Homeಕರ್ನಾಟಕನಕಲಿ ಪೆನ್‌ಡ್ರೈವ್ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು: ಕಾಂಗ್ರೆಸ್ ಕಿಡಿ

ನಕಲಿ ಪೆನ್‌ಡ್ರೈವ್ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು: ಕಾಂಗ್ರೆಸ್ ಕಿಡಿ

- Advertisement -
- Advertisement -

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿರುದ್ಧ ಲಂಚದ ಆರೋಪ ಮಾಡಿ ಕೃಷಿ ಇಲಾಖೆ ಅಧಿಕಾರಿಗಳು ಬರೆದಿದ್ದಾರೆನ್ನಲಾದ ಪತ್ರದ ಕುರಿತು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ರಾಜಭವನ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿ ವಿಪಕ್ಷಗಳ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ವಿಚಾರವಾಗಿ ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್, ”ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ.ಆರ್. ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ” ಎಂದು ಟೀಕಿಸಿದೆ.

”ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿಲ್ಲ, ಈ ಪತ್ರದ ಕುರಿತು ಮಾಹಿತಿಯೂ ಮಂಡ್ಯದ ಅಧಿಕಾರಿಗಳಿಗಿಲ್ಲ ಎಂದು ಖಚಿತಪಡಿಸಿದ್ದಾರೆ, ಈ ನಕಲಿ ಪತ್ರಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿದೆ. ಇದರ ಹಿಂದಿರುವುದು ಬಿಜೆಪಿ ಫೇಕ್ ಫ್ಯಾಕ್ಟರಿಯೋ ಅಥವಾ ಪೆನ್ ಡ್ರೈವ್ ಶೂರರೋ ಎಂಬುದನ್ನು ಬಯಲಿಗಿಡುತ್ತೇವೆ” ಎಂದು ಕಾಂಗ್ರೆಸ್ ಹೇಳಿದೆ.

ರಾಜಭವನದ ಪತ್ರ

ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರ ಪರವಾಗಿ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಜಿ.ಪ್ರದೀಪ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಬರೆದಿರುವ ಪತ್ರ ಸೋಮವಾರ ಬಹಿರಂಗಗೊಂಡಿದೆ.

ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವ ಪುರ, ನಾಗಮಂಗಲ, ಶ್ರೀರಂಗ ಪಟ್ಟಣ ಮತ್ತು ಮದ್ದೂರು ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಯು ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರು ನೀಡಿದ್ದಾರೆ.

ದೂರಿನಲ್ಲಿ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿ ಯಿಂದ 6 ಲಕ್ಷದಿಂದ 8 ಲಕ್ಷದವರೆಗೆ ನೀಡುವಂತೆ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ. ಲಂಚ ಕೇಳುವ ಇಂತಹ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಲು ಕ್ರಮ ವಹಿಸದಿದ್ದರೆ ಅಧಿಕಾರಿಗಳು ಕುಟುಂಬದ ಸದಸ್ಯರ ಜತೆಗೆ ವಿಷ ಕುಡಿಯುವುದಾಗಿ ತಿಳಿಸಿದ್ದಾರೆ. ಈ ದೂರನ್ನು ನಿಯಮದ ಅನುಸಾರ ಪರಿಶೀಲಿಸಿ, ಸೂಕ್ತ ಕ್ರಮವಹಿಸಬೇಕು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೂಚಿಸಿದ್ದಾರೆ.

ಇದನ್ನೂ ಓದಿ: ಸಚಿವ ಚೆಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...