Homeಮುಖಪುಟಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ದೇಶದಲ್ಲಿ ಏಕರೂಪ ನಾಗರಿಕತೆ (ಯುಸಿಸಿ) ಹೇರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಫೆಬ್ರವರಿಯಲ್ಲಿ, ಮಿಜೋರಾಂ ವಿಧಾನಸಭೆಯು ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸುವ ಯಾವುದೇ ಕ್ರಮವನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು.

ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಸದನದಲ್ಲಿ ನಿರ್ಣಯವನ್ನು ಮಂಡಿಸಿದರು, ”ಇದು ಕೇಂದ್ರ ಸರ್ಕಾರದ ಕಡೆಯಿಂದ ಏಕಪಕ್ಷೀಯ ಮತ್ತು ಆತುರದ ಕ್ರಮ. ಸಂಘಪರಿವಾರದಿಂದ ಪ್ರೇರಿಸಲ್ಪಟ್ಟ ಏಕರೂಪ ನಾಗರಿಕ ಸಂಹಿತೆ ಸಂವಿಧಾನಿಕವಾಗಿಲ್ಲ, ಬದಲಿಗೆ ಅದು ಹಿಂದೂ ಕಾನೂನು ಪಠ್ಯ ಮನುಸ್ಮೃತಿ ಅನ್ನು ಆಧರಿಸಿದೆ” ಎಂದು ಅವರು ವಾದಿಸಿದರು.

”ಈ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಂಘ ಪರಿವಾರದವರು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ. ಸಂವಿಧಾನದಲ್ಲಿ ಇರುವುದನ್ನು ಅವರು ಜಾರಿಗೆ ತರಲು ಪ್ರಯತ್ನಿಸುತ್ತಿಲ್ಲ, ಅದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನ ಕಾನೂನುಗಳನ್ನು ಅಪರಾಧೀಕರಿಸಿದೆ, ಆದರೆ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಥವಾ ಶೋಷಿತರ ಕಲ್ಯಾಣಕ್ಕಾಗಿ ಕ್ರಮಗಳನ್ನು ಕೈಗೊಳ್ಳಲು ಏನನ್ನೂ ಮಾಡಿಲ್ಲ” ಎಂದು ವಿಜಯನ್ ಪ್ರತಿಪಾದಿಸಿದರು.

ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದ ನಂತರ ಎಡ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಯುಡಿಎಫ್ ಹಲವಾರು ತಿದ್ದುಪಡಿಗಳು ಮತ್ತು ಮಾರ್ಪಾಡುಗಳನ್ನು ಸೂಚಿಸಿತು. ಸೂಚಿಸಿದ ಮಾರ್ಪಾಡುಗಳನ್ನು ಗಣನೆಗೆ ತೆಗೆದುಕೊಂಡ ನಂತರ, ಮುಖ್ಯಮಂತ್ರಿಗಳು ಅಂತಿಮಗೊಳಿಸಿದ ನಿರ್ಣಯವನ್ನು ಓದಿದರು.

ಯುಸಿಸಿ ವಿಧಿಸುವ ಕೇಂದ್ರದ ಕ್ರಮದಿಂದ ಕೇರಳ ವಿಧಾನಸಭೆ ದಿಗ್ಭ್ರಮೆಗೊಂಡಿದೆ. ಇದು ದೇಶದ ಜಾತ್ಯತೀತ ಸ್ವರೂಪವನ್ನು ಕಸಿದುಕೊಳ್ಳುವ ಏಕಪಕ್ಷೀಯ ಮತ್ತು ಆತುರದ ನಿರ್ಧಾರವಾಗಿದೆ ಎಂದು ಹೇಳಿದರು. ಸಂವಿಧಾನವು ಸಾಮಾನ್ಯ ನಾಗರಿಕ ಕಾನೂನನ್ನು ನಿರ್ದೇಶನ ತತ್ವವಾಗಿ ಮಾತ್ರ ಉಲ್ಲೇಖಿಸುತ್ತದೆ ಮತ್ತು ಅದು ಕಡ್ಡಾಯವಲ್ಲ. ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸಿದಾಗ ಮತ್ತು ಧಾರ್ಮಿಕ ವೈಯಕ್ತಿಕ ನಿಯಮಗಳನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕನ್ನು ಒಳಗೊಂಡಿರುವಾಗ, ಅದನ್ನು ನಿಷೇಧಿಸುವ ಯಾವುದೇ ಕಾನೂನು ಸಂವಿಧಾನದ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು. ಸಂವಿಧಾನದ 44ನೇ ವಿಧಿಯು ರಾಜ್ಯವು ಸಾಮಾನ್ಯ ನಾಗರಿಕ ಸಂಹಿತೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ ಎಂದು ಹೇಳುತ್ತದೆ. ಜನರಲ್ಲಿ ಒಮ್ಮತ ಮೂಡಿಸಲು ಇಂತಹ ಯಾವುದೇ ಕ್ರಮವನ್ನು ಚರ್ಚೆಗಳ ಮೂಲಕ ಮೊದಲು ಮಾಡಬೇಕು ಮತ್ತು ಹಾಗೆ ಮಾಡದಿರುವುದು ಸಂವಿಧಾನದ ಉಲ್ಲಂಘನೆ ಎಂದು ಅವರು ಹೇಳಿದರು.

