Homeಮುಖಪುಟಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

ಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

- Advertisement -
- Advertisement -

ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎನ್ನುವ ಆರೋಪದ ಮೇಲೆ ಕೇಂದ್ರ ಸರ್ಕಾರವು 8 ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧ ಮಾಡಿದೆ.

ಕೇಂದ್ರ ನಿಷೇಧಿಸಿದ ಎಂಟು ಚಾನೆಲ್‌ಗಳು

1. Yahan Sach Dekho

2. Capital TV

3. KPS News

4. Sarkari Vlog

5. Earn Tech India

6. SPN9 News

7 Educational Dost

8 World Best News

ಯೂಟ್ಯೂಬ್ ಚಾನೆಲ್‌ಗಳಲ್ಲಿ ಸುಳ್ಳು ಸುದ್ದಿಗಳ ವಿಡಿಯೋಗಳನ್ನು ಹರಡಿದ್ದಕ್ಕಾಗಿ ಪತ್ರಿಕಾ ಮಾಹಿತಿ ಬ್ಯೂರೋ ಸತ್ಯಾಸತ್ಯತೆಯನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಅದರ ಆಧಾರದ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವುಗಳ ಮೇಲೆ ನಿಷೇಧ ಹೇರಿದೆ ಎಂದು ಹೇಳಲಾಗಿದೆ.

ಇದರಲ್ಲಿ SPN9 News 4.8 ಮಿಲಿಯನ್ ಫಾಲೊವರ್‌ಗಳನ್ನು ಹೊಂದಿತ್ತು ಹಾಗೂ 148 ಕೋಟಿ ವೀಕ್ಷಣೆ ಕಂಡಿತ್ತು. World Best News 1.7 ಮಿಲಿಯನ್ ಫಾಲೊವರ್‌ಗಳನ್ನು 18 ಕೋಟಿ ವೀಕ್ಷಣೆ ಕಂಡಿತ್ತು.

ಎಜುಕೇಷನಲ್ ದೋಸ್ತ್ ಚಾನೆಲ್ 3.43 ಮಿಲಿಯನ್ ಚಂದಾದಾರರು ಮತ್ತು 23 ಕೋಟಿ ವೀಕ್ಷಣೆ ಹೊಂದಿದ್ದು ಇದು ಸರ್ಕಾರಿ ಯೋಜನೆಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

SPN9 ಯುಟ್ಯೂಬ್ ಚಾನೆಲ್ 4.8 ಮಿಲಿಯನ್ ಚಂದಾದಾರರು ಮತ್ತು 189 ಕೋಟಿ ವೀಕ್ಷಣೆಗಳನ್ನು ಹೊಂದಿದೆ. ಇದು ರಾಷ್ಟ್ರಪತಿ, ಪ್ರಧಾನಿ ಮತ್ತು ಹಲವರಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಮಂತ್ರಿಗಳು ಆರೋಪ ಮಾಡಿದ್ದಾರೆ.

Sarkari Vlog ಯುಟ್ಯೂಬ್ ಚಾನೆಲ್ 4.5 ಮಿಲಿಯನ್ ಚಂದಾದಾರರು ಮತ್ತು 9.4 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದ್ದು, ಇದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕೆಪಿಎಸ್ ನ್ಯೂಸ್’ ಚಾನೆಲ್ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರು ಮತ್ತು 13 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದ್ದು, ಇದು ಸರ್ಕಾರಕ್ಕೆ ಸಂಬಂಧಿಸಿದ ಯೋಜನೆಗಳು, ಆದೇಶಗಳು ಮತ್ತು ನಿರ್ಧಾರಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಉದಾಹರಣೆಗೆ ಅಡುಗೆ ಅನಿಲ ಸಿಲಿಂಡರ್‌ಗಳು 20 ರೂ.ಗೆ ಲಭ್ಯತೆ ಮತ್ತು ಪೆಟ್ರೋಲ್ ಲೀಟರ್‌ಗೆ 15 ರೂ. ಎಂದು ಹೇಳಲಾಗಿದೆ.

‘ಕ್ಯಾಪಿಟಲ್ ಟಿವಿ’ ಚಾನೆಲ್ 3.5 ಮಿಲಿಯನ್ ಚಂದಾದಾರರು ಮತ್ತು 160 ಕೋಟಿಗೂ ಹೆಚ್ಚು ವೀಕ್ಷಣೆ ಹೊಂದಿದ್ದು, ಇದು ಕೂಡ ಪ್ರಧಾನಿ, ಸರ್ಕಾರ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ಆದೇಶಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.

ಈ ಎಂಟೂ ಚಾನೆಲ್‌ಗಳು ಲೋಕಸಭೆ ಚುನಾವಣೆ ಹಾಗೂ ಇವಿಎಂ ಮಷಿನ್ ಸೇರಿದಂತೆ ರಾಷ್ಟ್ರಪತಿ, ಪ್ರಧಾನಿ, ಸಚಿವರು ಹಾಗೂ ಕೇಂದ್ರದ ಯೋಜನೆಗಳು, ಆಧಾರ್, ಬ್ಯಾನ್ ಕಾರ್ಡ್ ಬಗ್ಗೆ ಜನರಿಗೆ ತಪ್ಪು ಸಂದೇಶ ಹಾಗೂ ಸುಳ್ಳು ಮಾಹಿತಿಯನ್ನು ಪಸರಿಸುತ್ತಿದ್ದವು ಎಂದು ಆರೋಪಿಸಲಾಗಿದೆ.

‘ಯಹಾನ್ ಸಚ್ ದೇಖೋ’ ಯೂಟ್ಯೂಬ್ ಚಾನೆಲ್ 3 ಮಿಲಿಯನ್ ಚಂದಾದಾರರು ಮತ್ತು 100 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಇದು ಚುನಾವಣಾ ಆಯೋಗ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ನಕಲಿ ಸುದ್ದಿಗಳನ್ನು ಹರಡುತ್ತಿದೆ ಎನ್ನಲಾಗಿದೆ.

‘ಅರ್ನ್ ಇಂಡಿಯಾ ಟೆಕ್’ ಚಾನೆಲ್ 31,000 ಚಂದಾದಾರರು ಮತ್ತು 3.6 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಇತರರಿಗೆ ಸಂಬಂಧಿಸಿದ ನಕಲಿ ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ಈ ಹಿಂದೆಯೂ ಇಂತಹದೇ ಆರೋಪದ ಮೇಲೆ ಅನೇಕ ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿತ್ತು. ಸಂಬಂಧಿಸಿದ ಇಲಾಖೆಯ ಆದೇಶದ ಮೇಲೆ ಯುಟ್ಯೂಬ್ ತಾಂತ್ರಿಕ ಸಿಬ್ಬಂದಿ ಚಾನೆಲ್‌ಗಳನ್ನು ನಿಷೇಧಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...