿದ್ದರಾಮಯ್ಯ ಅವರ ಗುರಿ ಎಂದರೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ, ತಾನು ಪ್ರತಿಪಕ್ಷದ ನಾಯಕನಾಗುವುದು. ಅವರು ಮತ್ತು ಯಡಿಯೂರಪ್ಪ ಹಿಂದೆ ಜೊತೆಯಲ್ಲಿ ಕೆಲಸ ಮಾಡಿದ್ದಿದೆ. ಬಳ್ಳಾರಿಗೆ ಪಾದಯಾತ್ರೆ (ಅಕ್ರಮ ಗಣಿಗಾರಿಕೆ ವಿರುದ್ಧ) ಹೋದದ್ದು ಬಿಟ್ಟರೆ, ಪ್ರತಿಪಕ್ಷ ನಾಯಕರಾಗಿ ಅವರು ಬೇರೇನು ಮಾಡಿದ್ದಾರೆ? ಯಡಿಯೂರಪ್ಪ ಸರಕಾರದ ವಿರುದ್ಧ ಹೋರಾಟ ಮಾಡಿದವರು ಯಾರು? ನಿಜವಾದ ಹೋರಾಟಗಾರ ಕುಮಾರಸ್ವಾಮಿ. ಸಿದ್ದರಾಮಯ್ಯ ಕೇವಲ ಮೆಲ್ನೋಟಕ್ಕೆ ಮಾತ್ರ ಇದ್ದಂತೆ ತೋರಿಸಿದರು.

ಪ್ರಶ್ನೆ: ಆದರೆ ಅವರು ಒಂದು ದಶಕಕ್ಕೂ ಹಿಂದೆ ಪಕ್ಷದಿಂದ ಹೊರಹೋದಾಗಿನಿಂದಲೇ ಜೆಡಿಎಸ್‌ಗೆ ವಿರೋಧವಿದ್ದಾರೆ ಅಲ್ಲವೇ?

ಸಿದ್ದರಾಮಯ್ಯ ಜೆಡಿಎಸ್‌ಗೆ ಹಾನಿ ಮಾಡಲು ಬಯಸುತ್ತಾರೆ ಎಂಬುದು ಹೊಸ ವಿಷಯವಲ್ಲ. 2016ರ ರಾಜ್ಯಸಭಾ ಚುನಾವಣೆಯ ವೇಳೆ ನಮ್ಮ ಎಂಟು ಶಾಸಕರನ್ನು ಅವರು ಹೊತ್ತೊಯ್ದಿದ್ದರು. ವಾಸ್ತವವಾಗಿ ನಮ್ಮ ಪಕ್ಷಕ್ಕೆ ಹಾನಿ ಮಾಡುವ ಅವರ ಕಾರ್ಯಾಚರಣೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನೆರವಿನೊಂದಿಗೆ 2004ರಲ್ಲಿಯೇ ಆರಂಭವಾಗಿತ್ತು. ಅಹಿಂದ ಸಮಾವೇಶಗಳಲ್ಲಿ ಎನ್. ಧರಂಸಿಂಗ್ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗಲೂ ಕಾಂಗ್ರೆಸ್ ನಾಯಕರು ನನ್ನ ಮೇಲೆ ದಾಳಿ ನಡೆಸಿದರು; ಮತ್ತಾಗ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಆಗಿದ್ದರು. ಇದು ಜೆಡಿಎಸ್‌ನಿಂದ ಅವರ ಉಚ್ಛಾಟನೆಗೆ ಕಾರಣವಾಯಿತು….

ನಾನು 1996ರಲ್ಲಿ ಪ್ರಧಾನಮಂತ್ರಿ ಆಗಲು ದಿಲ್ಲಿಗೆ ಹೋದಾಗ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಅವರು ಕೋಪಗೊಂಡಿದ್ದರು; ಮತ್ತೊಮ್ಮೆ 2004ರಲ್ಲಿ ಸಮ್ಮಿಶ್ರ ಸರಕಾರ ರಚನೆಯಾದಾಗ. 2004ರಲ್ಲಿ ನಾನು ಅವರನ್ನು ಮುಖ್ಯಮಂತ್ರಿ ಮಾಡಲು ಎಷ್ಟೊಂದು ಪ್ರಯತ್ನಪಟ್ಟೆ ಎಂಬುದನ್ನು ಕಾಂಗ್ರೆಸ್‌ನ ತಾತ್ಕಾಲಿಕ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅವರಿಗಾಗಿ ನಾನು- ತನ್ನನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಬೇಕೆಂಬ ಎಸ್.ಎಂ. ಕೃಷ್ಣ ಅವರ ಮನವಿಯನ್ನೂ ಒಪ್ಪಿಕೊಂಡಿರಲಿಲ್ಲ.

ಪ್ರಶ್ನೆ: ಪರಿಣಾಮ ಏನಾಗಿತ್ತು?