ಕೇರಳ ಅಸೆಂಬ್ಲಿ ಕೂಡ ಕೇಂದ್ರ ನಿರ್ಧಾರದ ಬಗ್ಗೆ ಕಳವಳವನ್ನು ಹಂಚಿಕೊಳ್ಳುತ್ತದೆ. ಯುಸಿಸಿ ಹೇರುವಿಕೆಯು ಜನರ ಮತ್ತು ಒಟ್ಟಾರೆ ರಾಷ್ಟ್ರದ ಏಕತೆಯ ಮೇಲೆ ದಾಳಿ ಮಾಡುವ ಜಾತ್ಯತೀತವಲ್ಲದ ಕ್ರಮ ಎಂದು ನಂಬುತ್ತದೆ. ಸಂವಿಧಾನ ರಚನಾ ಸಭೆಯ ಚರ್ಚೆಗಳಲ್ಲಿಯೂ ಸಹ ಯುಸಿಸಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದವು. ಬಿಆರ್ ಅಂಬೇಡ್ಕರ್ ಅವರ ಅಂದಿನ ನಿಲುವು ಸಂಸತ್ತು ಸಾಮಾನ್ಯ ನಾಗರಿಕ ಕಾನೂನನ್ನು ತರಲು ಪ್ರಯತ್ನಿಸಬಹುದು ಎಂದು ಹೇಳಿದ್ದರು. ಆದರೆ ಅದನ್ನು ಕಡ್ಡಾಯಗೊಳಿಸಬೇಕೆಂದು ಅವರು ಒತ್ತಾಯಿಸಲಿಲ್ಲ. ಅವರು ಕೇವಲ ಒಂದು ಸಾಧ್ಯತೆಯನ್ನು ಮಾತ್ರ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ವಾದಿಸಿದರು.

ಸಿಪಿಐ(ಎಂ) ನೇತೃತ್ವದ ಸರ್ಕಾರವು ಯುಸಿಸಿ ವಿರುದ್ಧ ರಾಜ್ಯದಲ್ಲಿ ಆಡಳಿತಾರೂಢ ಎಡಪಕ್ಷಗಳು ಮತ್ತು ವಿರೋಧ ಪಕ್ಷವಾದ ಯುಡಿಎಫ್ ಹಾಗೂ ರಾಜ್ಯದ ವಿವಿಧ ಧಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಅಭಿಯಾನದ ನಡುವೆಯೇ ನಿರ್ಣಯವನ್ನು ಮಂಡಿಸಲು ನಿರ್ಧರಿಸಿತ್ತು.

2019ರ ಡಿಸೆಂಬರ್‌ನಲ್ಲಿ ಕೇರಳ ವಿಧಾನಸಭೆಯು ಪೌರತ್ವ ತಿದ್ದುಪಡೆ ಕಾಯ್ದೆ (ಸಿಎಎ) ವಿರುದ್ಧದ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿತ್ತು.

ಇದನ್ನೂ ಓದಿ: ಈಗ ಅಗತ್ಯ ಇರುವುದು ಲಿಂಗ ನ್ಯಾಯ ಸಂಹಿತೆ, ಏಕರೂಪ ನಾಗರಿಕ ಸಂಹಿತೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...