Homeಮುಖಪುಟಮಣಿಪುರದಿಂದ ನುಹ್‌ವರೆಗೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದ್ದೀರಿ: ಮೋದಿ ವಿರುದ್ಧ ಸಂಸತ್ತಿನಲ್ಲಿ ಗುಡುಗಿದ ರಾಹುಲ್

ಮಣಿಪುರದಿಂದ ನುಹ್‌ವರೆಗೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದ್ದೀರಿ: ಮೋದಿ ವಿರುದ್ಧ ಸಂಸತ್ತಿನಲ್ಲಿ ಗುಡುಗಿದ ರಾಹುಲ್

- Advertisement -
- Advertisement -

ಬುಧವಾರ ಮಧ್ಯಾಹ್ನ 12ಕ್ಕೆ ಲೋಕಸಭೆ ಕಲಾಪ ಪುನಾರಂಭವಾಗಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಕಲಾಪ ಆರಂಭಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಮಾತನಾಡುತ್ತಿದ್ದಾರೆ.

ಸೋಮವಾರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಇದು ರಾಹುಲ್ ಗಾಂಧಿಯವರ ಮೊದಲ ಭಾಷಣವಾಗಿದೆ. ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಲು ಎದ್ದು ನಿಂತ ರಾಹುಲ್ ಗಾಂಧಿ ಹಿಂದಿನ ಸಂಸತ್ತಿನ ಅಧಿವೇಶನದಲ್ಲಿ ಭಾಷಣವನ್ನು ಉಲ್ಲೇಖಿಸಿದ್ದು, ಸ್ಪೀಕರ್ ಈಗ ರಿಲ್ಯಾಕ್ಸ್ ಆಗಬಹುದು ಎಂದಿದ್ದಾರೆ.

ಅವಿಶ್ವಾಸ ನಿರ್ಣಯದ ಕುರಿತು ಮಾತನಾಡುವಾಗ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು, ತಮ್ಮ ಭಾರತ್ ಜೋಡೋ ಯಾತ್ರೆಯ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಪ್ರಯಾಣ ಇನ್ನೂ ಮುಗಿದಿಲ್ಲ. ಅದು ಇನ್ನೂ ಚಾಲನೆಯಲ್ಲಿದೆ ಎಂದು ಅವರು ಹೇಳಿದರು.

ಬಿಜೆಪಿಯನ್ನು ಟೀಕಿಸುವ ಮೂಲಕ ಭಾಷಣ ಆರಂಭಿಸಿದ ರಾಹುಲ್ ”ನೀವು (ಬಿಜೆಪಿ) ಇಂದು ಭಯಪಡುವ ಅಗತ್ಯವಿಲ್ಲ, ನನ್ನ ಭಾಷಣವು ಅದಾನಿ ವಿಷಯದ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ . ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿದ ಅವರು ಯಾತ್ರೆ ಇನ್ನೂ ಮುಗಿದಿಲ್ಲ. ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಪ್ರಾರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಯಾಕೆ ಯಾತ್ರೆ ಆರಂಭಿಸಿದೆ ಎಂಬುದು ನನಗೇ ಗೊತ್ತಿಲ್ಲ. ಆದರೆ ಆ ಪ್ರಯಾಣದಲ್ಲಿ  ಜನರ  ನೋವು, ಸಂಕಟ, ಸಮಸ್ಯೆಗಳು ನನ್ನದೇ ಸಮಸ್ಯೆಗಳಾದವು. ಯಾತ್ರೆಯ ವೇಳೆ ನನ್ನಲ್ಲಿದ್ದ ಅಹಂಕಾರದ ಭಾವನೆ ಮಾಯವಾಯಿತು.

”INDIA ಜನರ ಧ್ವನಿ. ಈ ಧ್ವನಿಗಳನ್ನು ಆಲಿಸಲು, ನಾವು ನಮ್ಮ ಆಸೆಗಳನ್ನು ತ್ಯಾಗ ಮಾಡಬೇಕು ಮತ್ತು ನಮ್ಮ ಅಹಂ ಮತ್ತು ದ್ವೇಷವನ್ನು ಬಿಟ್ಟುಬಿಡಬೇಕು” ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ”ಮಣಿಪುರದಿಂದ ನುಹ್ ವರೆಗೆ ನೀವು ಇಡೀ ದೇಶಕ್ಕೆ ಬೆಂಕಿ ಹಚ್ಚಿದ್ದೀರಿ” ಎಂದು ಹೇಳಿದ್ದಾರೆ.

”ಬಿಜೆಪಿಯ ರಾಜಕೀಯಕ್ಕೆ ಮಣಿಪುರವನ್ನು ಮಾತ್ರವಲ್ಲ ಇಡೀ ಭಾರತವನ್ನು ಕೊಲ್ಲಲಾಗಿದೆ… ಬಿಜೆಪಿ ದೇಶ ವಿರೋಧಿಯಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಲೋಕಸಭೆ ಸಂಸದ ಗೌರವ್ ಗೊಗೊಯ್ ಅವರು ಮಂಗಳವಾರ ಅವಿಶ್ವಾಸ ನಿರ್ಣಯವನ್ನು ಆರಂಭಿಸಿದ್ದು,  ಮಣಿಪುರ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು “ಮೌನವನ್ನು ಮುರಿಯಲು ವಿರೋಧ ಪಕ್ಷದ ಐಎನ್ ಡಿಐ(INDIA) ಮೈತ್ರಿಕೂಟವು ಈ ನಿರ್ಣಯವನ್ನು ಮಂಡಿಸಿದೆ. ಆಗಲಾದರೂ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಉತ್ತರವನ್ನು ನೀಡುವ ನಿರೀಕ್ಷೆಯಿದೆ” ಎಂದು ಹೇಳಿದ್ದಾರೆ.

ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಸರ್ಕಾರದ ಪರವಾಗಿ ಮಾತನಾಡಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ”ಪ್ರಧಾನಿ ಇದು ಅವಿಶ್ವಾಸ-ಮತವಲ್ಲ, ಇದು ‘ವಿರೋಧದ ಮೇಲಿನ ನಂಬಿಕೆ’ ಮತ ಎಂದು ಹೇಳುತ್ತಾರೆ. ಅವರನ್ನು ಯಾರು ಬೆಂಬಲಿಸುತ್ತಾರೆ ಎಂಬುದನ್ನು ಅವರು ನೋಡಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...