ನಮ್ಮನ್ನು ನಾಶಮಾಡಲು ಅವರು ಮಾಡಿದ ಪ್ರಯತ್ನದ ಪರಿಣಾಮವಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ 130ರಿಂದ 79ಕ್ಕೆ ಕುಸಿಯಿತು. ಶಾದಿಭಾಗ್ಯ ಮತ್ತು ಬಾಕಿ ಎಲ್ಲಾ ಭಾಗ್ಯಗಳಿಗೆ ಏನಾಯಿತು? ಅಹಿಂದಕ್ಕೆ ಏನಾಯಿತು? ಅವರಿಂದ ತಪ್ಪುದಾರಿಗಿಳಿದ ರಾಹುಲ್ ಗಾಂಧಿ ನಮ್ಮನ್ನು ಹಾಸನದಲ್ಲಿ ಬಿಜೆಪಿಯ ಬಿ. ಟೀಮ್ ಎಂದು ಕರೆದರು. ಪರಿಣಾಮವಾಗಿ ಹಾಸನ ಬಿಜೆಪಿ ಪರವಾಯಿತು ಮತ್ತು ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಮೊದಲ ಬಾರಿಗೆ 14 ಸ್ಥಾನಗಳನ್ನು ಗೆದ್ದಿತು. ಇವತ್ತು ಹಾಸನ ಮತ್ತು ಮಂಡ್ಯದಲ್ಲಿ ಬಿಜೆಪಿ ನುಸುಳಲು ಪ್ರಯತ್ನಿಸುತ್ತಿದೆ ಎಂದರೆ, ಮತ್ತೆ ಅವರ ಕಾರಣದಿಂದ. ಅವರು ಪರೋಕ್ಷವಾಗಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯನ್ನು (ಸುಮಲತಾ) ಮಂಡ್ಯದಲ್ಲಿ ಬೆಂಬಲಿಸಿದರು.

ಪ್ರಶ್ನೆ: ಇತ್ತೀಚೆಗೆ ನೀವವರನ್ನು ಸಂಪರ್ಕಿಸಲು ಯತ್ನಿಸಿದ್ದೀರಾ?

ನನ್ನನ್ನು ನಂಬಿ,  ಮೈತ್ರಿ ಸರಕಾರ ಆದ ಮೇಲೆ ನಾನು ಅವರಲ್ಲಿ ಹೋಗಿ, ಎರಡು ಸಲ ರಾಜ್ಯದಲ್ಲಿ ಜಂಟಿ ಯಾತ್ರೆ ಮಾಡೋಣ ಎಂದು ವಿನಂತಿದೆ. ಹಿಂದಿನದ್ದು ಮರೆಯೋಣ ಎಂದೆ. ಆದರೂ ಏನೂ ಆಗಲಿಲ್ಲ.

ಪ್ರಶ್ನೆ: ಸದ್ಯಕ್ಕೆ ಕಾಂಗ್ರೆಸ್ ಜೊತೆ ನಿಮ್ಮ ಹೊಂದಾಣಿಕೆ ಏನು? ಒಂದುವೇಳೆ ಉಪಚುನಾವಣೆ ನಡೆದರೆ, ಎರಡೂ ಪಕ್ಷಗಳು ಜೊತೆಗೆ ಬರುತ್ತವೆಯೆ?

ಕಾಂಗ್ರೆಸ್ ಜೊತೆ ಯಾವುದೇ ಸಂಪರ್ಕ ಇಲ್ಲ. ಕುಮಾರಸ್ವಾಮಿ ಕೂಡಾ ಹಾಗೆ ಮಾಡುತ್ತಾರೆ ಎಂದು ನನಗನಿಸುವುದಿಲ್ಲ. ಸಿದ್ದರಾಮಯ್ಯ ಹೇಳುವುದೇನೆಂದರೆ ದೇವೇಗೌಡರ ಜೊತೆ ಹೋಗಿ ತಾವು ಸೋತೆವು ಎಂದು. (ನಗು) ಯಾವುದೇ ಸ್ಥಳೀಯ ನಾಯಕರು ಮಾತನಾಡಲು ಸಿದ್ಧರಿಲ್ಲ. ಸಿದ್ದರಾಮಯ್ಯ ಅವರು ಬಲಪ್ರದರ್ಶನ ಮಾಡಲು ಬಯಸುತ್ತಿದ್ದಾರೆ. ಆದರೆ, ಸೋನಿಯಾ ಗಾಂಧಿಯವರು ಉಪಚುನಾವಣೆಯಲ್ಲಿ ಸ್ಥಾನ ಹಂಚಿಕೆ ವಿಷಯ ಮಾತನಾಡಿದರೆ, ಅದು ಬೇರೆಯೇ ವಿಷಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ? ಬೆಕ್ಕು ಕಣ್ಣುಮುಚ್ಚಿ ಹಾಲುಕುಡಿಯುತ್ತಿತಾ ತಿಳಿದುಕೊಂಡಿರುವಂತಿದೆ…family politics dangerous to democracy

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...