Homeಮುಖಪುಟಪ್ರಧಾನಿ ನರಸಿಂಹರಾವ್ ನಮ್ಮ ಸಲಹೆ ಕಡೆಗಣಿಸಿರದಿದ್ದರೆ ಬಾಬರಿ ಮಸೀದಿ ಧ್ವಂಸವಾಗುತ್ತಿರಲಿಲ್ಲ:ಶರದ್ ಪವಾರ್

ಪ್ರಧಾನಿ ನರಸಿಂಹರಾವ್ ನಮ್ಮ ಸಲಹೆ ಕಡೆಗಣಿಸಿರದಿದ್ದರೆ ಬಾಬರಿ ಮಸೀದಿ ಧ್ವಂಸವಾಗುತ್ತಿರಲಿಲ್ಲ:ಶರದ್ ಪವಾರ್

- Advertisement -
- Advertisement -

1992ರಲ್ಲಿ ರಾಮ ಜನ್ಮಭೂಮಿ ಆಂದೋಲನದ ಕಾವು ಹೆಚ್ಚುತ್ತಿದ್ದಂತೆ ಬಿಜೆಪಿ ನಾಯಕ ವಿಜಯ ರಾಜೇ ಸಿಂಧಿಯಾ ಅವರು ಅಂದಿನ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೆ ಬಾಬರಿ ಮಸೀದಿಗೆ ಏನೂ ಆಗುವುದಿಲ್ಲ ಎಂದು ಭರವಸೆ ನೀಡಿದ್ದರು ಮತ್ತು  ಅಂದಿನ ಪ್ರಧಾನಿ ನರಸಿಂಹರಾವ್  ತಮ್ಮ ಮಂತ್ರಿಗಳ ಸಲಹೆಯನ್ನು ಕಡೆಗಣಿಸಿ ಬಿಜೆಪಿ ನಾಯಕನ ಮಾತಿನಲ್ಲಿ ಹೆಚ್ಚು ವಿಶ್ವಾಸ ಇಟ್ಟುಕೊಂಡಿದ್ದರು  ಎಂದು  ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬಹಿರಂಗಪಡಿಸಿದ್ದಾರೆ.

ನಿನ್ನೆ ಹಿರಿಯ ಪತ್ರಕರ್ತೆ ನೀರ್ಜಾ ಚೌಧರಿ ಅವರ ‘ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್’ ಎಂಬ ಪುಸ್ತಕ ಬಿಡುಗಡೆ  ಸಮಾರಂಭದಲ್ಲಿ ಮಾತನಾಡಿದ  ಶರದ್ ಪವಾರ್, ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ನಾನು ರಕ್ಷಣಾ ಸಚಿವನಾಗಿದ್ದೆ. ಅಂದು ನಡೆದ ಸಭೆಯಲ್ಲಿ ನಮ್ಮ ಜೊತೆ ಅಂದಿನ  ಗೃಹ ಸಚಿವರು ಮತ್ತು ಗೃಹ ಕಾರ್ಯದರ್ಶಿ ಜೊತೆಗಿದ್ದರು ಎಂದು ಹೇಳಿದರು.

ಸಭೆಯಲ್ಲಿ ಹಲವು ಸಚಿವರಿದ್ದರು  ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೆ, ಸಭೆಯಲ್ಲಿ ಪ್ರಧಾನ ಮಂತ್ರಿಗಳು ಸರ್ವ ಪಕ್ಷದ ನಾಯಕರ ಸಭೆಯನ್ನು ಕರೆಯಬೇಕೆಂದು ನಿರ್ಧರಿಸಲಾಗಿತ್ತು ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದ್ದಾರೆ.

ಆ ಸಭೆಯಲ್ಲಿ ವಿಜಯ ರಾಜೇ ಸಿಂಧಿಯಾ ಅವರು ಬಾಬರಿ ಮಸೀದಿಗೆ ಏನೂ ಆಗುವುದಿಲ್ಲ ಎಂದು ಪ್ರಧಾನಿ ನರಸಿಂಹ ರಾವ್ ಅವರಿಗೆ ಭರವಸೆ ನೀಡಿದ್ದರು. ಗೃಹ ಸಚಿವರು ಮತ್ತು ಗೃಹ ಕಾರ್ಯದರ್ಶಿ ಅವರು ಏನು ಬೇಕಾದರೂ ಅನಾಹುತ ಆಗಬಹುದು ಎಂದು ಹೇಳಿದ್ದರು, ಆದರೆ ಪ್ರಧಾನಿ  ರಾವ್ ಅವರು ಸಿಂಧಿಯಾ ಅವರನ್ನು ನಂಬಲು ನಿರ್ಧರಿಸಿದ್ದರು ಎಂದು ನೆನಪಿಸಿಕೊಂಡಿದ್ದಾರೆ.

ಮಸೀದಿ ಧ್ವಂಸದ ನಂತರ ರಾವ್ ಅವರು ಕೆಲವು ಹಿರಿಯ ಪತ್ರಕರ್ತರೊಂದಿಗೆ ನಡೆಸಿದ ಸಂವಾದವನ್ನು ಎಂಎಸ್ ಚೌಧರಿ ಅವರು ನೆನಪಸಿಕೊಳ್ಳುತ್ತಾ, ಮಸೀದಿ  ಧ್ವಂಸವಾದಾಗ ಪ್ರಧಾನಿ ಏನು ಮಾಡುತ್ತಿದ್ದೀರಿ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರಧಾನಿ ರಾವ್ ಅವರು ಉತ್ತರಿಸುತ್ತಾ, ಅವರು ಆಗ ಸುಮ್ಮನಿದ್ದರು. ಏಕೆಂದರೆ ಅದು ಬೆಳೆಯುವ ಹುಣ್ಣು ಅದು ಕೊನೆಗೊಳ್ಳುತ್ತದೆ ಮತ್ತು ಬಿಜೆಪಿ ತನ್ನ ಪ್ರಮುಖ ರಾಜಕೀಯ ಅಸ್ತ್ರವೊಂದನ್ನು  ಕಳೆದುಕೊಳ್ಳುತ್ತದೆ ಎಂದು ಅವರು ಭಾವಿಸಿದ್ದರು ಎಂದು ಹೇಳಿರುವುದಾಗಿ ನೆನಪಿಸಿಕೊಂಡಿದ್ದಾರೆ.

ಇದನ್ನು ಓದಿ: 1980 ಮೊರಾದಾಬಾದ್ ಗಲಭೆ: RSS, ಬಿಜೆಪಿಯ ಆರೋಪಿಗಳ ಹೆಸರು ಕೈಬಿಟ್ಟ ನ್ಯಾಯಾಂಗ ತನಿಖಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...