Homeಮುಖಪುಟಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

ಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

- Advertisement -
- Advertisement -

ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎನ್ನುವ ಆರೋಪದ ಮೇಲೆ ಕೇಂದ್ರ ಸರ್ಕಾರವು 8 ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧ ಮಾಡಿದೆ.

ಕೇಂದ್ರ ನಿಷೇಧಿಸಿದ ಎಂಟು ಚಾನೆಲ್‌ಗಳು

1. Yahan Sach Dekho

2. Capital TV

3. KPS News

4. Sarkari Vlog

5. Earn Tech India

6. SPN9 News

7 Educational Dost

8 World Best News

ಯೂಟ್ಯೂಬ್ ಚಾನೆಲ್‌ಗಳಲ್ಲಿ ಸುಳ್ಳು ಸುದ್ದಿಗಳ ವಿಡಿಯೋಗಳನ್ನು ಹರಡಿದ್ದಕ್ಕಾಗಿ ಪತ್ರಿಕಾ ಮಾಹಿತಿ ಬ್ಯೂರೋ ಸತ್ಯಾಸತ್ಯತೆಯನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಅದರ ಆಧಾರದ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವುಗಳ ಮೇಲೆ ನಿಷೇಧ ಹೇರಿದೆ ಎಂದು ಹೇಳಲಾಗಿದೆ.

ಇದರಲ್ಲಿ SPN9 News 4.8 ಮಿಲಿಯನ್ ಫಾಲೊವರ್‌ಗಳನ್ನು ಹೊಂದಿತ್ತು ಹಾಗೂ 148 ಕೋಟಿ ವೀಕ್ಷಣೆ ಕಂಡಿತ್ತು. World Best News 1.7 ಮಿಲಿಯನ್ ಫಾಲೊವರ್‌ಗಳನ್ನು 18 ಕೋಟಿ ವೀಕ್ಷಣೆ ಕಂಡಿತ್ತು.

ಎಜುಕೇಷನಲ್ ದೋಸ್ತ್ ಚಾನೆಲ್ 3.43 ಮಿಲಿಯನ್ ಚಂದಾದಾರರು ಮತ್ತು 23 ಕೋಟಿ ವೀಕ್ಷಣೆ ಹೊಂದಿದ್ದು ಇದು ಸರ್ಕಾರಿ ಯೋಜನೆಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

SPN9 ಯುಟ್ಯೂಬ್ ಚಾನೆಲ್ 4.8 ಮಿಲಿಯನ್ ಚಂದಾದಾರರು ಮತ್ತು 189 ಕೋಟಿ ವೀಕ್ಷಣೆಗಳನ್ನು ಹೊಂದಿದೆ. ಇದು ರಾಷ್ಟ್ರಪತಿ, ಪ್ರಧಾನಿ ಮತ್ತು ಹಲವರಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಮಂತ್ರಿಗಳು ಆರೋಪ ಮಾಡಿದ್ದಾರೆ.

Sarkari Vlog ಯುಟ್ಯೂಬ್ ಚಾನೆಲ್ 4.5 ಮಿಲಿಯನ್ ಚಂದಾದಾರರು ಮತ್ತು 9.4 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದ್ದು, ಇದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕೆಪಿಎಸ್ ನ್ಯೂಸ್’ ಚಾನೆಲ್ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರು ಮತ್ತು 13 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದ್ದು, ಇದು ಸರ್ಕಾರಕ್ಕೆ ಸಂಬಂಧಿಸಿದ ಯೋಜನೆಗಳು, ಆದೇಶಗಳು ಮತ್ತು ನಿರ್ಧಾರಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಉದಾಹರಣೆಗೆ ಅಡುಗೆ ಅನಿಲ ಸಿಲಿಂಡರ್‌ಗಳು 20 ರೂ.ಗೆ ಲಭ್ಯತೆ ಮತ್ತು ಪೆಟ್ರೋಲ್ ಲೀಟರ್‌ಗೆ 15 ರೂ. ಎಂದು ಹೇಳಲಾಗಿದೆ.

‘ಕ್ಯಾಪಿಟಲ್ ಟಿವಿ’ ಚಾನೆಲ್ 3.5 ಮಿಲಿಯನ್ ಚಂದಾದಾರರು ಮತ್ತು 160 ಕೋಟಿಗೂ ಹೆಚ್ಚು ವೀಕ್ಷಣೆ ಹೊಂದಿದ್ದು, ಇದು ಕೂಡ ಪ್ರಧಾನಿ, ಸರ್ಕಾರ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ಆದೇಶಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.

ಈ ಎಂಟೂ ಚಾನೆಲ್‌ಗಳು ಲೋಕಸಭೆ ಚುನಾವಣೆ ಹಾಗೂ ಇವಿಎಂ ಮಷಿನ್ ಸೇರಿದಂತೆ ರಾಷ್ಟ್ರಪತಿ, ಪ್ರಧಾನಿ, ಸಚಿವರು ಹಾಗೂ ಕೇಂದ್ರದ ಯೋಜನೆಗಳು, ಆಧಾರ್, ಬ್ಯಾನ್ ಕಾರ್ಡ್ ಬಗ್ಗೆ ಜನರಿಗೆ ತಪ್ಪು ಸಂದೇಶ ಹಾಗೂ ಸುಳ್ಳು ಮಾಹಿತಿಯನ್ನು ಪಸರಿಸುತ್ತಿದ್ದವು ಎಂದು ಆರೋಪಿಸಲಾಗಿದೆ.

‘ಯಹಾನ್ ಸಚ್ ದೇಖೋ’ ಯೂಟ್ಯೂಬ್ ಚಾನೆಲ್ 3 ಮಿಲಿಯನ್ ಚಂದಾದಾರರು ಮತ್ತು 100 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಇದು ಚುನಾವಣಾ ಆಯೋಗ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ನಕಲಿ ಸುದ್ದಿಗಳನ್ನು ಹರಡುತ್ತಿದೆ ಎನ್ನಲಾಗಿದೆ.

‘ಅರ್ನ್ ಇಂಡಿಯಾ ಟೆಕ್’ ಚಾನೆಲ್ 31,000 ಚಂದಾದಾರರು ಮತ್ತು 3.6 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಇತರರಿಗೆ ಸಂಬಂಧಿಸಿದ ನಕಲಿ ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ಈ ಹಿಂದೆಯೂ ಇಂತಹದೇ ಆರೋಪದ ಮೇಲೆ ಅನೇಕ ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿತ್ತು. ಸಂಬಂಧಿಸಿದ ಇಲಾಖೆಯ ಆದೇಶದ ಮೇಲೆ ಯುಟ್ಯೂಬ್ ತಾಂತ್ರಿಕ ಸಿಬ್ಬಂದಿ ಚಾನೆಲ್‌ಗಳನ್ನು ನಿಷೇಧಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...