Homeಮುಖಪುಟಉತ್ತರ ಪ್ರದೇಶ: ಜೈಲು ಶಿಕ್ಷೆಗೆ ಗುರಿಯಾದ ಬಿಜೆಪಿ ಸಂಸದ ಸರಕಾರಿ ಕಾರ್ಯಕ್ರಮದಲ್ಲಿ ಭಾಗಿ

ಉತ್ತರ ಪ್ರದೇಶ: ಜೈಲು ಶಿಕ್ಷೆಗೆ ಗುರಿಯಾದ ಬಿಜೆಪಿ ಸಂಸದ ಸರಕಾರಿ ಕಾರ್ಯಕ್ರಮದಲ್ಲಿ ಭಾಗಿ

ಅವರನ್ನು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 (3) ರ ಅಡಿಯಲ್ಲಿ ಸಂಸದ  ಸ್ಥಾನದಿಂದ ಅವರನ್ನು ಅನರ್ಹಗೊಳಿಸುವ  ಸಾಧ್ಯತೆ ಇದೆ.

- Advertisement -
- Advertisement -

ಉತ್ತರ ಪ್ರದೇಶದ ಇಟಾವಾದ ಬಿಜೆಪಿ ಸಂಸದ, ಆರೆಸ್ಸೆಸ್‌ನ ಮಾಜಿ ಪ್ರಚಾರಕ ರಾಮ್ ಶಂಕರ್ ಕಥೇರಿಯಾಗೆ 12 ವರ್ಷಗಳ ಹಿಂದಿನ ಹಲ್ಲೆ ಮತ್ತು ಗಲಭೆ ಪ್ರಕರಣದಲ್ಲಿ ಆಗ್ರಾದ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೂ ಅವರು ಭಾನುವಾರ ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ!

ಇಟಾವಾ ರೈಲು ನಿಲ್ದಾಣದ ಪುನರಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಈ ವೇಳೆ ಸಭೆಯನ್ನು ಉದ್ದೇಶಿಸಿ ಕೂಡ ಅವರು ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಅಮೃತ್ ಭಾರತ್ ಸ್ಟೇಷನ್ ಯೋಜನೆಯ ಭಾಗವಾಗಿ ದೇಶಾದ್ಯಂತ  508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಅಡಿಪಾಯ ಹಾಕಲಾಗುತ್ತಿದೆ. ಇಟಾವಾ ಕೂಡ ಇದರ ಭಾಗವಾಗಿದೆ.

2011 ರ ಪ್ರಕರಣದಲ್ಲಿ ಮೂರು ಬಾರಿ ಸಂಸದರಾಗಿರುವ ಕಥೇರಿಯಾ ಅವರು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಅವರ ರಾಜಕೀಯ ಭವಿಷ್ಯದ ಬಗ್ಗೆ ಇಟಾವಾ ಸಮಾರಂಭದಲ್ಲಿ ಹಾಜರಿದ್ದ ಕೆಲವು ಬಿಜೆಪಿ ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿದರು. ಅವರನ್ನು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 (3) ರ ಅಡಿಯಲ್ಲಿ ಸಂಸದ  ಸ್ಥಾನದಿಂದ ಅವರನ್ನು ಅನರ್ಹಗೊಳಿಸುವ  ಸಾಧ್ಯತೆ ಇದೆ.

58ರ ಹರೆಯದ ಕಥೇರಿಯಾ ಅವರು ಕಾರ್ಯಕ್ರಮದ ವೇದಿಕೆಯಲ್ಲಿ ಶಿಕ್ಷೆಗೆ ಗುರಿಯಾದ ವಿಷಯದ ಬಗ್ಗೆ ಏನನ್ನೂ ಹೇಳಲಿಲ್ಲ. ಆದರೆ ನಂತರ ಅವರು ನೀರಾವರಿ ಇಲಾಖೆಯ ಅತಿಥಿ ಗೃಹದಲ್ಲಿ ತಮ್ಮ ಬೆಂಬಲಿಗರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ತಿಳಿಸಿ  ನ್ಯಾಯಾಲಯದ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಹೇಳಿದರು ಎನ್ನಲಾಗಿದೆ.

ಪ್ರಕರಣವು ನವೆಂಬರ್ 16, 2011ರ ಹಿಂದಿನದಾಗಿದೆ. ಕಥೇರಿಯಾ ಮತ್ತು ಅವರ ಬೆಂಬಲಿಗರ ಗುಂಪು ಆಗ್ರಾದಲ್ಲಿ ವಿದ್ಯುತ್ ಬಿಲ್ ಹೆಚ್ಚಾಗಿ ನೀಡಿದ್ದಾರೆಂದು ದೂರು ಬಂದ ಬಳಿಕ ಟೊರೆಂಟ್ ಪವರ್ ಲಿಮಿಟೆಡ್‌ನ ಕೆಲವು ಉದ್ಯೋಗಿಗಳನ್ನು ಥಳಿಸಿದ್ದರು.

ಮಾಯಾವತಿ ನೇತೃತ್ವದ ಬಿಎಸ್‌ಪಿ ಸರ್ಕಾರದ ಅವಧಿಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಶಂಕರ್ ಕಥೇರಿಯಾ “ರಾಜಕೀಯ ಸೇಡಿನ” ಪ್ರಕರಣ ಎಂದು ಹೇಳಿದ್ದು, ನಾನು ದಲಿತ ನಾಯಕರಾಗಿ ಹೊರಹೊಮ್ಮುತ್ತಿರುವ ಕಾರಣ ಮತ್ತು ಬಿಎಸ್‌ಪಿಯ ಭದ್ರಕೋಟೆಯಾದ ಆಗ್ರಾ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದಿರುವುದಕ್ಕೆ ಈ ರೀತಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಥೇರಿಯಾ ಅವರು 1984 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೊಂದಿಗೆ ಸ್ವಯಂಸೇವಕರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ನಾಲ್ಕು ವರ್ಷಗಳಲ್ಲಿ ಅವರನ್ನು ಅವರ ತವರು ಜಿಲ್ಲೆ ಇಟಾವಾದಲ್ಲಿ RSS ನ ನಗರ ಪ್ರಚಾರಕರಾಗಿ ನೇಮಿಸಲಾಗಿತ್ತು. ನಂತರ ಅವರು ಬುಲಂದ್‌ಶಹರ್ ಮತ್ತು ಆಗ್ರಾದಲ್ಲಿ ಆರ್‌ಎಸ್‌ಎಸ್ ಪ್ರಚಾರಕರಾಗಿ ಕೆಲಸ ಮಾಡಿದ್ದರು. ಅವರು ಆರ್‌ಎಸ್‌ಎಸ್-ಸಂಬಂಧಿತ ಸಂಘಟನೆಗಳಾದ ಸಾಮಾಜಿಕ ಸಮ್ರಸ್ತಾ ಸಂಘದಲ್ಲೂ ಕೆಲಸ ಮಾಡಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...